Kadaba

ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ.01, ಮೊಣಕೈ ಮುರಿದುಕೊಂಡಿದ್ದ ಬಾಲಕಿಗೆ ವೈದ್ಯನೊಬ್ಬ ಶಸ್ತ್ರಚಿಕಿತ್ಸೆ ಮಾಡೋದಾಗಿ ಹೇಳಿ ಕೈ ಕತ್ತರಿಸಿ ಬಳಿಕ ಶಸ್ತ್ರ ಚಿಕಿತ್ಸೆಯನ್ನು ಅರ್ಧಕ್ಕೆ ಬಿಟ್ಟಿರೋ ಘಟನೆ ಗಂಗಾವತಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಇದರಿಂದಾಗಿ ಬಾಲಕಿಯ ಪೋಷಕರುಕರು ದಿಕ್ಕುತೋಚದೆ ಕಣ್ಣೀರಿಡ್ತಿದ್ದಾರೆ. ಗಂಗಾವತಿ ತಾಲೂಕಿನ ಬಸವರಾಜ ಹಾಗೂ ಅಂಬಮ್ಮ ದಂಪತಿಯ 8 ವರ್ಷದ ಪುತ್ರಿ ಅಂಕಿತಾ ಮನೆಯಲ್ಲಿ ಬಿದ್ದು ಮೊಣಕೈ ಮುರಿದುಕೊಂಡಿದ್ದಳು. ಬಳಿಕ ಪೋಷಕರು ಅಂಕಿತಾಳನ್ನ ಕೊಪ್ಪಳದ ಜಿಲ್ಲಾಸ್ಪತ್ರೆಗೆ ಸೇರಿಸಿದ್ರು. ವೈದ್ಯರು ಮಾತ್ರ ಎಕ್ಸ್‍ರೇ ಮಾಡಿದ 4 ದಿನಗಳ ಬಳಿಕ […]

ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!! Read More »

ಕರಾವಳಿ

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಸಿದ್ದರಾಮಯ್ಯ ಅವರು ಚುನಾವಣೆ ವೇಳೆಯಲ್ಲಿ ಮಾತ್ರ ಕನ್ನಡ ಪ್ರೀತಿ ತೋರಿಸುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿದ್ದರಾಮಯ್ಯ ಛೂ ಬಿಟ್ಟಿದ್ದಾರೆ. ಕೊಲೆ ಮಾಡಿ ಕೋರ್ಟ್ ನಲ್ಲಿ  ಕ್ಷಮೆ ಕೇಳಿದ್ರೆ ಕ್ಷಮಿಸಲ್ಲ, ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ಬಳಿಕವಷ್ಟೆ ಕ್ಷಮಾದಾನ ಸಿಗುತ್ತದೆ. ತಪ್ಪು ಮಾಡಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಕೇಳಿದ್ರೆ ಆಗಲ್ಲ. ಮೊದಲು ಅವರಿಗೆ ಶಿಕ್ಷೆ ಆಗಬೇಕು

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ Read More »

ಕರಾವಳಿ

ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು

(ನ್ಯೂಸ್ ಕಡಬ) newskadaba.com ಮುಂಬೈ, ಆ.31. ವಾಣಿಜ್ಯ ನಗರಿ ಮುಂಬಯಿನಲ್ಲಿ ಎಡೆಬಿಡದೇ ಸುರಿಯಿತ್ತಿರುವ ಮಳೆಯಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ನಿರಂತರ ಸುರಿಯುತ್ತಿರುವ ಮಹಾಮಳೆಯಿಂದಾಗಿ ಸುಮಾರು  125 ವರ್ಷದ ಹಳೆಯದಾದ  5 ಅಂತಸ್ತಿನ ಕಟ್ಟಡ ಕುಸಿದು 10 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಮೌಲಾನಿ ಶೌಕತ್ ಅಲಿ ರೋಡ್‍ನ ಭೆಂಡಿ ಬಜಾರ್‍ನಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದ ಅವಶೇಷಗಳ ಅಡಿ ಇನ್ನೂ ಕೆಲವರು ಸಿಲುಕಿರುವ ಶಂಕೆಯಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, 10 ಅಗ್ನಿಶಾಮಕ ವಾಹನಗಳು ಹಾಗೂ ಆಂಬುಲೆನ್ಸ್‍ಗಳು ಸ್ಥಳಕ್ಕೆ

ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು Read More »

ಕರಾವಳಿ

ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!!

(ನ್ಯೂಸ್ ಕಡಬ) newskadaba.com ಉಡುಪಿ, ಆ.31, ಜನ್ಮ ನೀಡಿದ ತಂದೆಯೇ ತನ್ನ ಮಗಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಕೊಡವೂರು ಎಂಬಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಮಲ್ಪೆಯ ಕೊಡವೂರು ನಿವಾಸಿಯಾದ ಶರತ್ ತನ್ನ 8 ವರ್ಷದ ಮಗಳು ಕನ್ನಿಕಾಳನ್ನು ಮೊದಲು ಬಾವಿಗೆ ತಳ್ಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ  ಎಂದು ಹೇಳಲಾಗಿದೆ. ಶರತ್ ಮತ್ತು ಮಗಳು ಕನ್ನಿಕಾ ಮಂಗಳವಾರ ರಾತ್ರಿ 12.30ರ ವೇಳೆಯಲ್ಲಿ ಮನೆಯಿಂದ ಕಾಣಿಯಾಗಿದ್ದರು. ಮನೆಯ ಸುತ್ತಮುತ್ತ ಪರಿಸರದಲ್ಲಿ ಹುಡುಕಾಟ ನಡೆಸಿದ ಮನೆಯವರು ಬಳಿಕ

ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!! Read More »

ಕರಾವಳಿ

ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ► ಪೊಲೀಸರಿಗೆ ಹೆದರಿ ಆತ್ಮಹತ್ಯೆ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಪತ್ನಿಗೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ ಬಳಿಕ ಅತ್ಮಹತ್ಯೆಗೆ ಶರಣಾಗಿರೋ ಘಟನೆ ಬೆಂಗಳೂರಿನ ಕೋಗಿಲು ಗ್ರಾಮದ ಶ್ರೀನಿವಾಸ್ ನಗರದಲ್ಲಿ ನಡೆದಿದೆ. ಯಲಹಂಕದಲ್ಲಿ ಪತ್ನಿಯೊಂದಿಗೆ ಜಗಳವಾಡಿದ್ದ ನಾಗರಾಜ್ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ನಾಗರಾಜ್, ಪೊಲೀಸರಿಗೆ ಹೆದರಿ ಕೋಗಿಲು ಗ್ರಾಮದ ಶ್ರೀನಿವಾಸ್ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲ್ಲೆ ಪ್ರಕರಣ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ನಾಗರಾಜ್ ವಿರುದ್ದ 307ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಗಂಭೀರವಾಗಿ ಗಾಯಗೊಂಡಿ ಪತ್ನಿ ದೇವಿಕಾರನ್ನು

ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ► ಪೊಲೀಸರಿಗೆ ಹೆದರಿ ಆತ್ಮಹತ್ಯೆ…!!! Read More »

ಕರಾವಳಿ

ವಲಯಮಟ್ಟದ ಚದುರಂಗ ಆಟ ► ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ನೂಜಿಬಾಳ್ತಿಲ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ವಲಯಮಟ್ಟದ ಚದುರಂಗ ಆಟದಲ್ಲಿ ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. 17ರ ವಯೋಮಿತಿಯಲ್ಲಿ ನಡೆದ ಚದುರಂಗ ಆಟದಲ್ಲಿ  ದಿಲೀಪ್ ಕುಮಾರ್ ಆರ್ 4ನೇ ಸ್ಥಾನ, ಜಿತೇಶ್ ಕುಮಾರ್.ಎಸ್ 5ನೇ ಸ್ಥಾನ ಪಡೆದುಕೊಂಡಿರುತ್ತಾರೆ. 14ರ ವಯೋಮಿತಿಯಲ್ಲಿ ಅಭಿನವ್ ಪಿ.ಎಸ್ ಪ್ರಥಮ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಮನೀಶ್ ರೈ ದ್ವಿತೀಯ ಸ್ಥಾನ, ಹುಡುಗಿಯರ ವಿಭಾಗದಲ್ಲಿ

ವಲಯಮಟ್ಟದ ಚದುರಂಗ ಆಟ ► ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ Read More »

ಕರಾವಳಿ

ಗೋಳಿಯಡ್ಕ ಧರ್ಮಶಿಖರದಲ್ಲಿ ಗಣೇಶೋತ್ಸವ ಸಂಭ್ರಮ ► ಶೋಭಾಯಾತ್ರೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ರೆಂಜಿಲಾಡಿ ನೂಜಿಬಾಳ್ತಿಲ ಗ್ರಾಮದ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಶ್ರೀ ಗಣೇಶೋತ್ಸವ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದಲ್ಲಿ ನಡೆಯಿತು. ಬೆಳಿಗ್ಗೆ ಸುಪ್ರಭಾತ, ಗಣಹೋಮ, ಶ್ರೀ ಮಹಾಗಣಪತಿ ದೇವರ ಪ್ರತಿಷ್ಟೆ, ಭಜನಾಕಾರ್ಯಕ್ರಮ ನಡೆದು ಬಳಿಕ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಸಂಜೆ ಓಕುಳಿ ಏಲಂ ಬಳಿಕ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದ ಎದುರು ಅಶ್ವಥ ಕಟ್ಟೆಯಲ್ಲಿ ಶ್ರೀದೇವರ ಪೂಜೆ ನಡೆಸಲಾಯಿತು. ಗೋಳಿಯಡ್ಕದಿಂದ

ಗೋಳಿಯಡ್ಕ ಧರ್ಮಶಿಖರದಲ್ಲಿ ಗಣೇಶೋತ್ಸವ ಸಂಭ್ರಮ ► ಶೋಭಾಯಾತ್ರೆ Read More »

ಕರಾವಳಿ

ಎಲೆಕ್ಷನ್ ಹೊತ್ತಲ್ಲಿ ಟಿಕೆಟ್ ಪಡೆಯೋಕೆ ಹೊಸ ಪ್ಲ್ಯಾನ್ ► ಬೆಳಗ್ಗಿನ ಉಪಹಾರ ಉಚಿತ ► ಶೆಟ್ಟಿ ಕ್ಯಾಂಟೀನ್

(ನ್ಯೂಸ್ ಕಡಬ) newskadaba.com ಕೋಲಾರ, ಆ.31. ಕರ್ನಾಟಕದ ಮೂಲೆ ಮೂಲೆಯಿಂದಲೂ ಕ್ಯಾಂಟೀನ್ ಸದ್ದು ಜೋರಾಗಿದೆ. ಕಾಂಗ್ರೆಸ್ ಪಕ್ಷದಿಂದ “ಇಂದಿರಾ ಕ್ಯಾಂಟೀನ್”,  ಜೆಡಿಎಸ್‍ನ “ಅಪ್ಪಾಜಿ ಕ್ಯಾಂಟೀನ್”  ಇದೀಗ ಬಿಜೆಪಿ ಮುಖಂಡರ “ಕೃಷ್ಣಯ್ಯ ಶೆಟ್ಟಿ ಕ್ಯಾಂಟೀನ್” ಹೀಗೆ ಕ್ಯಾಂಟೀನ್ ಗಳ ಕಾರುಬಾರು ಜೋರಾಗಿಯೇ ಇದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿಯವರು, ತಮ್ಮದೇ ಹೆಸರಿನಲ್ಲಿ ಕ್ಯಾಂಟೀನ್ ಶುರು ಮಾಡಿದ್ದಾರೆ. ಕೆಲವು ಸಮಯದಿಂದ ಕ್ಷೇತ್ರದಿಂದ ದೂರ ಉಳಿದಿದ್ದ ಕೃಷ್ಣಯ್ಯಶೆಟ್ಟಿಯವರು ಮತ್ತೆ ಮಾಲೂರು ಕ್ಷೇತ್ರದಲ್ಲಿ

ಎಲೆಕ್ಷನ್ ಹೊತ್ತಲ್ಲಿ ಟಿಕೆಟ್ ಪಡೆಯೋಕೆ ಹೊಸ ಪ್ಲ್ಯಾನ್ ► ಬೆಳಗ್ಗಿನ ಉಪಹಾರ ಉಚಿತ ► ಶೆಟ್ಟಿ ಕ್ಯಾಂಟೀನ್ Read More »

ಕರಾವಳಿ

ಹುಚ್ಚು ನಾಯಿ ದಾಳಿ ►15ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಆ.31. ಹುಚ್ಚು ನಾಯಿ ದಾಳಿಯಿಂದಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾಸನ ಬೇಲೂರು ಪಟ್ಟಣದ ಬಡಾವಣೆಗಳಲ್ಲಿ ಬುಧವಾರ ರಾತ್ರಿ ನಡೆದಿದೆ.   ಸಿಕ್ಕಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ ಮಾಡಿದ ಪರಿಣಾಮ ವೃದ್ಧರು, ಮಕ್ಕಳು ಸೇರಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳು ಬೇಲೂರು ಮತ್ತು ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಸ್ಥಳೀಯರು ಮತ್ತು ಪುರಸಭೆ ಸಿಬ್ಬಂದಿ ಸೇರಿ ಬೈಕ್ ಗಳ ಮೂಲಕ ನಾಯಿ ಹಿಡಿಯಲು ಪ್ರಯತ್ನಿಸಿದರೂ ಪ್ರಯೋಜನವಾಗದೆ ಈವರಗೆ ನಾಯಿಯನ್ನು ಹಿಡಿಯಲು ಸಾಧ್ಯವಾಗಿಲ್ಲ.

ಹುಚ್ಚು ನಾಯಿ ದಾಳಿ ►15ಕ್ಕೂ ಅಧಿಕ ಮಂದಿಗೆ ಗಾಯ Read More »

ಕರ್ನಾಟಕ

ಸಹಪಾಠಿ ವಿದ್ಯಾರ್ಥಿನಿ ಜೊತೆ ಟಾಯ್ಲೆಟ್‍ನಲ್ಲಿ ಸರಸ ಸಲ್ಲಾಪ ► ವಿಟ್ಲದ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾದ ವಿಡಿಯೋ

(ನ್ಯೂಸ್ ಕಡಬ) newskadaba.com ವಿಟ್ಲ, ಆ.31. ಇಲ್ಲಿನ ಸ್ಥಳೀಯ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಪಬ್ಲಿಕ್ ಟಾಯ್ಲೆಟ್ ಒಳಗೆ ಸರಸವಾಡುತ್ತಿದ್ದ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಪ್ರಸಂಗ ವಿಟ್ಲ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕರು ಅನುಮಾನಗೊಂಡು ಬಾಗಿಲು ತಟ್ಟಿದಾಗ ವಿದ್ಯಾರ್ಥಿ ಹೊರಬಂದಿದ್ದಾನೆ. ಆ ಬಳಿಕ ಮುಖಕ್ಕೆ ಬಟ್ಟೆ ಹಾಕಿಕೊಂಡಿದ್ದ ವಿದ್ಯಾರ್ಥಿನಿಯೂ ಹೊರಬಂದು ಓಡಿ ಪರಾರಿಯಾಗಿದ್ದಾಳೆ. ಇಬ್ಬರೂ ಸಾರ್ವಜನಿಕರ ಕೈಗೆ ಸಿಕ್ಕಿರುವ ದೃಶ್ಯವನ್ನು ಕೆಲವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋ ವೈರಲ್

ಸಹಪಾಠಿ ವಿದ್ಯಾರ್ಥಿನಿ ಜೊತೆ ಟಾಯ್ಲೆಟ್‍ನಲ್ಲಿ ಸರಸ ಸಲ್ಲಾಪ ► ವಿಟ್ಲದ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾದ ವಿಡಿಯೋ Read More »

ಕರಾವಳಿ
Scroll to Top