Kadaba

ಕಡಬ: ವಿಜೃಂಭಣೆಯಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ► ಕಡಬದಿಂದ ಹೊಸ್ಮಠ ವರೆಗೆ ಮೆರವಣಿಗೆಯಲ್ಲಿ ಸಾಗಿ ವಿಸರ್ಜನೆ

(ನ್ಯೂಸ್ ಕಡಬ) newskadaba.com ಕಡಬ, ಆ.27. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 44 ನೇ ವರ್ಷದ ಕಡಬ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.25 ರಿಂದ 27 ರವರೆಗೆ ಬಹಳ ವಿಜೃಂಭಣೆಯಿಂದ ನಡೆಯಿತು. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 25 ಶುಕ್ರವಾರದಂದು ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿ, ಆಗಸ್ಟ್ 27 ನೇ ಭಾನುವಾರ ಸಂಜೆ ಕಡಬ ಪೇಟೆಯಿಂದ ಬಹಳ ವಿಜೃಂಭಣೆಯಿಂದ ಮೆರವಣಿಗೆ ಮೂಲಕ ಹೊಸ್ಮಠ ಕ್ಕೆ ತೆರಳಿ ಸೇತುವೆಯ ಕೆಳಭಾಗದಲ್ಲಿ ವಿಸರ್ಜಿಸಲಾಯಿತು. ಧಾರ್ಮಿಕ ಮುಖಂಡರು,

ಕಡಬ: ವಿಜೃಂಭಣೆಯಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ► ಕಡಬದಿಂದ ಹೊಸ್ಮಠ ವರೆಗೆ ಮೆರವಣಿಗೆಯಲ್ಲಿ ಸಾಗಿ ವಿಸರ್ಜನೆ Read More »

ಕರಾವಳಿ

ಇಂದು ಕಡಬದಲ್ಲಿ ಬುರ್ಖಾ ಪ್ಯಾಲೇಸ್ ಶುಭಾರಂಭ ► ವಿವಿಧ ವಿನ್ಯಾಸದ ಬುರ್ಖಾಗಳ ಸುಸಜ್ಜಿತ ಮಳಿಗೆ

(ನ್ಯೂಸ್ ಕಡಬ) newskadaba.com ಕಡಬ, ಆ.27. ಮುಸಲ್ಮಾನ ಮಹಿಳೆಯರು ಧರಿಸುವಂತಹ ವಿವಿಧ ವಿನ್ಯಾಸದ ರೆಡಿಮೇಡ್ ಹಾಗೂ ಸ್ಟಿಚಿಂಗ್ ಬುರ್ಖಾಗಳ ಸುಸಜ್ಜಿತ ಮಳಿಗೆ ‘ಬುರ್ಖಾ ಪ್ಯಾಲೇಸ್’ ಇಲ್ಲಿನ ಮುಖ್ಯಪೇಟೆಯ ಅನುಗ್ರಹ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಆದಿತ್ಯವಾರದಂದು ಶುಭಾರಂಭಗೊಳ್ಳಲಿದೆ‌. ಅರೇಬಿಕ್ ವಿನ್ಯಾಸಗಳಾದ ಅಬಯ, ನಿಕಾಬ್, ಬುರ್ಖಾ, ಪರ್ಷಿಯನ್ ಚಾದರ್, ದುಪಟ್ಟಾ, ಸಲ್ವಾರ್ ಕಮೀಝ್ ಗಳಲ್ಲದೆ ನವನವೀನ ವಿನ್ಯಾಸಗಳ ಉತ್ತಮ ಗುಣಮಟ್ಟದ ಬುರ್ಖಾಗಳ ಹೊಲಿಗೆಯನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ಪಾಲುದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9663189916 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಇಂದು ಕಡಬದಲ್ಲಿ ಬುರ್ಖಾ ಪ್ಯಾಲೇಸ್ ಶುಭಾರಂಭ ► ವಿವಿಧ ವಿನ್ಯಾಸದ ಬುರ್ಖಾಗಳ ಸುಸಜ್ಜಿತ ಮಳಿಗೆ Read More »

ಕರಾವಳಿ

ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ► ಸೌಹಾರ್ದತೆಗೆ ಸಾಕ್ಷಿಯಾದ ಗ್ರಾಮೀಣ ಪ್ರದೇಶವಾದ ಮರ್ಧಾಳ

(ನ್ಯೂಸ್ ಕಡಬ) newskadaba.com ಕಡಬ, ಆ.26. ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಆಶ್ರಯದಲ್ಲಿ ಮರ್ಧಾಳ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೆಶೋತ್ಸವದಲ್ಲಿ ಮುಸ್ಲಿಂ ಮುಖಂಡರು ಭಾಗವಹಿಸಿ ಸೌಹಾರ್ದತೆ ಮೆರೆದರು.   ಶುಕ್ರವಾರದಂದು ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಮಸೀದಿಯ ಆಡಳಿತ ಸಮಿತಿಯ ಉಪಾಧ್ಯಕ್ಷರಾದ ಇಬ್ರಾಹಿಂ ಮುಸ್ಲಿಯಾರ್, ಕಾರ್ಯದರ್ಶಿ ಹನೀಫ್, ಸದಸ್ಯರಾದ ಮಹಮ್ಮದ್ ಕೆ., ಅಬ್ದುಲ್ ರಹಿಮಾನ್, ಲತೀಫ್ ಕೆಜಿಎನ್, ಯೂನುಸ್ ಕೋಡಿಕಂಡ, ಸತ್ತಾರ್ ಪನ್ಯ, ಬಶೀರ್ ಮರ್ಧಾಳ,

ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ► ಸೌಹಾರ್ದತೆಗೆ ಸಾಕ್ಷಿಯಾದ ಗ್ರಾಮೀಣ ಪ್ರದೇಶವಾದ ಮರ್ಧಾಳ Read More »

ಕರಾವಳಿ

ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆ ► ಕೊೖಲದಲ್ಲಿ ಗೋಕುಲ ಗ್ರಾಮ ಅನುಷ್ಠಾನಕ್ಕೆ ಮುನ್ನುಡಿ

(ನ್ಯೂಸ್ ಕಡಬ) newskadaba.com ಕಡಬ, ಆ.25, ಪಾಳುಬಿದ್ದಿದ್ದ ಕೊೖಲ ಪಶು ಸಂಗೋಪನ ಕ್ಷೇತ್ರ ಕಳೆದ ನಾಲ್ಕೈದು ವರ್ಷದಳಿಂದ ಹಲವಾರು ಕಾರಣಗಳಿಗಾಗಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಹೆಸರು ಮಾಡುತ್ತಿದೆ. ಡಿ.ವಿ.ಸದಾನಂದ ಗೌಡರು ಇಲ್ಲಿಗೆ ಪಶುವೈದ್ಯಕೀಯ ಕಾಲೇಜು ಘೋಷಣೆ ಮಾಡಿ ಈಗ ಸಿದ್ದರಾಮಯ್ಯ ಕಾಲದಲ್ಲಿ ಅದು ಅನುಷ್ಠಾನವಾಗುತ್ತಿರುವುದು ಒಂದೆಡೆಯಾದರೆ ಇತ್ತ ಕೇಂದ್ರ ಸರಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆಗಾಗಿ ಕ್ಷೇತ್ರದಲ್ಲಿ ಗೋಕುಲ ಗ್ರಾಮ ಅನುಷ್ಠಾನ ಮಾಡಲು ಮುನ್ನುಡಿ ಬರೆಯಲಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ

ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆ ► ಕೊೖಲದಲ್ಲಿ ಗೋಕುಲ ಗ್ರಾಮ ಅನುಷ್ಠಾನಕ್ಕೆ ಮುನ್ನುಡಿ Read More »

ಕರಾವಳಿ

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಧಾರವಾಡ, ಆ.25, ರೌಡಿಶೀಟರ್ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಂಜುನಾಥ್ ಬಸಪ್ಪ ಕೌದಿ(25) ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಕಳ್ಳತನ ಮಾಡಿರುವ ಆರೋಪದ ಮೇಲೆ ವಿಚಾರಣೆಗೆ ಆಗಮಿಸಿದಾಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಇನ್ಸ್ ಪೆಕ್ಟರ್ ಮಾರುತಿ ಗುಳ್ಳಾರಿ ಸೇರಿದಂತೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಆರೋಪಿ ಮಂಜುನಾಥ್ ಪೊಲೀಸರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶುಕ್ರವಾರ ಠಾಣೆಗೆ ಬಂದು ಏಕಾಏಕಿ

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು Read More »

ಕರ್ನಾಟಕ

ರಸ್ತೆ ಬದಿಯ ಮೀನು ಮಾರಾಟ ಗೊಂದಲ ► ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಮೀನು ಮಾರಾಟಗಾರ

(ನ್ಯೂಸ್ ಕಡಬ) newskadaba.com ಕಡಬ, ಆ.25, ಆಲಂಕಾರಿನ ರಾಜ್ಯ ಹೆದ್ದಾರಿಬದಿಯಲ್ಲಿ ಹಸಿಮೀನು ಮಾರಾಟ ಗೊಂದಲ ಇನ್ನೂ ಜೀವಂತವಾಗಿದ್ದು ಗುರುವಾರ ರಸ್ತೆ ಬದಿಯಲ್ಲಿ ಹಸಿ ಮೀನು ಮಾರಾಟ ಮಾಡುವುದನ್ನು ತೆರವು ಮಾಡಲು ಬಂದ ಲೋಕೋಪಯೋಗಿ ಇಲಾಖಾ ಇಂಜಿನಿಯರ್ ಬರಿಗೈಯಲ್ಲಿ ವಾಪಾಸ್ಸಾದ ಘಟನೆ ನಡೆದಿದೆ. ಮೀನು ಮಾರಾಟಗಾರ ಹಾಗೂ ಕೆಲವರು ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಪರಿಣಾಮ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಾಸ್ಸಾಗಿರುವುದರಿಂದ ಪ್ರಕರಣ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಆಲಂಕಾರು ಪೇಟೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ

ರಸ್ತೆ ಬದಿಯ ಮೀನು ಮಾರಾಟ ಗೊಂದಲ ► ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಮೀನು ಮಾರಾಟಗಾರ Read More »

ಕರಾವಳಿ

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಆ.25, ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಶುಕ್ರವಾರ ನಡೆದಿದೆ.   ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮುಂಡಗೋಡ, ಆ.25, ಗಣೇಶ ಚತುರ್ಥಿಯ ಮುನ್ನಾದಿನ ಹಬ್ಬದ ಸಂಭ್ರಮದಲ್ಲಿ ಇರಬೇಕಿದ್ದ ನವ ದಂಪತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದ ಬಾಚಣಕಿ ಜಲಾಶಯದಲ್ಲಿ ನಡೆದಿದೆ. ಯೋಗೀಶ್ ಮತ್ತು ಅಶ್ವಿನಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಹುಬ್ಬಳ್ಳಿಯ ಹೋಸೂರು ಮೂಲದವರಾದ ಇವರು ಕಾರಿನ ಮೂಲಕ ಮುಂಡಗೋಡದ ಬಾಚಣಿಕೆ ಜಲಾಶಯಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಗಳ ಸಾವಿಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಡಿಕೊಳ್ಳುವ ಪೂರ್ವದಲ್ಲಿ ಬರೆದಿಟ್ಟಿದ್ದ ಡೆತ್ ನೋಟ್ ಸಿಕ್ಕಿದೆ. ಡೆತ್’ನೋಟ್ ನಲ್ಲಿ ತಮ್ಮಿಬ್ಬಿರ

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.25, ಪೋಷಕರೇ ಎಚ್ಚರ… ಎಚ್ಚರ…. ನಿಮ್ಮ ಮಕ್ಕಳ ಕೈಗೆ ಮೊಬೈಲ್ ನೀಡೋ ಅಭ್ಯಾಸ ಮಾಡಿದ್ದರೆ ಇಂದೇ ಕೊನೆಯಾಗಲಿ, ವಿಶ್ವಾದ್ಯಂತ ಹಲವು ಜೀವಗಳನ್ನ ಬಲಿ ಪಡೆದ ಡೆಡ್ಲಿ ಬ್ಲೂವೇಲ್ ಗೇಮ್ ಈಗ ನಮ್ಮ ರಾಜ್ಯಕ್ಕೂ ಕಾಲಿಟ್ಟಿದೆ. ಬ್ಲೂವೇಲ್ ಗೇಮ್ ಆಡುತ್ತಾ 11 ವರ್ಷದ ಪೋರಿ ಬೆರಳು ಕುಯ್ದುಕೊಂಡ ಘಟನೆ ಹುಬ್ಬಳ್ಳಿಯ ರಾಜನಗರದಲ್ಲಿ ನಡೆದಿದೆ. ಮನೆಯಲ್ಲಿ ಬೆರಳು ಕುಯ್ದುಕೊಂಡ ವಿದ್ಯಾರ್ಥಿನಿ ಹಾಗೆಯೇ ಶಾಲೆಗೆ ಬಂದಿದ್ದಾಳೆ. ಇದನ್ನು ಗಮನಿಸಿದ ವಿದ್ಯಾರ್ಥಿನಿಯ ಗೆಳೆಯರು ಶಾಲಾ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ Read More »

ಕರ್ನಾಟಕ
Scroll to Top