Kadaba

ಕಾಮನ್ವೆಲ್ತ್ ವೇಟ್ಲಿಫ್ಟಿಂಗ್ನಲ್ಲಿ ಹೊಸ ದಾಖಲೆ ಬರೆದ ಅಜಯ್ ಸಿಂಗ್

(ನ್ಯೂಸ್ ಕಡಬ) newskadaba.com ಅಪಿಯಾ, ಜುಲೈ.13.81 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ 22ರ ಹರೆಯದ ಅಜಯ್‌ ಕ್ಲೀನ್‌ ಆ್ಯಂಡ್‌ ಜರ್ಕ್‌ನಲ್ಲಿ ತನ್ನ ದೇಹತೂಕದ ಎರಡರಷ್ಟು ಭಾರ (190 ಕೆ.ಜಿ.) ಎತ್ತಿ ದಾಖಲೆ ಸ್ಥಾಪಿಸಿದರು. ಭಾರತೀಯ ವೇಟ್‌ಲಿಫ್ಟರ್‌ ಅಜಯ್‌ ಸಿಂಗ್‌ ಅವರು ಕಾಮನ್‌ವೆಲ್ತ್‌ ವೇಟ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಏಶ್ಯನ್‌ ಯೂತ್‌ ಮತ್ತು ಜೂನಿಯರ್‌ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚು ಜಯಿಸಿದ್ದ ಅಜಯ್‌ ಸ್ನ್ಯಾಚ್‌ನಲ್ಲಿ 148 ಕೆ.ಜಿ. ಭಾರ ಎತ್ತಿದ್ದರು. ಒಟ್ಟಾರೆ 338 ಕೆ.ಜಿ. ಭಾರ ಎತ್ತಿ ಚಿನ್ನ […]

ಕಾಮನ್ವೆಲ್ತ್ ವೇಟ್ಲಿಫ್ಟಿಂಗ್ನಲ್ಲಿ ಹೊಸ ದಾಖಲೆ ಬರೆದ ಅಜಯ್ ಸಿಂಗ್ Read More »

ಕ್ರೀಡಾ ನ್ಯೂಸ್

ಸಿಸಿಬಿ ಪೊಲೀಸರ ಕಾರ್ಯಾಚರಣೆ ವೇಳೆ ಪತ್ತೆಯಾದ 33ಲಕ್ಷ ರೂ.ಖೋಟಾ ನೋಟು ➤ ಕ್ಯಾಮರೋನ್ ದೇಶದ ಪ್ರಜೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.13.ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ವೇಳೆ 2000 ರೂ. ಮುಖಬೆಲೆ ಇರುವ 33ಲಕ್ಷ ರೂ.ಪತ್ತೆಯಾಗಿದೆ.ಕಾರ್ಯಾಚರಣೆ ನಡೆಸಿ ಖೋಟಾ ನೋಟು ಜಾಲವನ್ನು ಬೇಧಿಸಿದ್ದಾರೆ. ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಕ್ಯಾಮರೋನ್ ದೇಶದ ಪ್ರಜೆಯನು ಬಂಧಿಸಿದ್ದಾರೆ.ಆರೋಪಿಯಿಂದ 2000 ರೂ. ಮುಖಬೆಲೆ 33 ಲಕ್ಷ ರೂ. ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.ಈ ಜಾಲದಲ್ಲಿ ಇನ್ನೂ ಕೆಲವರು ತೊಡಗಿಸಿಕೊಂಡಿರುವ ಸಾಧ್ಯತೆ ಹಿನ್ನಲೆಯಲ್ಲಿ ತನಿಖೆ ತೀವ್ರಗೊಳಿಸಿದ್ದಾರೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆ ವೇಳೆ ಪತ್ತೆಯಾದ 33ಲಕ್ಷ ರೂ.ಖೋಟಾ ನೋಟು ➤ ಕ್ಯಾಮರೋನ್ ದೇಶದ ಪ್ರಜೆ ಅರೆಸ್ಟ್ Read More »

ಕರ್ನಾಟಕ

ಶಕ್ತಿ ರೆಸಿಡೆಂಟಿಯಲ್ ಸ್ಕೂಲ್ ➤ ವಿವಿಧ ಸಂಘಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಪಠ್ಯದೊಂದಿಗೆ ಪಠ್ಯೇತರ ವಿಷಯಗಳು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿರುತ್ತವೆ. ವಿದ್ಯಾರ್ಥಿಗಳು ಕ್ರಿಯಾಶೀಲ ಚಟುವಟಿಕೆಗಳನ್ನು ಬಾಲ್ಯದಿಂದಲೇ ಅಳವಡಿಸಿಕೊಳ್ಳಬೇಕು. ಅದನ್ನುಕಲಿಯುವಲ್ಲಿ ಪ್ರೀತಿ, ಆಸಕ್ತಿ, ಶ್ರದ್ಧೆ, ಪ್ರಯತ್ನವೂಅತ್ಯಗತ್ಯಎಂದು ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿದ ಪ್ರಸಿದ್ಧ ಚಿತ್ರಕಲಾವಿದಗಣೇಶ್ ಸೋಮಾಯಾಜಿ ಶಾಲಾ ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದರು. ಪ್ರಕೃತಿಯಲ್ಲಿನ ಸಂಗತಿಗಳನ್ನು ನಿಮಿಷಾರ್ಧದಲ್ಲಿ ಗ್ರಹಿಸಿ ಅದನ್ನುಕಾರ್ಯರೂಪಕ್ಕೆತರುವ ವಿಶೇಷ ಶಕ್ತಿ ಚಿತ್ರಕಲೆಗಿದೆ. ವಿದ್ಯಾರ್ಥಿಗಳುಅದರ ಸಾಧ್ಯತೆಗಳನ್ನು ಅರಿತು, ಕಲಿಯಬೇಕೆಂದುಹೇಳುತ್ತಾ ಚಿತ್ರಕಲೆಯಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಪ್ರಕೃತಿಚಿತ್ರಣದಆಕರ್ಷಕ ಪ್ರಾತ್ಯಕ್ಷಿಕೆಯನ್ನು

ಶಕ್ತಿ ರೆಸಿಡೆಂಟಿಯಲ್ ಸ್ಕೂಲ್ ➤ ವಿವಿಧ ಸಂಘಗಳ ಉದ್ಘಾಟನೆ Read More »

ಕರಾವಳಿ

ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಲೇರಿಯಾ ಹಾಗೂ ಡೆಂಗ್ಯೂ ಹೆಚ್ಚುತ್ತಿರುವ ಪ್ರದೇಶಗಳಿಗೆ ಮಹಾನಗರ ಪಾಲಿಕೆಯ ಎಂ.ಪಿ.ಡಬ್ಯೂ ಕಾರ್ಮಿಕರಿಂದ ನಿರಂತರ ಸಮಿಕ್ಷೆ ಹಾಗೂ ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿರವರು ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್.ವಿ.ಬಿ.ಸಿ.ಪಿ ಕಾರ್ಯಕ್ರಮದಡಿಯಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಪ್ರಯುಕ್ತ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯು

ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣ ಸಭೆ Read More »

ಕರಾವಳಿ

ಭಾರತೀಯ ಅಂಚೆ ಇಲಾಖೆ ➤ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಭಾರತೀಯ ಅಂಚೆ ಇಲಾಖೆಯ ವತಿಯಿಂದ ” ಫಿಲಾಟೆಲಿ “( ಅಂಚೆ ಚೀಟಿ ಸಂಗ್ರಹಣೆ ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ 6 ನೇ ತರಗತಿಯಿಂದ 9 ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿಧ್ಯಾರ್ಥಿಗಳಿಗೆ ಘೋಷಿಸಲಾದ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್ ಶಿಪ್‍ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಮಂಗಳೂರು – 575002 ಇವರಿಗೆ ತಲುಪುವಂತೆ ಸೆಪ್ಟೆಂಬರ್ 5 ರೊಳಗಾಗಿ ಕಳುಹಿಸಬೇಕು. ಶೇಕಡಾ 60ಕ್ಕಿಂತ ಅಧಿಕ

ಭಾರತೀಯ ಅಂಚೆ ಇಲಾಖೆ ➤ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಾರ್ಚ್ ಮತ್ತು ಏಪ್ರಿಲ್ 2019 ರಲ್ಲಿ ನಡೆದ ಎಸ್.ಎಸ್.ಎಲ್.ಸಿ./ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ

ಹಿಂದುಳಿದ ವರ್ಗಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ Read More »

ಕರಾವಳಿ

ಸ್ಮಾರ್ಟ್ ಸಿಟಿ ಹಸಿರು ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಜಿಲ್ಲಾಡಳಿತ ದ.ಕ ಜಿಲ್ಲೆ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸ್ಮಾರ್ಟ್ ಸಿಟಿ ಲಿ., ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ , ಭಾರತ್ ಸ್ಕೌಟ್ ಎಂಡ್ ಗೈಡ್ಸ್ ದ.ಕ ಜಿಲ್ಲೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಟಿ.ಎಂ.ಎ. ಪೈ ಕನ್ವೆನ್ಷನ್ ಹಾಲ್‍ನಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಂಗಳ್ರರು ಸ್ಮಾರ್ಟ್ ಸಿಟಿ ಏರ್ಪಡಿಸಿರುವ ಮಂಗಳ್ರರು ಹಸಿರು ಅಭಿಯಾನಕ್ಕೂ ಚಾಲನೆ ನೀಡಲಾಯಿತು. ಮಂಗಳೂರು

ಸ್ಮಾರ್ಟ್ ಸಿಟಿ ಹಸಿರು ಅಭಿಯಾನಕ್ಕೆ ಚಾಲನೆ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ ➤ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ/ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮಡಿಕೇರಿಯಲ್ಲಿನ ಸ್ನಾತಕೋತ್ತರ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯನ್ನು 55% ಅಂಕಗಳೊಂದಿಗೆ ಪಡೆದ ಅರ್ಹ ಅಭ್ಯರ್ಥಿಗಳು ಜುಲೈ 15 ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ವೆಬ್‍ಸೈಟ್ www.mangaloreuniversity.ac.in ನಿಂದ ಪಡೆದು, ಭರ್ತಿ ಮಾಡಿದ

ಮಂಗಳೂರು ವಿಶ್ವವಿದ್ಯಾನಿಲಯ ➤ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮೂಡಬಿದ್ರೆ ಪೊಲೀಸ್ ವಸತಿಗೃಹ ಕಟ್ಟಡ ವಿಲೇವಾರಿ ➤ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮೂಡಬಿದ್ರೆ ಪೊಲೀಸ್ ಠಾಣೆಯ ಬ್ಲಾಕ್ 1 ಮತ್ತು ಬ್ಲಾಕ್ 2 ರಲ್ಲಿರುವ ಹಳೆಯ ಒಟ್ಟು 13 ವಸತಿಗೃಹಗಳನ್ನು ನೆಲಸಮಗೊಳಿಸಿ ಅವುಗಳ ಸಾಮಾಗ್ರಿಗಳನ್ನು ಹೇಗಿವೆಯೋ ಅದೇ ಸ್ಥಿತಿಯಲ್ಲಿ ಆ ಸಾಮಾಗ್ರಿಗಳನ್ನು ಬಹಿರಂಗವಾಗಿ ಹರಾಜು ಮಾಡಲಾಗುವುದು. ಜುಲೈ 23 ರಂದು ಬೆಳಿಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮುಖಾಂತರ ವಿಲೇವಾರಿ ಮಾಡಲಾಗುವುದು. ಟೆಂಡರ್ ಸಲ್ಲಿಸಲು ಜು.19 ಕಡೆಯ ದಿನ. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.

ಮೂಡಬಿದ್ರೆ ಪೊಲೀಸ್ ವಸತಿಗೃಹ ಕಟ್ಟಡ ವಿಲೇವಾರಿ ➤ ಬಹಿರಂಗ ಹರಾಜು Read More »

ಕರಾವಳಿ

‘ಡಿ’ ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ದ.ಕ ಜಿಲ್ಲಾ ಡಿ ವರ್ಗ ರಾಜ್ಯ ಸರಕಾರಿ ನೌಕರರ ಸಂಘ(ರಿ.) ಇದರ 2019-20ನೇ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿದೆ. ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಸನ್ಮಾನ ಸಮಾರಂಭ  ಇಂದು ಪೂರ್ವಾಹ್ನ 12 ಗಂಟೆಗೆ ಹಂಪನಕಟ್ಟೆ ಸರಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

‘ಡಿ’ ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ Read More »

ಕರಾವಳಿ
Scroll to Top