Kadaba

ಶಸ್ತ್ರಾಸ್ತ್ರಗಳ ಠೇವಣಿ ➤ ಪರಿಷ್ಕøತ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: 2020 ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದುಗ್ರಾಮ ಪಂಚಾಯಿತಿ ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹೊರತುಪಡಿಸಿ ಉಳಿದಂತೆ ಎಲ್ಲಾಗ್ರಾಮ ಪಂಚಾಯಿತಿಗಳಿಗೊಳಪಟ್ಟ ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಪರವಾನಿಗೆ ಹೊಂದಿರುವಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸುವಂತೆ ಜಿಲ್ಲಾಧಿಕಾರಿ ಡಾರಾಜೇಂದ್ರ ಕೆ.ವಿ ಪರಿಷ್ಕೃತವಾಗಿ ಆದೇಶಿಸಿದ್ದಾರೆ.   ಮಂಗಳೂರು ನಗರ ಪೊಲೀಸ್ […]

ಶಸ್ತ್ರಾಸ್ತ್ರಗಳ ಠೇವಣಿ ➤ ಪರಿಷ್ಕøತ ಆದೇಶ Read More »

ಕರಾವಳಿ, ಕರ್ನಾಟಕ

ಪುತ್ತೂರು : ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.08: ಪುತ್ತೂರಿನ ಸೆಂಟ್ಯಾರ್ ಬಳಿ ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್ ಸಮೀಪ ಟೈಲ್ಸ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಳೆದ ದಿನ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಯತೀಶ್ ರವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು : ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ Read More »

ಕರಾವಳಿ

ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಹೃದಯಾಘಾತ ➤ ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ

(ನ್ಯೂಸ್ ಕಡಬ) newskadaba.com ಕಾಪು, ಡಿ.08: ಕಾಪುವಿನ ವಸತಿ ಸಂಕೀರ್ಣವೊಂದರಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಯೋರ್ವರು ಹೃದಯಾಘಾತದಿಂದ ಮೃತ ಪಟ್ಟ ಘಟನೆ ಒಂದು ವಾರದ ಬಳಿಕ ಬೆಳಕಿಗೆ ಬಂದಿದೆ.ಕಾಪುವಿನ ಕಾಪುವಿನ ಸಿಟಿ ಸಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಯಾರ ಜೊತೆಗೆ ಬೆರೆಯುತ್ತಿರಲಿಲ್ಲ, ತಾನಯ್ತು ತನ್ನ ಕೆಲಸವಾಯ್ತು ಎಂಬಂತೆ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗಿನ ಜಾವ ಅವರ ರೂಮಿನಿಂದ ಕೆಟ್ಟ ವಾಸನೆ ಹೊರ ಬರುತ್ತಿದ್ದದ್ದನ್ನು ಗಮನಿಸಿದ ಪಕ್ಕದ ಕೋಣೆಯ ನಿವಾಸಿಗಳು ಕಾಪು ಪೋಲಿಸರಿಗೆ ತಿಳಿಸಿದ್ದಾರೆ. ಕಾಪು

ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಹೃದಯಾಘಾತ ➤ ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ Read More »

ಕರಾವಳಿ

ಮೂಡುಬಿದಿರೆ :ಪಾಳು ಬಿದ್ದ ಕಟ್ಟಡದಲ್ಲಿ ನೇಣಿಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಡಿ.08: ಯುವಕನೋರ್ವ ಡಿ.07 ರ ಸಂಜೆ ಮನೆ ಸಮೀಪದ ಪಾಳುಬಿದ್ದ ಕಟ್ಟಡದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ.     ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಶಿರ್ತಾಡಿ ಪೇಟೆಯ ಮೆಡಿಕಲ್ ನಲ್ಲಿ ಉದ್ಯೋಗಿಯಾಗಿದ್ದು, ಕೆಲಸ ಮುಗಿದ ಬಳಿಕ ಸಂಜೆ ನಾಲ್ಕು ಗಂಟೆಗೆ ಮನೆಗೆ ಬಂದಿದ್ದ. ಬಳಿಕ ಮನೆ ಪರಿಸರದಲ್ಲಿ ಸುತ್ತಾಡಿ ಬರುವೆನ್ನೆಂದು ಹೇಳಿ ಹೋಗಿದ್ದ. ರಾತ್ರಿ ವೇಳೆಗೆ ಸಂದೀಪ್ ಮನೆಗೆ ಮನೆಗೆ ಬಾರದಿರುವುದನ್ನು

ಮೂಡುಬಿದಿರೆ :ಪಾಳು ಬಿದ್ದ ಕಟ್ಟಡದಲ್ಲಿ ನೇಣಿಗೆ ಶರಣಾದ ಯುವಕ Read More »

ಕರಾವಳಿ

ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಸುಳ್ಯ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮಿ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.08: ಈಗಾಗಲೇ ಗ್ರಾಮ ಪಂಚಾಯತ್ ಚುನಾವಣೆ ಹತ್ತಿರವಾಗುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಯಕ್ಕೆ ಹೊಸ ತಹಶೀಲ್ದಾರ್ ರನ್ನು ನೇಮಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಸುಳ್ಯ ತಹಶೀಲ್ದಾರ್ ಅನಂತಶಂಕರ್ ರವರು ಕಡಬ ತಹಶೀಲ್ದಾರ್ ಆಗಿಯೂ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಶಾಖೆಯ ತಹಶೀಲ್ದಾರ್ ಆಗಿರುವ ಕು. ಅನಿತಾಲಕ್ಷ್ಮಿ ಅವರನ್ನು ಸುಳ್ಯ ತಹಶೀಲ್ದಾರ್ ಆಗಿ ನೇಮಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು

ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಸುಳ್ಯ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮಿ ನೇಮಕ Read More »

ಕರಾವಳಿ

ಬೆಳ್ತಂಗಡಿ :ಏಣಿಯಿಂದ ಕಾಲುಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.08:  ಮನೆಯ ಮಹಡಿ ಹತ್ತುವ ವೇಳೆ ಏಣಿಯಿಂದ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಾಯಗೊಂಡಿದ್ದ ಸುಲೇಮಾನ್ (34) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ಘಟನೆ ಭಾನುವಾರ ನಡೆದಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರಿಯರರನ್ನು ಅಗಲಿದ್ದಾರೆ.  

ಬೆಳ್ತಂಗಡಿ :ಏಣಿಯಿಂದ ಕಾಲುಜಾರಿ ಬಿದ್ದು ಮೃತ್ಯು Read More »

ಕರಾವಳಿ

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.08: ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ವರು ಆರೋಪಿತರು ಒಂದೇ ಬಡಾವಣೆಯ ನಿವಾಸಿಗಳು. ಈ ಪೈಕಿ ಒಬ್ಬ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಮನೋಜ್, ಪ್ರಜ್ಬಲ್, ವಿನಯ್, ಸಂದೀಪ್ ಎಂಬವರನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಬಂಧಿತರೆಲ್ಲರೂ ಒಂದೇ ಬಡಾವಣೆಯವರಾಗಿದ್ದು, 20 ರಿಂದ 23 ವಷರ್ದವರಾಗಿದ್ದಾರೆ. ಬಂಧಿತರ ಪೈಕಿ

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಗುಡ್ಡೆದ ಭೂತ’ ಖ್ಯಾತಿಯ ನಟ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 07: ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿ ನಟ, ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ (79 ) ಇಂದು ಮಧ್ಯಾಹ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.   ರಂಗ ನಿರ್ದೇಶಕರಾಗಿ, ಕಥೆಗಾರ, ಕವಿಯಾಗಿ, ನಟರಾಗಿದ್ದ ಅವರು ಉಡುಪಿಯ ಸಮೂಹ ಸಂಸ್ಥೆ ಸಂಸ್ಥಾಪಕರಾಗಿ,ನಾಟಕ, ನೃತ್ಯ ರೂಪಕ ಮೂಲಕ ರಾಜ್ಯಾದ್ಯಂತ ಜನಮನ್ನಣೆ ಗಳಿಸಿದ್ದರು. ನಾಡಿನಾದ್ಯಂತ 50 ಕ್ಕೂ ಹೆಚ್ಚು ನಾಟಕಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಹೊಂದಿರುವ ಉದ್ಯಾವರ ಮಾಧವಾಚಾರ್ಯರು ರಾಜ್ಯೋತ್ಸವ, ರಂಗ ವಿಶಾರದ ಪ್ರಶಸ್ತಿಗೆ

‘ಗುಡ್ಡೆದ ಭೂತ’ ಖ್ಯಾತಿಯ ನಟ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ವಿಧಿವಶ Read More »

ಕರಾವಳಿ

ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 07: ಕೊರೊನಾದಿಂದ ಬಳಲುತ್ತಿದ್ದ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಯೇ ರಿಶ್ತಾ ಕ್ಯಾ ಕೆಹಲಾತಾ ಹೈ, ಉಡಾನ್, ಜೀತ್ ಗಯಿ ತೋ ಪಿಯಾ ಮೋ ಸೇರಿದಂತೆ ಹಲವು ಧಾರಾವಾಹಿಗಳು ಹಾಗೂ ಕೆಲವು ಸಿನಿಮಾಗಳಲ್ಲಿ ದಿವ್ಯಾ ನಟಿಸಿದ್ದರು.ನಟಿ ಶಿಲ್ಪಾ ಶಿರೋಡ್ಕರ್ ಇನ್ಸ್ಟಾಗ್ರಾಮ್ ಮೂಲಕ ಸಂತಾಪ ಸೂಚಿಸಿದ್ದು, ಭಟ್ನಾಗರ್ ಅವರು ನನ್ನ ಪ್ರೀತಿಯ ಗೆಳತಿಯಾಗಿದ್ದಳು, ಆಕೆಯ ನಿಧನದಿಂದ ನನಗೆ ತುಂಬಾ ದುಃಖವಾಗಿದೆ ಎಂದು ಬರೆದಿದ್ದಾರೆ. ನಟಿ ದೇವಲೋನಾ ಸೇರಿದಂತೆ

ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.! Read More »

ಕರಾವಳಿ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07: ರಾಜ್ಯದಲ್ಲೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತೇವೆ, ಇದರಲ್ಲಿ ಅನುಮಾನವೇ ಇಲ್ಲ. ವಿಧಾನಸಭೆಯಲ್ಲಿ ಬಿಲ್ ಮಂಡನೆ ಮಾಡ್ತೇವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು ಯುಪಿ ಸರ್ಕಾರ ಈಗಾಗಲೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ನಾನುಕೂಡ ಅಲ್ಲಿಗೆ ತೆರಳಿ ಕಾಯ್ದೆಯ ಬಗ್ಗೆ ಅಧ್ಯಯನ ನಡೆಸಿದ್ದೇನೆ. ಅಲ್ಲಿನ ಸರ್ಕಾರದ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಕರ್ನಾಟಕದಲ್ಲೂ ಕೂಡ ಗೋ ಹತ್ಯೆ ನಿಷೇಧ ಕಾಯ್ದೆ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ Read More »

ಕರ್ನಾಟಕ
Scroll to Top