Kadaba

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಸ್ತುತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜನವರಿ 8, 9, ಮತ್ತು 10 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ.   ಡಿಸೆಂಬರ್ 30 ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ಕಾಳಿದಾಸ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿನ […]

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬ್ರಿಟನ್ ನಿಂದ ಮತ್ತೆ 8 ಮಂದಿ ದ.ಕ. ಜಿಲ್ಲೆಗೆ ಆಗಮನ ➤ಇನ್ನುಂದೆ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಗೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಇಂಗ್ಲೆಂಡ್‌ನಲ್ಲಿ ರೂಪಾಂತರಿತ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಚ್ಚರವಹಿಸಲಾಗಿದ್ದು, ಬ್ರಿಟನ್ ನಿಂದ ಮತ್ತೆ ಎಂಟು ಮಂದಿ ದ.ಕ. ಜಿಲ್ಲೆಗೆ ಆಗಮಿಸಿದ್ದಾರೆ. ಈ ಎಲ್ಲರನ್ನೂ ಇದೀಗ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ‌ ನೀಡಿದೆ. ಈ ಎಂಟು ಮಂದಿಯ ವರದಿ ಮುಂದಿನ ಶುಕ್ರವಾರ ಬರಲಿದೆ. ಬ್ರಿಟನ್‌ನಿಂದ ಜಿಲ್ಲೆಗೆ ಆಗಮಿಸಿದ ಎಲ್ಲರ ಪರೀಕ್ಷೆ ನಡೆಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಬಂದಿದೆ‌ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ. ಈ

ಮಂಗಳೂರು: ಬ್ರಿಟನ್ ನಿಂದ ಮತ್ತೆ 8 ಮಂದಿ ದ.ಕ. ಜಿಲ್ಲೆಗೆ ಆಗಮನ ➤ಇನ್ನುಂದೆ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಗೆ ಕಡ್ಡಾಯ Read More »

ಕರಾವಳಿ

ಕಾಸರಗೋಡು: ಡಿವೈಎಫ್ಐ ಕಾರ್ಯಕರ್ತನ ಕೊಲೆ ಪ್ರಕರಣ ➤ಮೂವರ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.25: ಡಿವೈಎಫ್ಐ ಕಾರ್ಯಕರ್ತ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಯೂತ್ ಲೀಗ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯೂತ್ ಲೀಗ್ ಕಾರ್ಯಕರ್ತರಾದ ಇರ್ಷಾದ್, ಹಸನ್, ಇಸ್ಹಾಕ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೃತ್ಯಕ್ಕೆ ರಾಜಕೀಯ ದ್ವೇಷ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಕಣ್ಣೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ಚಂದ್ರ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ವೇಳೆ ಇರ್ಷಾದ್ ಎಂಬಾತನಿಗೂ ಗಾಯವಾಗಿದ್ದು, ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಕಾಸರಗೋಡು: ಡಿವೈಎಫ್ಐ ಕಾರ್ಯಕರ್ತನ ಕೊಲೆ ಪ್ರಕರಣ ➤ಮೂವರ ವಿರುದ್ಧ ಕೇಸ್ Read More »

ಕರಾವಳಿ

ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಸಾಮಾಜಿಕ ಜಾಲತಾಣ ಫೇಸ್ ಬುಕ್ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸುವುದಲ್ಲದೆ, ಮದುವೆ ಪ್ರಸ್ತಾಪ, ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಕುರುಬನಹಳ್ಳಿ ನಿವಾಸಿ ಪರಮೇಶ್ವರಪ್ಪ ರಂಗಪ್ಪ (23) ಬಂಧಿತ ಆರೋಪಿ. ಮ್ಯಾಟ್ರೊಮೊನಿಯಲ್ ನಲ್ಲಿ ಆರೋಪಿಯು ತಾನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಎಂಬುದಾಗಿ ಬಿಂಬಿಸಿದ್ದ.ಈತ 20 ನಕಲಿ ಖಾತೆ ಸೃಷ್ಟಿಸಿ ಸರ್ಕಾರಿ ಇಲಾಖೆಗಳ ಉತ್ತಮ ದರ್ಜೆಯ

ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.24: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿಯಾಗಿ ಸುಮಾರು 100 ಅಡಿ ಆಳಕ್ಕೆ ನದಿಗೆ ಉರುಳಿ ಬಿದ್ದಿದೆ. ಟ್ಯಾಂಕರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅರ್ಧದಷ್ಟು ಡಾಂಬರು ಸೋರಿಕೆಯಾಗಿ ನದಿನೀರಿನಲ್ಲಿ ಸೇರಿಕೊಂಡಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಬೆದ್ರೋಡಿಯ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ನದಿ ಪಾತ್ರದತ್ತ ಸಂಚರಿಸಿ ನೂರು ಅಡಿ ದೂರದಲ್ಲಿನ ನೇತ್ರಾವತಿ ನದಿಯಲ್ಲಿ ಮಗುಚಿ ಬಿದ್ದಿದ್ದು, ನುಜ್ಜುಗುಜ್ಜಾಗಿದೆ. ಟ್ಯಾಂಕರ್‌ ಚಾಲಕರಾದ

ಉಪ್ಪಿನಂಗಡಿ: ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿ Read More »

ಕರಾವಳಿ

ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.24: ಮನನೊಂದ ವ್ಯಕ್ತಿಯೋರ್ವರು ಮನೆಯ ಮಲಗುವ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ನಗರದ ಪುತ್ತೂರು ಗ್ರಾಮದ ನಾರಾಯಣ ನಗರದಲ್ಲಿ ಇಂದು ನಡೆದಿದೆ.   ವಿಠಲ ಪ್ರಭು ಎಂಬವರ ಮಗ ಕೃಷ್ಣ ಪ್ರಭು (53) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಸಾಲ ಬಾಧೆಯಿಂದ ಕಂಗೆಟ್ಟಿದ್ದರು ಎನ್ನಲಾಗಿದೆ.ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಜರು ಪ್ರಕ್ರಿಯೆಯನ್ನು ಪೋಲಿಸರು ನಡೆಸಿದರು.  

ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಸುರಕ್ಷಾದಲ್ಲಿ ದಂತ ವೈದ್ಯರ ದಿನಾಚರಣೆ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಇಂದು ‘ರಾಷ್ಟ್ರೀಯ ದಂತ ವೈದ್ಯರ ದಿನ’ದ ಅಂಗವಾಗಿ ಪೂರ್ವಾಹ್ನ 10 ರಿಂದ ಸಾಯಂಕಾಲ 6 ರವರೆಗೆ ದಂತ ಆರೋಗ್ಯ ಮಾಹಿತಿ ಶಿಬಿರ ನಡೆಯಿತು. ಸುರಕ್ಷಾ ದಂತ ಚಿಕಿತ್ಸಾಲಯ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಹೊಸಂಗಡಿಯ ಖ್ಯಾತ ಉದ್ಯಮಿ ಶ್ರೀ ಪೇಮ್‍ಕುಮಾರ್ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸುರಕ್ಷಾ ದಂತ ಚಿಕಿತ್ಸಾಲಯದ ಡಾ|| ಮುರಲೀಮೋಹನ್ ಚೂಂತಾರು ಇವರು ಭಾರತ ಕಂಡ ಶ್ರೇಷ್ಠ

ಸುರಕ್ಷಾದಲ್ಲಿ ದಂತ ವೈದ್ಯರ ದಿನಾಚರಣೆ ಸಂಭ್ರಮ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತೆಯನ್ನು ವಿವಾಹವಾಗಿ ಬಳಿಕ ಕೊಂದು ಹೂತಿಟ್ಟ ಗಂಡ ➤ 15 ದಿನಗಳ ನಂತರ ಪ್ರಕರಣ ಬೆಳಕಿಗೆ

(ನ್ಯೂಸ್ ಕಡಬ) newskadaba.com ಮಧುಗಿರಿ , ಡಿ.24: ಕುಟುಂಬಸ್ಥರ ವಿರೋಧದ ನಡುವೆಯೂ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಕೊಲೆ ಮಾಡಿ ಮನೆಯಲ್ಲೇ ಹೂತುಹಾಕಿರುವ ಘಟನೆ ನಡೆದಿದ್ದು, ಆರೋಪಿ ಗಂಡ ತಲೆಮರೆಸಿಕೊಂಡಿದ್ದಾನೆ. ಮಧುಗಿರಿ ತಾಲೂಕಿನ ಹೊಸಇಟಕಲೋಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ತಪಾಸಣೆಯ ವೇಳೆ ಮನೆಯಲ್ಲೇ 16 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಮೃತ ಬಾಲಕಿಯ ಅಕ್ಕ ಶ್ವೇತಾಳಿಂದ ಪ್ರಕರಣ ಬೆಳಕಿಗೆ ಬಂದಿದೆ.   ಅಪ್ರಾಪ್ತ ವಯಸ್ಸಿನ ಬಾಲಕಿ ವಿವಾಹಿತೆಯೂ ಆಗಿದ್ದಳು. 9 ತಿಂಗಳ ಹಿಂದಷ್ಟೇ ಮದುವೆಯಾಗಿದ್ದಳು. ಬಾಲಕಿ

ಅಪ್ರಾಪ್ತೆಯನ್ನು ವಿವಾಹವಾಗಿ ಬಳಿಕ ಕೊಂದು ಹೂತಿಟ್ಟ ಗಂಡ ➤ 15 ದಿನಗಳ ನಂತರ ಪ್ರಕರಣ ಬೆಳಕಿಗೆ Read More »

ಕರ್ನಾಟಕ

ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಕಳೆದ ದಿನ ತಡರಾತ್ರಿ ಯುವಕನೊಬ್ಬ ಟೆರೇಸ್ ನಿಂದ ಬಿದ್ದು ಮೃತಪಟ್ಟ ಘಟನೆ  ಬಂಟ್ವಾಳ ತಾಲೂಕಿನ ಕೇಪು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಮೃತಪಟ್ಟವರು. ಅವರು ಕೇಪು ಕುಕ್ಕೆಬೆಟ್ಟುವಿನಲ್ಲಿ ಸಂಬಂಧಿಕರ ಮನೆಯಲ್ಲಿ ಚಿನ್ನದ ಕೆಲಸವನ್ನು ಮಾಡುತ್ತಿದ್ದರು.ಬುಧವಾರ ತಡರಾತ್ರಿ ಟೆರೇಸ್ ನಿಂದ ಬಿದ್ದಿದ್ದಾರೆ. ತತ್ ಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ವಿಟ್ಲದ ಕಡೆಗೆ ಬರುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು.ಘಟನೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಪ್ರಸ್ತುತ ದಿನದ ಒತ್ತಡದಿಂದ ಶಾಲೆಯ ವಾತಾವರಣ ಮನೋರಂಜನೆಯಿಂದ ವಂಚಿತರಾದ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯು ಆನ್‍ಲೈನ್ ತರಗತಿಯ ಮೂಲಕ ಶಿಕ್ಷಣವನ್ನು ನೀಡುವುದರ ಜೊತೆಗೆ ಹಲವಾರು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸುತ್ತಾ ಬಂದಿದ್ದು, ರಾಷ್ಟ್ರೀಯ ಹಬ್ಬಗಳ ಸಂದರ್ಭ ಬಗೆ ಬಗೆಯ ಸ್ಪರ್ಧೆಯನ್ನು ಏರ್ಪಡಿಸಿತ್ತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷದಂತೆ ‘ಶಕ್ತಿ ಸಿರಿ, ಶಕ್ತಿ ಶ್ರೀ’ ಎಂಬ ಸ್ಪರ್ಧೆಯನ್ನು ಏರ್ಪಡಿಸಿ ಸುಂದರವಾದ ಉಡುಪು, ಅಲಂಕಾರದೊಂದಿಗೆ ರ್ಯಾಂಪ್ ವಾಕ್ ಮಾಡಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ Read More »

ಕರಾವಳಿ, ಕರ್ನಾಟಕ
Scroll to Top