Kadaba

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ

(ನ್ಯೂಸ್ ಕಡಬ) newskadaba.com ಕಡಬ,ಅ.9. ಜೆಡಿಎಸ್ ಪಕ್ಷದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯು ಒಕ್ಕಲಿಗ ಗೌಡ ಸಭಾ ಭವನದಲ್ಲಿ ಆದಿತ್ಯವಾರ ನಡೆಯಿತು. ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಬಿಜೆಪಿ ಪಕ್ಷದ ಆಡಳಿತದಿಂದ ಜನರು ನಿರಸನಗೊಂಡಿದ್ದು ಕೇವಲ ಅಧಿಕಾರಕ್ಕಾಗಿ 2ಪಕ್ಷಗಳು ರಾಜಕೀಯ ಮೇಲಾಟ ನಡೆಸುವುದನ್ನು ಬಿಟ್ಟಾರೆ ರೈತರ, ಜನಸಾಮಾನ್ಯರ, ಸಂಕಷ್ಟಗಳಿಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಜಿಲ್ಲೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷರು ಸೇರಿದಂತೆ ಹಲವಾರು ಜನರ ಕಗ್ಗೊಲೆ ನಡೆದರು ಉಸ್ತುವಾರಿ ಮಂತ್ರಿಗಳಿಂದ ಹಾಗೂ ಸಚಿವರಿಂದ ಜಿಲ್ಲೆಯ ಶಾಂತಿ ಕಾಪಾಡಲು […]

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ Read More »

ಕರಾವಳಿ

ಖಾಸಗಿ ಶಾಲೆಗಳ ದುಬಾರಿ ಶುಲ್ಕ ಖಂಡಿಸಿ ► ತನ್ವೀರ್ ಸೇಠ್ ನಿವಾಸದ ಮೇಲೆ ಕರವೇ ಯುವ ಸೇನೆಯಿಂದ ಮುತ್ತಿಗೆ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ.7. ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ಖಂಡಿಸಿ ಕರವೇ ಯುವ ಸೇನೆ ವತಿಯಿಂದ ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ನಿವಾಸದ ಬಳಿ  ಶನಿವಾರ ಪ್ರತಿಭಟನಾ ಧರಣಿ ನಡೆಸಿದರು.  ಈ ವೇಳೆ ಸಚಿವ ತನ್ವೀರ್ ಸೇಠ್ ನಿವಾಸದ ಮೇಲೆ ಮುತ್ತಿಗೆ ಹಾಕಿದ ಕರವೇ ಯುವ ಸೇನೆ ಕಾರ್ಯಕರ್ತರು ಅವರ ಮನೆಯಲ್ಲಿರುವ ಪಾಟ್ ಮತ್ತು ಕಿಟಕಿ ಗಾಜುಗಳನ್ನ ಒಡೆದಿದ್ದಾರೆ. ಪ್ರತಿಭಟನೆ ನಡೆಯುತ್ತಿದ್ದಂತೆಯೇ ಮನೆಯಿಂದ ಹೊರಬಂದ ಸಚಿವರು ಪ್ರತಿಭಟನಾಕಾರರ ಜೊತೆ ಮಾತನಾಡಿ, ಏಕಾಏಕಿ ಮನಗೆ ನುಗ್ಗೋದು ಪ್ರವೃತ್ತಿ

ಖಾಸಗಿ ಶಾಲೆಗಳ ದುಬಾರಿ ಶುಲ್ಕ ಖಂಡಿಸಿ ► ತನ್ವೀರ್ ಸೇಠ್ ನಿವಾಸದ ಮೇಲೆ ಕರವೇ ಯುವ ಸೇನೆಯಿಂದ ಮುತ್ತಿಗೆ Read More »

ಕರ್ನಾಟಕ

ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ

(ನ್ಯೂಸ್ ಕಡಬ) newskadaba.com ಕಡಬ,ಅ.7. ಕಡಬ ಹೋಬಳಿ ಮಟ್ಟದ ಮಾಸಿಕ ಜನಸಂಪರ್ಕ ಸಭೆ ಸುಳ್ಯ ಶಾಸಕ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆಯಿತು. ನೂಜಿಬಾಳ್ತಿಲ ಗ್ರಾ.ಪಂ.ವ್ಯಾಪ್ತಿಯನ್ನು ಮದ್ಯಮುಕ್ತ ಗ್ರಾಮವನ್ನಾಗಿಸಲು ಗ್ರಾ.ಪಂ.ಮೂಲಕ ನೀಡಿದ ಮನವಿಯನ್ನು ಪುರಸ್ಕರಿಸಿ ಮದ್ಯಮುಕ್ತ ಗ್ರಾಮವನ್ನಾಗಿಸಲು ನಿರ್ಣಯಿಸಿದ ಘಟನೆ, ಐತ್ತೂರು ಗ್ರಾಮದ ಕೇನ್ಯ ಎಂಬಲ್ಲಿ ಸುಂದರ ನಾಯ್ಕರಿಗೆ 94ಸಿಯಲ್ಲಿ ಹಕ್ಕುಪತ್ರ ನೀಡುವಂತೆ ಆಗ್ರಹ, ಕುಟ್ರುಪ್ಪಾಡಿ ಗ್ರಾಮಸಹಾಯಕ ಹೊನ್ನಪ್ಪ ಗೌಡರನ್ನು ವರ್ಗಾಯಿಸುವಂತೆ ಹಾಗೂ ವರ್ಗಾಯಿಸದಂತೆ ಪರವಿರೋಧ ಚರ್ಚೆ ನಡೆಯಿತಲ್ಲದೆ 94ಸಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ

ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ Read More »

ಕರಾವಳಿ

ಮರ್ದಾಳ: ಜೇಸಿಐ ವತಿಯಿಂದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ,ಅ.7. ಜೇಸಿಐ ಕಡಬ ಕದಂಬ ಇದರ ಕದಂಬೋತ್ಸವ 2017ರ ಪ್ರಯುಕ್ತ ಮರ್ದಾಳದಲ್ಲಿ ಸಾರ್ವಜನಿಕರಿಗೆ ಹಗ್ಗ ಜಗ್ಗಾಟ ಹಾಗೂ ಸ್ಲೋ ಬೈಕ್ ರೇಸ್ ಶುಕ್ರವಾರ ನಡೆಯಿತು. ಹರೀಶ್ ಕೋಡಿಬೈಲ್, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ಕ್ರೀಡಾಕೂಟಕ್ಕೆ ನೀಡಿದರು. ಈ ಸಂದರ್ಭದಲ್ಲಿ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಎಪಿಎಂಸಿ ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಸದಸ್ಯ ದಾಮೋದರ ಗೌಡ ಡೆಪ್ಪುಣಿ, ಪ್ರಮುಖರಾದ ಮೋಹನ ಗೌಡ ಪಂಜೋಡಿ, ಜೇಸಿಐ ಕಡಬ ಕದಂಬ ಇದರ

ಮರ್ದಾಳ: ಜೇಸಿಐ ವತಿಯಿಂದ ಕ್ರೀಡಾಕೂಟ Read More »

ಕರಾವಳಿ

ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ

(ನ್ಯೂಸ್ ಕಡಬ) newskadaba.com ಕಡಬ,ಅ.7. ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಚಾಲನೆ ನೀಡಲಾಯಿತು. ಬಾಲವಿಕಾಸ ಅಧ್ಯಕ್ಷೆ ನೀಲಾವತಿ ಶಿವರಾಮ್ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಬಿಸಿಯೂಟ ಬಡಿಸುವ ಮೂಲಕ ಚಾಲನೆ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಸಹಾಯಕಿ ಗೀತಾ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ Read More »

ಕರಾವಳಿ

ಕಡಬ: ಶ್ರೀಲಂಕಾ ಹಾಗೂ ತಮಿಳು ನಿರಾಶ್ರಿತರಿಗೆ ನಿವೇಶನ ಕಾದಿರಿಸಲು ಮನವಿ ► ಸೂಕ್ತ ಕ್ರಮದ ಭರವಸೆ ನೀಡಿದ ಶಾಸಕ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ,ಅ.7. ಐತ್ತೂರು ಗ್ರಾ.ಪಂ. ವ್ಯಾಪ್ತಿಯ ತಮಿಳು ನಿರಾಶ್ರಿತರಿಗೆ ಕಾದಿರಿಸದ ಜಾಗವನ್ನು ಫಲಾನುಭವಿಗಳಿಗೆ ನೀಡುವಂತೆ ಹಾಗೂ ಉಳಿದ ನಿರಾಶ್ರಿತರಿಗೆ ನಿವೇಶನ ಕಾದಿರಿಸುವಂತೆ ಮತ್ತು ಬಿಪಿಎಲ್ ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ ಪತ್ರ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕಡಬ ತಮಿಳು ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಸುಳ್ಯ ಶಾಸಕರಿಗೆ ಹಾಗೂ ತಹಶೀಲ್ದಾರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಐತ್ತೂರು ಗ್ರಾ.ಪಂ. ಅಧ್ಯಕ್ಷ ಸತೀಶ್.ಕೆ., ಐತ್ತೂರು ಗ್ರಾಮದ ಕೋಕಳ ಎಂಬಲ್ಲಿ ಶ್ರೀಲಂಕಾ ನಿರಾಶ್ರೀತರಿಗೆ 3.69ಎಕ್ರೆ ಜಾಗವನ್ನು ಎಲ್ಎನ್ಡಿ/ಸಿಆರ್/130/1998-99ರಲ್ಲಿ ಕಾದಿರಿಸಲಾಗಿದೆ.

ಕಡಬ: ಶ್ರೀಲಂಕಾ ಹಾಗೂ ತಮಿಳು ನಿರಾಶ್ರಿತರಿಗೆ ನಿವೇಶನ ಕಾದಿರಿಸಲು ಮನವಿ ► ಸೂಕ್ತ ಕ್ರಮದ ಭರವಸೆ ನೀಡಿದ ಶಾಸಕ ಎಸ್. ಅಂಗಾರ Read More »

ಕರಾವಳಿ

ಗೆಲುವು ಅಭಿವೃದ್ದಿ ಯೇ ಪಕ್ಷದ ಗುರಿ ► ಡಿ.ಎಸ್.ವೀರಯ್ಯ

(ನ್ಯೂಸ್ ಕಡಬ) newskadaba.com ಕಡಬ,ಅ.6. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರವೇರಲಿದೆ. ಮುಂದಿನ ಆರು ತಿಂಗಳಲ್ಲಿ ಪಕ್ಷದ ಕಾರ್ಯಕರ್ತರು ನಿರಂತರವಾಗಿ ಮತದಾರರ ಮನೆ ಬಾಗಲಿಗೆ ಬರುತ್ತಾರೆ. ಗೆಲುವು ಅಭಿವೃದ್ದಿ ಯೇ ಪಕ್ಷದ ಗುರಿ ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಹೇಳಿದರು. ಆಲಂಕಾರು ಪ್ರಾಥಮಿಕ ಸಹಕಾರಿ ಸಂಘದ ಸಭಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರ ಆಡಳಿತವನ್ನು ಜನ ತಿರಸ್ಕರಿಸುತ್ತಾರೆ ಎನ್ನುವ ಛಲ ನಂಬಿಕೆ ನಮಗಿದೆ. ರಾಜ್ಯ ಭ್ರಷ್ಟಚಾರ,

ಗೆಲುವು ಅಭಿವೃದ್ದಿ ಯೇ ಪಕ್ಷದ ಗುರಿ ► ಡಿ.ಎಸ್.ವೀರಯ್ಯ Read More »

ಕರಾವಳಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಕಡಬದ ಓರ್ವನ ಸಹಿತ ಐವರು ಶಂಕಿತರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.07. ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಬಲಪಂಥೀಯ ಸಂಘಟನೆ ಸನಾತನ ಸಂಸ್ಥೆಯ ಜೊತೆ ನಂಟು ಹೊಂದಿರುವ ಹಾಗೂ ಈಗ ತಲೆಮರೆಸಿಕೊಂಡಿರುವ ಐದು ಮಂದಿ ಪ್ರಮುಖ ಶಂಕಿತರಾಗಿ ಮೂಡಿಬಂದಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಶಂಕಿತರನ್ನು ಮಂಗಳೂರು ಮೂಲದ ಕಡಬದ ಜಯಪ್ರಕಾಶ್, ಕೊಲ್ಹಾಪುರದ ಪ್ರವೀಣ್ ಲಿಮ್ಕರ್, ಪುಣೆಯ ಸಾರಂಗ್ ಅಕೋಲ್ಕರ್, ಸಾಂಗ್ಲಿಯ ರುದ್ರ ಪಾಟೀಲ್ ಹಾಗು ಸತಾರದ ವಿನಯ್ ಪವಾರ್ ಎಂದು ಹೇಳಲಾಗಿದೆ. ಈ ಪೈಕಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಕಡಬದ ಓರ್ವನ ಸಹಿತ ಐವರು ಶಂಕಿತರು Read More »

ಕರ್ನಾಟಕ

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರ ►ಶಿಬಿರಾಗ್ನಿ

(ನ್ಯೂಸ್ ಕಡಬ) newskadaba.com ಕಡಬ,ಅ.6. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ನಡೆಯುತ್ತಿರುವ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಬುಧವಾರ ರಾತ್ರಿ ಶಿಬಿರಾಗ್ನಿ ಕಾರ್ಯಕ್ರಮ ನಡೆಯಿತು. ಕಡಬ ಶ್ರೀದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ನಿವೃತ್ತ ಮುಖ್ಯ ಗುರು ಜನಾರ್ದನ ಗೌಡ ಪಣೆಮಜಲು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿರು. ಮೆಸ್ಕಾಂ ಸಹಾಯಕ ಇಂಜಿನಿಯರ್ ಸಜಿ, ಸುದ್ದಿಪತ್ರಿಕೆ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ, ಬೆಥನಿ ಪ.ಪೂ.ಕಾಲೇಜಿನ ಪ್ರಾಚಾರ್ಯ ಜಾರ್ಜ್ ಟಿ.ಎಸ್, ಕಡಬ ಕಾಲೇಜಿನ

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರ ►ಶಿಬಿರಾಗ್ನಿ Read More »

ಕರಾವಳಿ

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ,ಅ.6. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ಸೆ.25ರಿಂದ ಅ.5ರ ತನಕ ನಡೆದ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಗುರುವಾರ ನಡೆಯಿತು. ಸಮಾರೋಪ ಸಮಾರಂಭವನ್ನು ಬೆಥನಿ ಸಂ.ಪ.ಪೂ.ಕಾಲೇಜಿನ ನಿರ್ದೇಶಕ ರೆ|ಫಾ|ಫರ್ಡಿನಾಂಡ್ರವರು ಉದ್ಘಾಟಿಸಿ, ವಿದ್ಯಾರ್ಥಿ ಜೀವನದಲ್ಲಿ ಗುರುಹಿರಿಯರಿಗೆ ಗೌರವ, ಸೇವಾ ಮನೋಭಾವದಿಂದ ಸಮಾಜಮುಖಿಯಾಗಿ ಕೆಲಸ ಮಾಡಿದಲ್ಲಿ ಮುಂದಿನ ಜೀವನ ಯಶಸ್ಸು ಲಭಿಸಲಿದೆ. ಇಂತಹ ಸೇವಾ ಶಿಬಿರಗಳ ಮೂಲಕ ಹತ್ತಾರು ಮನೆಗಳ ವಿದ್ಯಾರ್ಥಿಗಳು ಒಂದಾಗಿ, ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿ, ಸಹನೆ, ಶಾಂತಿ,

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ Read More »

ಕರಾವಳಿ
Scroll to Top