Kadaba

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಇಲ್ಲಿನ ಮಾರ್ ಇವಾನಿಯೋಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ವತಿಯಿಂದ ಕಡಬ ಪೇಟೆಯಾದ್ಯಂತ ಸ್ವಚ್ಛತಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನದಂದು ಕಡಬ ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ಪೇಟೆಯಾದ್ಯಂತ ಅಂಗಡಿ ಮುಂಗಟ್ಟುಗಳ ಮುಂಭಾಗ ಹಾಗೂ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್, ಕಸ ಇನ್ನಿತರ ತ್ಯಾಜ್ಯವಸ್ತುಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂ|ರೆ|ಫಾ| ಪಿಲಿಫ್ ನೆಲ್ಲಿವಿಳ ಹಾಗೂ […]

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12.  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಆದರ್ಶವನ್ನು ಕಂಡುಕೊಳ್ಳಬೇಕು. ದಿವಂಗತ ವಾರಣಾಶಿ ಸುಬ್ರಾಯ ಭಟ್ ಹಾಗೂ ಸಾಯ ಕೃಷ್ಣ ಭಟ್ ಅವರು ಭಾರತೀಯ ಕೌಟುಂಬಿಕ ಮೌಲ್ಯ ಮತ್ತು ಸಹಕಾರಿ ತತ್ತ್ವಗಳೊಂದಿಗೆ ಆದರ್ಶದಿಂದ ಬದುಕಿ ಜನಮನದಲ್ಲಿ ಸ್ಥಾಯಿಯಾಗಿ ನಿಂತರು ಎಂದು ಖ್ಯಾತ ಚಿಂತಕ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಡಿ.11ರಂದು ಅಡ್ಯನಡ್ಕದಲ್ಲಿ ಜರುಗಿದ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಮಿಷಕ್ಕಾಗಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ Read More »

ಕರಾವಳಿ

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!!

(ನ್ಯೂಸ್ ಕಡಬ) newskadaba.com ಕಡಬ, ಸೆ.30. ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪಾನಮತ್ತರಾಗಿ ಆಗಮಿಸಿದ ನಾಲ್ವರು ಕಡಬ ಪೊಲೀಸ್ ಉಪ ನಿರೀಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕೋಟೆಕೆರೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಮರ್ಧಾಳದ ಚಾಕೋಟೆಕೆರೆಯಲ್ಲಿರುವ ಮದ್ಯದಂಗಡಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಸಿಬ್ಬಂದಿಗಳಾದ ಪುಟ್ಟಸ್ವಾಮಿ, ಶಿವಪ್ರಸಾದ್, ಶ್ರೀಶೈಲ, ಗೃಹರಕ್ಷಕ ದಳದ ಸಿಬ್ಬಂದಿ ಯೋಗೀಶ್ ಮದ್ಯಪಾನ ಮಾಡಿರುವುದನ್ನು

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!! Read More »

ಕರಾವಳಿ

ಚಿಗುರು ಮೀಸೆಯ ಯುವಕನ ದುರಾಸೆಗೆ ಬಲಿಯಾಯಿತು ಬಡಜೀವ ► ಬಯಲಾಯಿತು ಪಂಬೆತ್ತಾಡಿ ಕೃಷಿಕನ ಕೊಲೆ‌ ಆರೋಪಿ ಬಿಚ್ಚಿಟ್ಟ ರಹಸ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ನಾಲ್ಕು ದಿನಗಳ ಹಿಂದೆ ತನ್ನ ಮನೆಯಲ್ಲೇ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪಂಬೆತ್ತಾಡಿ ಗ್ರಾಮದ ಕಲ್ಚಾರು ಸುಬ್ರಹ್ಮಣ್ಯ ಭಟ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣಕ್ಕೆ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್ 08 ರಂದು ಸುಬ್ರಹ್ಮಣ್ಯ ಭಟ್ ರವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಪ್ರಕರಣದ ಆರೋಪಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಪಡ ನಿವಾಸಿ ಶೀನಪ್ಪ ಗೌಡ ಎಂಬವರ

ಚಿಗುರು ಮೀಸೆಯ ಯುವಕನ ದುರಾಸೆಗೆ ಬಲಿಯಾಯಿತು ಬಡಜೀವ ► ಬಯಲಾಯಿತು ಪಂಬೆತ್ತಾಡಿ ಕೃಷಿಕನ ಕೊಲೆ‌ ಆರೋಪಿ ಬಿಚ್ಚಿಟ್ಟ ರಹಸ್ಯ Read More »

ಕರಾವಳಿ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಕಾನೂನಿನ ಚೌಕಟ್ಟಿನೊಳಗೆ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಶಾಂತಿಯುತವಾಗಿ ಗಣೇಶೋತ್ಸವವನ್ನು ಆಚರಿಸುವುದರೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸುವಂತೆ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರು ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಪ್ರಮುಖರಲ್ಲಿ ಮನವಿ ಮಾಡಿದರು. ಅವರು ಕಡಬ ಪೊಲೀಸ್ ಠಾಣೆಯಲ್ಲಿ ರವಿವಾರ ಜರಗಿದ ಕಡಬ ಠಾಣಾ ವ್ಯಾಪ್ತಿಯ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ಗಣೇಶ ಚೌತಿ ಹಬ್ಬದ ಆಚರಣೆಯ ವೇಳೆ ಸಂಘಟಕರು ಅನುಸರಿಸಬೇಕಾದ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ Read More »

ಕರಾವಳಿ

ಇಚಿಲಂಪಾಡಿ: ರೇಬೀಸ್ ವೈರಾಣುವಿಗೆ ತುತ್ತಾಗಿ ಯುವಕ ಮೃತ್ಯು ► ಅಂತಿಮ ದರ್ಶನಕ್ಕೆ ತೆರಳಿದ್ದ ಗ್ರಾಮಸ್ಥರಲ್ಲಿ ವೈರಾಣು ಹರಡುವ ಆತಂಕ ► ಆ್ಯಂಟಿ ರೇಬೀಸ್ ಇಂಜೆಕ್ಷನ್ ಚುಚ್ಚಿಸಿಕೊಂಡ ಇನ್ನೂರಕ್ಕೂ ಮಿಕ್ಕಿದ ಜನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.03. ಇಲ್ಲಿನ ಇಚಿಲಂಪಾಡಿ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಕಳೆದ ಆರು ದಿನಗಳ ಹಿಂದೆ ಮೃತಪಟ್ಟ ಯುವಕನ ಅಂತಿಮ ದರ್ಶನದಲ್ಲಿ ಭಾಗವಹಿಸಿದ್ದ ನೂರಾರು ಮಂದಿ‌ ಇದೀಗ ಆತಂಕಗೊಂಡಿದ್ದು, ಆಂಟಿ ರೇಬಿಸ್ ಇಂಜೆಕ್ಷನ್ ಚುಚ್ಚಿಸಿಕೊಳ್ಳುತ್ತಿದ್ದಾರೆ‌. ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಇಚ್ಲಂಪಾಡಿಯ ಕಾಯರ್ತಡ್ಕ ನಿವಾಸಿ ಆನಂದ ಪೂಜಾರಿ ಎಂಬವರ ಪುತ್ರ ಆಶಿತ್ ಪೂಜಾರಿ(24) ಹಠಾತ್ ಅನಾರೋಗ್ಯಕ್ಕೀಡಾಗಿ ಆಗಸ್ಟ್ 28 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಶಿತ್

ಇಚಿಲಂಪಾಡಿ: ರೇಬೀಸ್ ವೈರಾಣುವಿಗೆ ತುತ್ತಾಗಿ ಯುವಕ ಮೃತ್ಯು ► ಅಂತಿಮ ದರ್ಶನಕ್ಕೆ ತೆರಳಿದ್ದ ಗ್ರಾಮಸ್ಥರಲ್ಲಿ ವೈರಾಣು ಹರಡುವ ಆತಂಕ ► ಆ್ಯಂಟಿ ರೇಬೀಸ್ ಇಂಜೆಕ್ಷನ್ ಚುಚ್ಚಿಸಿಕೊಂಡ ಇನ್ನೂರಕ್ಕೂ ಮಿಕ್ಕಿದ ಜನ Read More »

ಕರಾವಳಿ

ಮೇಲ್ಛಾವಣಿ ಸಮೇತ ನೆಲಕ್ಕುರುಳಿದ ಕಡಬದ ಸರಕಾರಿ ಕಾಲೇಜು ಕಟ್ಟಡ ► ವಿದ್ಯಾರ್ಥಿಗಳು ಇಲ್ಲದಿದ್ದರಿಂದ ತಪ್ಪಿದ ಸಂಭಾವ್ಯ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಜು.22. ಇಲ್ಲಿನ ಸರಕಾರಿ ಪ.ಪೂ.ಕಾಲೇಜಿನ ಗೋಡೆಯು ಈ ಹಿಂದೆ ಬಿರುಕು ಬಿಟ್ಟಿದ್ದು, ಶನಿವಾರದಂದು ಮೇಲ್ಛಾವಣಿ ಸಮೇತ ಗೋಡೆಯು ನೆಲಕ್ಕುರುಳಿ ಅಪಾರ ನಷ್ಟ ಉಂಟಾಗಿದೆ. ಮಳೆಗಾಲ ಪ್ರಾರಂಭದಲ್ಲಿಯೇ ಕಟ್ಟಡ ಕುಸಿಯುವ ಹಂತದಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿದ್ದು ಬದಲಿ ವ್ಯವಸ್ಥೆ ಮಾಡಿ ಪಾಠ ಪ್ರವಚನ ನಡೆಯುತ್ತಿದೆ. ಜಿ.ಪಂ. ಇಂಜಿನಿಯರ್ ಭರತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೊದಲೇ ಕಟ್ಟಡ, ಕೊಠಡಿ ಸ್ಥಳವಕಾಶದ ಕೊರತೆಯಿರುವ ಈ ಕಾಲೇಜಿನಲ್ಲಿ ಈಗ ಕಟ್ಟಡ ಕುಸಿದಿರುವುದರಿಂದ ಮತ್ತಷ್ಟು ಸಮಸ್ಯೆ ಎದುರಾಗಿದೆ. ಕಡಬ

ಮೇಲ್ಛಾವಣಿ ಸಮೇತ ನೆಲಕ್ಕುರುಳಿದ ಕಡಬದ ಸರಕಾರಿ ಕಾಲೇಜು ಕಟ್ಟಡ ► ವಿದ್ಯಾರ್ಥಿಗಳು ಇಲ್ಲದಿದ್ದರಿಂದ ತಪ್ಪಿದ ಸಂಭಾವ್ಯ ಅನಾಹುತ Read More »

ಕರಾವಳಿ

ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆ ರಕ್ಷಕ  ಶಿಕ್ಷಕ ಸಂಘದ ರಚನೆ ► ಅಧ್ಯಕ್ಷರಾಗಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆ

(ನ್ಯೂಸ್ ಕಡಬ) newskadaba.com ಸವಣೂರು, ಜು.21. ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆಯ  ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಮರ್ದಾಳ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆಗೊಂಡರೆ ಉಪಾಧ್ಯಕ್ಷರಾಗಿ ತಮ್ಮಯ್ಯ ಗೌಡ ಬೆತ್ತೋಡಿ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ರೆ|ಫಾ ಜೋಸ್ ವಿ.ಸಿ ಅಧ್ಯಕ್ಷತೆಯಲ್ಲಿ ಜು.18 ರಂದು ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಳಿದಂತೆ ಸಮಿತಿ ಸದಸ್ಯರಾಗಿ, ವೀರಪ್ಪ ಗೌಡ ಮೇಪತಪಾಲು, ಶಾಂತಿ ಪಾಲೆತ್ತಡ್ಕ, ನಾಗೇಶ ಗೌಡ ಕೋಕಳ, ಕೇಶವ ಗೌಡ

ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆ ರಕ್ಷಕ  ಶಿಕ್ಷಕ ಸಂಘದ ರಚನೆ ► ಅಧ್ಯಕ್ಷರಾಗಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆ Read More »

ಕರಾವಳಿ

ಕಡಬ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಚಿನ್ನ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಸವಣೂರು, ಜು.21. ಪೇಟೆಯ ಹೊರವಲಯದ ಕೊರುಂದೂರು ಎಂಬಲ್ಲಿ ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ಕಳ್ಳರು ವೃದ್ದೆಯ ಕೊರಳಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕೋರಂದೂರು ಹರೀಶ್ ಎಂಬವರ ತಾಯಿ ವಯೋವೃದ್ಧೆ 90 ರ ಹರೆಯದ ಸತ್ಯಭಾಮ ಎಂಬವರ ಕತ್ತಿನಲ್ಲಿದ್ದ ಸುಮಾರು ನಾಲ್ಕು ಪವನ್‍ನ ಚಿನ್ನದ ಸರವನ್ನು ಇಬ್ಬರು ಕಳ್ಳರು ಎಗರಿಸಿದ್ದಾರೆ. ಮನೆಯಲ್ಲಿ ಹರೀಶ್ ಮತ್ತು ಅವರ ತಾಯಿ ಇಬ್ಬರೇ ವಾಸವಾಗಿದ್ದು, ಹರೀಶ್ ಅವರು ಸಂಜೆ ವೇಳೆಗೆ ಕಡಬ

ಕಡಬ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಚಿನ್ನ ಎಗರಿಸಿದ ಕಳ್ಳರು Read More »

ಕರಾವಳಿ

ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.27. ಠಾಣಾ ವ್ಯಾಪ್ತಿಯ ಶೇಣಿಯಲ್ಲಿ ಯುವತಿಯೋರ್ವಳನ್ನು ಬಲವಂತದಿಂದ ಕರೆದೊಯ್ದು ಸರಣಿ ಅತ್ಯಾಚಾರಗೈದ ಪ್ರಕರಣದ ಮೂವರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮರ ಮೂಡ್ನೂರು ಗ್ರಾಮದ ಕುಡುಂಬಿಲ ನಿವಾಸಿ ಕುಂಇಪ್ಪ ನಾಯ್ಕ ಎಂಬವರ ಪುತ್ರ ಜಯಪ್ರಕಾಶ್ (25), ಚೊಕ್ಕಾಡಿಯ ನೇಣಾರು ನಿವಾಸಿ ಕೂಸಪ್ಪ ನಾಯ್ಕ ಎಂಬವರ ಪುತ್ರ ರಂಜಿತ್ (20), ಕುಕ್ಕುಜಡ್ಕದ ನೇರ್ಲಡ್ಕ ನಿವಾಸಿ ಗುಡ್ಡಪ್ಪನಾಯ್ಕ ಎಂಬವರ ಪುತ್ರ ರವೀಂದ್ರ (35) ಎಂದು ಗುರುತಿಸಲಾಗಿದೆ. ಆರೋಪಿಗಳು ಸೋಮವಾರ ಸಂಜೆ ಹಾಲು

ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ Read More »

ಕರಾವಳಿ
Scroll to Top