Kadaba

ಪೊಲೀಸರ ಮೇಲೆ ದಾಳಿ ಪ್ರಕರಣ ➤ ಆರೋಪಿಗಳ ಸುಳಿವು ‌ಲಭ್ಯ- ಶ್ರೀನಿವಾಸ ಪೂಜಾರಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಮಂಗಳೂರಿನಲ್ಲಿ ಪೊಲೀಸರ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಲಭಿಸಿದೆ ಎಂದು ಸಚಿವ ಕೋಟ‌ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಎರಡು ಪ್ರತ್ಯೇಕ ಘಟನೆ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಘಟನೆ ಹಿಂದಿರುವ ಷಡ್ಯಂತ್ರ, ಕಿಡಿಗೇಡಿಗಳ ಮಾಹಿತಿ ಸಿಕ್ಕಿದೆ. ಮುಂದೆ ಇಂತಹ ಕಿಡಿಗೇಡಿ ಕೃತ್ಯ ಆಗಬಾರದು. ಅಂತಹ ಕ್ರಮಕ್ಕೆ ಪೊಲೀಸರಿಗೆ ಸೂಚಿಸಲಾಗಿದೆ.ಕಾನೂನು ಕ್ರಮಕ್ಕೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು.

ಪೊಲೀಸರ ಮೇಲೆ ದಾಳಿ ಪ್ರಕರಣ ➤ ಆರೋಪಿಗಳ ಸುಳಿವು ‌ಲಭ್ಯ- ಶ್ರೀನಿವಾಸ ಪೂಜಾರಿ. Read More »

ಕರಾವಳಿ

ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ ೩೩ ಗಂಟೆಯಲ್ಲೇ ಬೇಧಿಸಿ ಬಾಲಕನನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಿದ ದ.ಕ. ಜಿಲ್ಲಾ ಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದಿಸುವ ಕಾರ್ಯಕ್ರಮವು ಸೋಮವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನಡೆಯಿತು. ಪೊಲೀಸ್ ತಂಡವನ್ನು ಅಭಿನಂದಿಸಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಾಲಕ ಅನುಭವ್ ಅಪಹರಣ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಬೇಧಿಸಲು ಪೊಲೀಸ್ ತಂಡ ಕರಾರುವಕ್ಕಾಗಿ, ಯೋಜನಾ ಬದ್ಧವಾಗಿ

ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ Read More »

ಕರಾವಳಿ

ಬಂಟ್ವಾಳ :ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.22: ತಾಲೂಕಿನ 57 ಗ್ರಾಪಂಗಳಿಗೆ ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ.ಸಾಲಿನಲ್ಲಿ ನಿಂತುಕೊಂಡು ಮಾಸ್ಕ್ ಧರಿಸಿದ ಮತದಾರರು, ಓಟು ಹಾಕಲು ಆಗಮಿಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ 396 ಮತಗಟ್ಟೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ತಾಲೂಕಿನ 57 ಗ್ರಾಪಂಗಳ 837 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿದ್ದು, 822 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ, 1925 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಪಂಚಾಯತ್ ಚುನಾವಣೆಯ ಪ್ರಯುಕ್ತ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಮಾಜಿ ಸಚಿವ

ಬಂಟ್ವಾಳ :ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ Read More »

ಕರಾವಳಿ

ಪಂಜ: ಜಸ್ವಿತ್ ತೋಟ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಪಂಜ, ಡಿ.22: ಪ್ರತಿಷ್ಠಿತ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಜಸ್ವಿತ್ ತೋಟ ರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. 317 D ಲಯನ್ಸ್ ಜಿಲ್ಲೆಯಲ್ಲಿ ಪಂಜ ಲಯನ್ಸ್ ಕ್ಲಬ್ ನ್ನು ಪ್ರತಿನಿಧಿಸಿ ಲಯನ್ಸ್ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದು ಸುಮಾರು ದೇಶಾದ್ಯಂತ 80ಕ್ಕಿಂತ ಹೆಚ್ಚಿನ ಲಯನ್ಸ್ ಜಿಲ್ಲೆಯ ಪ್ರತಿನಿಧಿಸಿ ವಿಶ್ವಶಾಂತಿಯ ಕಲಾಕೃತಿ ಗಳಲ್ಲಿ ಜಸ್ವಿತ್ ತೋಟ ಇವರ ಕಲಾಕೃತಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಪಂಜ: ಜಸ್ವಿತ್ ತೋಟ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಪುತ್ತೂರು :ನರಿಮೊಗರಿನಲ್ಲಿ ಫಾರ್ಮ್ ಕೋಳಿಗಳ ಕಳ್ಳತನ.!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22: ಪುತ್ತೂರಿನ ನರಿಮೊಗರು ಸಮೀಪದ ಸೇರಾಜೆ ಎಂಬಲ್ಲಿ ಕೋಳಿ ಫಾರ್ಮ್ ಕಳ್ಳರ ತಂಡವೊಂದು ನುಗ್ಗಿ ಕೋಳಿಗಳನ್ನೆ ಕಳ್ಳತನ ಮಾಡಿದ್ದಾರೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫಾರ್ಮ್‍ಗೆ ಅಳವಡಿಸಿದ್ದ ಪ್ಲಾಸ್ಟೀಕ್ ಕೋಟೆಡ್ ನೆಟ್ ತುಂಡರಿಸಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಇದು ಕಳ್ಳರ ಕೃತ್ಯವೆಂಬುವ ಶಂಕೆ ವ್ಯಕ್ತವಾಗಿದೆ. ನರಿಮೊಗರು ಸೇರಾಜೆ ಮಾಮರ ಪೌಲ್ಟ್ರೀ ಫಾರ್ಮ್‍ನ ಮಾಲಕ ರವಿರಾಜ್ ಅವರು ಸಂಜೆ ಫಾರ್ಮ್‍ನಲ್ಲಿ ಕಾರ್ಯ ನಿರ್ವಹಿಸಿ ಬಳಿಕ ಮಂಗಳೂರಿಗೆ ಹಿಂತಿರುಗಿದ್ದರು. ಬೆಳಿಗ್ಗೆ

ಪುತ್ತೂರು :ನರಿಮೊಗರಿನಲ್ಲಿ ಫಾರ್ಮ್ ಕೋಳಿಗಳ ಕಳ್ಳತನ.! Read More »

ಕರಾವಳಿ

ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡಿ ➤ ಶ್ಯಾಮಲಾ ಎಸ್. ಕುಂದರ್ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಮಹಿಳಾ ಸಿಬ್ಬಂದಿಗಳು ಹೆಚ್ಚಾಗಿರುವ ಕಚೇರಿಗಳಲ್ಲಿ ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ಸೂಚಿಸಿದರು. ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ “ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ” ಕುರಿತು ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಸಖಿ (ಒಎಸ್‍ಸಿ) ಕೇಂದ್ರದಲ್ಲಿ ಒಂದೇ ಸೂರಿನಡಿ ಮಹಿಳೆಯರಿಗೆ

ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡಿ ➤ ಶ್ಯಾಮಲಾ ಎಸ್. ಕುಂದರ್  Read More »

ಕರಾವಳಿ, ಕರ್ನಾಟಕ

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾ ದಳದಿಂದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ರಾಷ್ರ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಆಹಾರ ಸುರಕ್ಷತಾ ಇಲಾಖೆ ಮತ್ತು ಊರ್ವಸ್ಟೋರ್ ಪೊಲೀಸ್ ಠಾಣೆ ಅಧಿಕಾರಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾ ದಳ ನಗರದಲ್ಲಿ ಕಾರ್ಯಾಚರಣೆ ನಡೆಸಿತು. ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾಧಿಕಾರಿ ರಾಜು, ಸಿಪಿಸಿ ಬಸವರಾಜು, ಜಿಲ್ಲಾ ಸಲಹೆಗಾರ ಡಾ.ಹನುಮಂತರಾಯಪ್ಪ, ಆಪ್ತ ಸಮಾಲೋಚಕ ವಿಜಯ್ ಕುಮಾರ್, ವಿದ್ಯಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.  

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾ ದಳದಿಂದ ಕಾರ್ಯಾಚರಣೆ Read More »

ಕರಾವಳಿ

ಟಿಪ್ಪರ್‌ ಡಿಕ್ಕಿಯಾಗಿ RSS‌‌ ಹಿರಿಯ ಕಾರ್ಯಕರ್ತನ ಮೃತ್ಯು ಪ್ರಕರಣ ➤ ಪರಾರಿಯಾಗಿದ್ದ ಟಿಪ್ಪರ್‌ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22: ಡಿ.15ರ ಮಂಗಳವಾರ ಮುಂಜಾನೆ ಮಾಣಿ-ಮೈಸೂರು ರಸ್ತೆಯ ಕಬಕ ಸಮೀಪದ ಪೋಳ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಹಿರಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ವೆಂಕಟರಮಣ ಹೊಳ್ಳ ಅವರ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಟಿಪ್ಪರ್‌ ಚಾಲಕನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮರಳು ಲೋಡ್‌‌‌ಗಾಗಿ ಚರಣ್‌ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಪೋಳ್ಯ ಸಮೀಪ ಟಿಪ್ಪರ್‌-ಬೈಕ್‌‌ ಮಧ್ಯೆ ಅಪಘಾತ ಸಂಭವಿಸಿತ್ತು. ಘಟನೆ ನಡೆದ ನಂತರ ಚಾಲಕ ಟಿಪ್ಪರ್‌ನೊಂದಿಗೆ ಪರಾರಿಯಾಗಿದ್ದ. ಪ್ರಾರಂಭದಲ್ಲಿ

ಟಿಪ್ಪರ್‌ ಡಿಕ್ಕಿಯಾಗಿ RSS‌‌ ಹಿರಿಯ ಕಾರ್ಯಕರ್ತನ ಮೃತ್ಯು ಪ್ರಕರಣ ➤ ಪರಾರಿಯಾಗಿದ್ದ ಟಿಪ್ಪರ್‌ ಚಾಲಕನ ಬಂಧನ Read More »

ಕರಾವಳಿ

ಬಂಟ್ವಾಳ: ಎಸ್ ಐಗಳು, ಸಿಬ್ಬಂದಿ ಮೇಲೆಯೇ ಕಾರು ಹಾಯಿಸಿದ ಪ್ರಕರಣ ➤ ಇಬ್ಬರಿಗೆ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಎರಡೂವರೆ ವರ್ಷಗಳ ಹಿಂದೆ ಬಂಟ್ವಾಳದ ಮಣಿಹಳ್ಳದಲ್ಲಿ ಮಧ್ಯರಾತ್ರಿ ಪೊಲೀಸ್ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ್ದು ಹಾಗೂ ಹಲ್ಲೆ ನಡೆಸಲು ಬಂದ ಪ್ರಕರಣಕ್ಕೆ ಸಂಬಂಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸೋಮವಾರ ತೀರ್ಪು ನೀಡಿದ್ದು, ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ತಲಾ 3 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಾರಿಪಳ್ಳ ನಿವಾಸಿ ಸದ್ದಾಂ ಹುಸೈನ್, ಕುಪ್ಪೆಪದವು ನಿವಾಸಿ ಮಹಮ್ಮದ್ ಇರ್ಷಾದ್ ಶಿಕ್ಷೆಗೊಳಪಟ್ಟವರು. ಮತ್ತೋರ್ವ ಆರೋಪಿ ಮಹಮ್ಮದ್

ಬಂಟ್ವಾಳ: ಎಸ್ ಐಗಳು, ಸಿಬ್ಬಂದಿ ಮೇಲೆಯೇ ಕಾರು ಹಾಯಿಸಿದ ಪ್ರಕರಣ ➤ ಇಬ್ಬರಿಗೆ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ

ಸುರತ್ಕಲ್: ತಾನೇ ಬೀಸಿದ ಬಲೆಗೆ ಸಿಲುಕಿ ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22:  ತಾನೇ ಬೀಸಿದ ಬಲೆಗೆ ಸಿಲುಕಿ ಮೀನುಗಾರನೋರ್ವ ಸಾವನ್ನಪ್ಪಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಕೊಪ್ಲ ಸಮುದ್ರದಲ್ಲಿ ಸೋಮವಾರ ನಡೆದಿದೆ. ಲೋಕೇಶ್ ಕೋಟ್ಯಾನ್(40) ಬಲೆಗೆ ಸಿಲುಕಿ ಮೃತ ದುರ್ದೈವಿ. ಲೋಕೇಶ್ ಸಮುದ್ರ ದಡದಲ್ಲಿ ಸುರಕ್ಷತೆಯ ರಬ್ಬರ್ ಟ್ಯೂಬ್ ಹಾಕಿ ಈಜಿ ಬಲೆ ಬಿಡುತ್ತಿದ್ದರು. ಈ ವೇಳೆ ಬೃಹತ್ ತೆರೆ ಬಂದು ಆಕಸ್ಮಿಕವಾಗಿ ಬಲೆಯು ಲೋಕೇಶ್‌ ಅವರ ಕಾಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಬಲೆ ಬಿಡಿಸಲು ಯತ್ನಿಸಿದಾಗ ಟ್ಯೂಬ್ ಜಾರಿ ಈ

ಸುರತ್ಕಲ್: ತಾನೇ ಬೀಸಿದ ಬಲೆಗೆ ಸಿಲುಕಿ ಮೀನುಗಾರ ಮೃತ್ಯು Read More »

ಕರಾವಳಿ
Scroll to Top