Kadaba

ನಿಯಂತ್ರಣ ತಪ್ಪಿದ ಲಾರಿ ಬಸ್ಸಿಗೆ ಢಿಕ್ಕಿ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31. ಖಾಸಗಿ ಬಸ್ ಹಾಗು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ನೈಸ್ ರಸ್ತೆಯಲ್ಲಿ ಬುಧವಾರ ಸಂಭವಿಸಿದೆ. ಹೈದರಾಬಾದ್ ಮೂಲದ ಶೇಖರ್ (24), ಅನಿತಾ (26) ಮೃತ ದುರ್ದೈವಿಗಳು. ತಮಿಳುನಾಡಿನಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಬಸ್ಸಿಗೆ ಲಾರಿ ನೇರವಾಗಿ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ […]

ನಿಯಂತ್ರಣ ತಪ್ಪಿದ ಲಾರಿ ಬಸ್ಸಿಗೆ ಢಿಕ್ಕಿ► ಇಬ್ಬರ ದುರ್ಮರಣ Read More »

ಕರ್ನಾಟಕ

ಆಲಂಕಾರು ವಿಶೇಷ ಗ್ರಾಮ ಸಭೆ ► ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಆ.31. ಒಂದೆಡೆ ಅಬಕಾರಿ ಅಧಿಕಾರಿಗಳು ಕಾನೂನಿನ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದರೆ ಇನ್ನೊಂದೆಡೆ ಮದ್ಯದಂಗಡಿ ಮುಚ್ಚಿಸುವಂತೆ ಏರು ಧ್ವನಿಯಲ್ಲಿ ಆಗ್ರಹಿಸಿದ ನಾಗರೀಕರು ಈ ಮದ್ಯೆ ಜಿಲ್ಲಾಧಿಕಾರಿಗೆ ಗ್ರಾಮಸ್ಥರಿಂದ ಎಚ್ಚರಿಕೆಯ ನಿರ್ಣಯ ಅಂಗಿಕಾರ ವಾಗ್ವದ, ಆಣೆಪ್ರಮಾಣದ ಸನ್ನಿವೇಶ ಆಲಂಕಾರು ಗ್ರಾಮ ಪಂಚಾಯಿತಿಯಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಬುಧವಾರ ವ್ಯಕ್ತವಾಯಿತು. ಸಭೆಯು ಆಲಂಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಂದ ಬಾರ್ಕುಳಿ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಆಲಂಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಕಾರು ಪೇಟೆಯಲ್ಲಿ ಗ್ರಾಮಸ್ಥರ ಆಕ್ಷೇಪಗಳ

ಆಲಂಕಾರು ವಿಶೇಷ ಗ್ರಾಮ ಸಭೆ ► ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ Read More »

ಕರಾವಳಿ

KPCC ಕಾರ್ಯದರ್ಶಿ ವಿಜಯ್ ಮುಳಗುಂದ ಮನೆಗೆ ಐಟಿ ದಾಳಿ ►ಡಿಕೆಶಿ ಆಪ್ತರ ಮೇಲೆ ಮುಂದುವರೆದ ಶೋಧ ಕಾರ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30, ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತರಾಗಿರುವ ವಿಜಯ್ ಮುಳಗುಂದ ರವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಬುಧವಾರ ದಾಳಿ ಮಾಡಿದೆ. ವಿಜಯ್ ಮುಳಗುಂದ ಅವರು ಕೆಪಿಸಿಸಿ ಕಾರ್ಯದರ್ಶಿಯಾಗಿದ್ದು, ಇವರು ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತರಾಗಿರುತ್ತಾರೆ. ಗುಜರಾತ್’ನ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಆತಿಥ್ಯ  ಜವಾಬ್ದಾರಿಯನ್ನು ನಿಭಾಯಿಸಿದವರಲ್ಲಿ ವಿಜಯ್ ಮುಳಗುಂದ ಕೂಡ ಒಬ್ಬರಾಗಿದ್ದರು. ಎಸ್.ಎಂ. ಕೃಷ್ಣ ಆಡಳಿತದ ಅವಧಿಯಲ್ಲಿ ಕಾವೇರಿ ಹ್ಯಾಂಡ್’ಲೂಮ್ ಅಧ್ಯಕ್ಷರಾಗಿದ್ದರು. ಒರಾಯನ್ ಮಾಲ್ ಸಮೀಪವಿರುವ ಮುಳಗುಂದ ಅವರ ಮನೆ ಮೇಲೆ ದಾಳಿ

KPCC ಕಾರ್ಯದರ್ಶಿ ವಿಜಯ್ ಮುಳಗುಂದ ಮನೆಗೆ ಐಟಿ ದಾಳಿ ►ಡಿಕೆಶಿ ಆಪ್ತರ ಮೇಲೆ ಮುಂದುವರೆದ ಶೋಧ ಕಾರ್ಯ Read More »

ಕರ್ನಾಟಕ

ಸುಳ್ಯ ನಿವಾಸಿ ವಿಚಾರಣಾಧೀನ ಖೈದಿ ಮೃತ್ಯು ► ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿಯೊಬ್ಬರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತರನ್ನು ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದ ವಿಚಾರಣಾಧೀನ ಖೈದಿ ಸುಳ್ಯ ನಿವಾಸಿ ಶಿವಪ್ಪ (47) ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶಿವಪ್ಪರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಸುಳ್ಯ ನಿವಾಸಿ ವಿಚಾರಣಾಧೀನ ಖೈದಿ ಮೃತ್ಯು ► ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಘಟನೆ Read More »

ಕರಾವಳಿ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳುತ್ತಿದ್ದ ವೇಳೆ ಯುವಕ ಮೃತ್ಯು…!!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ.30, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನಿಗೆ ಓವರ್ ಡೋಸ್ ಔಷಧಿ ನೀಡಿ ಸಾವನಪ್ಪಿದ ಘಟನೆ ದಾವಣಗೆರೆ ಕೆ ಬಿ ಬಡಾವಣೆಯಲ್ಲಿರುವ ಜಾಧವ್ ಕ್ಲಿನಿಕ್  ಸಂಭವಿಸಿದೆ. ನಗರದ ಕೆ ಬಿ ಬಡಾವಣೆಯಲ್ಲಿರುವ ಜಾಧವ್ ಕ್ಲಿನಿಕ್ ಗೆ ದಾವಣಗೆರೆ ಜಿಲ್ಲೆಯ ಹೊನ್ನೂರು ಗ್ರಾಮದ ಮಾರುತಿ (18) ಯನ್ನು ದಾಖಲು ಮಾಡಿದ್ರು. ರಾತ್ರಿ 8 ಗಂಟೆಯಿಂದ 9 ಗಂಟೆಯ ಒಳಗೆ ಐದು ಇಂಜೆಕ್ಷನ್, 2 ಗ್ಲೂಕೋಸ್ ನೀಡಿದ ಬಳಿಕ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ. ಆದ್ರೆ ಡಿಸ್ಚಾರ್ಜ್

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳುತ್ತಿದ್ದ ವೇಳೆ ಯುವಕ ಮೃತ್ಯು…!!! Read More »

ಕರ್ನಾಟಕ

ಶ್ರೀ ಮಹಾಗಣಪತಿ ಸೇವಾ ಸಮಿತಿ► ಕೊೖಲ-ರಾಮಕುಂಜ ಗಣೇಶೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.30, ಶ್ರೀ ಮಹಾಗಣಪತಿ ಸೇವಾ ಸಮಿತಿ ಕೊೖಲ-ರಾಮಕುಂಜ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ರಾಮಕುಂಜ ಗಣೇಶನಗರ ಶ್ರೀ ಮಹಾಗಣಪತಿ ಓಂ ಕ್ರೀಡಾಂಗಣದ ದಿ.ಆರ್ವಾರ ಸುಬ್ಬಣ್ಣ ಶೆಟ್ಟಿ ನಿರ್ಮಿತ ಶ್ರೀ ಮಹಾಗಣಪತಿ ಕಟ್ಟೆಯಲ್ಲಿ ನಡೆಯಿತು. ಶುಕ್ರವಾರ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಉಷ:ಕಾಲ ಪೂಜೆ ನಡೆಯಿತು. ಬಳಿಕ ದ್ವಾದಶ ನಾಳಿಕೇಳ ಗಣಯಾಗ ನಡೆಯಿತು. ಶಾರದನಗರ ಶ್ರೀ ಶಾರದಾಂಬ ಭಜನಾ ಮಂಡಳಿ ಮತ್ತು ಕುಂಡಾಜೆ ಶ್ರೀ ನಾಗಬ್ರಹ್ಮ ಭಜನಾ

ಶ್ರೀ ಮಹಾಗಣಪತಿ ಸೇವಾ ಸಮಿತಿ► ಕೊೖಲ-ರಾಮಕುಂಜ ಗಣೇಶೋತ್ಸವ Read More »

ಕರಾವಳಿ

ಕೊಂಬಾರು ಸ್ಮಶಾನ ಜಾಗದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ.30, ಕೊಂಬಾರು ಗ್ರಾಮ ಪಂಚಾಯಿತಿ ಹಾಗೂ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರ ಜಂಟಿ ಆಶ್ರಯದಲ್ಲಿ ಕೊಂಬಾರು ಗ್ರಾಮದ ಸ್ಮಶಾನ ಜಾಗದ ಸ್ವಚ್ಚತಾ ಕಾರ್ಯ ನಡೆಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ಕುಮಾರ್, ಪಿಡಿಓ ರಾಘವೇಂದ್ರ, ಯೋಜನೆಯ ಕೊಂಬಾರು ಒಕ್ಕೂಟ ಅಧ್ಯಕ್ಷ ಲಿಂಗಪ್ಪ ಗೌಡ ಪೊರ್ದೇಲು, ಸೇವಾಪ್ರತಿನಿಧಿಪರಮೇಶ್ವರ ಉರುಂಬಿ, ಸಿರಿಬಾಗಿಲು ಮತ್ತು ಬಿಳಿನೆಲೆ ಸೇವಾಪ್ರತಿನಿಧಿ ವಿನೋದ್ ಕೆ ಸಿ ಮೊದಲಾದವರು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಕೊಂಬಾರು ಸ್ಮಶಾನ ಜಾಗದ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!!

(ನ್ಯೂಸ್ ಕಡಬ) newskadaba.com ಕಡಬ, ಆ.29, 13 ವರ್ಷದ ಬಾಲಕನೊಬ್ಬ “ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಂಪಗಿರಾಮ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಂಪಂಗಿ ರಾಮನಗರದ ವಿನಾಯಕ ಶಾಲೆಯಲ್ಲಿ ಓದುತ್ತಿದ್ದ ಪ್ರವೀಣ್ ರಾಜ್ ಎಂದು ಹೇಳಲಾಗಿದೆ. ಬೆಂಗಳೂರಿನ ಸಂಪಗಿರಾಮ ನಗರದಲ್ಲಿರುವ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಡೆತ್ ನೋಟ್ ನಲ್ಲಿ `ಐ ವಿಲ್ ಬ್ಯಾಕ್’ ಅಂತ ಬರೆದಿಟ್ಟಿದ್ದಾನೆ. ಮೊದಲು ತಾಯಿ ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು ಎನ್ನಲಾಗಿದ್ದು, ಆ ಬಳಿಕ ಬಾಲಕನ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!! Read More »

ಕರ್ನಾಟಕ

ಮನೆಯಲ್ಲಿನ ವ್ಯವಸ್ಥೆಯನ್ನು ಸರಿ ಮಾಡಲಾಗದವನು ಸಮಾಜದ ನಾಯಕನಾಗಲು ಅನರ್ಹ►► ಪ್ರವೀಣ್ ಕುಮಾರ್ ಕೆಡೆಂಜಿ

(ನ್ಯೂಸ್ ಕಡಬ) newskadaba.com ಕಡಬ, ಆ.29, ಆಲಂಕಾರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಾಯಕತ್ವ ಶಿಬಿರ ಕಾರ್ಯಕ್ರಮ ನಡೆಯಿತು. ಪುತ್ತೂರು ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೆಡೆಂಜಿ ಶಿಬಿರವನ್ನು ಉದ್ಟಾಟಿಸಿ ಮಾತನಾಡಿ ಮನೆಯಲ್ಲಿನ ವ್ಯವಸ್ಥೆಯನ್ನು ಸರಿಮಾಡಲಾಗದವನು ಎಂದೂ ಸಮಾಜ ಸುಧಾರಣೆ ಮಾಡುವ ನಾಯಕನಾಗಲು ಅಸಾಧ್ಯ. ಪ್ರತಿಯೋಬ್ಬ ವ್ಯಕ್ತಿಯಲ್ಲಿ ನಾಯಕತ್ವದ ಗುಣ ಅಡಗಿದೆ. ಇದಕ್ಕೆ ಇಚ್ಚಾಶಕ್ತಿಯ ಜೊತೆಗೆ ವಿಶಾಲ ಮನೋದೃಷ್ಠಿ, ವಿಚಾರವನ್ನು ಗ್ರಹಿಸುವ ಶಕ್ತಿ, ತಾಳ್ಮೆ, ಆತ್ಮಸ್ಥೈರ್ಯ ಅತ್ಯಗತ್ಯ.

ಮನೆಯಲ್ಲಿನ ವ್ಯವಸ್ಥೆಯನ್ನು ಸರಿ ಮಾಡಲಾಗದವನು ಸಮಾಜದ ನಾಯಕನಾಗಲು ಅನರ್ಹ►► ಪ್ರವೀಣ್ ಕುಮಾರ್ ಕೆಡೆಂಜಿ Read More »

ಕರಾವಳಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ► ಮಕ್ಕಳಿಗೆ ಧರ್ಮ ತಿರುಳನ್ನು ಹೇಳಿಕೊಡುವಲ್ಲಿ ತಾಯಂದಿರ ಪಾತ್ರ ಮಹತ್ವದ್ದು ► ಕತ್ತಲ್ಸಾರ್

(ನ್ಯೂಸ್ ಕಡಬ) newskadaba.com ಕಡಬ, ಆ.29, ಮರ್ದಾಳ ಶ್ರೀ ಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿಜ್ರಂಭನೆಯಿಂದ ನಡೆಯಿತು. ಧಾರ್ಮಿಕ ಸಭೆಯಲ್ಲಿ ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಹಿಂದೂಧರ್ಮದ ಮೇಲೆ ಅನೇಕ ಪರಕೀಯ ದಾಳಿ ಆದರೂ ಅದನ್ನು ತಡೆದುಕೊಂಡಿದೆ. ಸ್ವಾತಂತ್ರ್ಯ ಬಳಿಕದಲ್ಲಿ ಮತಾಂತರ ದೇವರ ಅವಹೇಳನದಂತಹ ವೈಚಾರಿಕ ದಾಳಿ ನಡೆಯುತ್ತಿದೆ. ಇಂತಹ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಮೆಟ್ಟಿ ನಿಲ್ಲಬೇಕಾದರೆ ಇಂದು ಮಕ್ಕಳಿಗೆ ಧರ್ಮದ ತಿರುಳನ್ನು ಯುವ ಪೀಳಿಗೆಗೆ ತಿಳಿಸಯಪಡಿಸುವ ಕಾರ್ಯವಾಗಬೇಕು ಕರ್ನಾಟಕ ಸಂಸ್ಕಾರ ಭಾರತಿ ಲೋಕಕಲಾ

ಸಾರ್ವಜನಿಕ ಶ್ರೀ ಗಣೇಶೋತ್ಸವ ► ಮಕ್ಕಳಿಗೆ ಧರ್ಮ ತಿರುಳನ್ನು ಹೇಳಿಕೊಡುವಲ್ಲಿ ತಾಯಂದಿರ ಪಾತ್ರ ಮಹತ್ವದ್ದು ► ಕತ್ತಲ್ಸಾರ್ Read More »

ಕರಾವಳಿ
Scroll to Top