Kadaba

ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಅದೇ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಥಳಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಣಾಜೆ ಗ್ರಾಮದ ಮುಚ್ಚುರೋಡಿ ಗಿರೀಶ್ ಎಂಬವರ ಪುತ್ರ ಚೇತನ್ ಎಂಬ ಏಳನೇ ತರಗತಿಯ ವಿದ್ಯಾರ್ಥಿಗೆ ಅದೇ ಶಾಲಾ ಶಿಕ್ಷಕ ಅಜಿತ್ ಕುಮಾರ್ ಜೈನ್ ಎಂಬವರು ಗುರುವಾರ ಮರದ ಅಡಿಕೋಲು ಹಾಗೂ ಕೈಯಿಂದ ಥಳಿಸಿರುವುದಾಗಿ ಹೇಳಲಾಗಿದೆ. ಅಡಿಕೋಲಿನಿಂದ ತಲೆಗೆ ಎರಡು ಮೂರು ಕಡೆ ಹಲ್ಲೆ ನಡೆಸಿದ್ದು […]

ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು Read More »

ಕರಾವಳಿ

ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ದೋಳ್ಪಾಡಿ ಗ್ರಾಮದ ಇಡ್ಯಡ್ಕ ಎಂಬಲ್ಲಿ ರಬ್ಬರ್ ಕಾರ್ಮಿಕನೋರ್ವ ಶೌಚಾಲಯದಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕಂದಡ್ಕ ಪೆರಿಯಾಲ್ ಎಂಬವರ ಪುತ್ರ ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಇಡ್ಯಡ್ಕ ತಿಮ್ಮಪ್ಪ ಗೌಡರ ರಬ್ಬರ ತೋಟದಲ್ಲಿ ಟ್ಯಾಪರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸೆಲ್ವರಾಜ್ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿದ್ದರು. ಹತ್ತು ದಿನಗಳ ಹಿಂದೆ ಮನೆಗೆ ಹೋಗಿ ಬಂದಿದ್ದರು. ಎರಡು ದಿನಗಳ ಹಿಂದೆ ತನ್ನ

ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು Read More »

ಕರಾವಳಿ

ರಾಮಕುಂಜ ಗ್ರಾಮ ಪಂಚಾಯತ್ ► “ಗಾಂಧಿ ಗ್ರಾಮ ಪುರಸ್ಕಾರ”

(ನ್ಯೂಸ್ ಕಡಬ) newskadaba.com ಕಡಬ,ಸೆ.02, ವಿಶ್ವಮಾನ್ಯ ಪೇಜಾವರ ಶ್ರೀಗಳ ಹುಟ್ಟೂರಾದ ರಾಮಕುಂಜದ ಗ್ರಾಮ ಪಂಚಾಯತಿಗೆ ರಾಜ್ಯ ಸರಕಾರದಿಂದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಗ್ರಾಮಗಳ ನೈರ್ಮಲ್ಯ ಮತ್ತು ಸಮಗ್ರ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವ ಮೂಲಕ ಗ್ರಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ಕರ್ನಾಟಕ ಸರಕಾರದಿಂದ ಗಾಂಧಿ ಜಯಂತಿ ಪ್ರಯುಕ್ತ ನೀಡುವ 2016-17 ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ”ಕ್ಕೆ ಕಳೆದ ವರ್ಷದಂತೆ ಈ ಬಾರಿ ಕೂಡ ಜಿಲ್ಲೆಯ ಪ್ರತಿ ತಾಲೂಕಿನ ಒಂದು ಗ್ರಾ.ಪಂ ಗೆ ಗಾಂಧಿ ಪುರಸ್ಕಾರ

ರಾಮಕುಂಜ ಗ್ರಾಮ ಪಂಚಾಯತ್ ► “ಗಾಂಧಿ ಗ್ರಾಮ ಪುರಸ್ಕಾರ” Read More »

ಕರಾವಳಿ

ಬ್ಲೂವೇಲ್ ಗೇಮ್ ► ಕೈ ಕುಯ್ಡುಕೊಂಡ ಮಂಗಳೂರಿನ ವಿದ್ಯಾರ್ಥಿ…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.01, ಸೂಸೈಡ್ ಗೇಮ್ ಎಂದೇ ಪ್ರಖ್ಯಾತಿ ಪಡೆದಿರುವ ಬ್ಲೂವೇಲ್ ಗೇಮ್ ಈಗಾಗಲೇ ಸಾಕಷ್ಟು ಮಕ್ಕಳು   ಬಲಿಪಡೆದು ಕೊಂಡಿದ್ದು,  ಇದೀಗ ಮಂಗಳೂರಿಗೂ ಕಾಲಿಟ್ಟಿದೆ. ಬ್ಲೂವೇಲ್ ಗೇಮ್ ಆಟವಾಡಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಕೈ ಕೊಯ್ದುಕೊಂಡಿದ್ದಾನೆ. ತಿಮಿಂಗಿಲ ಆಕಾರದಲ್ಲಿ ಕೈ ಕೊಯ್ದುಕೊಂಡಿದ್ದನ್ನು ಗಮನಿಸಿದ ಹೆತ್ತವರು ಬಳಿಕ ವಿಚಾರಿಸಿದಾಗ ಬ್ಲೂವೇಲ್ ಗೇಮ್ ಆಟವಾಡಿದ್ದನ್ನು ಬಾಯ್ಬಿಟ್ಟಿದ್ದಾನೆ. ಬಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.  ಇದುವರೆಗೂ ದೇಶ, ವಿದೇಶಗಳಲ್ಲಿ ನೂರಾರು ಜನ ಬ್ಲೂವೆಲ್ ಗೇಮ್‍ನಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಬ್ಲೂ

ಬ್ಲೂವೇಲ್ ಗೇಮ್ ► ಕೈ ಕುಯ್ಡುಕೊಂಡ ಮಂಗಳೂರಿನ ವಿದ್ಯಾರ್ಥಿ…!!! Read More »

ಕರಾವಳಿ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಡಬ,ಸೆ.01, ಬೆಂಗಳೂರು: ಸ್ಕಾರ್ಪಿಯೋ ಹಾಗೂ ಕ್ಯಾಂಟರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಏರ್‍ ಪೋರ್ಟ್ ಬಳಿ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ. ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು. ಬೆಂಗಳೂರು ಏರ್‍ ಪೋರ್ಟ್ ಕಡೆಯಿಂದ ಬರುತ್ತಿದ್ದ ಸ್ಕಾರ್ಪಿಯೋ ಹುಣಸಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೊಂದು ರಸ್ತೆಗೆ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ Read More »

ಕರ್ನಾಟಕ

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.01, ರೈತರೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ರೈತನನ್ನು ಚಿಕ್ಕತಿಮ್ಮಯ್ಯ (45) ಎಂದು ಗುರುತಿಸಲಾಗಿದೆ. ಚಿಕ್ಕತಿಮ್ಮಯ್ಯ ಎಂದಿನಂತೆ ಗುರುವಾರ ಕೂಡ ತನ್ನ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಮ್ಮ ಮನೆಯವರು ಜಮೀನಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ರೈತ ಚಿಕ್ಕತಿಮ್ಮಯ್ಯ ಅವರನ್ನ ಕತ್ತು ಕೊಯ್ದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಕಾರಣವೇನು ಎಂಬುದು

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ Read More »

ಕರಾವಳಿ

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01,  7 ವರ್ಷಗಳ ಹಿಂದೆ ಸಿಎಂ ಆಗಿದ್ದ ಕಾಲದಲ್ಲಿ ಬಾಲಕನೊಬ್ಬನನ್ನು ದತ್ತು ಪಡೆದು ಕೊನೆವರೆಗೂ ವಿದ್ಯಾಭ್ಯಾಸ ಕೊಡಿಸುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರವರು ಇದೀಗ ದತ್ತು ಬಾಲಕನ ಕೈ ಬಿಟ್ಟಿದ್ದಾರೆ. ಯಾದಗಿರಿ ಮೂಲದ ಬಸವರಾಜು ಮತ್ತು ಶಿವಮ್ಮ ದಂಪತಿಯ 10 ವರ್ಷದ ಮಗನನಾದ ವಿಶ್ವನಾಥ್ ನನ್ನು ಬಿಎಸ್‍ವೈ ದತ್ತು ಪಡೆದು ಬಾಲಕನ ಹೆಸರಿನಲ್ಲಿ ಒಂದು ಲಕ್ಷ ರೂಪಾಯಿ ಬ್ಯಾಂಕಿನಲ್ಲಿ ಡೆಪಾಸಿಟ್ ಮಾಡ್ತೀನಿ ಅಂತಾ ದೇವರ ಮುಂದೆ ಆಣೆ ಪ್ರಮಾಣ ಕೂಡ ಮಾಡಿದ್ದರು.

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..??? Read More »

ಕರ್ನಾಟಕ

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ► 10 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳ್ಳತನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಸೆ.01, ಇಲ್ಲಿನ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ‌ ನುಗ್ಗಿದ ಕಳ್ಳರು ದೇವಿ ವಿಗ್ರಹ ಹಾಗೂ ಆಭರಣಗಳನ್ನು ಕಳವು ಮಾಡಿದ ಘಟನೆ ಶುಕ್ರವಾರದಂದು ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಲ್ಲಿ ಈ ಘಟನೆ ನಡೆದಿದ್ದು, ಪ್ರಾಚೀನ ಕಾಲದ ಶ್ರೀ ದೇವಿಯ ವಿಗ್ರಹ, ಪ್ರಭಾವಳಿ, ಆಭರಣಗಳನ್ನು ದೋಚಿದ ಕಳ್ಳರು ಸುಮಾರು 10 ಲಕ್ಷದ ಅಧಿಕ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ದೇವಸ್ಥಾನಕ್ಕೆ ಅಳವಡಿಸಿದ್ದ ಸಿಸಿಟಿವಿಯನ್ನು ಧ್ವಂಸಗೊಳಿಸಿದ ಬಳಿಕ ಕಳ್ಳರು ತಮ್ಮ ಕೈಚಳಕ

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ► 10 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳ್ಳತನ Read More »

ಕರಾವಳಿ

ಪತಿ ಮಾಡಿದ ಸಾಲಕ್ಕೆ ಬೇಸತ್ತ ಪತ್ನಿ ► ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣು..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಸಾಲಬಾಧೆಗೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಸುದ್ದಿ ಎಲ್ಲಾರಿಗೂ ಗೊತ್ತೇ ಇದೆ. ಆದರೆ ಗಂಡ ಮಾಡಿದ ಸಾಲಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಗುರುವಾರ ರಾತ್ರಿ ಹಲಸೂರಿನಲ್ಲಿ ನಡೆದಿದೆ. ಬೆಂಗಳೂರಿನ ಹಲಸೂರಿನಲ್ಲಿ ವಾಸವಿದ್ದ ರೇಣುಕಾ (34) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಮನೆಯಲ್ಲಿ ಗಂಡನಿಲ್ಲದ ಸಮಯದಲ್ಲಿ ಮಕ್ಕಳಾದ ನಿಶ್ಚಿತಾ(6) ಮತ್ತು ಪಾವನಿ(10 ತಿಂಗಳು)ಗೆ ನೇಣು ಬಿಗಿದು ಬಳಿಕ ರೇಣುಕಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್‌ ಟೆಕ್ನಿಷಿಯನ್ ಆಗಿ

ಪತಿ ಮಾಡಿದ ಸಾಲಕ್ಕೆ ಬೇಸತ್ತ ಪತ್ನಿ ► ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣು..!!! Read More »

ಕರಾವಳಿ

ಉಳಿತೊಟ್ಟು ಬಿಲಾಲ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝ್ಹಾಃ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸೆ.01, ಇಲ್ಲಿನ ಸಮೀಪದ ಉಳಿತೊಟ್ಟು ಬಿಲಾಲ್ ಜುಮಾ ಮಸೀದಿಯಲ್ಲಿ ತ್ಯಾಗ ಬಲಿದಾನದ ಸಂಕೇತವಾದ ಈದುಲ್ ಅಝ್ಹಾಃ ( ಬಕ್ರೀದ್) ಶುಕ್ರವಾರ ಆಚರಿಸಲಾಯಿತು. ಮಸೀದಿಯ ಖತೀಬ್ ಅಬೂಬಕರ್ ಸಿದ್ದೀಕ್ ಸಖಾಫಿ ಮಾಡಾವು ಈದ್ ನಮಾಝ್ ಗೆ ನೇತೃತ್ವ ನೀಡಿ ಈದ್ ಸಂದೇಶ ನೀಡಿದರು. ಈದ್ ಆಚರಣೆಯಲ್ಲಿ ಸೇರಿದ ಮಸೀದಿಯ ನೂರಾರು ಜಮಾಅತರು ಸಹೋದರತೆಯ ಸಂಕೇತವಾಗಿ ಪರಸ್ಪರ ಆಲಂಗಿಸಿ ಈದ್ ಆಚರಿಸಿದರು.  

ಉಳಿತೊಟ್ಟು ಬಿಲಾಲ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝ್ಹಾಃ Read More »

ಕರಾವಳಿ
Scroll to Top