Kadaba

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com, ಕಡಬ, ನ.27.  ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಕಲೆ ಮತ್ತು ಸಾಹಿತ್ಯದ ತಿಳುವಳಿಕೆ ಮೂಡಿಸುವ ಸಲುವಾಗಿ ತಿರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ ನೀಡಲಾಯಿತು. ತೃತೀಯ ಸೆಮಿಸ್ಟರ್ ನ ಪ್ರಶಿಕ್ಷಣಾರ್ಥಿಗಳ ಪಠ್ಯಕ್ರಮದ ಅಂಗವಾಗಿ ರಾಷ್ಟ್ರಕವಿ, ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಹುಟ್ಟೂರಿನ ಮನೆಯಾದ ಶಿವಮೊಗ್ಗ ಜಿಲ್ಲೆಯ ತಿರ್ಥಹಳ್ಳಿಯ ಕವಿಶೈಲಕ್ಕೆ ಭೇಟಿ ನೀಡಿ ಕುವೆಂಪುರವರ ಬಗೆಗಿನ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿದರು. ಕಾಲೇಜಿನ ಉಪನ್ಯಾಸಕ ಶ್ರೀ ರಘುನಂದನ […]

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ Read More »

ಕರಾವಳಿ

102 ನೆಕ್ಕಿಲಾಡಿ: ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

 (ನ್ಯೂಸ್ ಕಡಬ) newskadaba.com ಕಡಬ, ನ.20  10 ಲಕ್ಷ ರೂ.ಅನುದಾನದಲ್ಲಿ 102 ನೆಕ್ಕಿಲಾಡಿ ಗ್ರಾಮದ ಸಾರಕೆರೆ-ಪಂಜೋಡಿ-ಪೊನೈತ್ತಾರು ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಯಿತು. ಸುಳ್ಯ ಶಾಸಕ ಎಸ್.ಅಂಗಾರವರು ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಕಡಬ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಪುತ್ತೂರು ಎಪಿಎಂಸಿ ಸದಸ್ಯ ಮೇದಪ್ಪ ಗೌಡ ಡೆಪ್ಪುಣಿ, ತಾ.ಪಂ. ಸದಸ್ಯೆ ಪಿ.ವೈ ಕುಸುಮ, ಮರ್ದಾಳ ಗ್ರಾ.ಪಂ. ಸದಸ್ಯ ಸರ್ವೋತ್ತಮ ಗೌಡ ಪಂಜೋಡಿ, ಪ್ರಮುಖರಾದ ಗಣಪಯ್ಯ ಗೌಡ ಪಂಜೋಡಿ,

102 ನೆಕ್ಕಿಲಾಡಿ: ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ Read More »

ಕರಾವಳಿ

ವಳಕಡಮ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟನೆ ➤ಹೈನುಗಾರಿಕೆಯಿಂದ ಮಹಿಳೆಯರೂ ಅರ್ಥಿಕವಾಗಿ ಸಬಲೀಕರಣ-ರವಿರಾಜ್ ಹೆಗ್ಡೆ

 (ನ್ಯೂಸ್ ಕಡಬ) newskadaba.com ಕಡಬ, ನ.20  ಆಧುನಿಕ ಕಾಲದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಹೈನುಗಾರಿಕೆಯು ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಲು ಸಹಾಯವಾಗುತ್ತದೆ ಎಂದು ದ.ಕ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಹೇಳಿದರು. ಕೊೈಲ ಗ್ರಾಮದ ವಳಕಡಮದಲ್ಲಿ ನೂತನವಾಗಿ ಆರಂಭಗೊಂಡಿರುವ ವಳಕಡಮ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ ಸುಳ್ಯ ಶಾಸಕ ಎಸ್.ಅಂಗಾರರವರು ಮಾತನಾಡಿ, ನಮ್ಮ ಬದುಕು ಯಾವಾಗಲೂ ಶ್ರಮದ ಬದುಕು ಆಗಬೇಕು, ಹೈನುಗಾರಿಕೆಯು ಒಂದು

ವಳಕಡಮ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟನೆ ➤ಹೈನುಗಾರಿಕೆಯಿಂದ ಮಹಿಳೆಯರೂ ಅರ್ಥಿಕವಾಗಿ ಸಬಲೀಕರಣ-ರವಿರಾಜ್ ಹೆಗ್ಡೆ Read More »

ಕರಾವಳಿ

ಸಾಮಾಜಿಕ ಅವ್ಯವಸ್ಥೆಯ ವಿರುದ್ದ ಹೋರಾಟ, ಪರಿಸರ ಪ್ರೇಮಿ “ಜಂಗಲ್ ಜಾಕಿ” ಕಡಬದ ಗ್ರಾಮೀಣ ಯುವಕರಿಂದ ಕಿರು ಚಿತ್ರ ನಿರ್ಮಾಣ

 (ನ್ಯೂಸ್ ಕಡಬ) newskadaba.com  ಕಡಬ,  ನ.18  ಮೂಲಭೂತ ಸೌಕರ್ಯ ವಂಚಿತ ಊರಿನಲ್ಲಿ ಮೂಲಭೂತ ಸೌಕರ್ಯಕ್ಕಾಗಿ ಹೋರಾಟ,.. ಜನರ ಕಲ್ಯಾಣಕ್ಕಾಗಿ ಸರಕಾರ ಯೋಜನೆಗಳನ್ನು ಮಾಡಿದರೂ ಜನರ ದುರುಪಯೋಗದಿಂದ ಅದು ಸಮಾಜಕ್ಕೆ ಯಾವ ರೀತಿ ಮಾರಕವಾಗಿ ಪರಿಣಮಿಸುತ್ತದೆ. ಇದನ್ನು ವಿರೋಧಿಸಲು ಹೊರಟ ಆ ಊರಿನ ಬಡ ಪರಿಸರ ಪ್ರೇಮಿ ಯುವಕ, ಆದರೆ ಪ್ರಭಾವಿ ದಂಧೆಕೋರರ ವಿರುದ್ದ ಈತನ ಆಟ ನಡೆಯೊಲ್ಲ, ಆದರೂ ಶಕ್ತಿಯಿಂದ ಆಗದ ಕೆಲಸವನ್ನು ಯುಕ್ತಿಯಿಂದ ಮಾಡಲು ಹೊರಟು ಕೊನೆಗೆ ಓರ್ವ ದಕ್ಷ ನಿಷ್ಟಾವಂತ ಅಧಿಕಾರಿಯಿಂದ ಆ ಯುವಕನ

ಸಾಮಾಜಿಕ ಅವ್ಯವಸ್ಥೆಯ ವಿರುದ್ದ ಹೋರಾಟ, ಪರಿಸರ ಪ್ರೇಮಿ “ಜಂಗಲ್ ಜಾಕಿ” ಕಡಬದ ಗ್ರಾಮೀಣ ಯುವಕರಿಂದ ಕಿರು ಚಿತ್ರ ನಿರ್ಮಾಣ Read More »

ಕರಾವಳಿ

ಎಲ್ಲೆಂದರಲ್ಲಿ ಬಿಸಾಡುತ್ತಿರುವ ತ್ಯಾಜ್ಯ , ದುರ್ವಾಸನೆಯಿಂದ ರೋಗಕ್ಕೆ ಆಹ್ವಾನ

 (ನ್ಯೂಸ್ ಕಡಬ) newskadaba.com ಕಡಬ, ನ.16  ಕಡಬ ಗ್ರಾ.ಪಂಗೆ ಒಳಪಟ್ಟ ಕಡಬ ಗ್ರಾಮದ ತುಂಬೆತ್ತಡ್ಕ ಎಂಬಲ್ಲಿ ಕಿಡಿಗೇಡಿಗಳು ತ್ಯಾಜ್ಯ ಹಾಕುತ್ತಿದ್ದು ಗ್ರಾ.ಪಂನ ಅಧ್ಯಕ್ಷ ಬಾಬು ಮುಗೇರರವರ ನೇತೃತ್ವದಲ್ಲಿ ನ.15ರಂದು ಕಸ ವಿಲೇವಾರಿ ಮಾಡಲಾಗಿದೆ. ತ್ಯಾಜ್ಯ ಬಿಸಾಡುವವರ ಮೇಲೆ ಕ್ರಮಕ್ಕೆ ಮುಂದಾದ ಅಧ್ಯಕ್ಷರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಹಲವಾರು ಸಮಯಗಳಿಂದ ಪರಿಸರದ ಕೆಲವರು ಕಿಡಿಗೇಡಿಗಳು ರಾತ್ರಿ ಹೊತ್ತಲ್ಲಿ ಕೋಳಿ ತ್ಯಾಜ್ಯ, ಸೇರಿದಂತೆ ಗಲಿಜು ವಸ್ತುಗಳನ್ನು ತಂದು ಹಾಕುತ್ತಿದ್ದು ಈ ಬಗ್ಗೆ ಹಲವಾರು ಸಲ ಗ್ರಾ.ಪಂನಿಂದ ಸ್ವಚ್ಚತೆಯ ಬಗ್ಗೆ

ಎಲ್ಲೆಂದರಲ್ಲಿ ಬಿಸಾಡುತ್ತಿರುವ ತ್ಯಾಜ್ಯ , ದುರ್ವಾಸನೆಯಿಂದ ರೋಗಕ್ಕೆ ಆಹ್ವಾನ Read More »

ಕರಾವಳಿ

ಕಡಬದಲ್ಲಿ ಕೆಸಿಸಿ ಆರೋಗ್ಯ ಕಾರ್ಡ್ ಬಗ್ಗೆ ಗೊಂದಲ ನಿರ್ಮಾಣ

 (ನ್ಯೂಸ್ ಕಡಬ) newskadaba.com ಕಡಬ, ನ.14  ಸರಕಾರದ ಅನುಮತಿ ಇಲ್ಲದೆ ಕೆಸಿಸಿ ಆರೋಗ್ಯ ಕಾರ್ಡ್ ಎನ್ನುವ ಹೆಸರಿನಲ್ಲಿ ನ.12ರಂದು ಕಡಬ ಗ್ರಾ.ಪಂ.ಕಚೇರಿಯಲ್ಲಿ ಕುಳಿತು ಹಣ ಸಂಗ್ರಹಿಸಿ ಆರೋಗ್ಯ ಕಾರ್ಡ್ ವಿತರಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರ ದೂರಿನಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆಗೊಳಪಡಿಸಿದ ಘಟನೆಗೆ ಸಂಬಂಧಿಸಿ ಕೆಸಿಸಿ ಆರೋಗ್ಯ ಕಾರ್ಡ್‍ನ ಗೊಂದಲ ನಿವಾರಣೆಗೆ ಟ್ರಸ್ಟ್‍ನ ಮುಖ್ಯಸ್ಥರು ಕಡಬ ಠಾಣೆಗೆ ಆಗಮಿಸಿ ಮಾತುಕತೆ ನಡೆಸಿ 15 ದಿನಗಳಲ್ಲಿ ಕಾರ್ಡ್‍ನ ಬಗ್ಗೆ ಮಾಹಿತಿ ಮತ್ತು ಪ್ರಯೋಜನ ಪಡೆದುಕೊಂಡ ಫಲಾನುಭವಿಗಳ ವಿವರಣೆ

ಕಡಬದಲ್ಲಿ ಕೆಸಿಸಿ ಆರೋಗ್ಯ ಕಾರ್ಡ್ ಬಗ್ಗೆ ಗೊಂದಲ ನಿರ್ಮಾಣ Read More »

ಕರಾವಳಿ

ನೂತನ “ಕಡಬ ತಾಲೂಕು ಪಂಚಾಯತ್” ರಚನೆ ✍?ವಿಜಯ ಕುಮಾರ್ ಕಡಬ

✍?ವಿಜಯ ಕುಮಾರ್ ಕಡಬ (ನ್ಯೂಸ್ ಕಡಬ) newskadaba.com  ಕಡಬ,  ನ.13  ನೂತನ ಕಡಬ ತಾಲೂಕು ಉದ್ಘಾಟನೆಯಾಗಿ ಅನುಷ್ಠಾನ ಪ್ರಕ್ರಿಯೆಗಳು ಪ್ರಾರಂಭವಾಗುತ್ತಿದ್ದಂತೆ ಅದರಲ್ಲಿ ಕಡಬ ಗ್ರಾ.ಪಂ. ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ಬಳಿಕ ಇದೀಗ ಕಡಬ ತಾಲೂಕು ಪಂಚಾಯತ್ ಅಸ್ತಿತ್ವಕ್ಕೆ ಸರಕಾರದಿಂದ ಅಧಿಕೃತ ಆದೇಶ ನೀಡಿದೆ. ದಿನಾಂಕ: 14-10-2019ರಿಂದ ಜಾರಿಗೆ ಬರುವಂತೆ ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಸ್. ಮಹಾಲಕ್ಷ್ಮೀ ಅವರು ಕರ್ನಾಟಕ ರಾಜ್ಯ ಪತ್ರದಲ್ಲಿ ಆದೇಶ ಹೊರಡಿಸಿದ್ದಾರೆ. 13

ನೂತನ “ಕಡಬ ತಾಲೂಕು ಪಂಚಾಯತ್” ರಚನೆ ✍?ವಿಜಯ ಕುಮಾರ್ ಕಡಬ Read More »

ಕರಾವಳಿ

ಎನ್.ಎಸ್.ಎಸ್. ವಾರ್ಷಿಕ ಶಿಬಿರ ಸಮಾರೋಪ

  (ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ.7    ಕಡ್ಯ ಕೊಣಾಜೆ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಮಂಗಳವಾರದಂದು ನಡೆಯಿತು. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಅವರು ಸಮಾರೋಪ ಭಾಷಣ ಮಾಡಿದರು. ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಮಾತನಾಡಿ, ಬೆವರು ಸುರಿಸಿ ದುಡಿಯುವ ಕ್ಷಣಗಳು ದುಡಿಮೆಯ ಬೆಲೆಯನ್ನು ಕಲಿಸುತ್ತದೆ. ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ಸಿಗುತ್ತದೆ.

ಎನ್.ಎಸ್.ಎಸ್. ವಾರ್ಷಿಕ ಶಿಬಿರ ಸಮಾರೋಪ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ ➤ ನ.10 ರಂದು ಪೂರ್ವ ವಿದ್ಯಾರ್ಥಿಗಳ ಸಭೆ

(ನ್ಯೂಸ್ ಕಡಬ) newskadaba.com  ಕಡಬ, ನ.06. ಇಲ್ಲಿನ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಪೂರ್ವ ವಿದ್ಯಾರ್ಥಿಗಳ ಸಭೆಯು ನವೆಂಬರ್ 10 ರಂದು ಅಪರಾಹ್ನ 2:30 ಕ್ಕೆ ಸೈಂಟ್ ಜೋಕಿಮ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ವಿದ್ಯಾ ಸಂಸ್ಥೆಯ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ 2020 ರ ಜನವರಿ 14 ರಂದು ತುಳು ನಾಟಕವೊಂದನ್ನು ಆಯೋಜಿಸುವ ಕುರಿತು ಈಗಾಗಲೇ ಯೋಜನೆಯನ್ನು ರೂಪಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸಂಸ್ಥೆಯ ಪೂರ್ವ ವಿದ್ಯಾರ್ಥಿಗಳ ಬೆಂಬಲವನ್ನು ಮನಗಂಡು ಸಭೆ ಕರೆಯಲಾಗಿದೆ. ಎಲ್ಲಾ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ ➤ ನ.10 ರಂದು ಪೂರ್ವ ವಿದ್ಯಾರ್ಥಿಗಳ ಸಭೆ Read More »

ಕರಾವಳಿ

ಕಡಬದಲ್ಲಿ ಪೂರ್ಣ ಪ್ರಮಾಣದ ಎಪಿಎಮ್‌ಸಿ ಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ನ.6  ಕಡಬ ಈಗಾಗಲೇ ತಾಲೂಕು ಆಗಿರುವುದರಿಂದ ಸರಕಾರಿ ಇಲಾಖೆಗಳು ಹಂತ-ಹಂತವಾಗಿ ಕಾರ್ಯರಂಭ ಮಾಡಲು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಡಬದಲ್ಲಿ ಎಪಿಎಮ್‌ಸಿ ಕಚೇರಿ ಕಾರ್ಯರಂಭ ಪ್ರಾರಂಭಿಸಲಾಗುವುದು ಹಾಗೂ ಕಡಬಕ್ಕೆ ಪ್ರತ್ಯೇಕ ಎಪಿಎಮ್‌ಸಿ ಅನುಷ್ಠಾನಕ್ಕೆ ಸರಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಪುತ್ತೂರು ಎಪಿಎಮ್‌ಸಿ ಅಧ್ಯಕ್ಷ ದಿನೇಶ್ ಮೆದು ಹೇಳಿದರು. ಅವರು ಮಂಗಳವಾರ ಕಡಬದಲ್ಲಿರುವ ಎಪಿಎಮ್‌ಸಿ ಉಪಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಕಡಬ ಈಗಾಗಲೇ ಎಲ್ಲಾ ರೀತಿಯಿಂದಲೂ ಬೆಳೆಯುತ್ತಿರುವ ಕೇಂದ್ರವಾಗುತ್ತಿವೆ. ಸರಕಾರಿ ಇಲಾಖೆಗಳನ್ನು

ಕಡಬದಲ್ಲಿ ಪೂರ್ಣ ಪ್ರಮಾಣದ ಎಪಿಎಮ್‌ಸಿ ಸ್ಥಾಪನೆ Read More »

ಕರಾವಳಿ
Scroll to Top