kallugudde

ನೂಜಿಬಾಳ್ತಿಲ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮನವಿ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಡಿ. 03: ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.   ನೂಜಿಬಾಳ್ತಿಲ ಗ್ರಾಮ ಹಾಗೂ ರೆಂಜಿಲಾಡಿ ಗ್ರಾಮ ಸಮಿತಿ ವಿಶ್ವ ಹಿಂದೂ ಪರಿಷತ್ ಭಜರಂಗ ದಳದ ವತಿಯಿಂದ ಪ್ರತ್ಯೇಕ ಮನವಿಯನ್ನು ನೂಜಿಬಾಳ್ತಿಲ ಗ್ರಾ.ಪಂ. ಪಿಡಿಒ ಆನಂದ ಎ. ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು […]

ನೂಜಿಬಾಳ್ತಿಲ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮನವಿ Read More »

ಕರಾವಳಿ

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು

(ನ್ಯೂಸ್ ಕಡಬ) newskadaba.com ಕಡಬ: ಆ.12,.ಕೊರೊನಾ ಪರಿಣಾಮ ಶಾಲೆಗಳನ್ನು ತೆರೆಯಲು ಅಸಾಧ್ಯವಾದ ಈ ಸಂದರ್ಭದಲ್ಲಿ ಕಡಬ ತಾಲೂಕಿನ ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ ಹೇಳಿ ಕೊಡುತ್ತಿದ್ದಾರೆ. ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಶಾಲೆಯ ಮಕ್ಕಳನ್ನು ಒಟ್ಟು ಸೇರಿಸಿ, ಊರಿನ ದೇವಸ್ಥಾನ, ಚರ್ಚ್, ಮಸೀದಿ, ಮಂದಿರ, ಯುವಕ ಮಂಡಲಗಳ ಕಟ್ಟಡಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಕಲಿಸಲಾಗುತ್ತಿದೆ. ಇದಕ್ಕೆ ಮಕ್ಕಳು, ಪೋಷಕರು ಸಹಕಾರ ನೀಡುತ್ತಿದ್ದು, ಉತ್ತಮ ರೀತಿಯಲ್ಲಿ ಕಲಿಕೆ ಸಾಗುತ್ತಿದೆ ಎಂದು ಅಧಿಕಾರಿಗಳು

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು Read More »

ಕರಾವಳಿ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆ.8., ಭಾರೀ ಗಾಳಿ, ಮಳೆಗೆ ಹಲಸಿನ ಮರವೊಂದು ಉರುಳಿಬಿದ್ದು, ಮನೆ ಹಾಗೂ ವಿದ್ಯುತ್ ಲೈನ್‍ಗೆ ಹಾನಿಯುಂಟಾದ ಘಟನೆ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ. ಕಲ್ಲುಗುಡ್ಡೆ ಕಾಂತಪ್ಪ ಅಜಿಲ ಎಂಬವರ ಮನೆ ಬಳಿಯ ಹಲಸಿನ ಮರ ಬುಡ ಸಮೇತ ಉರುಳಿ ಬಿದ್ದಿದ್ದು, ಮನೆಯ ಒಂದು ಭಾಗಕ್ಕೆ ಹಾನಿಯಾಗಿ, ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ ಇದರಿಂದ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯಗೊಂಡಿತ್ತು. ಸ್ಥಳಕ್ಕೆ ಕಂದಾಯ ಇಲಾಖೆಯವರು ಬಂದು ಪರಿಶೀಲನೆ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾಧಿಕಾರಿ ಭರತ್ ಬಿ.ಎಂ. ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಜು .01. ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಆಡಳಿತಾಧಿಕಾರಿಯಾಗಿ ನೇಮಕಗೊಂಡ ಪುತ್ತೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭರತ್ ಬಿ.ಎಂ. ಅವರು ಸೋಮವಾರ ನಿರ್ಗಮನ ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಅವರಿಂದ ಅಧಿಕಾರ ವಹಿಸಿಕೊಂಡರು. ಗ್ರಾ.ಪಂ. ಸದಸ್ಯ ತೋಮಸ್ ಕೆ.ಜೆ., ಸಿಬಂದಿಗಳು ಉಪಸ್ಥಿತರಿದ್ದರು. ಪಿಡಿಒ ಆನಂದ ಎ. ಸ್ವಾಗತಿಸಿ, ಧನರಾಜ್ ವಂದಿಸಿದರು.

ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾಧಿಕಾರಿ ಭರತ್ ಬಿ.ಎಂ. ಅಧಿಕಾರ ಸ್ವೀಕಾರ Read More »

ಕರಾವಳಿ

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.,  ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಹಿರಿಯ ಸದಸ್ಯರಾದ ಉಮೇಶ ಕೆ. ಸಣ್ಣಾರ ಅವರು ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಬಿದ್ದು ಅವರ ಕಾಲಿನ ಮೂಳೆ ಮುರಿತವಾಗಿದ್ದು,  ಆರ್ಥಿಕ ಸಂಕಷ್ಟದಲ್ಲಿರುವ ಇವರಿಗೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಧನ ಸಂಗ್ರಹ ಮಾಡಿ ಅವರಿಗೆ ಹಸ್ತಾಂತರಿಸಲಾಯಿತು. ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ದನ ಸೂಡ್ಲು, ಕಾರ್ಯದರ್ಶಿ ಸುಂದರ ಒಗ್ಗು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ Read More »

ಕರಾವಳಿ

ಸಮ್ಯಕ್ತ್ ಜೈನ್ ಅವರ ಮಾರ್ದನಿ ಕವನಸಂಕಲನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.10   ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಮ್ಯಕ್ತ್ ಹೆಚ್. ಜೈನ್ ಅವರ ಮಾರ್ದನಿ ಕವನಸಂಕಲನವನ್ನು ಪುತ್ತೂರಿನಲ್ಲಿ ಶುಕ್ರವಾರ ಬಿಡುಗಡೆಗೊಳಿಸಲಾಯಿತು. ಪುತ್ತೂರು ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಗಳು ಕವನಸಂಕಲನವನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಇದು ಸಮ್ಯಕ್ತ್  ಜೈನ್ ಅವರ  ಮೂರನೇ ಕವನಸಂಕಲನವಾಗಿದ್ದು, ಈ ಹಿಂದೆ ಅಂಕುರ ಹಾಗೂ ಮಂಜರಿ ಎಂಬ ಕೃತಿಯನ್ನು ರಚಿಸಿ ಬಿಡುಗಡೆಗೊಳಿಸಿದ್ದರು. ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಇವರು ನೂಜಿಬಾಳ್ತಿಲ

ಸಮ್ಯಕ್ತ್ ಜೈನ್ ಅವರ ಮಾರ್ದನಿ ಕವನಸಂಕಲನ ಬಿಡುಗಡೆ Read More »

ಕರಾವಳಿ

ಡಿ.15: ಮೀನಾಡಿ ಶಾಲೆಯಲ್ಲಿ ಪೂರ್ವಭಾವಿ ಸಭೆ

  (ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.10   ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಮೀನಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 15ರಂದು ಅಪರಾಹ್ನ ಪೂರ್ವಭಾವಿ ಸಭೆ ನಡೆಯಲಿದೆ. 1960ರಲ್ಲಿ ಪ್ರಾರಂಭಗೊಂಡ ಶಾಲೆ ಇದೀಗ 60ನೇ ವರ್ಷಾಚರಣೆ ಸಂಭ್ರಮದಲ್ಲಿದ್ದು, 60ನೇ ವರ್ಷಾರಣೆಯ ಬಗ್ಗೆ ಶಾಲಾ ಹಿರಿಯ ವಿದ್ಯಾರ್ಥಿಗಳು,, ವಿದ್ಯಾಭಿಮಾನಿಗಳು ಹಾಗೂ ಗ್ರಾಮಸ್ಥರು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆಗಳನ್ನು ನೀಡುವಂತೆ ತಿಳಿಸಲಾಗಿದೆ. ಇದೇ ಸಂದರ್ಭದಲ್ಲಿ ಮಹೋತ್ಸವ ಸಮಿತಿ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ರಚನೆಯೂ

ಡಿ.15: ಮೀನಾಡಿ ಶಾಲೆಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com. ಕಡಬ, ಅ. 23: ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ನೂಜಿಬಾಳ್ತಿಲ ಬೀಟ್ ಪೊಲೀಸರಿಂದ ತಿಂಗಳ ಸಭೆಯು ರವಿವಾರ ನಡೆಯಿತು. ಕಡಬ ಠಾಣಾ ಹೆಡ್‍ಕಾನ್ಸ್ಟೇಬಲ್, ನೂಜಿಬಾಳ್ತಿಲ ಬೀಟ್ ಪೊಲೀಸ್ ಅಧಿಕಾರಿ ಚಿನ್ನಪ್ಪ ಕೆ. ಸಭೆಯ ಅಧ್ಯಕ್ಷತೆ ವಹಿಸಿದ್ದರು. ನೂಜಿಬಾಳ್ತಿಲ ಗ್ರಾ.ಪಂ. ಮಾಜಿ ಸದಸ್ಯೆ ಸುಶೀಲ ಕಲ್ಲುಗುಡ್ಡೆ ಮಾತನಾಡಿ, ಕೆಲ ತಿಂಗಳ ಹಿಂದೆ ಸಿಡಿಲು ಬಡಿದು ನಮ್ಮ ಕೃಷಿ ತೋಟ ಹಾಗೂ ಮನೆ, ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು, ದಾಖಲೆ ಸಮೇತ ಕಂದಾಯ ಇಲಾಖೆಗೆ ಪರಿಹಾರಕ್ಕೆ ಅರ್ಜಿ ನೀಡಿದರೂ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಆಗ್ರಹ Read More »

ಕರಾವಳಿ

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ:18-04-2019 ರಂದು ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು  ನಿಗದಿಪಡಿಸಿದ್ದು, ಸದರಿ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)  ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಆದುದರಿಂದ ಎಲ್ಲಾ ಅಂಗಡಿಗಳು,

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ Read More »

ರಾಷ್ಟ್ರೀಯ ನ್ಯೂಸ್

ಅ.22: ತೆಗೆರ್ ತುಳುಕೂಟದಿಂದ ದೀಪಾವಳಿ ಪ್ರಯುಕ್ತ ► ರೆಂಜಿಲಾಡಿಯಲ್ಲಿ ‘ಬೆನ್ನಿದ ಕಂಡೊಡ್ ನಮ್ಮ ಜವನೆರ್’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ.19. ನೂಜಿಬಾಳ್ತಿಲ ಗ್ರಾಮದ ನೂಜಿಬೈಲ್ ತೆಗೆರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರಯುಕ್ತ ಮಾರಪ್ಪೆ ದಿ| ಜಿನ್ನಪ್ಪ ಗೌಡರ ಸ್ಮರಣಾರ್ಥ ಅ.22 ರಂದು ಶ್ರೀ ನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿನ ಕೇಪುಂಜ ಗದ್ದೆಯಲ್ಲಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟವನ್ನು ಪ್ರಗತಿಪರ ಕೃಷಿಕರಾದ ಮೃತ್ಯುಂಜಯ ಭಿಡೆ ಕೆರೆತೋಟ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನೂಜಿಶ್ರೀ ಉಳ್ಳಾಲ್ತಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರ ಗೌಡ ಎಲುವಾಳೆ ವಹಿಸಲಿದ್ದು . ಪುತ್ತೂರು ಕೋಟಿಚೆನ್ನಯ ಕಂಬಳ ಸಮಿತಿ

ಅ.22: ತೆಗೆರ್ ತುಳುಕೂಟದಿಂದ ದೀಪಾವಳಿ ಪ್ರಯುಕ್ತ ► ರೆಂಜಿಲಾಡಿಯಲ್ಲಿ ‘ಬೆನ್ನಿದ ಕಂಡೊಡ್ ನಮ್ಮ ಜವನೆರ್’ ಕಾರ್ಯಕ್ರಮ Read More »

ಕರಾವಳಿ
Scroll to Top