kallaje

ಹದಗೆಟ್ಟ ಕಲ್ಲಾಜೆ – ಅಂತಿಬೆಟ್ಟು ರಸ್ತೆಗೆ ಊರವರಿಂದಲೇ ಕಾಯಕಲ್ಪ ► ಸಡಕ್ ರಸ್ತೆಗೆ ಕಾದು ಸುಸ್ತಾಗಿ ಕೊನೆಗೆ ಶ್ರಮದಾನದ ಮೊರೆ ಹೋದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಕಡಬ, ಜೂ.17. ಮರ್ದಾಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಅಂತಿಬೆಟ್ಟು ಮಾರ್ಗವಾಗಿ ಕೋರಿಯಾರ್ ಮೂಲಕ ಕೋಡಿಂಬಾಳ ಸೇರಬೇಕಾದ ಗ್ರಾಮ ಸಡಕ್ ರಸ್ತೆಯು ಮಂಜೂರಾಗಿ ವರ್ಷಗಳೇ ಕಳೆದರೂ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ಈ ಭಾಗದ ಗ್ರಾಮಸ್ಥರೆಲ್ಲ ಸೇರಿಕೊಂಡು ಕೆಸರುಮಯ, ಹೊಂಡ, ಗುಂಡಿಗಳಿಂದ ಕೂಡಿದ ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದ ಘಟನೆ ಭಾನುವಾರದಂದು ‌ನಡೆದಿದೆ. ಕಲ್ಲಾಜೆಯಿಂದ ಅಂತಿಬೆಟ್ಟುವರೆಗಿನ ಸುಮಾರು ೫೦ಕ್ಕೂ ಮೆಲ್ಪಟ್ಟ ಗ್ರಾಮಸ್ಥರು ಒಟ್ಟಾಗಿ ಬೆಳಿಗ್ಗೆಯಿಂದ ಸಂಜೆಯ ತನಕ ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ಥಿಗೊಳಿಸಿದ್ದಾರೆ. […]

ಹದಗೆಟ್ಟ ಕಲ್ಲಾಜೆ – ಅಂತಿಬೆಟ್ಟು ರಸ್ತೆಗೆ ಊರವರಿಂದಲೇ ಕಾಯಕಲ್ಪ ► ಸಡಕ್ ರಸ್ತೆಗೆ ಕಾದು ಸುಸ್ತಾಗಿ ಕೊನೆಗೆ ಶ್ರಮದಾನದ ಮೊರೆ ಹೋದ ಗ್ರಾಮಸ್ಥರು Read More »

ಕರಾವಳಿ

ಕುಡಿಯಲು ಹನಿ ಹನಿಯಾಗಿ ತೊಟ್ಟಿಕ್ಕುವ ಕಲುಷಿತ ನೀರು ► ‘ನೀರು – ಕಣ್ಣೀರು’ ಕಲ್ಲಾಜೆ ಕಾಲನಿಯ ದುಸ್ಥಿತಿ

(ನ್ಯೂಸ್ ಕಡಬ) newskadaba.com ಕಡಬ, ಎ.24. ಹನಿ ಹನಿಯಾಗಿ ತೊಟ್ಟಿಕ್ಕುವ ನೀರು… ಅದನ್ನು ಸಂಗ್ರಹಿಸಲು 24 ಗಂಟೆಗಳ ಕಾಲ ಕಾಯುವ ಪರಿಸ್ಥಿತಿ… ಮೂಲಭೂತ ಸೌಕರ್ಯಗಳಲ್ಲೊಂದಾದ ಕುಡಿಯಲು ನೀರಿಲ್ಲದೆ ಕಲುಷಿತ ನೀರನ್ನೇ ಕುಡಿಯುವ ಪರಿಸ್ಥಿತಿ… ಇದು ಕಂಡುಬಂದಿರೋದು ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ಕಾಲನಿಯಲ್ಲಿ. ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿರುವ ಈ ಕಾಲನಿಯಲ್ಲಿ ಕರ್ನಾಟಕ ರಾಜ್ಯ ರಬ್ಬರ್ ಅಭಿವೃದ್ಧಿ ನಿಗಮದ ವತಿಯಿಂದ ಹಾಗೂ ಐತ್ತೂರು ಗ್ರಾಮ ಪಂಚಾಯತ್ ವತಿಯಿಂದ ತಲಾ ಒಂದರಂತೆ ಒಟ್ಟು ಎರಡು ಬೋರ್ವೆಲ್ಗಳಿದ್ದರೂ ಕಳೆದ

ಕುಡಿಯಲು ಹನಿ ಹನಿಯಾಗಿ ತೊಟ್ಟಿಕ್ಕುವ ಕಲುಷಿತ ನೀರು ► ‘ನೀರು – ಕಣ್ಣೀರು’ ಕಲ್ಲಾಜೆ ಕಾಲನಿಯ ದುಸ್ಥಿತಿ Read More »

ಕರಾವಳಿ

ಸುಬ್ರಹ್ಮಣ್ಯ, ಕೊಂಬಾರು ಪರಿಸರಕ್ಕೆ ಕೈಕೊಟ್ಟ ವಿದ್ಯುತ್ ► ಗುರುವಾರ ಸಂಜೆಯವರೆಗೆ ವಿದ್ಯುತ್ ಸಂಪರ್ಕ ಇಲ್ಲ

(ನ್ಯೂಸ್ ಕಡಬ) newskadaba.com ಕಡಬ, ಜು. 20. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಲ್ಲಾಜೆ ಹಾಗೂ ಬಿಳಿನೆಲೆ ಎಂಬಲ್ಲಿ ಬೃಹತ್ ಗಾತ್ರದ ಮರಗಳು ವಿದ್ಯುತ್ ಲೈನ್ ಮೇಲೆ ಬಿದ್ದಿರುವುದರಿಂದ ಸುಬ್ರಹ್ಮಣ್ಯ, ಬಿಳಿನೆಲೆ, ಕೊಂಬಾರು, ಕೆಂಜಾಳ, ಕೈಕಂಬ ಪ್ರದೇಶದಲ್ಲಿ ಗುರುವಾರ ಸಂಜೆಯವರೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ. ಕಲ್ಲಾಜೆಯಲ್ಲಿ ಅಶ್ವತ್ಥ ಮರವೊಂದು ಬುಡ ಸಹಿತ ಕಿತ್ತು ಬಿದ್ದಿರುವುದರಿಂದ 5 ಕಂಬಗಳು ಮುರಿದು ಬಿದ್ದಿದ್ದು, ಹಲವು ಕಂಬಗಳಿಗೆ ಹಾನಿಯಾಗಿವೆ. ಸುಬ್ರಹ್ಮಣ್ಯಕ್ಕೆ ನೇರ

ಸುಬ್ರಹ್ಮಣ್ಯ, ಕೊಂಬಾರು ಪರಿಸರಕ್ಕೆ ಕೈಕೊಟ್ಟ ವಿದ್ಯುತ್ ► ಗುರುವಾರ ಸಂಜೆಯವರೆಗೆ ವಿದ್ಯುತ್ ಸಂಪರ್ಕ ಇಲ್ಲ Read More »

ಕರಾವಳಿ

ಕಲ್ಲಾಜೆಯಲ್ಲಿ ರಸ್ತೆಗುರುಳಿದ ಮರ: ಧರಾಶಾಹಿಯಾದ ವಿದ್ಯುತ್ ಕಂಬಗಳು ► ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿ ಬ್ಲಾಕ್

(ನ್ಯೂಸ್ ಕಡಬ) newskadaba.com ಕಡಬ, ಜು. 20. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಲ್ಲಾಜೆ ಹಾಗೂ ಬಿಳಿನೆಲೆ ಎಂಬಲ್ಲಿ ಬೃಹತ್ ಗಾತ್ರದ ಮರಗಳು ರಸ್ತೆಗಡ್ಡವಾಗಿ ಬಿದ್ದ ಪರಿಣಾಮ ರಸ್ತೆ ತಡೆ ಉಂಟಾದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ‌. ಕಲ್ಲಾಜೆಯಲ್ಲಿ ಅಶ್ವತ್ಥ ಮರವೊಂದು ಬುಡ ಸಹಿತ ಕಿತ್ತುಬಂದಿದ್ದು, ಹಲವು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಈ ಸಮಯದಲ್ಲಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುವ ಸರಕಾರಿ ಬಸ್ಸು ತೆರಳಿದ್ದು, ಅದರಲ್ಲಿನ ಪ್ರಯಾಣಿಕರು

ಕಲ್ಲಾಜೆಯಲ್ಲಿ ರಸ್ತೆಗುರುಳಿದ ಮರ: ಧರಾಶಾಹಿಯಾದ ವಿದ್ಯುತ್ ಕಂಬಗಳು ► ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿ ಬ್ಲಾಕ್ Read More »

ಕರಾವಳಿ
Scroll to Top