Kadaba

ವಿಟ್ಲ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 01: ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಇಂದು ಬೆಳಕಿಗೆ ಬಂದಿದೆ.     ಉಮ್ಮಾರು ಫಾರುಕ್ ರವರ ಮನೆಯಲ್ಲಿ ಈ ಕಳ್ಳತನ ಪ್ರಕರಣ ನಡೆದಿರುವುದಾಗಿ ಮನೆ ಮಂದಿ ತಿಳಿಸಿದ್ದಾರೆ. ಉಮಾರು ಫಾರುಕ್ ರವರು ಮಲಗಿದ್ದ ಕೋಣೆಗೆ ಪ್ರವೇಶಿಸಿದ ಕಳ್ಳರು ಅಲ್ಲಿದ್ದ ಕಪಾಟಿನಲ್ಲಿರಿಸಲಾಗಿದ್ದ ಚಿನ್ನಾಭರಣವನ್ನು ದೋಚಿ ಹಿಂಭಾಗಿಲ ಮೂಲಕ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ […]

ವಿಟ್ಲ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ

ಎಲಿಮಲೆ: ಗೋ ಹತ್ಯೆ ನಿಷೇದ ಜಾರಿಗೆ ಒತ್ತಾಯಿಸಿ ಸಿಎಂವರಿಗೆ ಪಂಚಾಯತ್ ಮೂಲಕ ಮನವಿ

(ನ್ಯೂಸ್ ಕಡಬ) newskadaba.com ಎಲಿಮಲೆ, ಡಿ. 01: ವಿಶ್ವ ಹಿಂದೂ ಪರಿಷತ್ ಭಜರಂಗದಳ ಅಯೋಧ್ಯೆ ಶಾಖೆ ಎಲಿಮಲೆ ಇದರ ವತಿಯಿಂದ ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿಯವರಿಗೆ ಪಂಚಾಯತ್ ಮೂಲಕ ಮನವಿ ಸಲ್ಲಿಸಲಾಯಿತು.   ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪುರುಷೋತ್ತಮ್ಮ ಚಿತ್ತಡ್ಕ, ಕಿರಣ್ ಗುಡ್ಡೆಮನೆ, ಭಜರಂಗದಳ ಗೋ ರಕ್ಷಾ ಪ್ರಮುಖ್ ನಾಗರಾಜ್ ಕೇಪಳಕಜೆ, ಸತೀಶ್ ಗುಡ್ಡನಮನೆ, ಧರ್ಮಪಾಲ ಸುಳ್ಳಿ, ಓಂ ಪ್ರಸಾದ್ ಕಜೆ, ದೀಕ್ಷಿತ್ ಚಿತ್ತಡ್ಕ, ನಿತಿನ್ ಗಟ್ಟಿಗಾರು, ತನುಷ್ ಕುಕ್ಕೇಟಿ, ಕಾರ್ಯಕರ್ತರು ಹಾಗೂ ಸದಸ್ಯರು

ಎಲಿಮಲೆ: ಗೋ ಹತ್ಯೆ ನಿಷೇದ ಜಾರಿಗೆ ಒತ್ತಾಯಿಸಿ ಸಿಎಂವರಿಗೆ ಪಂಚಾಯತ್ ಮೂಲಕ ಮನವಿ Read More »

ಕರಾವಳಿ

ಕಡಬ ಪುತ್ತೂರು ತಾಲೂಕಿನಲ್ಲಿ ಇಂದು 4 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಡಿ. 01: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 4 ಮಂದಿಯಲ್ಲಿ ಕರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ 63 ವರ್ಷದ ಮಹಿಳೆಯಲ್ಲಿ ಕೊರೋನ ದೃಢಪಟ್ಟಿದೆ. ಇನ್ನು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ 33 ವರ್ಷದ ವ್ಯಕ್ತಿ, 56 ವರ್ಷದ ಮಹಿಳೆ, ನೆಟ್ಟಣಿಗೆ ಮುಡ್ನೂರಿನ 29 ವರ್ಷದ ಯುವಕನಲ್ಲಿ ಕೊರೋನಾ ಪತ್ತೆಯಾಗಿದೆ.  

ಕಡಬ ಪುತ್ತೂರು ತಾಲೂಕಿನಲ್ಲಿ ಇಂದು 4 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ

ಮಂಗಳೂರು :ಮೀನುಗಾರಿಕಾ ಬೋಟು ದುರಂತ ➤ ಇಬ್ಬರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 01: ಉಳ್ಳಾಲದ ಪಶ್ಚಿಮ ಭಾಗದ ಸಮುದ್ರದಲ್ಲಿ ಸೋಮವಾರ ಸಂಜೆ ಸಂಭವಿಸಿದ ಬೋಟ್ ದುರಂತದ ವೇಳೆ ನಾಪತ್ತೆಯಾಗಿದ್ದ ಆರು ಮಂದಿ ಮೀನುಗಾರರ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದೆ. ತೀವ್ರ ರಕ್ಷಣಾ ಕಾರ್ಯಾಚರಣೆಯ ಬಳಿಕ ಇಬ್ಬರ ಮೃತದೇಹವನ್ನು ಇಂದು ಮಧ್ಯಾಹ್ನದ ವೇಳೆ ಮೇಲೆತ್ತಲಾಗಿದೆ. ಮೃತದೇಹವನ್ನು ಮಂಗಳೂರಿನ ದಕ್ಕೆಗೆ ತರಲಾಗಿದೆ. ಮಂಗಳೂರಿನಲ್ಲಿ ಮೀನುಗಾರಿಕೆಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ದೋಣಿ ಮಗುಚಿದೆ. ಪರಿಣಾಮ 6 ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ ಇಬ್ಬರ ಮೃತ ದೇಹಗಳು ಪತ್ತೆಯಾಗಿದೆ.ಈ ಘಟನೆ

ಮಂಗಳೂರು :ಮೀನುಗಾರಿಕಾ ಬೋಟು ದುರಂತ ➤ ಇಬ್ಬರ ಮೃತದೇಹ ಪತ್ತೆ Read More »

ಕರಾವಳಿ

‘ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಮರಳು ಬುಕ್ಕಿಂಗ್

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 01: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ, 13 ಮರಳು ದಿಬ್ಬಗಳನ್ನು ತೆರವುಗೊಳಿಸಿ ಇದುವರೆಗೆ 80 ಮಂದಿಗೆ ತಾತ್ಕಾಲಿಕ ಪರವಾನಿಗೆಯನ್ನು ವಿತರಿಸಲಾಗಿದ್ದು ತೆರವುಗೊಳಿಸಿದ ಮರಳನ್ನು ‘ಸ್ಯಾಂಡ್ ಬಜಾರ್ ಆ್ಯಪ್’ ಮೂಲಕ ಜಿಲ್ಲೆಯ ಪರಿಮಿತಿಯೊಳಗೆ ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಮತ್ತು ಇತರೆ ಕಾಮಗಾರಿಗಳಿಗೆ ಮರಳನ್ನು ಪೂರೈಸಲು ನವೆಂಬರ್ 27 ರಿಂದ ಚಾಲನೆ ನೀಡಲಾಗಿದ್ದು, ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರು, ಗ್ರಾಹಕರು ‘ಸ್ಯಾಂಡ್

‘ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಮರಳು ಬುಕ್ಕಿಂಗ್ Read More »

ಕರಾವಳಿ

ದೇಶದಲ್ಲಿ 4ವರ್ಷಗಳಲ್ಲೆ ಚಿನ್ನದ ದರ ಅತೀ ಕಡಿಮೆ

(ನ್ಯೂಸ್ ಕಡಬ) newskadaba.com ನವದೆಹಲಿ ಡಿ. 01: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಭಾರೀ ಕುಸಿತವಾಗಿದೆ. ಭಾರತದಲ್ಲಿ ಕಳೆದ 4 ವರ್ಷಗಳಲ್ಲೇ ಅತ್ಯಂತ ಕಡಿಮೆಗೆ ಚಿನ್ನದ ದರ ಕುಸಿದಂತಾಗಿದೆ. ಪ್ರತೀ ಹತ್ತು ಗ್ರಾಂ ಚಿನ್ನದ ದರದಲ್ಲಿ ಶೇಕಡಾ 6 ರಷ್ಟು ಕುಸಿತ ಕಂಡಿದೆ. ಭಾರತದಲ್ಲಿ ಕಳೆದ ಅಗಸ್ಟ್​​ನಲ್ಲಿ ಪ್ರತೀ 10 ಗ್ರಾಂ ಚಿನ್ನದ ಬೆಲೆ 56,200 ರೂಪಾಯಿ ಇತ್ತು, ನಂತರ ಇಲ್ಲಿಯವರೆಗೆ ಒಟ್ಟು 8,500 ರೂಪಾಯಿ ಕುಸಿತವಾಗಿದ್ದು, ಆದರಲ್ಲಿ ಇದೊಂದು ತಿಂಗಳಲ್ಲೇ 3,050 ರೂಪಾಯಿ ಕುಸಿತ ದಾಖಲಾಗಿದೆ. ಇದು

ದೇಶದಲ್ಲಿ 4ವರ್ಷಗಳಲ್ಲೆ ಚಿನ್ನದ ದರ ಅತೀ ಕಡಿಮೆ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 01: ದ.ಕ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಗಾಂಜಾ ಪ್ರಕರಣಗಳು ಕೇಳಿ ಬರುತಿದ್ದು, ಪುತ್ತೂರು ನಗರ ಪೊಲೀಸರು ಇದೀಗ ಮತ್ತೊಮ್ಮೆ ಗಾಂಜಾ ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿ ಪುತ್ತೂರಿನ ನೈತಾಡಿ ಸಮೀಪ ಎಸ್.ಐ ಜಂಬೂರಾಜ್ ನೇತೃತ್ವದ ದಾಳಿ ನಡೆಸಿ ಸುಮಾರು 4 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ನೈತಾಡಿ ಸಮೀಪ ಎರಡು ಕಾರಿನಲ್ಲಿ ನಾಲ್ಕು ಮಂದಿ ಅಕ್ರಮವಾಗಿ ಗಾಂಜಾ ಮಾರಾಟ ವ್ಯವಹಾರದ ವೇಳೆ ಜಿಲ್ಲಾ ಪೊಲೀಸ್

ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಸ್ವಾತಂತ್ರ್ಯ ಹೋರಾಟಗಾರ ಬಾಪುಂಞ ಹಾಜಿ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01: ಸ್ವಾತಂತ್ರ್ಯ ಹೋರಾಟಗಾರ, ಸುಳ್ಯ ಮಂಡೆಕೋಲು ಗ್ರಾಮದ ಮುರೂರು ಶತಾಯುಷಿ, ಬಾಪುಂಞ ಹಾಜಿ(102) ರವರು ಅಲ್ಪಕಾಲದಿಂದ ಅಸೌಖ್ಯದಿಂದ ಬಳಲುತ್ತಿದ್ದು, ಕೆವಿಜಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.     ಮೃತರು ಮಕ್ಕಳಾದ ಅಬ್ದುಲಾ ಹಾಜಿ ಪಂಜಿಕ್ಕಲ್ಲು, ಮಹಮ್ಮದ್ ಕುಂಞ ಮುರೂರು, ಯೂಸುಫ್ ಮುರೂರು, ಇಬ್ರಾಹಿಂ ಮುರೂರು, ಮರಿಯಮ್ಮ ಎಂ.ಬಿ, ಖತೀಜಾ ಕಾಸರಗೋಡು, ಕುಂಙಲಿಮ್ಮ ಪಳ್ಳತ್ತೂರು, ಸಫಿಯಾ ಮುರೂರು, ನೆಫಿಸಾ ಪಂಜಿಕಲ್ಲು ರವರನ್ನು ಅಗಲಿದ್ದಾರೆ.

ಸುಳ್ಯ: ಸ್ವಾತಂತ್ರ್ಯ ಹೋರಾಟಗಾರ ಬಾಪುಂಞ ಹಾಜಿ ನಿಧನ Read More »

ಕರಾವಳಿ

ಮಂಗಳೂರಿನಲ್ಲಿ ಮತ್ತೊಂದು ದೋಣಿ ದುರಂತ ➤ 6 ಮಂದಿ ಮೀನುಗಾರರು ನಾಪತ್ತೆ!

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 01: ಮಂಗಳೂರಿನಲ್ಲಿ ಮೀನುಗಾರಿಕೆಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ದೋಣಿ ಮಗುಚಿದೆ. ಪರಿಣಾಮ 6 ಮಂದಿ ನಾಪತ್ತೆಯಾಗಿದ್ದಾರೆ‌.ಇತ್ತಿಚೇಗೆ ಮೀನುಗಾರಿಕೆ ವೇಳೆ ಒಂದಲ್ಲಾ ಒಂದು ರೋತಿಯಲ್ಲಿ ದೋಣಿ ದುರಂತಗಳು ಸಂಭವಿಸುತ್ತಲೇಯಿದೆ.   ಈ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಬೋಳಾರ ಮೂಲದ ಶ್ರೀರಕ್ಷಾ ಎಂಬ ಬೋಟ್ ದುರಂತಕ್ಕೀಡಾಗಿದೆ. ಮಂಗಳೂರಿನ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದಾಳದ ಮೀನುಗಾರಿಕೆಗೆ ನ. 30ರ ಸೋಮವಾರ  ಈ ಬೋಟ್ ತೆರಳಿತ್ತು. ಮೀನು ತುಂಬಿಕೊಂಡು ವಾಪಸ್ ಬರುವಾಗ ಗಾಳಿಗೆ ಮಗುಚಿಕೊಂಡು ಬಿದ್ದಿದೆ.

ಮಂಗಳೂರಿನಲ್ಲಿ ಮತ್ತೊಂದು ದೋಣಿ ದುರಂತ ➤ 6 ಮಂದಿ ಮೀನುಗಾರರು ನಾಪತ್ತೆ! Read More »

ಕರಾವಳಿ

ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಡಿ. 01: ಹೊಸ ಕೆ.ಎಸ್.ಆರ್.ಟಿ.ಸಿ ಬಸ್ಸು ತಂಗುದಾಣದ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಯುವಕ ನೋರ್ವನನ್ನು ವಶಕ್ಕೆ ಪಡೆದ ಪೊಲೀಸರು ,ಆತನಿಂದ  750 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿ ಧರ್ಮಸ್ಥಳ ಪೊಸೊಳಿಕೆ ನಿವಾಸಿ ಮಂಜುನಾಥ ಆಲಿಯಾಸ್ ಮಂಜು( 29) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷ ಚಂದ್ರಶೇಖರ ಕೆ. ಹಾಗೂ ಸಿಬಂದಿ ಗಸ್ತು ನಡೆಸುತ್ತಿದ್ದಾಗ ಮಂಜುನಾಥ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ

ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top