Kadaba

ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್​ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.11: ತಮ್ಮ ಅಭಿನಯ ಹಾಗೂ ಸರಳ ವ್ಯಕ್ತಿತ್ವದಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಡಾ. ವಿಷ್ಣುವರ್ಧನ್​​ ಕನ್ನಡಿಗರ ಪಾಲಿನ ಆರಾಧ್ಯ ದೈವ. ಸಾಹಸಸಿಂಹ, ಕೋಟಿಗೊಬ್ಬ, ಅಭಿನಯ ಭಾರ್ಗವ, ದಾದಾ ಎಂದೆಲ್ಲಾ ಪ್ರೀತಿಯಿಂದ ಕರೆಸಿಕೊಳ್ಳುವ ಡಾ. ವಿಷ್ಣುವರ್ಧನ್ ರವರ ಬಗ್ಗೆತೆಲುಗು ನಟನೊಬ್ಬ ವಿಷ್ಣುವರ್ಧನ್ ವ್ಯಕ್ತಿತ್ವದ ಬಗ್ಗೆ ನೀಚವಾಗಿ ಮಾತನಾಡಿರುವುದು ಕನ್ನಡಿಗರನ್ನು ಕೆಣಕಿದೆ. ಕೆಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ವಿಜಯ್ ರಂಗರಾಜು ಎಂಬಾತ, ಸಂದರ್ಶನವೊಂದರಲ್ಲಿ ಕನ್ನಡದ ಖ್ಯಾತ ನಟ ವಿಷ್ಣುವರ್ಧನ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾನೆ. […]

ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್​ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ Read More »

ಕರ್ನಾಟಕ, ಸಿನಿಮಾ

ಅನ್ನಭಾಗ್ಯ ಪಡಿತರದಾರರೇ ಎಚ್ಚರ ➤ ನೀವೇನಾದ್ರು ನಿಮ್ಮ ರೇಷನ್​ ಮಾರಿದ್ರೆ ಕಾರ್ಡ್ ರದ್ದು.!

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.11: ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತದೆ.ಆಹಾರ ಇಲಾಖೆ ಈ ನೂತನ ಆದೇಶ ಜಾರಿಗೆ ತಂದಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ನೀಡುವ ಅಕ್ಕಿಯನ್ನು ಪಡಿತದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವ ಫಲಾನುಭವಿಯ ಕಾರ್ಡ್‌ಗಳನ್ನು 6 ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ

ಅನ್ನಭಾಗ್ಯ ಪಡಿತರದಾರರೇ ಎಚ್ಚರ ➤ ನೀವೇನಾದ್ರು ನಿಮ್ಮ ರೇಷನ್​ ಮಾರಿದ್ರೆ ಕಾರ್ಡ್ ರದ್ದು.! Read More »

ಕರ್ನಾಟಕ

ಮಂಗಳೂರು :ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಲು ಸಿಎಂಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡುವ ಪ್ರಸ್ತಾವವನ್ನು ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಕರಾವಳಿಯ ಶಾಸಕರುಗಳು ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿದರು. ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿಗಳನ್ನ ಭೇಟಿಯಾದ ನಿಯೋಗದಲ್ಲಿ ಶಾಸಕರಾದ ಸುನೀಲ್ ಕುಮಾರ್, ಡಾ.ವೈ ಭರತ್ ಶೆಟ್ಟಿ, ರಘುಪತಿ ಭಟ್, ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಹರೀಶ್ ಪೂಂಜಾ,

ಮಂಗಳೂರು :ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಲು ಸಿಎಂಗೆ ಮನವಿ Read More »

ಕರಾವಳಿ

ಬಂಟ್ವಾಳ :ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯಾಧಿಕಾರಿ ಸ್ಥಿತಿ ಗಂಭೀರಾ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕೃಷ್ಣ ಪುಣಚ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನು ಆರೋಗ್ಯಾಧಿಕಾರಿ ನನ್ನ ಸಾವಿಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎಂದು ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. “ನನಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬಿಟ್ಟೋ ಪ್ರತಿದಿನ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಜೊತೆಗೆ ಕಚೇರಿಯ ಸಿಬ್ಬಂದಿ ಇಕ್ಬಾಲ್ ಕೂಡ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾನೆ. ನಾನು ಬಂಟ್ವಾಳ ಪುರಸಭೆಗೆ 5 ತಿಂಗಳ

ಬಂಟ್ವಾಳ :ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯಾಧಿಕಾರಿ ಸ್ಥಿತಿ ಗಂಭೀರಾ Read More »

ಕರಾವಳಿ

ಮುಲ್ಕಿ :ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೂಲಿಕಾರ್ಮಿಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11:ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಗುಡ್ಡೆ ಹಾಡಿಯಲ್ಲಿ ಕೂಲಿಕಾರ್ಮಿಕ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಮುಲ್ಕಿ ಕೆಎಸ್ ರಾವ್ ನಗರ ನಿವಾಸಿ ಕೃಷ್ಣ ಪೂಜಾರಿ (58) ಗುರುತಿಸಲಾಗಿದೆ. ಮೃತ ಕೃಷ್ಣ ಪೂಜಾರಿ ಕೂಲಿ ಕೆಲಸ ಮಾಡಿಕೊಂಡಿದ್ದು, ಕಳೆದ ತಿಂಗಳ ಹಿಂದೆ ಕೋಲ್ನಾಡು ಹೋಯಿಗೆ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದು ಬಳಿಕ ಫ್ಯಾಕ್ಟರಿ ಮುಚ್ಚುಗಡೆಯಾದ ಬಳಿಕ ಪೈಪ್ ಕಂಪನಿಯೊಂದರಲ್ಲಿ ಮಾಡುತ್ತಿದ್ದರು.ಕಂಪನಿ ಮುಚ್ಚುಗಡೆಯಾದ ಬಳಿಕ ಆತಂಕಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಮುಲ್ಕಿ :ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೂಲಿಕಾರ್ಮಿಕ Read More »

ಕರಾವಳಿ

ಉಡುಪಿ :ಸಿಡಿಲು ಬಡಿದು ವರ್ಕ್ ಫ್ರಂ ಹೋಮ್ ಉದ್ಯೋಗಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.11: ಸಿಡಿಲು‌ ಬಡಿದು‌ ಯುವಕನೋರ್ವ ಸಾವನ್ನಪ್ಪಿದ ಘಟನೆ ವಂಡಾರಿನ ಬೋರ್ಡಕಲ್ಲಿನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ‌ ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಮೃತಪಟ್ಟ ಯುವಕ.   ಇವರು ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿದ್ದು ಕೊರೊನಾ ಸಮಸ್ಯೆಯ ಅನಂತರ ಹಲವು ತಿಂಗಳಿಂದ ಮನೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದರು.ಮನೆಯೊಳಗಡೆ ಲ್ಯಾಪ್‌ಟಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲಿನ‌ ಹೊಡೆತಕ್ಕೆ ಒಳಗಾಗಿ ಗಂಭೀರವಾಗಿ ಅಸ್ವಸ್ಥತಗೊಂಡಿದ್ದು ತಕ್ಷಣ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಗೆ ಕರೆದೊಯ್ಯಲಾಯಿತು.

ಉಡುಪಿ :ಸಿಡಿಲು ಬಡಿದು ವರ್ಕ್ ಫ್ರಂ ಹೋಮ್ ಉದ್ಯೋಗಿ ಮೃತ್ಯು Read More »

ಕರಾವಳಿ

ಬಂಟ್ವಾಳ :ಸಿಡಿಲು ಬಡಿದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.11: ಬಂಟ್ವಾಳ ತಾಲೂಕಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತಾಲೂಕಿನ ಗಡಿ ಭಾಗವಾಗಿರುವ ಕರೋಪಾಡಿ ಗ್ರಾಮದ ಸಾರ್ಥಕೋಡಿ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಚಂದಪ್ಪ ಮೂಲ್ಯ ಮೃತಪಟ್ಟವರು.ರಾತ್ರಿ ಮನೆಗೆ ಸಿಡಿಲು ಬಡಿದಿದೆ, ಸುಮಾರು 12.30ರ ಬಳಿಕ ಘಟನೆ ನಡೆದಿದ್ದು, ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇದೇ ಸಂದರ್ಭ ಮನೆಗೂ ಸಿಡಿಲಾಘಾತದಿಂದ ಹಾನಿಗಳುಂಟಾಗಿವೆ. ವಿದ್ಯುತ್ ಉಪಕರಣಗಳು ಸುಟ್ಟುಹೋಗಿವೆ.

ಬಂಟ್ವಾಳ :ಸಿಡಿಲು ಬಡಿದು ವ್ಯಕ್ತಿ ಮೃತ್ಯು Read More »

ಕರಾವಳಿ

ಗೃಹರಕ್ಷಕರು ಚುನಾವಣಾ ಕರ್ತವ್ಯ ನಿರ್ವಹಿಸಿ- ಚೂಂತಾರು 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಗುರುತಿನ ಚೀಟಿಯನ್ನು ಪಡೆಯದ ಗೃಹರಕ್ಷಕರು ಜಿಲ್ಲಾ ಗೃಹರಕ್ಷಕದಳ ಕಛೇರಿಗೆ ಬಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಸೂಚಿಸಿದರು. ಅವರು ಡಿಸೆಂಬರ್ 10 ರಂದು ಸುಳ್ಯ ಘಟಕಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಚರ್ಚಿಸಿದರು ಹಾಗೂ ಗೃಹರಕ್ಷಕರ ಕುಂದು ಕೊರತೆಗಳನ್ನು ಆಲಿಸಿದರು.ಸುಳ್ಯ ಘಟಕದ ಘಟಕಾಧಿಕಾರಿ ಜಯಂತ್

ಗೃಹರಕ್ಷಕರು ಚುನಾವಣಾ ಕರ್ತವ್ಯ ನಿರ್ವಹಿಸಿ- ಚೂಂತಾರು  Read More »

ಕರಾವಳಿ

ಮಗುವಿನ ಹಕ್ಕುಗಳ ಉಲ್ಲಂಘನೆಯಾದ್ದಲ್ಲಿ ಮಕ್ಕಳ ಸಹಾಯವಾಣಿ ➤1098 ಕರೆ ಮಾಡಿ- ಡಿ ಶಂಕರಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಪ್ರತಿಯೊಂದು ಮಗುವಿನ ಹಕ್ಕುಗಳ ಉಲ್ಲಂಘನೆಯಾಗಿದೆಂದು ತಿಳಿದಾಗ ಯಾವುದೇ ಹಿಂಜರಿಕೆಯನ್ನು ಮಾಡದೇ ಮಕ್ಕಳ ಸಹಾಯವಾಣಿ -1098 ತಕ್ಷಣ ಕರೆ ಮಾಡಿ ಮಾಹಿತಿ ನೀಡಿದರೆ ಮಗುವಿನ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಿ ಶಂಕರಪ್ಪ ಹೇಳಿದರು. ಅವರು ಬುಧವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಯುನಿಸೆಫ್ ಹೈದರಬಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮಂಗಳೂರು, ಜಿಲ್ಲಾ

ಮಗುವಿನ ಹಕ್ಕುಗಳ ಉಲ್ಲಂಘನೆಯಾದ್ದಲ್ಲಿ ಮಕ್ಕಳ ಸಹಾಯವಾಣಿ ➤1098 ಕರೆ ಮಾಡಿ- ಡಿ ಶಂಕರಪ್ಪ Read More »

ಕರಾವಳಿ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಪಾನ್ ಮಸಾಲಗಳನ್ನು ಜಗಿದು ಉಗುಳುವುದು ಶಿಕ್ಷಾರ್ಹ ಅಪರಾಧ ➤ ಡಾ. ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11:ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಸೇವನೆ ಹಾಗೂ ತಂಬಾಕು ಉತ್ಪನ್ನ ಜಗಿದು ಉಗಿಯುವುದು ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.  ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನುದ್ದೇಶಿ ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ್ದು ಇದನ್ನು ಉಲ್ಲಂಘನೆ ಮಾಡಿದವರಿಗೆ ರೂ. 200 ಗಳ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಪಾನ್ ಮಸಾಲಗಳನ್ನು ಜಗಿದು ಉಗುಳುವುದು ಶಿಕ್ಷಾರ್ಹ ಅಪರಾಧ ➤ ಡಾ. ರಾಜೇಂದ್ರ ಕೆ.ವಿ Read More »

ಕರಾವಳಿ
Scroll to Top