Kadaba

ರಾಷ್ಟ್ರವನ್ನೇ ತಲ್ಲಣಗೊಳಿಸಿದ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ➤ ಪತ್ನಿ ಸೇರಿ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba,ಉಡುಪಿ, ಜೂ.08:ಉಡುಪಿಯ ಇಂದ್ರಾಳಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ (52) ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತರ ಪತ್ನಿ ಮತ್ತು ಮಗ ಸೇರಿದಂತೆ ಮೂವರನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ (ಜೂನ್ 8) ಅಪರಾಧಿಗಳೆಂದು ತೀರ್ಪು ನೀಡಿದೆ.ಅಲ್ಲದೆ ಮೂವರಿಗೂ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ.   ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ನಂದಳಿಕೆ ಮೂಲದ ಜ್ಯೋತಿಷಿ ನಿರಂಜನ್ ಭಟ್ ಅಪರಾಧಿ ಎಂದು ನ್ಯಾಯಾಲಯ ಪರಿಗಣಿಸಿಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ […]

ರಾಷ್ಟ್ರವನ್ನೇ ತಲ್ಲಣಗೊಳಿಸಿದ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ➤ ಪತ್ನಿ ಸೇರಿ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ Read More »

ಕರ್ನಾಟಕ

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ➤ 5 ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ಟೀಸರ್ ರಿಲೀಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06:’ಕಿರಿಕ್ ಪಾರ್ಟಿ’ ಹೀರೋ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಕೇವಲ ನಟನಾಗಿ ಮಾತ್ರವಲ್ಲದೆ ನಿರ್ದೇಶಕ, ನಿರ್ಮಾಪಕನಾಗಿಯೂ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿರುವ ರಕ್ಷಿತ್ ಶೆಟ್ಟಿ ಬರ್ತ್​ಡೇಗೆ ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘777 ಚಾರ್ಲಿ. ಚಿತ್ರತಂಡ ಸರ್​ಪ್ರೈಸ್ ಒಂದನ್ನು ನೀಡಿದೆ. ರಕ್ಷಿತ್ ಶೆಟ್ಟಿ ನಾಯಕನಾಗಿರುವ 777 ಚಾರ್ಲಿ ಎಂಬ ಮುದ್ದಾದ ನಾಯಿಯ ಕತೆಯಿರುವ ‘777 ಚಾರ್ಲಿ’ ಸಿನಿಮಾದ ಟೀಸರ್ ಇಂದು ರಿಲೀಸ್ ಆಗಿದೆ.ಕನ್ನಡ, ತಮಿಳು, ತೆಲುಗು,

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ➤ 5 ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ಟೀಸರ್ ರಿಲೀಸ್ Read More »

ಸಿನಿಮಾ

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba, ಮುಂಬೈ ಜೂ.06: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಳಗ್ಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.   ಈ ಕುರಿತು ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅವರ ಮ್ಯಾನೇಜರ್ ಮಾಹಿತಿ ನೀಡಿದ್ದು, ನಟನ ಆರೋಗ್ಯದ ಸ್ಥಿತಿಗತಿ ಕುರಿತು ತಿಳಿಸಿದ್ದಾರೆ. ದಿಲೀಪ್ ಅವರು ನಿಯಮಿತ ವೈದ್ಯಕೀಯ ಪರೀಕ್ಷೆಗೆಂದು ಖಾರ್‍ನ ನಾನ್ ಕೋವಿಡ್ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ ➤ ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.06: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460  ಕೋವಿಡ್ ಪ್ರಕರಣಗಳು ದೃಢಋಪಟ್ಟಿದ್ದು, ಇದು ಕಳೆದ 2 ತಿಂಗಳಲ್ಲೇ (59ನೇ ದಿನ) ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ.     ಇದೇ ವೇಳೆ ದೇಶದಲ್ಲಿ 2677 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬಂದಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು,

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ ➤ ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಕನ್ನಡದ ಹಿರಿಯ ನಟಿ ಸುರೇಖಾ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06: ವರನಟ ಡಾ. ರಾಜ್‌ಕುಮಾರ್ ಜತೆ “ತ್ರಿಮೂರ್ತಿ”ಯಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಸುರೇಖಾ (66) ಹೃದಯಾಘಾತದಿಂದ ನಿಧನರಾದರು.   160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸುರೇಖಾ ಬೆಂಗಳೂರು ನಗರದಲ್ಲಿ ನಿಧನರಾದರು. ಮಣ್ಣಿನ ಮಕ್ಕಳು, ಸಂಭ್ರಮ, ಕಿಂಗ್, ಶಂಕರ್ ಸುಂದರ್, ಆಲೆಮನೆ, ಬಿಳಿಗಿರಿಯ ಬನದಲ್ಲಿ ಚಿತ್ರಗಳಲ್ಲಿ ರಾಜ್‌ಕುಮಾರ್ ಜತೆ ನಟಿಸಿದ್ದಾರೆ.ಬನಶಂಕರಿ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.  

ಕನ್ನಡದ ಹಿರಿಯ ನಟಿ ಸುರೇಖಾ ನಿಧನ Read More »

ಕರಾವಳಿ

ಪಿಲಿಕುಲದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ “ಹುಲಿ ರಾಣಿ”

(ನ್ಯೂಸ್ ಕಡಬ) newskadaba,ಮಂಗಳೂರು ಜೂ.06: ಪಿಲಿಕುಲದಲ್ಲಿರುವ 10 ವರ್ಷದ ಹುಲಿ ರಾಣಿ ಮೂರು ಮರಿಗಳಿಗೆ ಜನ್ಮ ನೀಡಿದೆ. ಆರೋಗ್ಯವಾಗಿರುವ ಈ ಮೂರು ಮರಿಗಳು ಇನ್ನೂ 16 ದಿನಗಳಲ್ಲಿ ಕಣ್ಣು ತೆರೆಯುತ್ತವೆ. 2019 ರಲ್ಲಿ ರಾಣಿ ಹುಲಿ 5 ಮರಿಗಳಿಗೆ ಜನ್ಮ ನೀಡಿತ್ತು. ಇದೀಗ ಪಿಲಿಕುಲದಲ್ಲಿ ಹುಲಿಗಳ ಸಂಖ್ಯೆ 13 ಕ್ಕೇ ಏರಿಕೆಯಾಗಿದೆ. ಹಾಗೂ ಪಿಲಿಕುಲದಲ್ಲಿರುವ ಕಾಡುಶ್ವಾನ ಧೋಳ್ ಕೂಡ ಇತ್ತೀಚೆಗೆ ಏಳು ಮರಿಗಳಿಗೆ ಜನ್ಮ ನೀಡಿದೆ. ಈ ಹಿಂದೆ ಇದೇ ಕಾಡುಶ್ವಾನ 5 ಮರಿಗಳಿಗೆ ಜನ್ಮ ನೀಡಿತ್ತು. ಪಿಲಿಕುಲದಲ್ಲಿ

ಪಿಲಿಕುಲದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ “ಹುಲಿ ರಾಣಿ” Read More »

ಕರಾವಳಿ

ಮೈಸೂರಿಗೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba, ಮೈಸೂರು ಜೂ.06: ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯ ಆಗಮನವಾಗಿದೆ. ಡಾ. ಬಗಾದಿ ಗೌತಮ್ ಅವರು ಇಂದು ಇಲ್ಲಿನ ಡಿಸಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಅವರಿಂದ ಅಧಿಕಾರ ಸ್ವೀಕರಿಸಿದರು.   ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಸರ್ವೀಸ್‌ನಲ್ಲಿ ಯಾವ ವಿವಾದಕ್ಕೂ ಆಸ್ಪದ ನೀಡಿಲ್ಲ. ನನ್ನ ಹೆಸರು ನೀವು ಕೇಳಿದ್ದಿರೋ ಇಲ್ಲವೋ ಗೊತ್ತಿಲ್ಲ. ನಾನು ತುಂಬಾ ಲೋ ಪ್ರೊಫೈಲ್ ಅಧಿಕಾರಿ. ಸಾಂಪ್ರದಾಯಿಕ ನಗರಿ ಮೈಸೂರಿನಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಸಮಸ್ಯೆ ಇರಬಹುದು. ನಾನು ಪಾರದರ್ಶಕವಾಗಿ ಜನರಿಗೆ

ಮೈಸೂರಿಗೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ಅಧಿಕಾರ ಸ್ವೀಕಾರ Read More »

ಕರ್ನಾಟಕ

MRPL ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ➤ ಪ್ರತಿಭಟನೆ ನಡೆಸಿ ಆಕ್ರೋಶ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.06: ಎಂಆರ್​ಪಿಎಲ್​ನ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗೆ ಆಗಿರುವ ಅನ್ಯಾಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮನೆ-ಮನೆ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್ಐ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಮನೆಮನೆ ಪ್ರತಿಭಟನೆ ನಡೆಯಿತು.   ತುಳುನಾಡ ಅಭಿವೃದ್ದಿಯಲ್ಲಿ ತುಳುವರಿಗೆ ದೊಡ್ಡ ಪಾಲು ಸಿಗಬೇಕು. ಸ್ಥಳೀಯರಿಗೆ ಉದ್ಯೋಗ ನಿರಾಕರಿಸುವ ಕಂಪನಿಗಳಿಗೆ ಬೀಗ ಜಡಿಯಿರಿ ಎಂಬ ಫಲಕಗಳೊಂದಿಗೆ ಡಿವೈಎಫ್ಐ, ಎಸ್​ಎಫ್ಐ ಕಾರ್ಯಕರ್ತರು, ಸಿಪಿಎಂ, ಕಾಂಗ್ರೆಸ್, ಜೆಡಿಎಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

MRPL ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ➤ ಪ್ರತಿಭಟನೆ ನಡೆಸಿ ಆಕ್ರೋಶ Read More »

ಕರ್ನಾಟಕ

ದ. ಕನ್ನಡದ ಮೊದಲ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳದಲ್ಲಿ ಉದ್ಘಾಟನೆ

(ನ್ಯೂಸ್ ಕಡಬ) newskadaba,ಬಂಟ್ವಾಳ ಜೂ.05:ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕವನ್ನು ವಾಮದಪದವು ಸಮುದಾಯ ಬಂಟ್ವಾಳದ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಉದ್ಘಾಟನೆ ಮಾಡಲಾಯಿತು.     ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು.ಬಂಟ್ವಾಳದಲ್ಲಿ ಕೊರೊನಾ ವಿರುದ್ಧ ಹೋರಾಟ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಹಾಗೂ ಅಧಿಕಾರಿ ವೃಂದದ ಶ್ರಮವನ್ನು ಅವರು ಶ್ಲಾಘಿಸಿದರು.  

ದ. ಕನ್ನಡದ ಮೊದಲ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳದಲ್ಲಿ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ..!?

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಕೊರೋನಾ ನಿರೀಕ್ಷಿತ ಮಟ್ಟದಲ್ಲಿ ಕಡಿಮೆ ಆಗದ ಕಾರಣ ಜೂ. 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಘೋಷಣೆ ಮಾಡಲಾಗಿತ್ತು.   ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸುತ್ತೇವೆ. ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ..!? Read More »

ಕರ್ನಾಟಕ
Scroll to Top