Kadaba

ಮುಂದಿನ ಮುಖ್ಯಮಂತ್ರಿ ನಾನೇ ಎನ್ನುತ್ತಿದ್ದ ಸಿದ್ಧರಾಮಯ್ಯ ತಣ್ಣಗಾಗಿದ್ದೇಕೆ…? ► ಅವರು ಹಠಾತ್ತಾಗಿ ರಾಗ ಬದಲಿಸಲು ಕಾರಣವಾದರೂ ಏನು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. 2018ರ ಚುನಾವಣೆಯಲ್ಲೂ ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದ ಸಿದ್ಧರಾಮಯ್ಯ ಇದೀಗ ರಾಗ ಬದಲಿಸಿದ್ದು, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯುತ್ತದೆ. ನಂತರ ಮುಖ್ಯಮಂತ್ರಿ ಯಾರೆಂಬುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಣ್ಣಗಾಗಿದ್ದಾರೆ. ಇಂದು ನೆಲಮಂಗಲ ತಾಲೂಕಿನ ಹಾಲಿಡೇ ಫಾರ್ಮ್ಸ್ ಹೋಟೆಲಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹಾಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿದ ನಂತರ ಸಿ.ಎಂ. ಸಿದ್ಧರಾಮಯ್ಯ ತಣ್ಣಗಾದಂತಿದೆ.  ಈ […]

ಮುಂದಿನ ಮುಖ್ಯಮಂತ್ರಿ ನಾನೇ ಎನ್ನುತ್ತಿದ್ದ ಸಿದ್ಧರಾಮಯ್ಯ ತಣ್ಣಗಾಗಿದ್ದೇಕೆ…? ► ಅವರು ಹಠಾತ್ತಾಗಿ ರಾಗ ಬದಲಿಸಲು ಕಾರಣವಾದರೂ ಏನು Read More »

ಕರ್ನಾಟಕ

ಗುರುವಾರ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com ಕಡಬ, ಆ.22. ವಿದ್ಯುತ್ ಮಾರ್ಗದಲ್ಲಿನ ತುರ್ತು ಕಾಮಗಾರಿ ನಡೆಯಲಿರುವುದರಿಂದ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ಆ.24 ಗುರುವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗುರುವಾರ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ಕಡಿತ Read More »

ಕರಾವಳಿ

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ತಂದೆ-ಮಗ ►20 ವರ್ಷಗಳ ನಂತರ ಮರಳಿ ಗೂಡಿಗೆ

(ನ್ಯೂಸ್ ಕಡಬ) newskadaba.com ಮೈಸೂರು, ಆ.22, ಕಾರಣಾಂತರಗಳಿಂದ 20 ವರ್ಷಗಳ ಹಿಂದೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ಮಂಡ್ಯ ಜಿಲ್ಲೆಯ ಸೈಯದ್ ಅಬ್ಬಾಸ್ ಮತ್ತು ಅವರ ಪುತ್ರ ಸೈಯದ್ ಅತಿಕ್ ಅವರು ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಮೈಸೂರಿನ ದೇವರಾಜ ಮೊಹಲ್ಲಾದ ಆರ್ಯ ಭವನದಲ್ಲಿ “ಘರ್ ವಾಪಸಿ” ಕಾರ್ಯಕ್ರಮ ನಡೆಯಿತು. ಮೂಲತಃ ಹಿಂದೂ ಧರ್ಮದವರಾಗಿದ್ದ ಸೈಯದ್ ಅಬ್ಬಾಸ್ ಈ ಕಾರ್ಯಕ್ರಮದಲ್ಲಿ ಮುಸ್ಲಿಂ ಧರ್ಮವನ್ನು ತ್ಯಜಿಸಿ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾದರು. ಸಾಂಪ್ರದಾಯಿಕವಾಗಿ ಜನಿವಾರ ಧರಿಸಿ ಹೋಮ, ಹವನ

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ತಂದೆ-ಮಗ ►20 ವರ್ಷಗಳ ನಂತರ ಮರಳಿ ಗೂಡಿಗೆ Read More »

ಕರ್ನಾಟಕ

ಇನ್ಮುಂದೆ ಪಾಸ್‍ಪೋರ್ಟ್‍ಗಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಬೇಕಿಲ್ಲ ►ಪಾಸ್‍ಪೋರ್ಟ್ ಸುಲಭವಾಗಿ ನಿಮ್ಮ ಕೈ ಸೇರುವುದು ಹೇಗೆ ಅಂತೀರಾ..???

(ನ್ಯೂಸ್ ಕಡಬ) newskadaba.com ನವದೆಹಲಿ, ಆ.22. ಪೊಲೀಸ್ ವೆರಿಫಿಕೇಷನ್ ನಿಂದಾಗಿ ಸರಿಯಾದ ಸಮಯಕ್ಕೆ ಪಾಸ್‍ಪೋರ್ಟ್ ವಿತರಣೆಯಾಗದೆ ವಿಳಂಬವಾಗುವ ದಿನಗಳು ಶೀಘ್ರದಲ್ಲೇ ಕೊನೆಯಾಗಲಿದೆ. ಇನ್ಮುಂದೆ ಪಾಸ್‍ಪೋರ್ಟ್‍ಗಳಿಗೆ ಆನ್‍ಲೈನ್ ವೆರಿಫಿಕೇಷನ್ ವ್ಯವಸ್ಥೆ ತರಲು ಸರ್ಕಾರ ಚಿಂತಿಸಿದೆ. ಅಪರಾಧಿಗಳು ಹಾಗೂ ಅಪರಾಧಗಳ ಬಗ್ಗೆ ಹೊಸದಾಗಿ ನ್ಯಾಷನಲ್ ಡೇಟಾಬೇಸ್ ಸೃಷ್ಟಿಸಲಾಗಿದ್ದು ಇದರ ಲಿಂಕ್ ಬಳಸಿ ಪಾಸ್‍ಪೋರ್ಟ್ ಅರ್ಜಿದಾರರ ಪೂರ್ವಾಪರಗಳ ಬಗ್ಗೆ ಆನ್‍ಲೈನ್ ವೆರಿಫಿಕೇಷನ್ ಮಾಡಲು ಸರ್ಕಾರ ಯೋಚಿಸಿದೆ. ಕೆಂದ್ರ ಗೃಹ ಸಚಿವಾಲಯದ ಕ್ರೈಮ್ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವಕ್ರ್ಸ್ ಅಂಡ್ ಸಿಸ್ಟಮ್ಸ್(ಸಿಸಿಟಿಎನ್‍ಎಸ್)ನ ಭಾಗವಾಗಿ ಸೋಮವಾರದಂದು ನ್ಯಾಷನಲ್

ಇನ್ಮುಂದೆ ಪಾಸ್‍ಪೋರ್ಟ್‍ಗಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಬೇಕಿಲ್ಲ ►ಪಾಸ್‍ಪೋರ್ಟ್ ಸುಲಭವಾಗಿ ನಿಮ್ಮ ಕೈ ಸೇರುವುದು ಹೇಗೆ ಅಂತೀರಾ..??? Read More »

ರಾಷ್ಟ್ರೀಯ ನ್ಯೂಸ್

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಆ .22, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ಶಾಲೆಗೆ ಕೊಲ್ಲೂರು ದೇವಾಲಯದ ದತ್ತು ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಶಾಲೆಗೆ ಮಂಗಳವಾರ ಭೇಟಿ ನೀಡಿದ್ದಾರೆ. ಈ ಶಾಲೆಗೆ ಸರ್ಕಾರ ಅನುದಾನ ಕೊಡದಿದ್ದರೂ ಪರವಾಗಿಲ್ಲ, ಅವರ ಶಾಲೆಯನ್ನ ಉಳಿಸಲು ನಾನು ಮತ್ತು ನನ್ನ ಗೆಳೆಯರು ಸೇರಿ ಶಾಲೆಗೆ 26 ಲಕ್ಷ ನೀಡುವುದರ ಮೂಲಕ ಭಿಕ್ಷಾಂದೇಹಿ ಆಂದೋಲನಕ್ಕೆ ಬೆಂಬಲಿಸುತ್ತೇವೆ  ಎಂದು ಹೇಳಿದ್ದಾರೆ. ಬೆಳಗ್ಗೆ ಶಾಲಾ ಪ್ರಾರ್ಥನ ಸಮಯದಲ್ಲಿ ಕಲ್ಲಡ್ಕ

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ Read More »

ಕರಾವಳಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ .22,  ಕೇಪು ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ವರ್ಷಂಪ್ರತಿ ನಡೆಸಲ್ಪಡುವ  11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಕಾರ್ಯಕ್ರಮ ಆದಿತ್ಯವಾರ ಕುಟ್ರುಪ್ಪಾಡಿ ಗ್ರಾಮದ ಕೇಪು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಫ್ರೆಂಡ್ಸ್‌ ಕ್ಲಬ್ ನ ಅಧ್ಯಕ್ಷರಾದ ಮಹೇಶ್ ಕುಂಟೋಡಿ ಅಧ್ಯಕ್ಷತೆ ವಹಿಸಿದ್ದರು. ಕಡಬ ಸಿಎ ಬ್ಯಾಂಕಿನ ಅಧ್ಯಕ್ಷರಾದ ಸುಂದರ ಗೌಡ ಮಂಡೆಕರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಹಾಗು ವಿವಿಧ ಸ್ಪರ್ಧೆಗಳಲ್ಲಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ Read More »

ಕರಾವಳಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

(ನ್ಯೂಸ್ ಕಡಬ) newskadaba.com ಕಡಬ, ಆ .22, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ನೂಜಿಬಾಳ್ತಿಲ ಶಾಲಾಭಿವೃದ್ದಿ ಸಮಿತಿ, ಶಾಲಾ ಮೇಲುಸ್ತುವಾರಿ ಸಮಿತಿ ವತಿಯಿಂದ ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2017-18 ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲೆಯಲ್ಲಿ ಸೋಮವಾರ ನಡೆಯಿತು. ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ದೀಪ ಪ್ರಜ್ವಲನಗೊಳಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಇಂದು ಇಲ್ಲಿ ಬೆಳಗಿಸಿದ ಜ್ಯೋತಿಯಂತೆ ಈ ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಬೆಳಕಾಗಲಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಕರಾವಳಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .22, ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಬರ್ಬರವಾಗಿ ಹತ್ಯೆಗೈದ ಘಟನೆ ಶ್ರೀರಾಂಪುರದಲ್ಲಿ ಮಂಗಳವಾರ ಮುಂಜಾನೆ ಬೆಳಕಿಗೆ ಬಂದಿದೆ. 45 ವರ್ಷದ ಜಾನಕಿ ತನ್ನ ಪತಿ ಚಂದ್ರಶೇಖರ್ ಎಂಬಾತನಿಂದಲೇ ಕೊಲೆಯಾಗಿದ್ದಾರೆ. ಈ ದಂಪತಿಗೆ 2 ಹೆಣ್ಣು, 4 ಗಂಡು ಮಕ್ಕಳಿದ್ದಾರೆ. ಮಂಗಳವಾರ ಮುಂಜಾನೆ  4 ಗಂಟೆ ಸುಮಾರಿಗೆ ಹಸಿವಿನಿಂದ ಎದ್ದ ಮಗು ತಾಯಿಯ ಬಳಿ ತೆರಳಿ ಕರೆದು ಎಬ್ಬಿಸತೊಡಗಿದೆ. ಆದ್ರೆ ತಾಯಿ ಯಾವುದೇ ಪ್ರತಿಕ್ರೀಯೆ ನೀಡದ ಹಿನ್ನಲೆಯಲ್ಲಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ Read More »

ಕರ್ನಾಟಕ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com ಕೊಪ್ಪಳ, ಆ .22, ನೀರು ತುಂಬಿದ್ದ ಬಕೆಟ್‍ನಲ್ಲಿ ಮಗು ಬಿದ್ದು ಮೃತಪಟ್ಟಿರೋ ಹೃದಯವಿದ್ರಾವಕ ಘಟನೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ. ನಗರದ ಶರಣಬಸವೇಶ್ವರ ಕ್ಯಾಂಪಿನ ನಿವಾಸಿಗಳಾದ ಹಸೀನಾ ಹಾಗೂ ಆಟೋ ಚಾಲಕ ಮೌಲಹುಸೇನ್ ಎಂಬುವರ ಒಂದು ವರ್ಷದ ರೀಯಾನ್ ಮೃತ ಮಗು. ಮನೆಯವರೆಲ್ಲಾ ಹೊರಗೆ ಕುಳಿತ ಸಂದರ್ಭದಲ್ಲಿ ಮಗು ಆಟವಾಡುತ್ತಾ ಮನೆಯೊಳಗೆ ಹೋಗಿತ್ತು. ಆಟ ಆಡುತ್ತಿರಬಹುದು ಎಂದು ಪಾಲಕರು ಸುಮ್ಮನಿದ್ದಾರೆ. ಆದರೆ ತುಂಬ ಹೊತ್ತಾದರೂ ಮಗು ಬಾರದ್ದರಿಂದ ಅನುಮಾನಗೊಂಡ ತಾಯಿ ಮನೆಯೊಳಗೆ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು Read More »

ಕರಾವಳಿ

ಮೊಟ್ಟೆ ಒಡೆದು, ನಿಂಬೆಹಣ್ಣು ಕುಯ್ದು ► ಸರ್ಕಾರಿ ಆಸ್ಪತ್ರೆಯಲ್ಲೇ ವಾಮಾಚಾರ

(ನ್ಯೂಸ್ ಕಡಬ) newskadaba.com ಮೈಸೂರು, ಆ .21, ಮೂರು ಕಡೆ ಕೂಡುವ ರಸ್ತೆಯಲ್ಲಿ, ಮನೆ ಹಾಗೂ ಕಚೇರಿ ಮುಂಭಾಗದ ರಸ್ತೆಗಳಲ್ಲಿ ವಾಮಾಚಾರ ಮಾಡುವುದನ್ನು ನೋಡಿದ್ದೇವೆ… ಆದರೆ ಪ್ರಾಥಮಿಕ ಆರೋಗ್ಯ ಕೇಂದ್ರ ಕಚೇರಿಯಲ್ಲಿ ವಾಮಾಚಾರ ನಡೆದಿರುವುದು ವೈದ್ಯರೂ ಸೇರಿದಂತೆ ಎಲ್ಲರಿಗೂ ಶಾಕ್ ನೀಡಿದೆ. ಇಂತಹದೊಂದು ಘಟನೆ ಮೈಸೂರಿನ ಕೆ.ಆರ್. ನಗರದಲ್ಲಿ ಸೋಮವಾರ ನಡೆದಿದೆ‌‌. ಕೆ.ಆರ್.ನಗರ ತಾಲೂಕಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಯ೯ಗ್ರಹಣ ಹಾಗೂ ಅಮವಾಸ್ಯೆ ಇರುವ ದಿನದಂದು ವಾಮಾಚಾರ ಮಾಡಿರುವುದರಿಂದ ಇಲ್ಲಿನ ಸಿಬ್ಬಂದಿ ಹಾಗೂ ವೈದ್ಯರು ಶಾಕ್ ಆಗಿದ್ದಾರೆ.

ಮೊಟ್ಟೆ ಒಡೆದು, ನಿಂಬೆಹಣ್ಣು ಕುಯ್ದು ► ಸರ್ಕಾರಿ ಆಸ್ಪತ್ರೆಯಲ್ಲೇ ವಾಮಾಚಾರ Read More »

ಕರ್ನಾಟಕ
Scroll to Top