Kadaba

ಕೊನೆಗೂ ಭಾರತದಲ್ಲಿ ಬಿಡುಗಡೆಯಾಯ್ತು ಬಹು ನಿರೀಕ್ಷಿತ ಬೈಕ್ ► ಟಿವಿಎಸ್ ಅಪಾಚಿ ಆರ್ ಆರ್ 310

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.08. ಟಿವಿಎಸ್ ಮೋಟಾರ್ ಕಂಪನಿಯ ಬಹು ನಿರೀಕ್ಷಿತ ಬೈಕ್ ಗಳಲ್ಲಿ ಒಂದಾದ ಅಪಾಚಿ ಆರ್ ಆರ್ 310 ಮೋಟಾರ್ ಬೈಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಸ್ಪೋರ್ಟ್ಸ್ ಬೈಕ್ ಮಾದರಿಯ ಆರ್ ಆರ್ 310 ಫೋರ್ ಸ್ಟ್ರೋಕ್, ಫೋರ್ ವ್ಯಾಲ್ಯು, ಸಿಂಗಲ್ ಸಿಲಿಂಡರ್ ಗಳನ್ನು ಒಳಗೊಂಡಿರಲಿದೆ.‌ 312 ಸಿಸಿ ಇಂಜಿನ್ ಸಾಮರ್ಥ್ಯದ ಈ ಬೈಕ್ 33.5 ಬಿಎಚ್ ಪಿ ಒಳಗೊಂಡಿದೆ. 9700 ಆರ್ ಪಿಎಂ ಮತ್ತು 27.3 ಎನ್ ಎಂ ಒಳಗೊಂಡಿದೆ. […]

ಕೊನೆಗೂ ಭಾರತದಲ್ಲಿ ಬಿಡುಗಡೆಯಾಯ್ತು ಬಹು ನಿರೀಕ್ಷಿತ ಬೈಕ್ ► ಟಿವಿಎಸ್ ಅಪಾಚಿ ಆರ್ ಆರ್ 310 Read More »

ರಾಷ್ಟ್ರೀಯ ನ್ಯೂಸ್

ಗೋಳಿತ್ತಡಿ: ರಸ್ತೆ ಡಾಮರೀಕರಣಕ್ಕೆ ಸಚಿವ ರೈಯವರಿಂದ ಶಂಕುಸ್ಥಾಪನೆ ► ಎರಡೆರಡು ಬಾರಿ ಶಂಕುಸ್ಥಾಪನೆ ಭಾಗ್ಯ ಕಂಡ ಏಣಿತ್ತಡ್ಕ ರಸ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಉಪ್ಪಿನಂಗಡಿ-ಕಡಬ-ಸಬ್ರಹ್ಮಣ್ಯ ರಾಜ್ಯ ಹೆದ್ದಾರಿಯನ್ನು ಸಂಪರ್ಕಿಸುವ ಏಣಿತಡ್ಕ-ಗೋಳಿತ್ತಡಿ ರಸ್ತೆಯ ಸುಮಾರು ಒಂದೂವರೆ ಕಿಲೋಮೀಟರ್ ಉದ್ದ ರಸ್ತೆಗೆ ಡಾಮರೀಕರಣಕ್ಕಾಗಿ ಮಂಗಳವಾರ ಸಂಜೆ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ರಾಮಕುಂಜದ ಗೋಳಿತ್ತಡಿಯಲ್ಲಿ ನಾಮ ಫಲಕ ಅನಾವರಣ ಮಾಡುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಉದನೆಯಲ್ಲಿ ರಸ್ತೆ ಡಾಮರೀಕರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಬಳಿಕ ಶಾಂತಿಮೊಗೇರು ನೂತನ ಸೇತುವೆ ಉದ್ಘಾಟನೆ ಮಾಡಿದ ಸಚಿವರು ಸಂಜೆ ತರಾತುರಿಯಲ್ಲಿ ಗೋಳಿತ್ತಡಿಯಲ್ಲಿ ನಬಾರ್ಡ್ ಯೋಜನೆಯಡಿ ಸುಮಾರು 49 ಲಕ್ಷ

ಗೋಳಿತ್ತಡಿ: ರಸ್ತೆ ಡಾಮರೀಕರಣಕ್ಕೆ ಸಚಿವ ರೈಯವರಿಂದ ಶಂಕುಸ್ಥಾಪನೆ ► ಎರಡೆರಡು ಬಾರಿ ಶಂಕುಸ್ಥಾಪನೆ ಭಾಗ್ಯ ಕಂಡ ಏಣಿತ್ತಡ್ಕ ರಸ್ತೆ Read More »

ಕರಾವಳಿ

ಕಡಬದ ಸರಸ್ವತೀ ವಿದ್ಯಾಲಯದ ವತಿಯಿಂದ ► ಮನೆಮದ್ದು ಮಾಹಿತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಸರಸ್ವತೀ ವಿದ್ಯಾಲಯ ಪ್ರೌಢ ಮತ್ತು ಪದವಿಪೂರ್ವ ವಿಭಾಗದ ಬಂಟ್ರ ಗ್ರಾಮ ವಿಕಾಸ ಸಮಿತಿಯ ವತಿಯಿಂದ ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಮನೆಮದ್ದು ಮಾಹಿತಿ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಉಷಾ ಮನೋಹರ್ ರೈ ಮಾತನಾಡಿ, ನಮ್ಮ ಮನೆ ಸುತ್ತಮುತ್ತಲಿನ ಪರಿಸರದಲ್ಲಿ  ಕೆಲವು ರೋಗಗಳ ಉಪಶಮನಕ್ಕೆ ಔಷಧ ದೊರೆಯುತ್ತದೆ. ಆದರೆ ಇದೆಲ್ಲವುಗಳ ಮಾಹಿತಿ ತಿಳಿಯದೆ ಆಸ್ಪತ್ರೆಯನ್ನೇ ಅವಲಂಬಿಸಿದ್ದೇವೆ. ಮನೆ ಮದ್ದಿನ ಮಾಹಿತಿ ಯುವ ಪೀಳಿಗೆಯ ಮೂಲಕ ಪಸರಿಬೇಕಾದಲ್ಲಿ ಮಾಹಿತಿ ಅಗತ್ಯ. ಸುಮಾರು 25 ರೋಗಗಳಿಗೆ

ಕಡಬದ ಸರಸ್ವತೀ ವಿದ್ಯಾಲಯದ ವತಿಯಿಂದ ► ಮನೆಮದ್ದು ಮಾಹಿತಿ ಕಾರ್ಯಕ್ರಮ Read More »

ಕರಾವಳಿ

ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಠಾಣಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡ ನೋಂದಣಿಯಾಗದ ಬೈಕ್ ಸೇರಿ 9 ಬೈಕುಗಳು ಹಾಗೂ ಸ್ವಿಫ್ಟ್ ಕಾರಿನ ಮಾಲಕರಿಗೆ ವಾಹನಗಳನ್ನು ಮಾನ್ಯ ನ್ಯಾಯಾಲಯದೊಂದಿಗೆ ವ್ಯವಹರಿಸಿ ಬಿಡುಗಡೆಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿದ್ದರೂ ಇದುವರೆಗೂ ಯಾವುದೇ ವಾಹನಗಳನ್ನು ಬಿಡುಗಡೆಗೊಳಿಸಿರುವುದಿಲ್ಲ. ಈ ಪ್ರಕಟಣೆಯ ಒಂದು ವಾರದೊಳಗೆ ವಾಹನಗಳನ್ನು ಬಿಡುಗಡೆಗೊಳಿಸದೆ ಇದ್ದಲ್ಲಿ ಮಾನ್ಯ ನ್ಯಾಯಾಲಯದ ಅನುಮತಿ ಪಡೆದುಕೊಂಡು ಸದ್ರಿ ವಾಹನಗಳನ್ನು ಬಹಿರಂಗ ಹರಾಜು ಹಾಕಲಾಗುವುದು ಎಂದು ಕಡಬ ಠಾಣಾ ಉಪನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ Read More »

ಕರಾವಳಿ

ಕಲ್ಲಾಜೆ: ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಬೈಕ್ ► ರಸ್ತೆಗೆಸೆಯಲ್ಪಟ್ಟ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಕೊಂಬಾರು ನಿವಾಸಿ ಚಿದಾನಂದ (26) ಎಂದು ಗುರುತಿಸಲಾಗಿದೆ. ಈತ ಮರ್ಧಾಳದಿಂದ ತನ್ನ ಮನೆಯ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಬಿದ್ದಿದ್ದು, ಚಿದಾನಂದದ ತಲೆಗೆ ಏಟಾಗಿದೆ. ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ

ಕಲ್ಲಾಜೆ: ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಬೈಕ್ ► ರಸ್ತೆಗೆಸೆಯಲ್ಪಟ್ಟ ಸವಾರ ಗಂಭೀರ Read More »

ಕರಾವಳಿ

ಕೈಕಂಬ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಪಾದಚಾರಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.03. ಪಾದಚಾರಿ ವ್ಯಕ್ತಿಯೋರ್ವರಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ಕೈಕಂಬ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಕೈಕಂಬ ಸರಕಾರಿ ಶಾಲೆಯ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ. ತಕ್ಷಣವೇ ಗಾಯಾಳುವನ್ನು ಪಿಕಪ್ ವಾಹನದ ಮೂಲಕ ಕರೆದುಕೊಂಡು ಬಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕರೆದುಕೊಂಡು

ಕೈಕಂಬ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಪಾದಚಾರಿ ಗಂಭೀರ Read More »

ಕರಾವಳಿ

ಕುಟ್ರುಪ್ಪಾಡಿಯ ಸರಕಾರಿ ಶಾಲೆಯಲ್ಲಿ ತರಕಾರಿ ಸಂತೆ ► ಕೇಪು ಶಾಲೆಯಲ್ಲಿ ಗಮನ ಸೆಳೆದ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com ಕಡಬ, ನ.26. ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ  ವಿದ್ಯಾರ್ಥಿಗಳಲ್ಲಿ ವ್ಯಾಪಾರ, ಲೆಕ್ಕಾಚಾರ, ವ್ಯವಹಾರ ಜ್ಞಾನ ವೃದ್ಧಿಸುವ ಮತ್ತು ಲಾಭ ನಷ್ಟದ ಅನುಭವವನ್ನು ಪಡೆಯುವ ಉದ್ದೇಶದಿಂದ ಆಯೋಜಿಸಲಾಗಿದ್ದ ಮೆಟ್ರಿಕ್ ಮೇಳವು ವಿದ್ಯಾರ್ಥಿಗಳ ತರಕಾರಿ ಸಂತೆಯ ಮೂಲಕ ಗಮನ ಸೆಳೆಯಿತು. ಸಂತೆ ಮಾರುಕಟ್ಟೆಯಲ್ಲಿ ತರಕಾರಿ ಮಾರುವ ವ್ಯಾಪಾರಿಗಳಂತೆ ಶಾಲಾ ವರಾಂಡ ಮತ್ತು ರಂಗ ಮಂದಿರದಲ್ಲಿ ತಾವು ತಂದಿದ್ದ ತರಕಾರಿಗಳನ್ನು ಮುಂದಿಟ್ಟುಕೊಂಡು ಕುಳಿತ ವಿದ್ಯಾರ್ಥಿಗಳು ಬೆಳಗ್ಗೆ 10.30 ರಿಂದ 11.30 ರ ತನಕ ಪಕ್ಕಾ ನುರಿತ ವ್ಯಾಪಾರಿಗಳಂತೆ

ಕುಟ್ರುಪ್ಪಾಡಿಯ ಸರಕಾರಿ ಶಾಲೆಯಲ್ಲಿ ತರಕಾರಿ ಸಂತೆ ► ಕೇಪು ಶಾಲೆಯಲ್ಲಿ ಗಮನ ಸೆಳೆದ ಮೆಟ್ರಿಕ್ ಮೇಳ Read More »

ಕರಾವಳಿ

ಕುದ್ಮಾರು: ಡಿ.ಸಿ.ಮನ್ನಾ ಭೂಮಿಯನ್ನು ಅರ್ಹರಿಗೆ ಹಂಚಲು ಪ್ರಸ್ತಾವನೆ ► 15 ದಿನಗಳೊಳಗೆ ಸಾರ್ವಜನಿಕ ಅಭಿಪ್ರಾಯ ಸಲ್ಲಿಸಲು ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ನ.26. ಕುದ್ಮಾರು ಗ್ರಾಮದ ಸರ್ವೇ ನಂ. 167-3 ರಲ್ಲಿ 3.02 ಎಕರೆ ಡಿ.ಸಿ.ಮನ್ನಾ ಭೂಮಿಯನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುವಂತೆ ಕಡಬ ಹೋಬಳಿಯ ಕಂದಾಯ ನಿರೀಕ್ಷಕರು ಪ್ರಸ್ತಾವನೆ ತಯಾರಿಸಿ ಉಲ್ಲೇಖ(2) ರಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯಗಳೇನಾದರೂ ಇದ್ದಲ್ಲಿ 15 ದಿನಗಳ ಒಳಗಾಗಿ ಲಿಖಿತವಾಗಿ ಕಡಬ ವಿಶೇಷ ತಹಶಿಲ್ದಾರರ ಕಛೇರಿಗೆ ಸಲ್ಲಿಸುವಂತೆ ಈ ಮೂಲಕ ತಿಳಿಸಲಾಗಿದೆ. ನಿಗದಿತ ಸಮಯದೊಳಗೆ ಸಾರ್ವಜನಿಕರಿಂದ ಯಾವುದೇ ಅಭಿಪ್ರಾಯ ಬರದಿದ್ದಲ್ಲಿ

ಕುದ್ಮಾರು: ಡಿ.ಸಿ.ಮನ್ನಾ ಭೂಮಿಯನ್ನು ಅರ್ಹರಿಗೆ ಹಂಚಲು ಪ್ರಸ್ತಾವನೆ ► 15 ದಿನಗಳೊಳಗೆ ಸಾರ್ವಜನಿಕ ಅಭಿಪ್ರಾಯ ಸಲ್ಲಿಸಲು ಅವಕಾಶ Read More »

ಕರಾವಳಿ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ

(ನ್ಯೂಸ್ ಕಡಬ) newskadaba.com ಮೈಸೂರು, ನ.23. ಹಿರಿಯ ಪತ್ರಕರ್ತ ಹಾಗೂ ಆಂದೋಲನ ಪತ್ರಿಕೆ ಸಂಸ್ಥಾಪರಾದ ರಾಜಶೇಖರ ಕೋಟಿ ಅವರು ಗುರುವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜಶೇಖರ ಕೋಟಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರು ಕಳೆದ 42 ವರ್ಷಗಳಿಂದ ಸುದೀರ್ಘ ಕಾಲ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದರು. ಗದಗ ಜಿಲ್ಲೆ ಹುಯಿಲಗೋಳ ಗ್ರಾಮದಲ್ಲಿ ಜನಿಸಿದ ರಾಜಶೇಖರ ಕೋಟಿ ಹಿರಿಯ ಪತ್ರಕರ್ತರಾದ ಡಾ. ಪಾಟೀಲ್ ಪುಟ್ಟಪ್ಪ ಗರಡಿಯಲ್ಲಿ ಪತ್ರಿಕೋದ್ಯಮ ಆರಂಭಿಸಿದ್ದರು. ನಂತರ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಆಂದೋಲನ ದಿನಪತ್ರಿಕೆ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ Read More »

ಕರ್ನಾಟಕ

ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!!

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ನ.23. 2ಜಿ, 3ಜಿ, 4ಜಿ ಆಯ್ತು ಈಗ 5ಜಿ ಯುಗ. ಜಾಗತಿಕ ರಂಗದಲ್ಲಿ ಹೊಸ ಕ್ರಾಂತಿಗೆ 5ಜಿ ದೂರಸಂಪರ್ಕ ಸೇವೆ ಮುನ್ನುಡಿ ಬರೆಯಲಿದೆ. ವಿಶ್ವದಲ್ಲೇ ಅತಿ ವೇಗದ ಮೊಬೈಲ್ ಮತ್ತು ವೈರ್ ಲೆಸ್ ಇಂಟರ್‌ನೆಟ್ ಸೇವೆ ಒದಗಿಸುತ್ತಿರುವ ದಕ್ಷಿಣ ಕೊರಿಯಾದಲ್ಲಿ ಈಗಾಗಲೇ 5ಜಿ ದೂರ ಸಂಪರ್ಕ ಪರೀಕ್ಷಾ ಸಿಗ್ನಲ್‌ಗಳನ್ನು ನೀಡಲಾಗಿದೆ. 5ಜಿ ತಂತ್ರಜ್ಞಾನದಡಿ ಎರಡು ಜಿಬಿಯ ಸಿನಿಮಾ ಡೌನ್‌ಲೋಡ್ ಮಾಡಲು ಬರೀ ಒಂದೇ ಸೆಕೆಂಡ್ ಸಾಕು. 4G ತಂತ್ರಜ್ಞಾನದಲ್ಲಿ ಲಭ್ಯವಾಗುವ ವಿವಿಧ ವೇಗದ

ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!! Read More »

ತಂತ್ರಜ್ಞಾನ
Scroll to Top