Kadaba

ಪುತ್ತೂರು :ಸಾರಿಗೆ ನೌಕರರ ದಿಢೀರ್ ಮುಷ್ಕರ.!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12: ಸಾರಿಗೆ ನೌಕರರ ಮುಷ್ಕರದ ಬಿಸಿ ಕರಾವಳಿಗೂ ತಟ್ಟಿದೆ. ಇಂದು ಪುತ್ತೂರಿನಲ್ಲಿ  KSRTC ಬಸ್ಸ್ ಗಳು ರಸ್ತೆಗಿಳಿಯದೆ ಬೆಂಬಲ ಸೂಚಿಸಿದೆ. ಆದರೆ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ಬೆಳಗ್ಗಿನಿಂದ ಬಸ್ಸ್ಗಳು ಕಂಡು ಬಂದಿರಲಿಲ್ಲ. ಬಳಿಕ ಡಿಪೋದಿಂದ ಬಸ್ ಗಳನ್ನು ತಂಗುದಾಣಕ್ಕೆ ತಂದು ಮುಷ್ಕರದಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದ ಜನಸಾಮಾನ್ಯ ಪ್ರಯಾಣಿಕರು ಬಸ್ ಗಾಗಿ ಕಾಯುತ್ತಿದ್ದು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ದಿಢೀರ್ ಮುಷ್ಕರದಿಂದ ಮುಂಜಾನೆಯೇ KSRTC ವಿಭಾಗೀಯ ನಿಯಂತ್ರಣಾಧಿಕಾರಿ, […]

ಪುತ್ತೂರು :ಸಾರಿಗೆ ನೌಕರರ ದಿಢೀರ್ ಮುಷ್ಕರ.! Read More »

ಕರಾವಳಿ

ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು

(ನ್ಯೂಸ್ ಕಡಬ) newskadaba.com ಫರಂಗಿಪೇಟೆ, ಡಿ.12: ಬಂಟ್ವಾಳ ತಾಲೂಕಿನ ಫರಂಗಿಪೇಟೆ ರಾ.ಹೆ. 75ರಲ್ಲಿ ಗುರುವಾರ ಇಳಿಸಂಜೆ ಬೈಕ್ ಸ್ಕಿಡ್ ಆಗಿ ನಡೆದ ಅಪಘಾತದಲ್ಲಿ ವಿಟ್ಲದ ಜನಪ್ರಿಯ ಬಾಣಸಿಗ ಕಾಂತಡ್ಕ ಶಂಕರನಾರಾಯಣ ಭಟ್ (58) ಮೃತಪಟ್ಟಿದ್ದಾರೆ. ಮಂಗಳೂರು ಕಡೆಯಿಂದ ಬೈಕಿನಲ್ಲಿ ವಿಟ್ಲ ಕಡೆಗೆ ಬರುತ್ತಿದ್ದ ಅವರ ಬೈಕ್, ಫರಂಗಿಪೇಟೆಯ ಮೀನು ಮಾರುಕಟ್ಟೆ ಬಳಿ ಪಲ್ಟಿಯಾಗಿ ಅಪಘಾತ ಘಟಿಸಿದ್ದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು Read More »

ಕರಾವಳಿ

ಮಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಸ್ಥಳದಲ್ಲೇ ಸಾವನ್ನಪ್ಪಿದ 10 ದನಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10 ದನಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ದಾನಸಾಲೆ ಹೊರಬೈಲು ಬಳಿ ನಡೆದಿದೆ. ದಾವಣಗೆರೆಯಿಂದ ಮಂಗಳೂರಿಗೆ ದನಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ್ದು, 10 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚಿನ ದನಗಳು ಗಾಯಗೊಂಡಿದೆ.ಘಟನೆ ನಡೆದ ಕೂಡಲೇ ಲಾರಿಯ ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಈ ದನಗಳನ್ನು ಕಸಾಯಿಖಾನೆಗೆ ಸಾಗಿಸಲಾಗಿತ್ತೋ ಅಥವಾ ಗೋ

ಮಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಸ್ಥಳದಲ್ಲೇ ಸಾವನ್ನಪ್ಪಿದ 10 ದನಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12: ಮದುವೆ ಹಾಲ್ ನಲ್ಲಿ ಮಕ್ಕಳ ಕತ್ತಿನಿಂದ, ಮಹಿಳೆಯರ ಬ್ಯಾಗ್ ನಿಂದ ಚಿನ್ನಭಾರಣ ಕದಿಯುತ್ತಿದ್ದ ಮಹಿಳೆ ಈಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅತಿಥಿಯಾಗಿದ್ದಾಳೆ.   ಇತ್ತೀಚಿನ ದಿನಗಳಲ್ಲಿ ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಹಾಲ್ ನ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ಆಧರಿಸಿ ಹಾಲ್ ಮಾಲೀಕರು ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಗುರುವಾರ ಪಾಣೆಮಂಗಳೂರಿನ

ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಇಬ್ಬರು ಬೈಕ್ ಕಳ್ಳರು ಅರೇಷ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಕಳವುಗೈದ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರನ್ನು ಪಾಂಡೇಶ್ವರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.   ಸ್ಥಳೀಯ ನಿವಾಸಿಗಳಾದ  ಮೊಹಮ್ಮದ್ ಸಫ್ವಾನ್, ಸೈಫುಲ್ಲಾ ಫರಾಜ್ ಬಂಧಿತರು. ಪಾಂಡೇಶ್ವರ ಠಾಣಾ ಉಪ ನಿರೀಕ್ಷಕ ಅನಂತ ಮುರ್ಡೇಶ್ವರ್ ಸಿಬ್ಬಂದಿಯೊಂದಿಗೆ ರೌಂಡ್ಸ್ ಮಾಡುತ್ತಿದ್ದಾಗ ಬೆಳಗಿನ ಜಾವ 3 ಗಂಟೆ ವೇಳೆಗೆ ಮಂಗಳೂರು ದಕ್ಷಿಣ ದಕ್ಕೆಯಲ್ಲಿ ಬೈಕ್ ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಆರೋಪಿಗಳ ಸಹಿತ ಬೈಕ್‌ನ್ನು ವಶ ಪಡಿಸಿರುವ ಪೊಲೀಸರು, ಪ್ರಕರಣ ದಾಖಲಿಸಿದ್ದು, ಬೈಕ್‌ನ್ನು ಸುರತ್ಕಲ್ ಬಳಿ

ಮಂಗಳೂರು: ಇಬ್ಬರು ಬೈಕ್ ಕಳ್ಳರು ಅರೇಷ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು :ರಸ್ತೆ ಬದಿ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12: ರಸ್ತೆ ಬದಿ ದನದ ಕಿವಿಯ ಭಾಗ ಹಾಗೂ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪುತ್ತೂರಿನ ಕೊಡಿಪ್ಪಾಡಿ ಬಳಿ ಪತ್ತೆಯಾಗಿದೆ. ಸ್ಥಳಕ್ಕೆ ಪುತ್ತೂರು ಎಸ್ ಐ ಜಂಬೂರಾಜ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ತಪ್ಪಿತಸ್ಥರನ್ನು ತಕ್ಷಣ ಬಂಧಿಸದೇ ಹೋದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು. ರಾಜ್ಯ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು, ಗೋ ಭಕ್ಷಕರಿಗೆ

ಪುತ್ತೂರು :ರಸ್ತೆ ಬದಿ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಜೇಶ್ವರ :ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಡಿ.11:ಕಾಸರಗೋಡು: ಮೂರು ಕಿಲೋ ಗಾಂಜಾ ಸಹಿತ ಓರ್ವನನ್ನು ಕುಂಬಳೆ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ಪಾವೂರಿನ ರಾಜೇಶ್ (30) ಎಂದು ಗುರುತಿಸಲಾಗಿದೆ. ಮಂಜೇಶ್ವರ ಗೇರುಕಟ್ಟೆಯಲ್ಲಿ ಬೈಕನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಬೈಕ್ ನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ, ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಅಕ್ರಮ ಮದ್ಯ, ಗಾಂಜಾ ಸೇರಿದಂತೆ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಗಡಿ ಪ್ರದೇಶದಲ್ಲಿ

ಮಂಜೇಶ್ವರ :ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ

ಮೂರು ವರುಷದ ಪ್ರೀತಿಗೆ ಮನೆಯವರಿಂದ ಸಮ್ಮತಿ ➤ ಆದರೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ.?!!

(ನ್ಯೂಸ್ ಕಡಬ) newskadaba.com ಉಡುಪಿ, ಡಿ.11: ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕನ ಜೊತೆ ಇನ್ನೇನು ಹಸಮಣೆಗೇರಬೇಕಾಗಿದ್ದ ಯುವತಿ ಬಾವಿಗೆ ಹಾರಿ ಅತ್ಮಹತ್ಯೆಗೆ ಶರಣಾಗಿದ್ದಾಳೆ.ಉಡುಪಿ ಜಿಲ್ಲೆಯ ಅಮಾವಸ್ಯೆಬೈಲ್ ಬಳಿಯ ಹುಣೆಸೆಮನೆಯ ಜಡ್ಡಿನಗುಡ್ಡೆಯ ಇಪ್ಪತ್ತೊಂದು ವರ್ಷದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ.ದಿವ್ಯಾ ಬಿ ಕಾಂ ಅಂತಿಮ ವರ್ಷದ ಕಲಿಯುತ್ತಿದ್ದು ಕಳೆದ ಮೂರು ವರ್ಷಗಳಿಂದ ಹತ್ತಿರದ ಸಂಬಂಧಿ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರ ಮನೆಯಲ್ಲಿಯೂ ಪ್ರೀತಿಗೆ ಒಪ್ಪಿಗೆ ಇತ್ತು.ಸದ್ಯದಲ್ಲೇ ಇಬ್ಬರ ಮದುವೆ ನೆರವೇರಿಸುವುದಾಗಿ ಮನೆಯ ಹಿರಿಯರು ನಿಶ್ಚಯಿಸಿದ್ದರು.ಅದ್ರೆ ಏಕಾಏಕಿ ಕಾಲೇಜಿನಿಂದ ಬಂದ ದಿವ್ಯಾ

ಮೂರು ವರುಷದ ಪ್ರೀತಿಗೆ ಮನೆಯವರಿಂದ ಸಮ್ಮತಿ ➤ ಆದರೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ.?!! Read More »

ಕರಾವಳಿ

ಕಡಬ, ಪೂತ್ತೂರು ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಡಿ.11: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಡಿ.11 ರ ಇಂದು ಆರೊಗ್ಯ ಇಲಾಖೆಯ ವರದಿಯಂತೆ ತಲಾ ಒಂದೊಂದು ಕೊರೋನಾ ಪ್ರಕರಣ ವರದಿಯಾಗಿದೆ. ಪಡುವನ್ನೂರಿನ 35 ವರ್ಷದ ವ್ಯಕ್ತಿ ಹಾಗೂ ಕಡಬ ತಾಲೂಕಿನ ಐತ್ತೂರು ನಿವಾಸಿ 60 ವರ್ಷದ ಮಹಿಳೆಯಲ್ಲಿ ಕೊರೋನಾ ಸೊಂಕು ದೃಢಗೊಂಡಿದೆ.    

ಕಡಬ, ಪೂತ್ತೂರು ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್ ಡೇಟ್ Read More »

ಕರಾವಳಿ

ಮೈಸೂರು-ಮಂಗಳೂರಿಗೆ ವಿಮಾನಯಾನ ಆರಂಭ ➤ಸಂಸದ ಪ್ರತಾಪ್ ಸಿಂಹ ರಿಂದ ಹಸಿರು ನಿಶಾನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಮೈಸೂರಿನಿಂದ ಮಂಗಳೂರಿಗೆ ಹೊರಡುವ ಅಲೈಯನ್ಸ್ ಏರ್ ಸಂಸ್ಥೆಯ ವಿಮಾನಯಾನಕ್ಕೆ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಿಸಿದ್ದಾರೆ. ಇಂದು ಚಾಲನೆ ದೊರೆತ ದಿನವೇ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದೆ. ಇನ್ನು ಮೈಸೂರಿನಿಂದ ಮಂಗಳೂರಿಗೆ 33 ಟಿಕೆಟ್ ಬುಕ್ ಆಗಿದ್ದು, 23 ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.ಬುಧವಾರ, ಶುಕ್ರವಾರ, ಶನಿವಾರ, ಭಾನುವಾರ ಮಾತ್ರ ಈ ವಿಮಾನ ಹಾರಾಡಲಿದೆ. ಬೆಳಿಗ್ಗೆ 11.20 ಗಂಟೆಗೆ ಮೈಸೂರಿನಿಂದ ಹೊರಡುವ ವಿಮಾನವು ಮಧ್ಯಾಹ್ನ 12.30 ಗಂಟೆಗೆ ಮಂಗಳೂರು ತಲುಪಲಿದೆ. ಅದರಂತೆ,

ಮೈಸೂರು-ಮಂಗಳೂರಿಗೆ ವಿಮಾನಯಾನ ಆರಂಭ ➤ಸಂಸದ ಪ್ರತಾಪ್ ಸಿಂಹ ರಿಂದ ಹಸಿರು ನಿಶಾನೆ Read More »

ಕರಾವಳಿ, ಕರ್ನಾಟಕ
Scroll to Top