Kadaba

ಬೆಳ್ತಂಗಡಿ:ಯುವಕರಿಬ್ಬರ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.26. ಮರಳು ವ್ಯಾಪಾರಿ ಯುವಕರಿಬ್ಬರನ್ನು ವ್ಯವಹಾರದ ಉದ್ದೇಶದಿಂದ ಫೋನ್ ಮಾಡಿ ಕರೆಸಿ ಬಳಿಕ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಅಡ್ಡೂರು ನಿವಾಸಿಗಳಾದ ಇರ್ಫಾನ್ ಮತ್ತು ನಿಸಾರ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಮರಳು ವ್ಯಾಪಾರಿಗಳಾದ ಇಬ್ಬರನ್ನು ವ್ಯವಹಾರದ ನೆಪದಲ್ಲಿ ಕರೆಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಗಂಭೀರ ಗಾಯಗೊಂಡ ಯುವಕರು ತಮ್ಮ ಗೆಳೆಯನಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿ ಬಳಿಕ ಪೊಲೀಸ್ ಕಂಟ್ರೋಲ್ ರೂಮ್ […]

ಬೆಳ್ತಂಗಡಿ:ಯುವಕರಿಬ್ಬರ ಮೇಲೆ ಹಲ್ಲೆ Read More »

ಕರಾವಳಿ

ಶೋಭಾ ಕರಂದ್ಲಾಜೆಯಿಂದ ಸುಳ್ಳಿನ ರಾಜಕೀಯ: ಸಚಿವ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.25. ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿ ರಾಜ್ಯ ಸರಕಾರದ ಮೇಲೆ ವಿನಾಕಾರಣ ಆರೋಪ ಮಾಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಇದೀಗ ರಾಜಕೀಯ ಪ್ರೇರಿತವಾಗಿ ಪಡಿತರ ಚೀಟಿ ಮಾಫಿಯಾ ಎಂಬ ಸುಳ್ಳು ಸುದ್ದಿ ಹರಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಆಕ್ಷೇಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಾಡಲಾದ ಆರೋಪದ ಬಗ್ಗೆ ಲಿಖಿತವಾಗಿ ದೂರು ನೀಡುವಂತೆ ತಿಳಿಸಲಾಗಿತ್ತು.

ಶೋಭಾ ಕರಂದ್ಲಾಜೆಯಿಂದ ಸುಳ್ಳಿನ ರಾಜಕೀಯ: ಸಚಿವ ಖಾದರ್ Read More »

ಕರ್ನಾಟಕ

ಕಾರು-ಟ್ಯಾಂಕರ್ ಢಿಕ್ಕಿ: ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.25. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಕಾರು ಹಾಗೂ ಟ್ಯಾಂಕರ್ ಢಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಮುಖಾಮುಖಿಯಾಗಿ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು-ಟ್ಯಾಂಕರ್ ಢಿಕ್ಕಿ: ನಾಲ್ವರು ಗಂಭೀರ Read More »

ಕರಾವಳಿ

ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಜಿಲ್ಲಾ ಪೊಲೀಸರ ನಿಯಂತ್ರಣಕ್ಕೆ ಸಿಗದೆ ಕಳೆದ ಹಲವು ದಿನಗಳಿಂದ ಕೋಮು ಗಲಭೆಗೆ ತುತ್ತಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪರಿಸರ ಇದೀಗ ಚಿಕ್ಕಮಗಳೂರಿನ ಖಡಕ್ ಎಸ್ಪಿ ಅಣ್ಣಾಮಲೈಯವರ ಬಿಗಿಮುಷ್ಟಿಯಲ್ಲಿ ಭದ್ರವಾಗಿ ನಿಂತಿದೆ. ರಿಯಲ್ ಸಿಂಗಂ ಎಂದೇ ಖ್ಯಾತರಾಗಿರುವ ಐಪಿಎಸ್ ಅಧಿಕಾರಿ, ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಆಗಮನದಿಂದಾಗಿ ಜಿಲ್ಲೆಯ ಕೋಮುವಾದಿ ಹಾಗೂ ಕ್ರಿಮಿನಲ್ ಗಳಿಗೆ ನಡುಕವುಂಟಾಗಿದೆ. ಸರಕಾರದ ನಿರ್ದೇಶನದಂತೆ ಬುಧವಾರ ಸಂಜೆಯೇ ಜಿಲ್ಲೆಗೆ ಗಗಮಿಸಿದ ಎಸ್ಪಿ ಅಣ್ಣಾಮಲೈ ತನ್ನ ವಿಶಿಷ್ಟ ರಫ್

ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ Read More »

ಕರಾವಳಿ

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ಐವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಕಳೆದ ಮೂರು ದಿನಗಳ ಹಿಂದೆ ಕಲಾಯಿಯ SDPI ವಲಯಾಧ್ಯಕ್ಷರಾದ ಅಶ್ರಫ್ ಅವರನ್ನು ಬೆಂಜನಪದವಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾದ ಪ್ರಕರಣವನ್ನು ಭೇದಿಸಿರುವ ರಾಜ್ಯ ಪೊಲೀಸ್ ಇಲಾಖೆ ಈ ಸಂಬಂಧ 5 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಭಿನ್, ದಿವ್ಯರಾಜ್, ಪವನ್ ಸಂತೋಷ್ ಹಾಗೂ ಶಿವಪ್ರಸಾದ್ ಎಂದು ಗುರುತಿಸಲಾಗಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ಆರೋಪಿಗಳನ್ನು ಇಂದು ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ಐವರ ಬಂಧನ Read More »

ಕರಾವಳಿ

ಕೆ.ಸಿ.ರೋಡ್: ಹಾಡುಹಗಲೇ ಬ್ಯಾಂಕ್ ದರೋಡೆ ಯತ್ನ

ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಕೆ.ಸಿ. ರೋಡ್ ಶಾಖೆಯ ಸಿಬ್ಬಂದಿಗಳಿಗೆ ಹಾಡುಹಗಲೇ ಚಾಕು ತೋರಿಸಿ ದರೋಡೆಗೆ ಯತ್ನಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಹೆಲ್ಮೆಟ್ ಧರಿಸಿಕೊಂಡು ಬ್ಯಾಂಕ್ ಒಳಗೆ ಅಕ್ರಮವಾಗಿ ಪ್ರವೇಶಿಸಿದ ಇಬ್ಬರು ದರೋಡೆಕೋರರು ಕರ್ತವ್ಯದಲ್ಲಿದ್ದ ಮೂವರು ಸಿಬ್ಬಂದಿಗಳಿಗೆ ಚೂರಿ ತೋರಿಸಿ ಬೆದರಿಸಿ ಅವರನ್ನು ಶೌಚಾಲಯದೊಳಗೆ ಕೂಡಿ ಹಾಕಿ ಚಿನ್ನಾಭರಣವನ್ನು ದೋಚಲು ಯತ್ನಿಸಿದ್ದರು. ಕೋಟ್ಯಂತರ ರೂ. ಬೆಲೆಬಾಳುವ ಸುಮಾರು 20 ಕೆಜಿ ಚಿನ್ನವನ್ನು 50 ಕೆಜಿಯ ಗೋಣಿ ಚೀಲದಲ್ಲಿ

ಕೆ.ಸಿ.ರೋಡ್: ಹಾಡುಹಗಲೇ ಬ್ಯಾಂಕ್ ದರೋಡೆ ಯತ್ನ Read More »

ಕರಾವಳಿ

ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು ಲೇವಡಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ.22. ಸಾಲ ಮನ್ನಾ ಎಂಬುದು ಇಂದಿನ ದಿನಗಳಲ್ಲಿ ಫ್ಯಾಶನ್ ಆಗಿದ್ದು, ತೀವ್ರ ಸಂಕಷ್ಟದ ಸ್ಥಿತಿಯಲ್ಲಿ ಮಾತ್ರ ಸಾಲಮನ್ನಾ ಮಾಡಬೇಕು. ಆದರೆ ಇದು ಸಮಸ್ಯೆಗಳಿಗೆ ಅಂತಿಮ ಪರಿಹಾರವಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಲೇವಡಿ ಮಾಡಿದ್ದಾರೆ. ಕರ್ನಾಟಕ ಸರಕಾರವು ಬುಧವಾರದಂದು ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ.ವರೆಗಿನ ರೈತರ ಸಾಲವನ್ನು ಮನ್ನಾ ಮಾಡಿ ಆದೇಶ ಹೊರಡಿಸಿತ್ತು. ಪ್ರತಿಯೊಬ್ಬ ರೈತನ 50 ಸಾವಿರ ರೂ. ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು,

ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು ಲೇವಡಿ Read More »

ರಾಷ್ಟ್ರೀಯ ನ್ಯೂಸ್

ಏಣಿತಡ್ಕ(1) ಅಂಗನವಾಡಿ ಕಾರ್ಯಕರ್ತೆ ವೇದಾವತಿ ಪಿ.ಎಸ್. ರವರಿಗೆ ರಾಜ್ಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಎಳೆಯ ಮಕ್ಕಳಿಗೆ ಪುರ್ವ ಪ್ರಾಥಮಿಕ ಶಿಕ್ಷಣದ ಅರಿವು ಮೂಡಿಸುವುದು ಅಂಗನವಾಡಿ ಕೇಂದ್ರ. ಮಕ್ಕಳನ್ನು ಬೆಳೆಸುವ ಸಂದರ್ಭದಲ್ಲಿ ತಾಯಂದಿರ ಪಾತ್ರದಷ್ಟೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಜವಾಬ್ದಾರಿ ಬಹಳ ಮಹತ್ತರವಾದುದು. ಇಂತಹ ಪರಿಶ್ರಮದ ಕೆಲಸವನ್ನು ಗುರುತಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೊೖಲ ಗ್ರಾಮದ ಏಣಿತಡ್ಕ (1) ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವೇದಾವತಿ ಅವರಿಗೆ 2016-17 ಸಾಲಿನ ರಾಜ್ಯ ಅತ್ಯುತ್ತಮ ಕಾರ್ಯಕರ್ತೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಿದೆ. ಅಂಗನವಾಡಿ ಕೇಂದ್ರದ ಸ್ವಚ್ಚತೆ,

ಏಣಿತಡ್ಕ(1) ಅಂಗನವಾಡಿ ಕಾರ್ಯಕರ್ತೆ ವೇದಾವತಿ ಪಿ.ಎಸ್. ರವರಿಗೆ ರಾಜ್ಯ ಪ್ರಶಸ್ತಿ Read More »

ಕರಾವಳಿ

ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಚಿವ ರೈ ವಿರುದ್ದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಜಿಲ್ಲೆಯ ಹಿಂದೂ ನಾಯಕರನ್ನು, ಕಾರ್ಯಕರ್ತರನ್ನು ಸುಳ್ಳು ಕೇಸು ಹಾಕಿ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಒತ್ತಡ ಹೇರಿರುವ ಸಚಿವ ರಮನಾಥ ರೈ ವಿರುದ್ದ ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುವಾರ ಕಡಬ ತಹಶೀಲ್ದಾರ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಶೆಟ್ಟಿ ಕಡಬ, ನಮ್ಮನ್ನಾಳುವ ಸರಕಾರ ಕೋಮು ಸಂಘರ್ಷಕ್ಕೆ ಕುಮ್ಮಕು ನೀಡಿ ಸಮಾಜ ಶಾಂತಿ ಕದಡುತ್ತಿದೆ. ಮತೀಯ ಸಂಘರ್ಷವೇರ್ಪಟ್ಟ ತಕ್ಷಣ ಅಮಾಯಕ

ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಚಿವ ರೈ ವಿರುದ್ದ ಪ್ರತಿಭಟನೆ Read More »

ಕರಾವಳಿ
Scroll to Top