Kadaba

ಬಿಜೆಪಿಯ ಸೇಡಿನ ರಾಜಕೀಯದಿಂದ ಡಿಕೆಶಿ ಮೇಲೆ ಐಟಿ ದಾಳಿ ► ನಾಳೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ಸಚಿವ ಡಿ.ಕೆ.ಶಿವಕುಮಾರ್ ಮನೆ ಹಾಗೂ ಕಚೇರಿಯ ಮೇಲೆ ನಡೆದ ಆದಾಯ ತೆರಿಗೆ ಇಲಾಖೆಯ ದಾಳಿ ಖಂಡಿಸಿ ಆ.04 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಡಬ ವಿಶೇಷ ತಹಶೀಲ್ದಾರ್ ರವರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ ಹಾಗೂ ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸೇಡಿನ ರಾಜಕೀಯಕ್ಕಾಗಿ ಕಾನೂನನ್ನು ಗಾಳಿಗೆ ತೂರಿ ಆದಾಯ ತೆರಿಗೆ […]

ಬಿಜೆಪಿಯ ಸೇಡಿನ ರಾಜಕೀಯದಿಂದ ಡಿಕೆಶಿ ಮೇಲೆ ಐಟಿ ದಾಳಿ ► ನಾಳೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಕಡಬ: ತೀವ್ರ ತರದ ಜ್ವರಕ್ಕೆ ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಕಡಬ, ಆ.03. ಕಡಬ ಗ್ರಾಮದ ಪಿಜಕ್ಕಳ ಲಕ್ಷ್ಮೀನಾರಾಯಣ ಆಚಾರಿ ಎಂಬವರ ಪತ್ನಿ ಪಿಜಕ್ಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ಸದಸ್ಯರಾದ ಸುಗುಣ(35) ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಕಳೆದೊಂದು ವಾರದಿಂದ ತೀವ್ರ ತರದ ಜ್ವರದಿಂದ ಬಳಲುತ್ತಿದ್ದ ಸುಗುಣರವರನ್ನು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರದಂದು ಮೃತರಾಗಿದ್ದಾರೆ. ಇವರು ಪತಿ ಲಕ್ಷ್ಮೀ ನಾರಾಯಣ, ಪುತ್ರ ರೀತೇಶ್ ಹಾಗೂ ಪುತ್ರಿ ಜ್ಯೋತಿಕಾರನ್ನು ಅಗಲಿದ್ದಾರೆ.

ಕಡಬ: ತೀವ್ರ ತರದ ಜ್ವರಕ್ಕೆ ಮಹಿಳೆ ಬಲಿ Read More »

ಕರಾವಳಿ

ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ.02. ಬಿಳಿನೆಲೆ ಗ್ರಾಮದಲ್ಲಿ ಮಾತ್ರವಲ್ಲದೆ ಇಡೀ ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್ & ರೆಸ್ಟೋರೇಂಟ್, ರೆಸಾರ್ಟ್ಗಳಿಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀಕ್ಷೇ.ಧ.ಗ್ರಾ.ಯೋಜನೆಯ ಬಿಳಿನೆಲೆ ವಲಯ ಒಕ್ಕೂಟ, ಬಿಳಿನೆಲೆ ಜನಜಾಗೃತಿ ವತಿಯಿಂದ ಆ.1 ರಂದು ಬಿಳಿನೆಲೆ ಶ್ರಿ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ನಡೆದ ಬಿಳಿನೆಲೆ, ಕೊಂಬಾರು, ಕೈಕಂಬ, ಐತ್ತೂರು, ಒಕ್ಕೂಟ ಹಾಗೂ ವಲಯ ಜನಜಾಗೃತಿ ಸಮಿತಿ ವತಿಯಿಂದ ತೀರ್ಮಾನಿಸಿದ್ದಲ್ಲದೆ ಈ ಬಗ್ಗೆ ಬಿಳಿನೆಲೆ ಗ್ರಾ.ಪಂ.ಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಘಟನೆ ನಡೆಯಿತು. ಮನವಿ

ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ Read More »

ಕರಾವಳಿ

ಮರ್ದಾಳ: ವಿವಾಹಿತ ಮಹಿಳೆ ನಾಪತ್ತೆ ► ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ.02. ಅಂಗಡಿಗೆ ಸಾಮಾನು ತರಲೆಂದು ಹೋದ ಮಹಿಳೆಯೊರ್ವಳು ನಾಪತ್ತೆಯಾಗಿರುವ ಘಟನೆ ಜು.29ರಂದು ನಡೆದಿದ್ದು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ಕುಡಾಲ ನಿವಾಸಿ ಸಿ. ರವಿಚಂದ್ರನ್ ಎಂಬವರ ಪತ್ನಿ ಜ್ಯೋತಿ ಎಂದು ಗುರುತಿಸಲಾಗಿದೆ. ರವಿಚಂದ್ರನ್ ಪತ್ನಿ ಹಾಗೂ 2 ವರ್ಷದ ಮಗುವಿನೊಂದಿಗೆ ಕುಡಾಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು. ರವಿಚಂದ್ರನ್ ಅವರ ಅಕ್ಕ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾದ ಕಾರಣ ಜು.24ರಿಂದ ಮಂಗಳೂರಿನ ಆಸ್ಪತ್ರೆಯಲ್ಲೇ ಇದ್ದು, ಜು.29ರಂದು ಸಂಜೆ ಮನೆಯ

ಮರ್ದಾಳ: ವಿವಾಹಿತ ಮಹಿಳೆ ನಾಪತ್ತೆ ► ಕಡಬ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ

ಕಡಬ: ಬೈಕ್-ಆಂಬ್ಯುಲೆನ್ಸ್ ಢಿಕ್ಕಿ ► ಓರ್ವ ಗಂಭೀರ – ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.01. ಇಲ್ಲಿನ ಪಂಜ ರಸ್ತೆಯ ಅಜ್ಜಿಕಟ್ಟೆ ಎಂಬಲ್ಲಿ ಸೇರಿದ ಆಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಗಾಯಾಳುಗಳನ್ನು 102 ನೇ ನೆಕ್ಕಿಲಾಡಿ ಗ್ರಾಮದ N.Coop ನಿವಾಸಿಗಳಾದ ವಿಶ್ವನಾಥ್(18) ಹಾಗೂ ಅಲಗರಾಜ್(48) ಎಂದು ಗುರುತಿಸಲಾಗಿದೆ. ಅಲಗರಾಜ್ ರವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕಡಬದಿಂದ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ಬೈಕಿಗೆ ಕಡಬಕ್ಕೆ ಆಗಮಿಸುತ್ತಿದ್ದ ಕರ್ನಾಟಕ ರಾಜ್ಯ ರಬ್ಬರ್ ಅಭಿವೃದ್ಧಿ ನಿಗಮಕ್ಕೆ ಸೇರಿದ ತೂಫಾನ್

ಕಡಬ: ಬೈಕ್-ಆಂಬ್ಯುಲೆನ್ಸ್ ಢಿಕ್ಕಿ ► ಓರ್ವ ಗಂಭೀರ – ಸವಾರನಿಗೆ ಗಾಯ Read More »

ಕರಾವಳಿ

ಎಸ್ಸಿ ಘಟಕದ ಅಧ್ಯಕ್ಷ ಗುರುವಪ್ಪ ಕಲ್ಲುಗುಡ್ಡೆ ಕಾಂಗ್ರೇಸಿಗೆ ರಾಜೀನಾಮೆ

(ನ್ಯೂಸ್ ಕಡಬ) newskadaba.com ಕಡಬ, ಜು.31. ಕಾಂಗ್ರೆಸ್ ಪಕ್ಷದಿಂದ ದಲಿತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕಡಬ ಬ್ಲಾಕ್ ಕಾಂಗೇಸ್ ಸಮಿತಿಯ ಎಸ್ಸಿ ಘಟಕದ ಅಧ್ಯಕ್ಷ ಗುರುವಪ್ಪ ಕಲ್ಲುಗುಡ್ಡೆ ಅವರ ತಮ್ಮ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜಿನಾಮೆ ನೀಡಿದ ಘಟನೆ ಸೋಮವಾರದಂದು ನಡೆದಿದೆ. ಪಕ್ಷದ ಸಮಾವೇಶಕ್ಕೆ ಆಗಮಿಸಿದ್ದ ಪಕ್ಷದ ನೂತನ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಗುರುವಪ್ಪನವರು ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದರು. ತಾನು ಹಲವಾರು ವರ್ಷಗಳಿಂದ ಕಾಂಗ್ರೇಸ್ ಪಕ್ಷದ ಸಂಘಟನೆಗಾಗಿ ಹಗಲಿರುಳು ದುಡಿದಿದ್ದು, ಎರಡು ಎಸ್ಸಿ ಘಟಕದ

ಎಸ್ಸಿ ಘಟಕದ ಅಧ್ಯಕ್ಷ ಗುರುವಪ್ಪ ಕಲ್ಲುಗುಡ್ಡೆ ಕಾಂಗ್ರೇಸಿಗೆ ರಾಜೀನಾಮೆ Read More »

ಕರಾವಳಿ

ಸರಿಯಾದ ದಾಖಲೆ ನೀಡಿದರೂ ಪರವಾನಿಗೆ ನೀಡಲು ವಿಳಂಬ ಧೋರಣೆ ► ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷರಿಂದ ಲಂಚದ ಬೇಡಿಕೆ: ಕೆ.ಟಿ. ತೋಮ್ಸನ್ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜು.31. ಬಿಳಿನೆಲೆ ಗ್ರಾಮ ಪಂಚಾಯತ್ಗೆ ಕಟ್ಟಡ ಪರವಾನಿಗೆ ಪಡೆಯಲು ಸರಿಯಾದ ದಾಖಲೆಗಳನ್ನು ನೀಡಿದ್ದರೂ ಪಂಚಾಯತಿಯಲ್ಲಿ ಪರವಾನಿಗೆ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರಲ್ಲದೆ ಬೇರೆಯವರ ವೈಯಕ್ತಿಯ ವಿಚಾರದಲ್ಲಿ ನನಗೆ ವಿನಾಃ ಕಾರಣ ಬಡಾವಣೆ ನಿರ್ಮಾಣ ಕೆಲಸಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಕೆ.ಟಿ. ತೋಮ್ಸನ್ ಆರೋಪಿಸಿದ್ದಾರೆ. ಅವರು ಸೋಮವಾರದಂದು ಕಡಬದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಬಿಳಿನೆಲೆ ಗ್ರಾಮದ ಸ.ನಂ. 9/4ಎರಲ್ಲಿ 0/07 ಎಕ್ರೆ ಜಾಗವು ನನ್ನ ಪಟ್ಟಾ ಜಾಗವಾಗಿರುತ್ತದೆ. ಈ ಜಾಗವು ನೆಟ್ಟಣದಿಂದ ಸುಮಾರು 750 ಮೀಟರ್ ದೂರದಲ್ಲಿರುತ್ತದೆ.

ಸರಿಯಾದ ದಾಖಲೆ ನೀಡಿದರೂ ಪರವಾನಿಗೆ ನೀಡಲು ವಿಳಂಬ ಧೋರಣೆ ► ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷರಿಂದ ಲಂಚದ ಬೇಡಿಕೆ: ಕೆ.ಟಿ. ತೋಮ್ಸನ್ ಆರೋಪ Read More »

ಕರಾವಳಿ

ಜಿಲ್ಲೆಯಲ್ಲಿ ಎಂಟು ಕ್ಷೇತ್ರದಲ್ಲೂ ಕಾಂಗ್ರೇಸ್ ಗೆಲುವು ನಮ್ಮ ಗುರಿ ► ಕಡಬ ಕಾಂಗ್ರೇಸ್ ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್

(ನ್ಯೂಸ್ ಕಡಬ) newskadaba.com ಕಡಬ, ಜು.31. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೇಸ್ ಸರಕಾರ ನೀಡಿರುವ ಭರವಸೆಯನ್ನು ಈಡೇರಿಸಿ ಜನರ ವಿಶ್ವಾಸ ಗಳಿಸಿ ಮತ್ತೊಮ್ಮೆ ಆಧಿಕಾರಕ್ಕೆ ಬರುವುದು ಖಚಿತವಾಗಿದ್ದು ದ.ಕ. ಜಿಲ್ಲೆಯ ಎಂಟು ಕ್ಷೇತ್ರದಲ್ಲಿ ಈಗಾಗಲೇ ಏಳು ಕ್ಷೇತ್ರ ನಮ್ಮ ಕೈಯಲ್ಲಿದ್ದು, ಮುಂದಿನ ಚುನಾವಣೆಯಲ್ಲಿ ಎಂಟರಲ್ಲಿ ಎಂಟು ಕ್ಷೇತ್ರವೂ ಕಾಂಗ್ರೇಸ್ ತೆಕ್ಕೆಗೆ ತರುವುದು ನಮ್ಮಲ್ಲೆರ ಗುರಿಯಾಗಬೇಕು ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ಕರೆ ನೀಡಿದರು. ಅವರು ಸೋಮವಾರದಂದು ಕಡಬ ಅನುಗ್ರಹ ಸಭಾಭವನದಲ್ಲಿ ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಆಶ್ರಯದಲ್ಲಿ ನಡೆದ

ಜಿಲ್ಲೆಯಲ್ಲಿ ಎಂಟು ಕ್ಷೇತ್ರದಲ್ಲೂ ಕಾಂಗ್ರೇಸ್ ಗೆಲುವು ನಮ್ಮ ಗುರಿ ► ಕಡಬ ಕಾಂಗ್ರೇಸ್ ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ Read More »

ಕರಾವಳಿ

ಇದು ಬಸ್ಸು ನಿಲ್ದಾಣವೋ…? ಅಲ್ಲ ಕಸದ ತೊಟ್ಟಿಯೋ…? ► ಅಸಹ್ಯ ಹುಟ್ಟಿಸುವ ನೆಟ್ಟಣ ಸಾರ್ವಜನಿಕ ಬಸ್ಸು ತಂಗುದಾಣ

(ನ್ಯೂಸ್ ಕಡಬ) newskadaba.com ಕಡಬ, ಜು.31. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮ ಪಂಚಾಯತ್ ಅಧೀನದಲ್ಲಿರುವ ನೆಟ್ಟಣ ಪೇಟೆಯಲ್ಲಿನ ಸಾರ್ವಜನಿಕ ಬಸ್ಸು ನಿಲ್ದಾಣದಲ್ಲಿ ಕಸ ಕಡ್ಡಿಗಳು ತುಂಬಿದ್ದು, ನೋಡೋದಕ್ಕೆ ಅಸಹ್ಯ ಅನಿಸುತ್ತಿದೆ. ದಕ್ಷಿಣ ಭಾರತದ ಪ್ರಮುಖ ದೇವಸ್ಥಾನವಾದ ಕುಕ್ಕೇ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣವು ಇದೇ ನೆಟ್ಟಣದಲ್ಲಿದೆ. ರೈಲಿನಲ್ಲಿ ಆಗಮನಿಸುವ ಪ್ರಯಾಣಿಕರು ಬಸ್ಸಿಗಾಗಿ ಕಾಯಬೇಕೆಂದರೆ ಇದೇ ಬಸ್ಸು ನಿಲ್ದಾಣವನ್ನೇ ಆಶ್ರಯಿಸಬೇಕಾಗಿದೆ‌. ಇಲ್ಲಿ ಕಸಕಡ್ಡಿಗಳು ಸೇರಿದಂತೆ ಮದ್ಯದ ಬಾಟಲಿಗಳನ್ನು ಹಾಕಿರುವುದರಿಂದ ಪ್ರಜ್ಞಾವಂತರನ್ನು ಮುಜುಗರಕ್ಕೀಡುಮಾಡುತ್ತಿದೆ‌. ತಕ್ಷಣವೇ

ಇದು ಬಸ್ಸು ನಿಲ್ದಾಣವೋ…? ಅಲ್ಲ ಕಸದ ತೊಟ್ಟಿಯೋ…? ► ಅಸಹ್ಯ ಹುಟ್ಟಿಸುವ ನೆಟ್ಟಣ ಸಾರ್ವಜನಿಕ ಬಸ್ಸು ತಂಗುದಾಣ Read More »

ಕರಾವಳಿ

ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು.30. ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ಹೆತ್ತವರು ಮತ್ತು ಶಿಕ್ಷಕರ ನಿರಂತರ ಪ್ರೊತ್ಸಾಹ ಅಗತ್ಯ. ವಿದ್ಯಾರ್ಥಿಗಳು ಪ್ರಸಕ್ತ ಸ್ಪರ್ಧಾತ್ಮಕ ಯುಗದಲ್ಲಿ ಸವಾಲುಗಳನ್ನು ಸಮರ್ಥವಾಗಿ ಎದುರಿಸುವಲ್ಲಿ ಶಿಕ್ಷಣ ಸಂಸ್ಥೆಯ ತರಬೇತಿಯೊಂದಿಗೆ ಹೆತ್ತವರ ಸೂಕ್ತ ಮಾರ್ಗದರ್ಶನವೂ ಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಜೋಹಾರಾ ನಿಸಾರ್ ಅಹ್ಮದ್ ಹೇಳಿದರು. ಅವರು ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವ ಕೊಡುವುದರೊಂದಿಗೆ ಸಚ್ಚಾರಿತ್ರ್ಯವಂತರಾಗಿ ಉತ್ತಮ ನಡೆ-ನುಡಿಯನ್ನು ಅಳವಡಿಸಿಕೊಳ್ಳಬೇಕು.

ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಸಭೆ Read More »

ಕರಾವಳಿ
Scroll to Top