Kadaba

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.31: ದ.ಕ. ಜಿಲ್ಲೆಯಲ್ಲಿ ಶನಿವಾರದಂದು 14 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ದಿನದಂದು ಸುಮಾರು 184 ಮಂದಿಯ ವರದಿ ನೆಗೆಟಿವ್ ಬಂದಿದೆ. ಆ ಮೂಲಕ ಕರಾವಳಿ ಭಾಗದ ಜನರಲ್ಲಿ ಸ್ವಲ್ಪ ಆತಂಕ ದೂರವಾಗಿದೆ. ಇನ್ನು ಸೋಂಕು ಪತ್ತೆಯಾದವರ ಪೈಕಿ 13 ಮಂದಿ ಮುಂಬೈನಿಂದ ಮರಳಿದವರಾಗಿದ್ದಾರೆ. ಉಳಿದಂತೆ ಓರ್ವ ವ್ಯಕ್ತಿ ಉಳ್ಳಾಲದ ಸೋಮೇಶ್ವರ ಮೂಲದವರಾಗಿದ್ದು, ಸೋಂಕಿತರಿಗೆ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶನಿವಾರದಂದು ಒಟ್ಟು 198 ಮಂದಿಯ ಕೋವಿಡ್ ಪರೀಕ್ಷಾ ವರದಿ […]

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು Read More »

ಕರಾವಳಿ, ಕರ್ನಾಟಕ

ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.31: ದೇಶಾದ್ಯಂತ 4ನೇ ಹಂತದ ಲಾಕ್ಡೌನ್ನ ಕೊನೆಯ ದಿನವಾದ ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೇರಿ ಶನಿವಾರ ಒಂದು ವರ್ಷ ಪೂರೈಸಿದ್ದು, ಇದರ ಬೆನ್ನಲ್ಲೇ ಮನ್ ಕೀ ಬಾತ್ನ 65ನೇ ಸಂಚಿಕೆ ಇಂದು ಪ್ರಸಾರವಾಗಲಿದೆ.   ಎರಡು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದು ಜೂನ್ 1ರಿಂದ ಲಾಕ್ಡೌನ್ ಸಡಿಲಿಕೆ ಆಗಲಿದೆ. ಈ ಬಗ್ಗೆ

ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌ Read More »

ರಾಷ್ಟ್ರೀಯ ನ್ಯೂಸ್

ಜೂನ್ 15 ರಿಂದ ಮೀನುಗಾರಿಕೆ ನಿಷೇಧ ➤ ಪರಿಷ್ಕೃತ ಆದೇಶ ಪ್ರಕಟ

(ನ್ಯೂಸ್ ಕಡಬ) newskadaba.com ಉಡುಪಿ, ಮೇ .30: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆ, ಹಾಗೂ ಕರ್ನಾಟಕ ಸರ್ಕಾರದ ಮೇ 29 ರ ಅಧಿಸೂಚನೆ ಯಂತೆ, ಉಡುಪಿ ಜಿಲ್ಲೆಯನ್ನು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯ ನಿಷೇಧವನ್ನು ಪ್ರಸಕ್ತ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ

ಜೂನ್ 15 ರಿಂದ ಮೀನುಗಾರಿಕೆ ನಿಷೇಧ ➤ ಪರಿಷ್ಕೃತ ಆದೇಶ ಪ್ರಕಟ Read More »

ಕರಾವಳಿ, ಕರ್ನಾಟಕ

ಕಾಸರಗೋಡಿನ ಪ್ರಥಮ ಮಹಿಳಾ S. P ಯಾಗಿ ಕನ್ನಡತಿ ➤ ಡಿ.ಶಿಲ್ಫಾ ನೇಮಕ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಮೇ .30:  ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಎಸ್ ಸಾಬುರವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಬದಲಿಗೆ ಕರ್ನಾಟಕ ಮೂಲದ ಡಿ ಶಿಲ್ಫಾ ರವರನ್ನು ನೇಮಿಸಲಾಗಿದೆ .   ಶಿಲ್ಪಾ ಜಿಲ್ಲೆಯ ಪ್ರಥಮ ಮಹಿಳಾ ಎಸ್.ಪಿಯಾಗಿದ್ದಾರೆ. ಮಾರ್ಚ್ ತಿಂಗಳಲ್ಲಿ ಸಾಬು ರವರನ್ನು ಕಾಸರಗೋಡು ಎಸ್.ಪಿಯನ್ನಾಗಿ ನಿಯುಕ್ತಿಗೊಳಿಸಲಾಗಿತ್ತು. ಇದೀಗ ಅವರನ್ನು ಆಲಪ್ಪುಝಕ್ಕೆ ವರ್ಗಾಯಿಸಲಾಗಿದೆ. ಡಿ.ಶಿಲ್ಪಾ ಈ ಹಿಂದೆ ಕಾಸರಗೋಡು ಎ. ಎಸ್ .ಪಿ ಯನ್ನಾಗಿ ಕಾರ್ಯನಿರ್ವಹಿಸಿದ್ದರು. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಣ್ಣೂರು ಎ

ಕಾಸರಗೋಡಿನ ಪ್ರಥಮ ಮಹಿಳಾ S. P ಯಾಗಿ ಕನ್ನಡತಿ ➤ ಡಿ.ಶಿಲ್ಫಾ ನೇಮಕ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್‌ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆಯೇ ಸರ್ಕಾರ ನಿರ್ಲಕ್ಷಿಸಿದೆ ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ. ಡಾಕ್ಟರ್ ಮತ್ತು ನರ್ಸ್‌ಗಳಿಗೆ ಎರಡು ತಿಂಗಳಿನಿಂದ ಸಂಬಳವಾಗಿಲ್ಲ. ಕೊರೊನಾ ಸೋಂಕಿನ ವಿರುದ್ಧವಾಗಿ ಈ ಸಂದರ್ಭದಲ್ಲಿ ಎಲ್ಲಾ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳಿಗೆ ವೇತನ ನೀಡದೆ ಸತಾಯಿಸಿದ್ದಾರೆ. ಸರ್ಕಾರ ಕೊರೊನಾ ವಾರಿಯರ್ಸ್‌ನ್ನು ನಿರ್ಲಕ್ಷ್ಯ ಮಾಡಿದೆ

ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್‌ ಆಕ್ರೋಶ Read More »

ಕರಾವಳಿ, ಕರ್ನಾಟಕ

ಉಡುಪಿ ಜಿಲ್ಲೆಯಲ್ಲಿ 3 ದಿನ ಭಾರೀ ಮಳೆ ➤ ಹಳದಿ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಉಡುಪಿ ,ಮೇ.30: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ, ಉಡುಪಿ ಜಿಲ್ಲೆಯಲ್ಲಿ, ಹಳದಿ ಅಲರ್ಟ್ ಘೋಷಿಸಲಾಗಿದೆ.     ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿರುತ್ತದೆ, ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು

ಉಡುಪಿ ಜಿಲ್ಲೆಯಲ್ಲಿ 3 ದಿನ ಭಾರೀ ಮಳೆ ➤ ಹಳದಿ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿ, ಎರಡು ತಿಂಗಳ ಬಿಲ್ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂದ ಹೆಚ್ಚು ಮೊತ್ತದ ಬಿಲ್ ಮೆಸ್ಕಾಂ ನೀಡಿರುವುದರ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ

ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಮೀರತ್, ಮೇ.30., ಲ್ಯಾಬ್ ಟೆಕ್ನೀಷಿಯನ್ ಕೈಯಿಂದ ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಮಂಗಗಳು ಕಿತ್ತು ತಿಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಶಂಕಿತ ಕೊರೊನಾ ರೋಗಿಗಳಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಲ್ಯಾಬ್ ಟೆಕ್ನೀಷಿಯನ್ ಮೀರತ್ ಮೆಡಿಕಲ್ ಕಾಲೇಜಿನಿಂದ ಪರೀಕ್ಷೆಗೆಂದು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಂಗಗಳು ದಾಳಿಮಾಡಿ ಅದನ್ನು ಕಸಿದುಕೊಂಡಿದೆ. ಬಳಿಕ ಸ್ಯಾಂಪಲ್ ಕಲೆಕ್ಷನ್ ಕಿಟ್ ಗಳನ್ನು ಬಾಯಿಗೆ ಹಾಕಿ ಜಗಿದು ಹಾಕಿವೆ. ಸ್ಯಾಂಪಲ್ ಪರೀಕ್ಷೆಗೆ ಹೋಗುವ ಮುನ್ನವೇ ಈ ರೀತಿ ಆಗಿದ್ದು, ಸ್ಥಳೀಯರಲ್ಲಿ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ Read More »

ರಾಷ್ಟ್ರೀಯ ನ್ಯೂಸ್

ಕುಕ್ಕೆಯತ್ತ ಭಕ್ತರ ಆಗಮನ ➤ ಹೊರಗಿಂದಲೇ ಕೈ ಮುಗಿಯುತ್ತಿರುವ ಭಕ್ತರು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಮೇ.30: ಕೊರೋನಾ ಮಾಹಮಾರಿ ಗೆ ತತ್ತರಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಆದ್ರೇ ಈಗ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ದೂರದ ಊರುಗಳಿಂದ ಭಕ್ರರು ಆಗಮಿಸಲು ಆರಂಭಿಸಿದ್ದಾರೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಸಾರ್ವಜನಿಕರಿಗೆ ಮುಚ್ಚಿದ್ದ ದೇವಸ್ಥಾನ ಇನ್ನೂ ತೆರೆದಿಲ್ಲವಾದರೂ ಭಕ್ತರು ಮಾತ್ರ ಬರಲಾರಂಭಿಸಿದ್ದಾರೆ.   ಇನ್ನು, ಜೂನ್ 1 ರ ಬಳಿಕ ದೇವಸ್ಥಾನಗಳು ಮತ್ತೇ ಭಕ್ತರಿಗೆ ತೆರೆದುಕೊಳ್ಳಲಿದ್ದರೂ ಕಳೆದ ಒಂದು ವಾರದಿಂದ ಭಕ್ತರು ಬರುತ್ತಿದ್ದು ಹೊರಗಿಂದಲೇ ಕೈ

ಕುಕ್ಕೆಯತ್ತ ಭಕ್ತರ ಆಗಮನ ➤ ಹೊರಗಿಂದಲೇ ಕೈ ಮುಗಿಯುತ್ತಿರುವ ಭಕ್ತರು Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ… ಕೊರೊನಾ….  ಕೊರೊನಾ….. ಎಲ್ಲಿ ಹೋದರೂ ಅಲ್ಲಿ ಕೊರೊನಾದೆ ಸುದ್ಧಿ… ಅದೆಷ್ಟೋ ಮಂದಿ ಕೊರೊನಾಗೆ ಬಲಿಯಾಗಿದ್ದು, ಮತ್ತೆ ಕೆಲವರೂ ಸಾವನ್ನೂ ಗೆದ್ದು ಬಂದವರೂ ಇದ್ದಾರೆ. ಅಂತಹುದೇ ಪವಾಡ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 68 ವರ್ಷದ ವೃದ್ಧೆಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸುರತ್ಕಲ್ ಮೂಲದ 68 ವರ್ಷದ ಮಹಿಳೆ ಹೃದಯ ಸಂಬಂಧಿ ಖಾಯಿಲೆಂಯಿಂದ ಬಳಲುತ್ತಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಮೇ 15ರಂದು ರಿಪೋರ್ಟಲ್ಲಿ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!! Read More »

ಕರಾವಳಿ
Scroll to Top