Kadaba

ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಫೆ.01.ಕಡಬ ಶ್ರೀ ಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ 13ನೇ ವರ್ಷದ ಪ್ರತಿಷ್ಠಾ ಜಾತ್ರೋತ್ಸವ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.2ರಿಂದ 3ರವರೆಗೆ ನಡೆಯಲಿದೆ.ಫೆ.2ರಂದು ಪೂರ್ವಾಹ್ನ ಉಗ್ರಾಣ ಮುಹೂರ್ತ,ಹೊರೆಕಾಣಿಕೆ ಸಮರ್ಪಣೆ ಫೆ.3ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆತಂಬಿಲಸೇವೆ,ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನಬಲಿಉತ್ಸವ,ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ […]

ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ Read More »

ಕರಾವಳಿ

ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.1. ಅತೀ ಹೆಚ್ಚು ಪ್ರಾಧಾನ್ಯತೆ ನೀಡುವ ಕ್ಷೇತ್ರ ಬೇಸಾಯಕ್ಕೆ ಕೊಂಡಿಯಂತಿರುವ ಜಾನುವಾರು ಸಾಕಾಣೆಯಿಂದ ಆರ್ಥಿಕ ಲಾಭವಿದೆ. ಜಾನುವಾರು ಸಂರಕ್ಷಣೆ ಮಾಡುವ ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ಹಿತ ಕಾಯಲು ಸರಕಾರ ಬದ್ಧವಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಭೋಜೆಗೌಡ ಹೇಳಿದರು. ಕರ್ನಾಟಕ ಸರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇದರ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವಲ್ಲೀಶ ಸಭಾಭವನದಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.ಹಳ್ಳಿಗಾಡಿನ

ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ Read More »

ಕರಾವಳಿ

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30 ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಕ್ತೇಶ್ವರಿ ದೇವಸ್ಥಾನದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾದ ಘಟನೆ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಾಶಿಕಟ್ಟೆ ನಿವಾಸಿಯಾದ  ಚಂದ್ರ ಎಂಬವರು ಬೈಕ್ ನಿಲ್ಲಿಸಿ ತನ್ನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸ ಮುಗಿಸಿ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲಿಯೂ ಹುಡುಕಾಡಿದರೂ ಬೈಕ್ ಪತ್ತೆಯಾಗಿರುವುದಿಲ್ಲ. ಬೈಕನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ Read More »

ಕರಾವಳಿ

ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ

(ನ್ಯೂಸ್ ಕಡಬ) newskadaba.comಬೆಳ್ತಂಗಡಿ,ಜ.26. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಯಬೇಕು ಎಂಬುದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಉದ್ದೇಶ. ಎಲ್ಲ ಧರ್ಮಗಳಲ್ಲಿಯೂ ಶಾಂತಿ ಭೋದಿಸಲು ಪೂರಕವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ.9ರಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿ, ಹಿರಿಯ ಸ್ವಾಮೀಜಿಗಳು ಸೇರಿದಂತೆ ಅನೇಕ ಸಚಿವರುಗಳು, ಸಂಸದರು, ಶಾಸಕರು, ಮಾಜಿ ಸಚಿವರು, ಶಾಸಕರು, ಸಂಸದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಚಾರಿತ್ರ್ಯ ಅಕ್ರವರ್ತಿ ಶ್ರೀ 108 ಶಾಂತಿಸಾಗರ

ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ Read More »

ಕರಾವಳಿ

ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30.ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರ್ರತಾ ಮಂಡಳಿಯ ವತಿಯಿಂದ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ ನೋಂದಣಿಯಾದ ಅಸಂಘಟಿತ ಕಾರ್ಮಿಕರಾದ ಹಮಾಲರು, ಟೈಲರುಗಳು ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಶ್ರಮ ಸಮ್ಮಾನ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.  ಅಸಂಘಟಿತ ಕಾರ್ಮಿಕರು ಜಿಲ್ಲೆಯ ಕಾರ್ಮಿಕ ಅಧಿಕಾರಿಗಳನ್ನು ಸಂಪರ್ಕಿಸಿ ಅವರಿಂದ ನಿಗದಿತ ಅರ್ಜಿ ನಮೂನೆ ಪಡೆದು ಅಗತ್ಯವಾದ ದಾಖಲೆಗಳೊಂದಿಗೆ ಫೆಬ್ರವರಿ 10 ರೊಳಗಾಗಿ

ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ► ಹುತಾತ್ಮರ ದಿನ – ಜನವರಿ 30✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com,ಜ.30.ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ನಮ್ಮ ದೇಶದಲ್ಲಿ ಜನವರಿ 30ರಂದು ಹುತಾತ್ಮರ ದಿನ (ಸರ್ವೋದಯ ದಿನ ಅಥವಾ ಶಹೀದ್ ದಿವಸ್) ಎಂದು ಆಚರಿಸಲಾಗುತ್ತಿದೆ. ದೇಶಾದ್ಯಂತ ದೇಶಕ್ಕಾಗಿ ಜೀವತೆತ್ತ ಹುತಾತ್ಮರನ್ನು ಸ್ಮರಣೆ ಮಾಡಿ ಅವರ ತ್ಯಾಗ ಸೇವೆ ಮತ್ತು ದೇಶಪ್ರೇಮವನ್ನು ಕೊಂಡಾಡಿ, ಇತರರಲ್ಲಿ ದೇಶ ಪ್ರೇಮ ಮತ್ತು ರಾಷ್ಟಭಕ್ತಿಯನ್ನು ಮೂಡಿಸುವ ಸದುದ್ದೇಶ ಈ ಆಚರಣೆಯ ಮೂಲ ಉದ್ದೇಶವಾಗಿರುತ್ತದೆ. ವಿಶ್ವದಾದ್ಯಂತ ಸುಮಾರು 15 ದೇಶಗಳು ಪ್ರತಿ ವರ್ಷ

ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ► ಹುತಾತ್ಮರ ದಿನ – ಜನವರಿ 30✍? ಡಾ| ಮುರಲೀ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು

ಬೆಳ್ತಂಗಡಿ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ► ಡಾ| ಮುರಲೀ ಮೋಹನ್ ಚೂಂತಾರು ಭೇಟಿ

(ನ್ಯೂಸ್ ಕಡಬ) newskadaba.comಬೆಳ್ತಂಗಡಿ, ಜ.29.ಬೆಳ್ತಂಗಡಿ ಘಟಕಕ್ಕೆ 29-01-2018ನೇ ಮಂಗಳವಾರ ಸಮಾದೇಷ್ಟರು ಡಾ| ಮುರಲೀ ಮೋಹನ್ ಚೂಂತಾರು ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿ ಗೃಹರಕ್ಷಕರ ಕುಂದು ಕೊರತೆಗಳ ಹಾಗೂ ಕರ್ತವ್ಯಗಳ ಬಗ್ಗೆ ಚರ್ಚಿಸಿದರು. ನಿಷ್ಕ್ರೀಯ ಗೃಹರಕ್ಷಕರನ್ನು ತೆಗೆದು ಹೊಸ ಗೃಹರಕ್ಷಕರನ್ನು ನೇಮಿಸುವಂತೆ ಸೂಚಿಸಿದರು. ಹಾಗೂ ಮುಂಬರುವ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಹೆಚ್ಚನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಿದರು. ಗೃಹರಕ್ಷಕರ ಕ್ಷೇಮಾಭಿವೃದ್ಧಿ ನಿಧಿ ವಂತಿಕೆಯನ್ನು ನೀಡಲು ಹಾಗೂ ಸಮೂಹ ವಿಮೆ ಮಾಡಿಸಲು ಸೂಚಿಸಿದರು. ಏಪ್ರಿಲ್ ತಿಂಗಳಿನಿಂದ ಎಲ್ಲಾ ಗೃಹರಕ್ಷಕರಿಗೂ

ಬೆಳ್ತಂಗಡಿ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ► ಡಾ| ಮುರಲೀ ಮೋಹನ್ ಚೂಂತಾರು ಭೇಟಿ Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗೇಟ್ಗಳು ಶೀಘ್ರದಲ್ಲಿಯೇ ರದ್ಧು? ವಿನೂತನ ಯೋಜನೆಗೆ ಮುಂದಾದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ದೆಹಲಿ, ಜ.29.ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಬೂತ್‍ಗಳು ರದ್ದಾಗುವ ಸಾಧ್ಯತೆಯಿದೆಯೇ? ಹೌದು ಎನ್ನುತ್ತಿವೆ ಕೆಲ ಮೂಲಗಳು. ಹೈವೇಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಹಣ ಪಾವತಿಸಿ ಪ್ರಯಾಣಿಸುವುದೇ ಸಮಸ್ಯೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ Pay As You Go ಎಂಬ ಹೊಸ ನಿಯಮವನ್ನು ಜಾರಿಗೆ ತರಲಿದೆ ಎನ್ನಲಾಗಿದೆ. ಈ ಹೊಸ ನಿಯಮದಂತೆ ಇನ್ನು ಮುಂದೆ ನೀವು ಪ್ರಯಾಣಿಸಿದ ದೂರಕ್ಕೆ ಮಾತ್ರ ಟೋಲ್​ ಪಾವತಿಸಿದರೆ ಸಾಕು. ಅಂದರೆ ನೀವು ಟೋಲ್​ ಗೇಟ್​ ಇರುವ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗೇಟ್ಗಳು ಶೀಘ್ರದಲ್ಲಿಯೇ ರದ್ಧು? ವಿನೂತನ ಯೋಜನೆಗೆ ಮುಂದಾದ ಕೇಂದ್ರ ಸರ್ಕಾರ Read More »

ಕರಾವಳಿ

ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ?► ಹೊಸ ಪ್ರಯೋಗಕ್ಕೆ ಮುಂದಾದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜ.29.ಬಿಪಿಎಲ್ಕಾರ್ಡ್​ದಾರರಿಗೆ ಅಕ್ಕಿ ಕೊಡುವ ಬದಲು ಹಣ ನೀಡುವುದನ್ನು ಪುದುಚೇರಿ, ಛತ್ತೀಸ್​ಗಢ ಮತ್ತು ದಾದರ್​ನಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಇದನ್ನು ಎಲ್ಲೆಡೆ ವಿಸ್ತರಿಸುವ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಕೇಂದ್ರ ಆಹಾರ ಸಚಿವ ರಾಮ್​ಲಾಸ್ ಪಾಸ್ವಾನ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುದುಚೇರಿಯಲ್ಲಿ ಹಣದ ಬದಲು ಹಿಂದಿನ ವ್ಯವಸ್ಥೆಯಲ್ಲೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಕೊಡಲಿ ಎಂದು ಅಲ್ಲಿನ ಕಾರ್ಡ್​ದಾರರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿಯೂ ಅಕ್ಕಿ ಬದಲಿಗೆ ಹಣ ಕೊಡುವ ವ್ಯವಸ್ಥೆ

ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ?► ಹೊಸ ಪ್ರಯೋಗಕ್ಕೆ ಮುಂದಾದ ಕೇಂದ್ರ ಸರ್ಕಾರ Read More »

ಕರಾವಳಿ

ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ ,ಜ.29.ಸರಕಾರಿ ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರಗಳ್ಳತನಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಿಳಿನೆಲೆ ಗ್ರಾಮದ ಉಡೇವು ರಕ್ಷಿತಾರಣ್ಯದಿಂದ ಆಕ್ರಮವಾಗಿ ಭಾರೀ ಗಾತ್ರದ ಹಲಸಿನ ಮರ ಕಡಿದು ಸಾಗಿಸಲು ಯತ್ನಿಸಿದ ಬಗ್ಗೆಖಚಿತ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್, ಅಶೋಕ್ ಹಾಗೂ ಸಿಬಂದಿಗಳು ದಾಳಿ ನಡೆಸಿ ಕಡಿದು ಹಾಕಿದ ಮರವನ್ನು ಪತ್ತೆ ಹಚ್ಚಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಳಿನೆಲೆ ಗ್ರಾಮ ಪಂಚಾಯತ್ ಸದಸ್ಯ

ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ
Scroll to Top