Kadaba

ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ.07. ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆಯು ಕುಟುಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರದಂದು ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಎ.ವಿ. ತೀರ್ಥಾರಾಮರವರು ಮಾತನಾಡಿ, ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರತಿಯೊಂದು ಗ್ರಾಮಕ್ಕೂ ವಿಸ್ತಾರಕರಾಗಿ ತೆರಳಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಹಾಗೂ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಜನಪ್ರಿಯ ಯೋಜನೆಗಳನ್ನು ಪ್ರತೀ ಮನೆಗೂ ತಿಳಿಸುವ ಬಗ್ಗೆ ಮಾರ್ಗದರ್ಶನ […]

ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ Read More »

ಕರಾವಳಿ

ಹಟ್ಟಿಯ ಮೇಲೆ ಗುಡ್ಡ ಜರಿದು 4 ಹಸುಗಳ ದಾರುಣ ಸಾವು

(ನ್ಯೂಸ್ ಕಡಬ) newskadaba.com ಕಡಬ, ಆ.05. ಗುಡ್ಡದ ಬದಿಯಲ್ಲಿದ್ದ ಹಟ್ಟಿಯೊಂದರ ಮೇಲೆ ಗುಡ್ಡ ಜರಿದು 4 ದನಗಳು ದಾರುಣವಾಗಿ ಸಾವಿಗೀಡಾದ ಘಟನೆ ಶನಿವಾರದಂದು ಪುತ್ತೂರು ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಕುಡಾಲ ಎಂಬಲ್ಲಿ ನಡೆದಿದೆ. ಕುಡಾಲ ನಿವಾಸಿ ಕೃಷಿಕ ಸುಭಾಶ್ಚಂದ್ರ ಎಂಬವರು ತನ್ನ ಮನೆಯ ಪಕ್ಕದಲ್ಲೇ ಹಟ್ಟಿ ನಿರ್ಮಿಸಿ ಹೈನುಗಾರಿಕೆ ನಡೆಸುತ್ತಿದ್ದರು. ಶನಿವಾರದಂದು ಸಂಜೆ ಸುರಿದ ಮಳೆಗೆ ಗುಡ್ಡ ಜರಿದು ಹಟ್ಟಿಯ ಮೇಲೆ ಬಿದ್ದ ಪರಿಣಾಮ 3 ದನ, 3 ಕರುಗಳು ಮಣ್ಣಿನಡಿಯಲ್ಲಿ ಬಾಕಿಯಾಗಿದ್ದವು. ಜೆಸಿಬಿ ಮೂಲಕ

ಹಟ್ಟಿಯ ಮೇಲೆ ಗುಡ್ಡ ಜರಿದು 4 ಹಸುಗಳ ದಾರುಣ ಸಾವು Read More »

ಕರಾವಳಿ

ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ: ಕೃಷ್ಣ ಶೆಟ್ಟಿ ಲೇವಡಿ

(ನ್ಯೂಸ್ ಕಡಬ) newskadaba.com ಕಡಬ, ಆ.04. ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿಯ ಬಗ್ಗೆ ಐಟಿ ದಾಳಿಯನ್ನು ಖಂಡಿಸಿ ಕಡಬದಲ್ಲಿ ಕಾಂಗ್ರೇಸ್ ಮಾಡಿರುವ ಪ್ರತಿಭಟನೆ ಭ್ರಷ್ಟಾಚಾರ ಪರ ಹೋರಾಟವಾಗಿದ್ದು ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಲೇವಡಿ ಮಾಡಿದ್ದಾರೆ. ಹೇಳಿಕೆ ನೀಡಿರುವ ಅವರು ಕಳೆದ 70 ವರ್ಷಗಳಿಂದ ದೇಶವನ್ನು ಲೂಟಿ ಮಾಡಿರುವ ಕಾಂಗ್ರೇಸ್ ಮುಖಂಡರ ಅಕ್ರಮವನ್ನು ಅಧಿಕಾರಿಗಳು ತನಿಖೆ ನಡೆಸುವುದಕ್ಕೂ ಕಾಂಗ್ರೇಸ್ ಅಡ್ಡಿಪಡಿಸುತ್ತಿದೆ. ಇವರ ಹೋರಾಟ ಭ್ರಷ್ಟಾಚಾರದ ಪರವಾಗಿದೆ ಎನ್ನುವುದನ್ನು

ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ: ಕೃಷ್ಣ ಶೆಟ್ಟಿ ಲೇವಡಿ Read More »

ಕರಾವಳಿ

ಸಚಿವ ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ► ಕಡಬ ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.04. ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖಾಧಿಕಾರಿಗಳು ದಾಳಿ ನಡೆಸಿರುವುದರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೇಸ್ ವತಿಯಿಂದ ಶುಕ್ರವಾರದಂದು ಕಡಬ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು. ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ದಿವಾಕರ ಗೌಡ ಶೀರಾಡಿ ಅವರ ನೇತೃತ್ವದಲ್ಲಿ ತಹಶಿಲ್ದಾರ್ ಕಛೇರಿ ಎದುರು ಜಮಾಯಿಸಿದ ಕಾಂಗ್ರೇಸ್ ಕಾರ್ಯಕರ್ತರು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ

ಸಚಿವ ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ► ಕಡಬ ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ Read More »

ಕರಾವಳಿ

ಆಗಸ್ಟ್‌ 13 ರಂದು ಕಡಬದಲ್ಲಿ ಅಖಂಡ ಭಾರತ ಸಂಕಲ್ಪ ದಿನ ► ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ

(ನ್ಯೂಸ್ ಕಡಬ) newskadaba.com ಕಡಬ, ಆ.04. ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಆಗಸ್ಟ್‌ 13 ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ ಹೇಳಿದರು. ಅವರು ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, 71 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 1947 ರ ಆಗಸ್ಟ್‌ 14 ಮಧ್ಯರಾತ್ರಿ ದೇಶವಿಭನೆಯ ಕರಾಳ ದುರಂತವನ್ನು

ಆಗಸ್ಟ್‌ 13 ರಂದು ಕಡಬದಲ್ಲಿ ಅಖಂಡ ಭಾರತ ಸಂಕಲ್ಪ ದಿನ ► ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ Read More »

ಕರಾವಳಿ

ಕೋಡಂದೂರು: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.04. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೋಡಂದೂರು ಎಂಬಲ್ಲಿ ಸ್ವಿಫ್ಟ್ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ನಿವಾಸಿಗಳಾದ ಸತೀಶ್ ಹಾಗೂ ಗಫೂರ್ ಎಂದು ಗುರುತಿಸಲಾಗಿದ್ದು, ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಡಂದೂರು: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ Read More »

ಕರಾವಳಿ

ದಾರುನ್ನೂರ್ ದೇರಾ ಸಮಿತಿಗೆ ನೂತನ ಸಾರಥ್ಯ ► ಅಧ್ಯಕ್ಷರಾಗಿ ಉಸ್ತಾದ್ ಶರೀಫಿ ಅಶ್ರಫಿ, ಕಾರ್ಯದರ್ಶಿಯಾಗಿ ಇಲ್ಯಾಸ್ ಕಡಬ

(ನ್ಯೂಸ್ ಕಡಬ) newskadaba.com ದುಬೈ, ಆ.04. ದಾರುನ್ನೂರ್ ದೇರಾ ಸಮಿತಿಯ ವಾರ್ಷಿಕ ಸಭೆ ಮತ್ತು ಯುನಿಟ್ ನವೀಕರಣವು ಇತ್ತೀಚೆಗೆ ಅಶ್ರಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ರೋಯಲ್ ಮಾರ್ಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಅಶ್ರಫಿ ಉಸ್ತಾದರ ದುವಾದೊಂದಿಗೆ ಆರಂಭವಾದ ಸಭೆಯಲ್ಲಿ ಗೌರವಾದ್ಯಕ್ಷರಾದ ಅಬ್ದುಲ್ ಸಲಾಮ್ ಬಪ್ಪಲಿಗೆಯವರು ಮಾತನಾಡಿ ನೆರೆದವರನ್ನು ಸಭೆಗೆ ಸ್ವಾಗತಿಸಿದರು. ಸಭೆಯನ್ನು ಜನಾಬ್ ಅಬ್ಬಾಸ್ ಕೇಕುಡೆಯವರು ಅಲ್ಲಾಹನ ತಿರುನಾಮದೊಂದಿಗೆ ಉದ್ಘಾಟಿಸಿದರು. ನಾಸಿರ್ ಬಪ್ಪಲಿಗೆ ಯವರು ಗತ ವರ್ಷದ ವರದಿ ವಾಚಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಅನ್ಸಾಪ್ ಪಾತೂರು

ದಾರುನ್ನೂರ್ ದೇರಾ ಸಮಿತಿಗೆ ನೂತನ ಸಾರಥ್ಯ ► ಅಧ್ಯಕ್ಷರಾಗಿ ಉಸ್ತಾದ್ ಶರೀಫಿ ಅಶ್ರಫಿ, ಕಾರ್ಯದರ್ಶಿಯಾಗಿ ಇಲ್ಯಾಸ್ ಕಡಬ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಿಂಜಾವೇ ಆಲಂಕಾರು ಘಟಕಾಧ್ಯಕ್ಷರಾಗಿ ಜನಾರ್ಧನ ಕಯ್ಯಪೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಹಿಂದೂ ಜಾಗರಣ ವೇದಿಕೆ ಆಲಂಕಾರು ಘಟಕ ರಚಿಸಲಾಗಿದ್ದು ಇದರ ಅಧ್ಯಕ್ಷರಾಗಿ ಜನಾರ್ದನ ಕಯ್ಯಪೆ, ಸಂಚಾಲಕರಾಗಿ ಧನಂಜಯ ಕಜೆ ನೇಮಕಗೊಂಡಿದ್ದಾರೆ. ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಸಹಸಂಚಾಲಕರಾಗಿ ಮಲ್ಲೇಶ್ ಆಲಂಕಾರು ಇವರನ್ನು ನೇಮಕ ಮಾಡಲಾಗಿದೆ. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಗುರುವಾರದಂದು ನಡೆದ ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆ ಬೈಠಕ್ ನಲ್ಲಿ ನೂತನ ಘಟಕ ರಚಿಸಲಾಯಿತು. ಕಾರ್ಯದರ್ಶಿಯಾಗಿ ಮನೋಹರ ಬಾರಡ್ಕ,

ಹಿಂಜಾವೇ ಆಲಂಕಾರು ಘಟಕಾಧ್ಯಕ್ಷರಾಗಿ ಜನಾರ್ಧನ ಕಯ್ಯಪೆ ಆಯ್ಕೆ Read More »

ಕರಾವಳಿ

ಬಿಳಿನೆಲೆ: ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಡಬ, ಆ.03. ಪ್ರತಿಯೊಬ್ಬ ವ್ಯಕ್ತಿಯೂ ಗ್ರಾಮದ ಅಭಿವೃದ್ದಿಗೆ ಚಿಂತಿಸಿದಾಗ ಗ್ರಾಮಾಭಿವೃದ್ದಿ ಹೊಂದಲು ಸಾಧ್ಯ ಎಂದು ನಾಗರಿಕ ಹಿತರಕ್ಷಣಾ ವೇದಿಕೆಯ ವೇದಿಕೆಯ ನೇತೃತ್ವ ವಹಿಸಿದ್ದ ವಿಜಯ ಕುಮಾರ್ ಎರ್ಕ ಹೇಳಿದರು. ಅವರು ಇತ್ತೀಚೆಗೆ ಬಿಳಿನೆಲೆ ಗ್ರಾಮದ ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರಿಂದ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮನಸ್ಸಿನಲ್ಲಿ ಸ್ವಾರ್ಥವನ್ನು ಬಿಟ್ಟು ಸಮಾಜದ ಉದ್ದಾರಕ್ಕೆ ಅಪಾರ ಸೇವೆ ಸಲ್ಲಿಸಿದಾಗ ದೇಶ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ. ಪ್ರತಿಯೊಂದು ಕೆಲಸಗಳನ್ನು ಮಾಡುವಾಗ ಸರ್ಕಾರ ಅನುದಾನ ಕಾಯುವುದರಿಂದ

ಬಿಳಿನೆಲೆ: ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರರಿಂದ ಶ್ರಮದಾನ Read More »

ಕರಾವಳಿ

ಮೂರ್ತೆದಾರರ ಸಹಕಾರಿ ಸಂಘದಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ.03. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ನೀಡಿ ಸಹಕರಿಸಲಾಯಿತು. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರರವರು ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ನಿರ್ದೇಶಕರಾದ ರೆ|ಫಾ| ಆ್ಯಂಟನಿ ಒಐಸಿಯವರಿಗೆ ಸಹಾಯಧನ ಹಸ್ತಾಂತರಿಸಿ ಮಾತನಾಡಿ, ಹಣಕಾಸು ಸಂಸ್ಥೆಗಳು, ಸಹಕಾರಿ ಸಂಘಗಳು, ಉದ್ಯಮಿಗಳು ನಿಜವಾಗಿ ಸಹಕರಿಸಬೇಕಾದ ದೇವರ ಮಕ್ಕಳು ಇರುವ ಈ ಶಾಲೆಗೆ ಅತೀ ಅಗತ್ಯವಾಗಿದೆ. ಇಲ್ಲಿ ಅದೆಷ್ಟೋ ವಿವಿಧ

ಮೂರ್ತೆದಾರರ ಸಹಕಾರಿ ಸಂಘದಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ Read More »

ಕರಾವಳಿ
Scroll to Top