Kadaba

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸೆ. 26. ಅಪರಿಚಿತ ವೃದ್ದರೋರ್ವರಿಗೆ ಡಿಕ್ಕಿ ಹೊಡೆದು ಬಳಿಕ ಅದೇ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಡಿಕ್ಕಿ ಹೊಡೆದ ಕಾರು ಸಮೇತ ಚಾಲಕ ನಾಪತ್ತೆಯಾದ ಘಟನೆ ಗುರುವಾರದಂದು ನಡೆದಿದೆ. ಗಾಯಾಳು ಅಪರಿಚಿತ ವೃದ್ದ ವ್ಯಕ್ತಿಯನ್ನು ಕಡಬದಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಕುಟ್ರುಪಾಡಿ ಕಡೆಯಿಂದ ವೇಗವಾಗಿ ಬಂದ ಮಹೇಂದ್ರ XUV ವಾಹನ ಮುಖ್ಯ ರಸ್ತೆಗೆ ಏಕಾಏಕಿ ಪ್ರವೇಶಿಸಿದ್ದು, ಈ ವೇಳೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಇಕೋ ವಾಹನ […]

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 26. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯು ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ ಗುರುವಾರದಂದು ನಡೆಯಿತು. ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ದಿಪಡಿಸಲಾಗಿರುವ ಸುಮಾರು 17ಕ್ಕೂ ಹೆಚ್ಚು ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ, ಹಾಗು ಲ್ಯಾಪ್‌ಟಾಪ್

ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ

ನಿವೃತ್ತ ಯೋಧ ದಿ.ಸುಂದರ ಗೌಡ ಅಂಗಣರವರಿಗೆ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ದುಡಿದು ಪರಿಸರದ ಜನರ ಪ್ರೀತಿಗೆ ಪಾತ್ರರಾಗಿ ಇತ್ತೀಚೆಗೆ ನಿಧನರಾದ ಕಡಬ ಅಂಗಣ ಸುಂದರ ಗೌಡ ಅವರಿಗೆ ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಮಹಿಳಾ ವೇದಿಕೆ ವತಿಯಿಂದ ನುಡಿನಮನ ಸಲ್ಲಿಕೆ ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು. ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ

ನಿವೃತ್ತ ಯೋಧ ದಿ.ಸುಂದರ ಗೌಡ ಅಂಗಣರವರಿಗೆ ನುಡಿನಮನ Read More »

ಕರಾವಳಿ

ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ತಾಲೂಕಿನ ರೆಂಜಿಲಾಡಿ ಸ್ಯಾಂತೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಗೈಡ್ಸ್ ಉದ್ಘಾಟನಾ ಕಾರ್ಯಕ್ರಮವು ಶನಿವಾರದಂದು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಭರತ್ ರಾಜ್ ಕೆ. ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಭಾರತ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಧನೆ ಅನ್ನುವ ಬೀಜ ಯಾರ ಬಳಿಯಾದರೂ ಮೊಳಕೆ ಒಡೆಯಲು ಸಾಧ್ಯ. ಶ್ರಮ ಪಟ್ಟರೆ ಸಾಧನೆಗೆ

ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ಇದೀಗ ಮತ್ತಷ್ಟು ಹೊಸತನದೊಂದಿಗೆ “ಟಿವಿಎಸ್ ಜುಪಿಟರ್”; ಕಡಬದ ಅಡಿಗ ಮೋಟಾರ್ಸ್ ನಲ್ಲಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಸದ್ಯ ಯಾವುದೇ ಸ್ಕೂಟರ್ ಖರೀದಿ ಮಾಡಬೇಕೆಂದರೆ ಕನಿಷ್ಠ 1 ಲಕ್ಷ ರೂಪಾಯಿ ಅತ್ಯಗತ್ಯ. ಇದರ ನಡುವೆ ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ 77,400 ರೂಪಾಯಿಗೆ (ಎಕ್ಸ್ ಶೋ ರೂ) ಲಭ್ಯವಿದೆ. ಅತೀ ಕಡಿಮೆ ಡೌನ್ ಪೇಮೆಂಟ್ ನೊಂದಿಗೆ ಬುಕಿಂಗ್ಸ್ ಆರಂಭಿಸಿದ್ದು, ಟೆಸ್ಟ್ ರೈಡ್ ಗೆ ಕೂಡಾ ಲಭ್ಯವಿದೆ. ಟಿವಿಎಸ್ ಜುಪಿಟರ್ 110 ವಿಶೇಷತೆ ಹೊಚ್ಚ ಹೊಸ ನೆಕ್ಸ್ಟ್ ಜೆನ್ 113.3 ಸಿಸಿ ಎಂಜಿನ್, ಬಾಡಿ ಬ್ಯಾಲೆನ್ಸ್

ಇದೀಗ ಮತ್ತಷ್ಟು ಹೊಸತನದೊಂದಿಗೆ “ಟಿವಿಎಸ್ ಜುಪಿಟರ್”; ಕಡಬದ ಅಡಿಗ ಮೋಟಾರ್ಸ್ ನಲ್ಲಿ ಬಿಡುಗಡೆ Read More »

ಕರಾವಳಿ, ತಂತ್ರಜ್ಞಾನ

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಇಲ್ಲಿನ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಡಬದ ಉದ್ಯಮಿ ಶ್ರೀ ಮಹೇಂದ್ರ ಚೌಧರಿಯವರು ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಕನ್ನಡ, ಆಂಗ್ಲ ಭಾಷೆಯ ಜೊತೆಯಲ್ಲಿ ನಾವು ನಮ್ಮ ರಾಷ್ಟ್ರಭಾಷೆಯಾದ ಹಿಂದಿಯನ್ನು ಅಭ್ಯಾಸ ಮಾಡಬೇಕು. ಹಿಂದಿ ಭಾಷೆಯನ್ನು ಎಲ್ಲರೂ ಮಾತನಾಡುವಂತಾಗಬೇಕು ಎಂದರು. ಇನ್ನೋರ್ವ ಅತಿಥಿ ಶಾಲಾ ಆಡಳಿತ ಮಂಡಳಿಯ ಸದಸ್ಯೆಯಾದ ಶ್ರೀಮತಿ ಪ್ರಮೀಳಾ ಲೋಕೇಶ್ ಅವರು ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »

ಕರಾವಳಿ

ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಕರ್ನಾಟಕ ಸರಕಾರ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ಕಡಬ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಸೈಂಟ್ ಜೋಕಿಮ್ಸ್ ಕ್ರೀಡಾಂಗಣದಲ್ಲಿ ನೆರವೇರಿತು. ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಪ್ರಿಂಗ್ಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ನಿವಿನ್ ಕುರಿಯಕೋಸ್ ಕ್ರೀಡಾಕೂಟವನ್ನು ಉದ್ಘಾಟಿಸಿ

ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ Read More »

ಕರಾವಳಿ, ಕ್ರೀಡಾ ನ್ಯೂಸ್

ಸೆ. 22ರಂದು ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 17. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಪುತ್ತೂರು, ಪಟ್ಟಣ ಪಂಚಾಯತ್ ಕಡಬ, ತಾಲೂಕು ಪಂಚಾಯತ್ ಕಡಬ, ತಾಲೂಕು ಯುವಜನ ಒಕ್ಕೂಟ ಕಡಬ, ಸಂತ ಫಿಲೋಮಿನಾ ಕಾಲೇಜು ಪುತ್ತೂರು, ಕಡಬ ಸರಕಾರಿ ಪದವಿ ಪೂರ್ವ ಕಾಲೇಜು, ಕೇಪು ಲಕ್ಷ್ಮೀ ಜನಾರ್ದನ ಯುವಕ ಮಂಡಲ, ಬಿಳಿನೆಲೆ ಯುವಕ ಮಂಡಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ.22ರಂದು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ

ಸೆ. 22ರಂದು ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಕಡಬ: ಸೆ.21ರಂದು ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಕಡಬ ಹಾಗೂ ಪುತ್ತೂರು ತಾಲೂಕುಗಳ ಕರ್ನಾಟಕ ರಾಜ್ಯ ಪ್ರೌಢಶಾಲಾ ಮತ್ತು ಶಿಕ್ಷಕರ ಸಂಘ, ಕಡಬ ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ಬೆಂಗಳೂರಿನ ಪ್ರಣವ್ ಫೌಂಡೇಷನ್ ಇವರಿಂದ ಸಾಧಕ ಶಿಕ್ಷಕರಿಗೆ ಪ್ರಣವ್ ಗುರು ಪುರಸ್ಕಾರ, ಗುರುವಂದನಾ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕಾರ್ಯಾಗಾರ ಕಡಬ ಅನುಗ್ರಹ ಸಭಾಭವನದಲ್ಲಿ ಸೆ. 21ರಂದು ನಡೆಯಲಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಕಡಬ: ಸೆ.21ರಂದು ಗುರುವಂದನಾ ಕಾರ್ಯಕ್ರಮ Read More »

ಕರಾವಳಿ

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. 2025ರ ಸೆಪ್ಟೆಂಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಈ ಕುರಿತು ಸೆ. 13ರ ಶುಕ್ರವಾರದಂದು ಬೆಂಗಳೂರಿನಲ್ಲಿ ಪಶುಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದ್ದು, ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲಭೂತ ಸೌಕರ್ಯಗಳಿಗಾಗಿ ಸರಕಾರ

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ Read More »

ಕರಾವಳಿ
Scroll to Top