Kadaba

ಸಸಿಹಿತ್ಲು ಶಾಂಭವಿ ನದಿ ತೀರದಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba,ಸಸಿಹಿತ್ಲು ಜೂ.21: ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಸಿಹಿತ್ಲು ಹಿಂದೂ ರುದ್ರಭೂಮಿ ಬಳಿಯ ಶಾಂಭವಿ ನದಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಸಿಹಿತ್ಲು ಹಿಂದೂ ರುದ್ರಭೂಮಿ ಬಳಿಯ ಶಾಂಭವಿ ನದಿ ತೀರದಲ್ಲಿ ಒಣಗಿದ ಗಿಡ ಗಂಟಿ ಹಾಗೂ ಕಸಕಡ್ಡಿ ನಡುವೆ ಸುಮಾರು 35 ವರ್ಷ ಪ್ರಾಯದ ವ್ಯಕ್ತಿಯ ಶವ ಸಿಲುಕಿಕೊಂಡಿರುವುದು ಕಂಡುಬಂದಿದ್ದು ಈ ಸಂದರ್ಭ ಸ್ಥಳದಲ್ಲಿದ್ದ ಶರತ್ ಅಮೀನ್ ಮತ್ತು ಪುರುಷೋತ್ತಮ ಸಾಲ್ಯಾನ್ ಮತ್ತಿತರರು ಧಾವಿಸಿ ಒಣಗಿದ ಗಿಡಗಂಟಿ […]

ಸಸಿಹಿತ್ಲು ಶಾಂಭವಿ ನದಿ ತೀರದಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ

ಬಿಗ್ ಬಾಸ್ ಕನ್ನಡ ಸೀಸನ್ 8 ಸೆಕೆಂಡ್ ಇನ್ನಿಂಗ್ಸ್ ➤ ಜೂ.23ಕ್ಕೆ ಮಹಾಸಂಚಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.21: ಕೊರೋನಾ 2ನೇ ಅಲೆ ತೀವ್ರವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಇದೇ ಬುಧವಾರ (ಜೂ.23) ಪುನರಾರಂಭವಾಗುತ್ತಿದೆ. ಬಿಗ್ ಬಾಸ್ ಸೀಸನ್ ನ್ನು ಅರ್ಧಕ್ಕೆ ಸ್ಥಗಿತಗೊಳಿಸಿದಾಗ ಅದನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮತ್ತು ಮನೆಯೊಳಗಿದ್ದ 12 ಮಂದಿ ಸ್ಪರ್ಧಿಗಳಿಗೆ ಬೇಸರವಾಗಿತ್ತು. ಇದೀಗ ಕೊರೋನಾ ಸೋಂಕಿನ ಎರಡನೇ ಅಲೆ ಕಡಿಮೆಯಾಗಿ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸುತ್ತಿದ್ದಂತೆ ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋವನ್ನು ಮತ್ತೆ ಆರಂಭಿಸುತ್ತಿದೆ. ಇದನ್ನು ಎರಡನೇ

ಬಿಗ್ ಬಾಸ್ ಕನ್ನಡ ಸೀಸನ್ 8 ಸೆಕೆಂಡ್ ಇನ್ನಿಂಗ್ಸ್ ➤ ಜೂ.23ಕ್ಕೆ ಮಹಾಸಂಚಿಕೆ Read More »

ಲೈಫ್‍ಸ್ಟೈಲ್

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಕಂಟೇನರ್ ಲಾರಿ ➤ ಓರ್ವ ಮೃತ್ಯು, ಕ್ಲೀನರ್ ನಾಪತ್ತೆ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.21:ನಗರದ ಎನ್​​ಎಂಪಿಟಿಯಲ್ಲಿ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿ ನೀರಿಗೆ ಬಿದ್ದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೋರ್ವ ನಾಪತ್ತೆಯಾಗಿದ್ದಾನೆ. ಮಂಗಳೂರಿನ ಎನ್​​ಎಂಪಿಟಿ ಬಂದರಿನಲ್ಲಿ ಹಡಗಿನಲ್ಲಿ ಬರುವ ಸರಕು ಸಾಮಗ್ರಿಗಳ ಸಾಗಣೆ ಕಂಟೇನರ್ ಲಾರಿಗಳು ಬಂದರ್​​ನ ವರೆಗೆ ಬರುತ್ತದೆ. ಹೀಗೆ ಬಂದ ಡೆಲ್ಟಾ ಕಂಪೆನಿಯ 10 ಚಕ್ರದ ಕಂಟೇನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದೆ. ನವಮಂಗಳೂರು ಬಂದರಿನ 14 ನೇ ಬರ್ತ್​ನಲ್ಲಿ ಈ ಘಟನೆ ನಡೆದಿದೆ.ಲಾರಿಯಲ್ಲಿದ್ದ ಚಾಲಕ ರಾಜೇಸಾಬ (26) ಮೃತಪಟ್ಟಿದ್ದು,

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಕಂಟೇನರ್ ಲಾರಿ ➤ ಓರ್ವ ಮೃತ್ಯು, ಕ್ಲೀನರ್ ನಾಪತ್ತೆ Read More »

ಕರಾವಳಿ

ರಾಜ್ಯದಲ್ಲಿ ಕೊರೋನಾ ಇಳಿಮುಖ ➤ ಬೆಂಗಳೂರಿನಲ್ಲಿ 1,034 ಸೇರಿ 4,867 ಹೊಸ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.21: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,867 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 142 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,025ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 8,404 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ

ರಾಜ್ಯದಲ್ಲಿ ಕೊರೋನಾ ಇಳಿಮುಖ ➤ ಬೆಂಗಳೂರಿನಲ್ಲಿ 1,034 ಸೇರಿ 4,867 ಹೊಸ ಪ್ರಕರಣ ಪತ್ತೆ Read More »

ಕರಾವಳಿ

ಕರಾವಳಿಗೆ ರೆಡ್‌ ಅಲರ್ಟ್‌ ➤ ಮುಂದಿನ 3-4 ದಿನ ಭಾರಿ ಮಳೆ ಮುನ್ಸೂಚನೆ!

(ನ್ಯೂಸ್ ಕಡಬ) newskadaba,ಮಂಗಳೂರು ಜೂ. 20:ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು , ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಜತೆಗೆ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರಂಜೆ ಅಲರ್ಟ್ ಘೋಷಣೆ ಮಾಡಲಾಗಿದೆ.  ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಮುಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಯೆಲ್ಲೊ ಅಲರ್ಟ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ.

ಕರಾವಳಿಗೆ ರೆಡ್‌ ಅಲರ್ಟ್‌ ➤ ಮುಂದಿನ 3-4 ದಿನ ಭಾರಿ ಮಳೆ ಮುನ್ಸೂಚನೆ! Read More »

ಕರಾವಳಿ

ಈಜುಕೊಳದಲ್ಲಿ ನಟಿ ರಾಧಿಕಾ ಮದನ್ ವರ್ಕೌಟ್, ವಿಡಿಯೋ ವೈರಲ್!

(ನ್ಯೂಸ್ ಕಡಬ) newskadaba,ಮುಂಬೈ ಜೂ. 20: ಬಾಲಿವುಡ್ ನಟಿ ರಾಧಿಕಾ ಮದನ್ ಈಜುಕೋಳದಲ್ಲಿ ಮಾಡುತ್ತಿರುವ ವರ್ಕೌಟ್ ವಿಡಿಯೋ ಇಂಟರ್ ನೆಟ್ ನಲ್ಲಿ  ಸಖತ್ ವೈರಲ್ ಆಗಿದೆ.ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಈ ಸಂದರ್ಭದಲ್ಲಿ ಚಿತ್ರರಂಗದ ಪ್ರಮುಖ ನಟ, ನಟಿಯರು ತಮ್ಮ ಫೋಟೋ ಹಂಚಿಕೊಳ್ಳುವ ಮೂಲಕ ತಾವೂ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಿ ಎನ್ನುವ ಸಂದೇಶವನ್ನು ಜನರಿಗೆ ನೀಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ  ಈಜುಕೋಳದಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವೊಂದನ್ನು ನಟಿ ರಾಧಿಕಾ ಮದನ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ವರ್ಕೌಟ್ ಮಿಸ್ ಮಾಡಲ್ಲ ಎಂಬ ಅಡಿಬರಹ

ಈಜುಕೊಳದಲ್ಲಿ ನಟಿ ರಾಧಿಕಾ ಮದನ್ ವರ್ಕೌಟ್, ವಿಡಿಯೋ ವೈರಲ್! Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು ಪೊಲೀಸ್ ಠಾಣೆಯಲ್ಲಿ ಎಚ್.ಡಿ. ರೇವಣ್ಣ ವಿರುದ್ಧ ದೂರು

(ನ್ಯೂಸ್ ಕಡಬ) newskadaba,ಪುತ್ತೂರು ಜೂ. 20: ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ನರ್ಸಿಂಗ್ ಹೋಮ್‌ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಪುತ್ತೂರಿನ ಐಎಂಎ ಹೆರಾಸ್ಮೆಂಟ್ ಕಮಿಟಿಯ ಚೇರ್‌ಮೇನ್ ಆಗಿರುವ ಡಾ. ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಒತ್ತಾಯಿಸಿದ್ದಾರೆ.

ಪುತ್ತೂರು ಪೊಲೀಸ್ ಠಾಣೆಯಲ್ಲಿ ಎಚ್.ಡಿ. ರೇವಣ್ಣ ವಿರುದ್ಧ ದೂರು Read More »

ಕರಾವಳಿ

ಭಾರತದಲ್ಲಿಂದು 58,419 ಹೊಸ ಕೋವಿಡ್-19 ಕೇಸ್ ಪತ್ತೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ. 20:ಭಾರತದಲ್ಲಿ ಕೊರೋನಾ ಅಬ್ಬರದ ಇಳಿಕೆಯ ಹಾದಿ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 58,419 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1576 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,98,81,965ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,86,713ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 7,29,243ಕ್ಕೆ ಕುಸಿದ್ದು, 75 ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ

ಭಾರತದಲ್ಲಿಂದು 58,419 ಹೊಸ ಕೋವಿಡ್-19 ಕೇಸ್ ಪತ್ತೆ Read More »

ಕರಾವಳಿ

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ. 20: ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧವಿದ್ದರೂ ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಹೊಂದಿದವವರನ್ನು ಮಾತ್ರ ಜಿಲ್ಲೆಯ ಒಳಬರಲು ಬಿಡಲಾಗುತ್ತಿದೆ. ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ಕರೆಯಲಾಗುವುದಿಲ್ಲ.

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್ Read More »

ಕರಾವಳಿ

ಸುಳ್ಯ: ಸಿಬ್ಬಂದಿ ಕೊರತೆ ➤ ಕಸ ಸಂಗ್ರಹ ವಾಹನದ ಡ್ರೈವರ್ ಆದ ನ.ಪಂ. ಅಧ್ಯಕ್ಷರು

(ನ್ಯೂಸ್ ಕಡಬ) newskadaba, ಸುಳ್ಯ ಜೂ. 20: ಸುಳ್ಯ ನಗರ ಪಂಚಾಯಿತಿನ ಕಸ ಸಾಗಾಟ ವಾಹನ ಸಿಬ್ಬಂದಿ ಕ್ವಾರಂಟೈನ್ ಆಗಿದ್ದರು. ಈ ಸಂದರ್ಭ ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅವರೇ ಕಸ ಸಾಗಾಟ ವಾಹನದ ಡ್ರೈವರ್ ಆಗಿ ಕಾರ್ಯ ನಿರ್ವಹಿಸಿದರು. ಇದೀಗ ಎರಡು ದಿನಗಳಿಂದ ಸುಳ್ಯ ನಗರದಲ್ಲಿ ತ್ಯಾಜ್ಯ ಸಂಗ್ರಹಕ್ಕೆ ಸಿಬ್ಬಂದಿ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ವಿನಯಕುಮಾರ್ ತಾತ್ಕಾಲಿಕ ಸಿಬ್ಬಂದಿ ಹುಡುಕುವ ಬದಲು ತಾನೇ ಸ್ವತಃ ಲಭ್ಯರಿದ್ದ ಕಾರ್ಮಿಕರೊಂದಿಗೆ ಯಾವುದೇ ದೊಡ್ಡಸ್ತಿಕೆ ತೋರದೆ, ಮುಜುಗರವೂ

ಸುಳ್ಯ: ಸಿಬ್ಬಂದಿ ಕೊರತೆ ➤ ಕಸ ಸಂಗ್ರಹ ವಾಹನದ ಡ್ರೈವರ್ ಆದ ನ.ಪಂ. ಅಧ್ಯಕ್ಷರು Read More »

ಕರಾವಳಿ
Scroll to Top