Kadaba

ಕಾನೂನು ಪದವಿ ವಿಶ್ವವಿದ್ಯಾನಿಲಯ ಮಂಗಳೂರು ➤ ಪುನಾರಾವರ್ತಿತ ಕಾನೂನು ಪರೀಕ್ಷಾ ನೋಂದಣಿಗೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29.ಮಂಗಳೂರು ವಿಶ್ವವಿದ್ಯಾನಿಲಯದ ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕಾನೂನು ಪದವಿಯ ಪರೀಕ್ಷೆಗಳನ್ನು 2019-20ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಅಂತಿಮವಾಗಿ ನಡೆಸಲಿದೆ. ಪರೀಕ್ಷೆ  ಬರೆಯಲು ಬಾಕಿಯಿರುವ ಪುನರಾವರ್ತಿತ ವಿದ್ಯಾರ್ಥಿಗಳು ಅಕ್ಟೋಬರ್ 2019 ಮತ್ತು ಏಪ್ರಿಲ್ 2020 ತಿಂಗಳಲ್ಲಿ ನಡೆಯಲಿರುವ ಪರೀಕ್ಷೆಗೆ ಆಯಾಯ ಕಾಲೇಜುಗಳಲ್ಲಿ ನೋಂದಣಿ ಮಾಡುವಂತೆ ತಿಳಿಸಲಾಗಿದೆ. ಏಪ್ರಿಲ್ 2020ರಲ್ಲಿ ನಡೆಸುವ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶವಾಗಿದ್ದು, ಮುಂದಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳಿಗಾಗಿ ಯಾವುದೇ ವಿಷಯಕ್ಕೆ ಸಂಬಂಧಿಸಿ ಕಾನೂನು ಪದವಿ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು […]

ಕಾನೂನು ಪದವಿ ವಿಶ್ವವಿದ್ಯಾನಿಲಯ ಮಂಗಳೂರು ➤ ಪುನಾರಾವರ್ತಿತ ಕಾನೂನು ಪರೀಕ್ಷಾ ನೋಂದಣಿಗೆ ಆದೇಶ Read More »

ಕರಾವಳಿ

ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಇವರ ಸಹಯೋಗದೊಂದಿಗೆ ➤ `ಸ್ವಚ್ಛತಾ ರಸಪ್ರಶ್ನೆ-2019’

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಇವರ ಸಹಯೋಗದೊಂದಿಗೆ ಸ್ವಚ್ಛತಾ ರಸಪ್ರಶ್ನೆಯನ್ನು ಆಯೋಜಿಸಲಾಗಿತ್ತು. ಸ್ವಚ್ಛಮೇವ ಜಯತೆ ಆಂದೋಲನದ ಅಂಗವಾಗಿ ಸ್ವಚ್ಛತೆ, ಜಲ ಸಂರಕ್ಷಣೆ, ಪರಿಸರ ಸಂರಕ್ಷಣೆ ಜಾಗೃತಿಗಾಗಿ ನಡೆಯುತ್ತಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ `ಸ್ವಚ್ಛತಾ ರಸಪ್ರಶ್ನೆ-2019’ ಕಾರ್ಯಕ್ರಮವು ಮಂಗಳೂರಿನ ಪುರಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.

ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಇವರ ಸಹಯೋಗದೊಂದಿಗೆ ➤ `ಸ್ವಚ್ಛತಾ ರಸಪ್ರಶ್ನೆ-2019’ Read More »

ಕರಾವಳಿ

ಬಸ್ ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿ

(ನ್ಯೂಸ್ ಕಡಬ) newskadaba.com ಹೆಬ್ರಿ, ಆಗಸ್ಟ್.28. ಉಡುಪಿಯಿಂದ ಕಾರ್ಕಳ ಹೋಗುತಿದ್ದ ಖಾಸಗಿ ಬಸ್ ಹಾಗೂ ಎದುರುಗಡೆಯಿಂದ ಸ್ಕೂಟಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಹಿರಿಯಡ್ಕ ಓಂತಿಬೆಟ್ಟುಎಂಬಲ್ಲಿ ನಡೆದಿದೆ. ಸ್ಕೂಟಿ ಎದುರು ಕಾರೊಂದು ಚಲಿಸುತ್ತಿದ್ದು ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತ ಒಮ್ಮೆಲೆ ಬಲ ಬದಿಗೆ ಬಂದ ಕಾರಣ ಸ್ಕೂಟಿ ಸವಾರ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದ ಎನ್ನಲಾಗುತ್ತಿದೆ. ಪರಿಣಾಮ ಸ್ಕೂಟಿ ಸವಾರ ಗಂಭೀರ ಗಾಯಗೊಂಡಿದ್ದಾನೆ.ಗಾಯಗೊಂಡ ವ್ಯಕ್ತಿ ಮೂಲತಃ ಕುಂಜಿಬೆಟ್ಟುವಿನ ನಿವಾಸಿ ಪ್ರಸ್ತುತ ಪೆರ್ಡೂರಿನಲ್ಲಿ ವಾಸವಾಗಿರುವ ಮೂಲ್ಯ (೫೦)

ಬಸ್ ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿ Read More »

ಕರಾವಳಿ

ನೂತನ ಸಚಿವರಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಕರ್ನಾಟಕ ಸರಕಾರದ ಬಂದರು, ಮೀನುಗಾರಿಕಾ ಹಾಗೂ ಮುಜರಾಯಿ ಇಲಾಖೆಯ ನೂತನ ಸಚಿವರಾದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಭಿನಂದಿಸಲಾಯಿತು. ಕಡಬ ತಾಲೂಕಿನ ಬಿಜೆಪಿಯ ಪ್ರಮುಖರಾದ ಎ.ಪಿ.ಎಂ.ಸಿ. ಸದಸ್ಯೆ ಪುಲಸ್ತ್ಯಾ ರೈ, ಮರ್ದಾಳ ಬಿಜೆಪಿ ಶಕ್ತಿ ಕೇಂದ್ರದ ಉಸ್ತುವಾರಿ ನೂಜಿಬಾಳ್ತಿಲದ ಉಮೇಶ್ ಶೆಟ್ಟಿ ಬೆಂಗಳೂರಿನ ಸಚಿವರ ಕಛೇರಿಯಲ್ಲಿ ಮಂಗಳವಾರ ಬೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ನೂತನ ಸಚಿವರಿಗೆ ಅಭಿನಂದನೆ Read More »

ಕರಾವಳಿ

ಮೆನ್ನಬೆಟ್ಟು ಗ್ರಾ.ಪಂ.ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಮೆನ್ನಬೆಟ್ಟು ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯ ಆಯೋಜಿಸಲಾಗಿದೆ. ಆಗಸ್ಟ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಮೆನ್ನಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೆನ್ನಬೆಟ್ಟು ಗ್ರಾಮ ಪಂಚಾಯತ್ ಇವರ ಪ್ರಕಟಣೆ ತಿಳಿಸಿದೆ.

ಮೆನ್ನಬೆಟ್ಟು ಗ್ರಾ.ಪಂ.ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ Read More »

ಕರಾವಳಿ

ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ➤ ತ್ರೈಮಾಸಿಕ ಅಂಚೆ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಾರ್ವಜನಿಕರು ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಅಂಚೆ ಅದಾಲತ್ ತಲೆಬರಹದಡಿಯಲ್ಲಿ ಸೆಪ್ಟೆಂಬರ್ 4 ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಬಲ್ಮಠ ಮಂಗಳೂರು 575002 ವಿಳಾಸಕ್ಕೆ ಅಥವಾ ದೂರುಗಳನ್ನು ವಾಟ್ಸಾಪ್ ಸಂಖ್ಯೆ 9448291072 ಕಳುಹಿಸಬಹುದು. ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಮಾತ್ರ ಕಳುಹಿಸಬೇಕು

ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ➤ ತ್ರೈಮಾಸಿಕ ಅಂಚೆ ಅದಾಲತ್ Read More »

ಕರಾವಳಿ

ಸಮಾಜ ಕಲ್ಯಾಣ ಇಲಾಖೆ ಮಂಗಳೂರು ➤ ದೀಕ್ಷಾ ಭೂಮಿಯಾತ್ರೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾ ಭೂಮಿ ಯಾತ್ರೆಗೆ ನಿಯೋಜಿಸುವ ಕುರಿತು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 23 ರಿಂದ ಸೆಪ್ಟೆಂಬರ್ 10 ರವರೆಗೆ ವೆಬ್‍ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಸಮಾಜ ಕಲ್ಯಾಣ ಇಲಾಖೆ ಮಂಗಳೂರು ➤ ದೀಕ್ಷಾ ಭೂಮಿಯಾತ್ರೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ಋಣ ಪರಿಹಾರ ಕಾಯ್ದೆ ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ಜುಲೈ 23 ರಿಂದ ಜಾರಿಗೆ ಬಂದಿರುತ್ತದೆ. ಅದರಂತೆ ಸಣ್ಣ ರೈತರು, ಭೂರಹಿತ ಕೃಷಿ ಕಾರ್ಮಿಕರು, ಮತ್ತು ದುರ್ಬಲ ವರ್ಗದ ಜನರು (ವಾರ್ಷಿಕ ಆದಾಯ ರೂ.1.20.000/- ಗಳ ಮೀರುದಿರುವ) ಖಾಸಗಿ ಲೇವದೇವಿಗಾರರು ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕಾಯ್ದೆಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಕರ್ನಾಟಕ ಋಣ ಪರಿಹಾರ ಕಾಯ್ದೆಯು ಸಾಲಗಾರನೇ ಬಿಟ್ಟುಕೊಟ್ಟ ಕೃಷಿ ಭೂಮಿಯ ಸ್ವತ್ತಿನಿಂದ ಬಾಕಿ ಇರುವ ಬಾಡಿಗೆ, ಭೂಕಂದಾಯದ ಹಿಂಬಾಕಿ ವಸೂಲಿ

ಕರ್ನಾಟಕ ಋಣ ಪರಿಹಾರ ಕಾಯ್ದೆ ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆ ➤ ಆ.29- ನೀರು ಪೂರೈಕೆ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸುತ್ತಿರುದರಿಂದ ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಹಾಗೂ ಜಾಕ್‍ವೆಲ್‍ನ್ನು ಶುಚಿಗೊಳಿಸಲು ಹಾಗೂ ಎನ್.ಆರ್.ವಿ ದುರಸ್ಥಿಗೊಳಿಸಲು ಆಗಸ್ಟ್ 29 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರಗೆ ಹಮ್ಮಿಕೊಳ್ಳಲಾಗಿದೆ. ಸದ್ರಿ ಅವಧಿಯಲ್ಲಿ ಪಡೀಲ್ ರೇಚಕ ಸ್ಥಾವರದಿಂದ ನೀರು ಸರಬರಾಜಾಗುವ ಮಂಗಳೂರು ನಗರ ಭಾಗಶಃ ಪ್ರದೇಶ,

ಮಂಗಳೂರು ಮಹಾನಗರಪಾಲಿಕೆ ➤ ಆ.29- ನೀರು ಪೂರೈಕೆ ಸ್ಥಗಿತ Read More »

ಕರಾವಳಿ

ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ➤ ಇಫ್ಕೋ ಕಂಪನಿವತಿಯಿಂದ ರಸಗೊಬ್ಬರ ವಿಶೇಷ ರಿಯಾಯತಿ ದರದಲ್ಲಿ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಇಫ್ಕೋ ಕಂಪನಿಯವರು ಇಫ್ಕೋ 10:26:26 ಮತ್ತು ಡಿಎಪಿ ದರಗಳ ಎಂ.ಆರ್.ಪಿ. ದರವನ್ನು ಇಳಿಮುಖವಾಗಿ ಪರಿಷ್ಕರಿಸಿರುತ್ತಾರೆ. ಆದುದರಿಂದ, ಪ್ರತಿ 50 ಕೆ.ಜಿ. ಚೀಲಕ್ಕೆ ರೈತರು ಚೀಲದ ಮೇಲೆ ನಮೂದಿಸಿರುವ ಎಂ.ಆರ್.ಪಿ. ದರದ ಬದಲು ಇಫ್ಕೋ 10:26:26 – ಪರಿಷ್ಕೃತ ದರ ರೂ.1200 ಹಾಗೂ ಇಫ್ಕೋ ಡಿಎಪಿ – ಪರಿಷ್ಕೃತ ದರ ರೂ.1250 ದರಗಳನ್ನು ನೀಡಿ ಖರೀದಿಸಲು ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ➤ ಇಫ್ಕೋ ಕಂಪನಿವತಿಯಿಂದ ರಸಗೊಬ್ಬರ ವಿಶೇಷ ರಿಯಾಯತಿ ದರದಲ್ಲಿ ಮಾರಾಟ Read More »

ಕರಾವಳಿ
Scroll to Top