Kadaba

ತೊಡಿಕಾನ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ತೊಡಿಕಾನ, ಡಿ. 02: ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ಮತ್ಸ್ಯ ತೀರ್ಥ ನದಿ ತಡೆಗೋಡೆಗೆ ಗುದ್ದಲಿ ಪೂಜೆ ನ.27 ರಂದು ನಡೆಯಿತು.     ಕಾರ್ಯಕ್ರಮದಲ್ಲಿ ಶಾಸಕ ಎಸ್.ಅಂಗಾರ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಯ.ಎಂ. ಹರೀಶ್ ಕಂಜಿಪಿಲಿ, ತಾ.ಪಂ. ಸದಸ್ಯೆ ಶ್ರೀಮತಿ ಪುಷ್ಪಾ ಮೇದಪ್ಪ. ದೀಪಕ್ ಕುತ್ತಮೊಟ್ಟೆ, ಸಂತೋಷ್ ಕುತ್ತಮೊಟ್ಟೆ, ಆನಂದ ಕಲ್ಲಗದ್ದೆ, ಕೇಶವ ಕೊಳಲುಮೂಲೆ, ಉಮಾಶಂಕರ, ಜನಾರ್ದನ, ಕೆ.ಕೆ ನಾರಾಯಣ, ಬಾಳಕೃಷ್ಣ ಕೆ.ಕೆ. ಮೊದಲಾದವರು ಉಪಸ್ಥಿತರಿದ್ದರು.  

ತೊಡಿಕಾನ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗುದ್ದಲಿ ಪೂಜೆ Read More »

ಕರಾವಳಿ

ಕುಲ್ಕುಂದ: ಸಾಂಕೇತಿಕ ಜಾನುವಾರು ಜಾತ್ರೆ ಆಚರಣೆ

(ನ್ಯೂಸ್ ಕಡಬ) newskadaba.com ಕುಲ್ಕುಂದ, ಡಿ. 02: ಕುಲ್ಕುಂದ ಜಾನುವಾರು ಜಾತ್ರೆಯನ್ನು ಸಾಂಕೇತಿಕವಾಗಿ ಕುಲ್ಕುಂದ ಬಸವನಮೂಲೆಯ ಬಸವೇಶ್ವರ ದೇವಸ್ಥಾನದಲ್ಲಿ ನ.30 ರಂದು ಆಚರಿಸಲಾಯಿತು.     ಬೆಳಿಗ್ಗೆ ಗೋ ಪೂಜೆ ಕಾರ್ಯಕ್ರಮ ನಡೆಸಲಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯವರು, ಬಸವೇಶ್ವರ ದೇವಸ್ಥಾನದ ಆಡಳಿತ ಮಮಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಸದಸ್ಯರಾದ ರಾಜೇಶ್ ಕುಲ್ಕುಂದ, ಚಂದ್ರಶೇಖರ ಬಸವನ ಮೂಲೆ, ಬಾಲಕೃಷ್ಣ, ರವೀಂದ್ರ ಕುಮಾರ್ ರುದ್ರಪ್ಪಾದ ಹರೀಶ್ ಇಂಜಾಡಿ. ರವಿಕಕ್ಕೆಪದವು, ರಿಕೇಶ್, ಗೋಪಾಲ ಎಣ್ಣೆಮಜಲು ಮತ್ತಿತರರು ಉಪಸ್ಥಿರತರಿದ್ದರು. ಪೂಜ ಕಾರ್ಯಕ್ರಮವನ್ನು

ಕುಲ್ಕುಂದ: ಸಾಂಕೇತಿಕ ಜಾನುವಾರು ಜಾತ್ರೆ ಆಚರಣೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ :ಈ ಬಾರಿ ಕುಕ್ಕೆ ಸುಬ್ರಹ್ಮಣ್ಯನ ಬ್ರಹ್ಮರಥ ಎಳೆಯಲು ಭಕ್ತರಿಗಿಲ್ಲ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಬಾರಿ ರಥೋತ್ಸವದಲ್ಲಿ ಭಕ್ತರ ಪಾಲ್ಗೊಳ್ಳುವಿಕೆಗೆ ನಿಷೇಧ ಹೇರಲಾಗಿದೆ. ಪ್ರತೀ ವರ್ಷ ಚಂಪಾಷಷ್ಠಿಯಂದು ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯುತ್ತಿದ್ದು, ಈ ರಥೋತ್ಸವದಲ್ಲಿ ರಥ ಎಳೆಯಲು ಭಕ್ತರಿಗೂ ಅವಕಾಶವನ್ನು ಕಲ್ಪಿಸಲಾಗುತ್ತಿತ್ತು. ಆದರೆ, ಈ ಬಾರಿ ಕೋವಿಡ್-19 ಹಿನ್ನಲೆಯಲ್ಲಿ ಭಕ್ತರಿಗೆ ರಥ ಎಳೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಕ್ಷೇತ್ರದ ಸಂಪ್ರದಾಯಕ್ಕೆ ಯಾವುದೇ ರೀತಿಯ ಧಕ್ಕೆ ಬಾರದ ರೀತಿಯಲ್ಲಿ ಈ ಬಾರಿ ಚಂಪಾಷಷ್ಠಿ ಮಹೋತ್ಸವ ನಡೆಸಲು

ಕುಕ್ಕೆ ಸುಬ್ರಹ್ಮಣ್ಯ :ಈ ಬಾರಿ ಕುಕ್ಕೆ ಸುಬ್ರಹ್ಮಣ್ಯನ ಬ್ರಹ್ಮರಥ ಎಳೆಯಲು ಭಕ್ತರಿಗಿಲ್ಲ ಅವಕಾಶ Read More »

ಕರಾವಳಿ

ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಿ ಅಭಿವೃದ್ಧಿಯ ಜೀವನ ನಡೆಸಿ ➤ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಕೋವಿಡ್‍ನಿಂದ ದೇಶದಾದ್ಯಾಂತ ಲಾಕ್‍ಡೌನ್ ಜಾರಿ ಮಾಡಿದ ಹಿನ್ನಲೆ ವ್ಯಾಪಾರಿಗಳು ಉದ್ಯೋಗವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಮತ್ತೆ ವ್ಯಾಪಾರ ಕೈಗೊಳ್ಳಲು ತುರ್ತು ಆರ್ಥಿಕ ಬಂಡವಾಳವನ್ನು ಕಿರುಸಾಲ ರೂಪದಲ್ಲಿ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ದ.ಕ ಜಿಲ್ಲಾ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ತಿಳಿಸಿದರು. ಅವರು ಇಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದ.ಕ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ , ನಗರಸಭೆ, ಪುರಸಭೆ ಮತ್ತು ಪಟ್ಟಣ

ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಿ ಅಭಿವೃದ್ಧಿಯ ಜೀವನ ನಡೆಸಿ ➤ ನಳಿನ್ ಕುಮಾರ್ ಕಟೀಲ್ Read More »

ಕರ್ನಾಟಕ

ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದಾಗ ಹೆಚ್‍ಐವಿ ಸೋಂಕು ತಡೆಗಟ್ಟಲು ಸಾಧ್ಯ- ಎ.ಜೆ ಶಿಲ್ಪ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಮೂಲಕ ಹೆಚ್‍ಐವಿ ಸೋಂಕನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ ಶಿಲ್ಪ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳ್ರರು ನಗರ ಪೊಲೀಸ್, ಜಿಲ್ಲಾ ವಾರ್ತಾ

ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದಾಗ ಹೆಚ್‍ಐವಿ ಸೋಂಕು ತಡೆಗಟ್ಟಲು ಸಾಧ್ಯ- ಎ.ಜೆ ಶಿಲ್ಪ Read More »

ಕರಾವಳಿ

ಮೀನುಗಾರಿಕಾ ಬೋಟು ದುರಂತ ➤ ಮೀನಿನ ಬಲೆಯಲ್ಲಿ ಮೀನುಗಾರನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಅರಬ್ಬೀ ಸಮುದ್ರದಲ್ಲಿ ದೋಣಿ ದುರಂತ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾ ಮರೆಯಾದ ಮೀನುಗಾರರ ಪೈಕಿ ಮತ್ತೊಂದು ಮೀನುಗಾರನ ಶವ ಪತ್ತೆಯಾಗಿದೆ.   ಬೋಟ್ ಮುಳುಗಡೆಯಾದ ಜಾಗದ ಸ್ವಲ್ಪ ದೂರದಲ್ಲಿ ಶವ ಪತ್ತೆಯಾಗಿದ್ದು ಮೀನಿಗೆ ಹಾಕಿದ್ದ ಬಲೆಯಲ್ಲಿ ಮೀನುಗಾರ ಅನ್ಸರ್ ನ ಶವ ಪತ್ತೆಯಾಗಿದೆ. ಇನ್ನು ಅನ್ಸರ್ ಮಂಗಳೂರಿನ ಬೆಂಗ್ರೆ ನಿವಾಸಿ. ತಣ್ಣೀರುಬಾವಿ ಮುಳುಗು ತಜ್ಞರ ತಂಡದಿಂದ ಕಾರ್ಯಾಚರಣೆಯಲ್ಲಿ ಅನ್ಸರ್ ಶವ ಪತ್ತೆಯಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ

ಮೀನುಗಾರಿಕಾ ಬೋಟು ದುರಂತ ➤ ಮೀನಿನ ಬಲೆಯಲ್ಲಿ ಮೀನುಗಾರನ ಶವ ಪತ್ತೆ Read More »

ಕರಾವಳಿ

ಮಂಗಳೂರು :ಮೀನುಗಾರಿಕೆ ವಹಿವಾಟು ಸ್ಥಗಿತಗೊಳಿಸಿ ಮಧ್ಯರಾತ್ರಿ ಧಿಡೀರ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಆಳ ಸಮುದ್ರದಲ್ಲಿ ಮುಳುಗಿ ಆರು ಮಂದಿ ನಾಪತ್ತೆಯಾಗಿರುವ ಘಟನೆಯಲ್ಲಿ ಇನ್ನೂ ನಾಲ್ವರ ಮೃತದೇಹ ಪತ್ತೆಯಾಗದಿರುವ ಹಿನ್ನೆಲೆಯಲ್ಲಿ, ಮೀನುಗಾರಿಕೆ ನಿಲ್ಲಿಸುವಂತೆ ಬೆಂಗರೆ ನಾಗರಿಕರು ಮಧ್ಯರಾತ್ರಿ ಶಾಂತಿಯುತ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಉಳ್ಳಾಲ ಮೂಲದ ಶ್ರೀ ರಕ್ಷಾ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿ 16 ಮಂದಿ ಪಾರಾಗಿ, ಆರು ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ ಇಬ್ಬರ ಮೃತ ದೇಹ ಮಾತ್ರ ಪತ್ತೆಯಾಗಿತ್ತು.ಮೀನುಗಾರಿಕೆಗೆ ತೆರಳಿ ಇಂತಹ ಅನಾಹುತ

ಮಂಗಳೂರು :ಮೀನುಗಾರಿಕೆ ವಹಿವಾಟು ಸ್ಥಗಿತಗೊಳಿಸಿ ಮಧ್ಯರಾತ್ರಿ ಧಿಡೀರ್ ಪ್ರತಿಭಟನೆ Read More »

ಕರಾವಳಿ

ಈಶ್ವರಮಂಗಲ: ಕರೆಂಟ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಈಶ್ವರಮಂಗಲ, ಡಿ. 02: ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಕಾವು ಈಶ್ವರಮಂಗಲ ರಸ್ತೆಯ ನೆಲ್ಲಿತ್ತಡ್ಕ ಎಂಬಲ್ಲಿ ಇಂದು ನಸುಕಿನ ಜಾವ ನಡೆದಿದೆ.     ಚಾಲಕ ಮುಸ್ತಾಕ್ ಅವರು ಚಲಾಯಿಸುತ್ತಿದ್ದ ಕಾರು ಮೂಡಬಿದ್ರೆ ಕಡೆಯಿಂದ ಅದೂರು ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಠಾಣೆಯ ಪೊಲೀಸರು, ಮೆಸ್ಕಾಂ

ಈಶ್ವರಮಂಗಲ: ಕರೆಂಟ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ

ಉಡುಪಿ: ಅಂಧ ಕಲಾವಿದನ ಹಣ ಜೇಬುಗಳ್ಳರ ಪಾಲು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 02 : ಅಂಧ ಸಂಗೀತ ಕಲಾವಿದನ ಹಣವನ್ನು ಜೇಬುಗಳ್ಳರು ದೋಚಿದ್ದು, ಕಲಾವಿದ ತನ್ನೂರು ಬಾಗಲಕೋಟೆಗೆ ತೆರಳಲು ಟಿಕೆಟ್ ಗೆ ಹಣವಿಲ್ಲದೆ ಉಡುಪಿಯಲ್ಲಿ ಅಸಹಾಯಕ ಪರಿಸ್ಥಿತಿ ಎದುರಿಸಿದ್ದಾರೆ. ಈ ಸಂದರ್ಭ ಉಡುಪಿ ನಾಗರಿಕ ಸಮಿತಿಯ ಸಹೃದಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ನೆರವಿಗೆ ಬಂದಿದ್ದು, ಅಂಧ ಕಲಾವಿದನನ್ನು ಬಾಗಲಕೋಟೆಗೆ ಬಸ್ಸು ಹತ್ತಿಸಿ ಕಳಿಸಿಕೊಟ್ಟಿದ್ದಾರೆ. ನಗರಸಭೆ ಆಸ್ತಿ ತೆರಿಗೆ ಸಲಹಾ ಕೇಂದ್ರದ ಸಿಬ್ಬಂದಿ ವಿದ್ಯಾ, ಚಂದ್ರಾವತಿ, ಪೂರ್ಣಿಮಾ, ತ್ರಿವೇಣಿ ಅವರು ಹಸಿದ

ಉಡುಪಿ: ಅಂಧ ಕಲಾವಿದನ ಹಣ ಜೇಬುಗಳ್ಳರ ಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕೈಕಂಬ: ಕೋಟೆಸಾರ್ ಬಳಿಯಿದ್ದ ಕಬ್ಬಿನ ಹಾಲಿನ ಯಂತ್ರ ಎಗರಿಸಿದ ಖದೀಮರು

(ನ್ಯೂಸ್ ಕಡಬ) newskadaba.com ಕೈಕಂಬ ಡಿ. 02 : ಬಿಳಿನೆಲೆ ಗ್ರಾಮದ ಕೈಕಂಬದಲ್ಲಿ ಕಬ್ಬಿನ ಹಾಲಿನ ಯಂತ್ರವನ್ನು ಕಳ್ಳರು ಕಳೆದ ದಿನ ರಾತ್ರಿ ಕಳವುಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.   ಕೊರೋನಾ ಮಹಾಮಾರಿಯಿಂದ ಉದ್ಯೋಗ್ಯವನ್ನು ಕಳೆದುಕೊಂಡ ನೇಮಿಚಂದ್ರ ವೆಂಬುವರು ಕೈಕಂಬ ಸಮೀಪದ ಕೋಟೆಸಾರ್ ನದಿಯಪಕ್ಕ ಜೀವನ ನಿರ್ವಹಣೆಗಾಗಿ ಕಬ್ಬಿನ ಹಾಲಿನ ಯಂತ್ರವನ್ನು ಬಳಸಿಕೊಂಡು ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದರು.  ಆದರೆ, ಕಳೆದ ದಿನ ಖದೀಮರು ಈ ಕಬ್ಬಿನ ಹಾಲಿನ ಯಂತ್ರವನ್ನು ಕಳವುಗೈದಿದ್ದಾರೆ. ಇನ್ನು ಈ ಯಂತ್ರ ಎಲ್ಲಿಯಾದರೂ ಕಂಡು ಬಂದಲ್ಲಿ

ಕೈಕಂಬ: ಕೋಟೆಸಾರ್ ಬಳಿಯಿದ್ದ ಕಬ್ಬಿನ ಹಾಲಿನ ಯಂತ್ರ ಎಗರಿಸಿದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top