kallugudde

ತೀವ್ರ ಸ್ವರೂಪ ಪಡೆದುಕೊಂಡ ಮದ್ಯದಂಗಡಿ ವಿರೋಧಿ ಹೋರಾಟ ► ಪ್ರತಿಭಟನೆಯಲ್ಲಿ ಸೇರಿಕೊಂಡ ಶಾಲಾ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.19. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಮಂಗಳವಾರ ಕೂಡ ಮುಂದುವರಿದಿದೆ. ಇಂದು ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಶಾಲಾ ಮಕ್ಕಳು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಜಮಾಯಿಸಿ ಮದ್ಯದಂಗಡಿಯ […]

ತೀವ್ರ ಸ್ವರೂಪ ಪಡೆದುಕೊಂಡ ಮದ್ಯದಂಗಡಿ ವಿರೋಧಿ ಹೋರಾಟ ► ಪ್ರತಿಭಟನೆಯಲ್ಲಿ ಸೇರಿಕೊಂಡ ಶಾಲಾ ವಿದ್ಯಾರ್ಥಿಗಳು Read More »

ಕರಾವಳಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭಗೊಂಡ ವೈನ್ ಶಾಪ್ ► ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಕಳೆದ ಸೋಮವಾರದಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 17 ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಗ್ರಾಮಸ್ಥರ ತೀವ್ರ ವಿರೋಧವನ್ನು ಗ್ರಾಮಸಭೆಯಲ್ಲಿ ನಿರ್ಣಯಿಸಿ ಕಳುಹಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭಗೊಂಡ ವೈನ್ ಶಾಪ್ ► ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರಾವಳಿ

ಕಲ್ಲುಗುಡ್ಡೆ: ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಬಕಾರಿ ಇಲಾಖೆ ► ಕೊನೆಗೂ ಮದ್ಯದಂಗಡಿಗೆ ಬೀಗ ಮುದ್ರೆ ಹಾಕಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಿಂದ ತೆರವಾಗಿದ್ದ ಮದ್ಯದಂಗಡಿಯನ್ನು ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಆರಂಭಿಸಲಾಗುತ್ತದೆ ಎಂಬ ಮಾಹಿತಿಯನ್ವಯ ಗ್ರಾಮಸ್ಥರು ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ಅದೇ ಸಮಯದಲ್ಲಿ ಕಲ್ಲುಗುಡ್ಡೆ ಪೇಟೆಯಲ್ಲಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮದ್ಯದಂಗಡಿಯನ್ನೂ ತೆರೆದ ಘಟನೆ ನಡೆದಿದೆ. ಕಳೆದ ಮೂರು ತಿಂಗಳಿನಿಂದ ಮದ್ಯದಂಗಡಿ ತೆರೆಯಲ್ಪಡುತ್ತದೆ ಎನ್ನುವ ಸುದ್ದಿಯಿಂದ ಎಚ್ಚೆತ್ತುಕೊಂಡ ಗ್ರಾಮಸ್ಥರು ಭಾರಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಭಾನುವಾರ

ಕಲ್ಲುಗುಡ್ಡೆ: ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಬಕಾರಿ ಇಲಾಖೆ ► ಕೊನೆಗೂ ಮದ್ಯದಂಗಡಿಗೆ ಬೀಗ ಮುದ್ರೆ ಹಾಕಿದ ಅಧಿಕಾರಿಗಳು Read More »

ಕರಾವಳಿ

ಕಲ್ಲುಗುಡ್ಡೆ: ಊಟ, ತಿಂಡಿ ಬಿಟ್ಟು ಮುಂದುವರಿದ ಮದ್ಯದಂಗಡಿ ವಿರೋಧಿ ಹೋರಾಟ ► ಕಡಬ ತಹಶಿಲ್ದಾರ್ ಗೆ ದಿಗ್ಬಂಧನ ವಿಧಿಸಿದ ಪ್ರತಿಭಟನಾಕಾರರು

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಕಲ್ಲುಗುಡ್ಡೆಯಲ್ಲಿ ಮದ್ಯದಂಗಡಿ ತೆರೆದಿರುವುದನ್ನು ವಿರೋಧಿಸಿ ಗ್ರಾಮಸ್ಥರು ಊಟ, ನೀರು ಬಿಟ್ಟು ಪ್ರತಿಭಟನೆ ಮುಂದುವರಿಸಿದ್ದಾರೆ. ಮದ್ಯದಂಗಡಿಯ ಕಟ್ಟಡವು ಸರಕಾರಿ ಜಾಗದಲ್ಲಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಕಡಬ ತಹಶಿಲ್ದಾರ್ ಮತ್ತು ಕಂದಾಯ ನಿರೀಕ್ಷಕರಿಗೆ ಪ್ರತಿಭಟನಾಕಾರರು ದಿಗ್ಬಂಧನ ವಿಧಿಸಿದ್ದಾರೆ. ಅಬಕಾರಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಕ್ರಮ ಕಟ್ಟಡದಲ್ಲಿ ಆರಂಭವಾದ ಮದ್ಯದಂಗಡಿಯನ್ನು ಬೀಗ ಜಡಿದು ಬಂದ್ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಕಲ್ಲುಗುಡ್ಡೆ: ಊಟ, ತಿಂಡಿ ಬಿಟ್ಟು ಮುಂದುವರಿದ ಮದ್ಯದಂಗಡಿ ವಿರೋಧಿ ಹೋರಾಟ ► ಕಡಬ ತಹಶಿಲ್ದಾರ್ ಗೆ ದಿಗ್ಬಂಧನ ವಿಧಿಸಿದ ಪ್ರತಿಭಟನಾಕಾರರು Read More »

ಕರಾವಳಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಕಡಬ ತಹಶಿಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರದಂದು ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ನಡೆಸಿ, ಊರವರು ಕಡಬದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಕಲ್ಲುಗುಡ್ಡೆಯಲ್ಲಿ ಸೋಮವಾರದಂದು ಬೆಳಿಗ್ಗೆ ಪೊಲೀಸ್ ರಕ್ಷಣೆಯಲ್ಲಿ ಮದ್ಯದಂಗಡಿಯನ್ನು ತೆರೆಯಲಾಯಿತು. ವಿಷಯ ತಿಳಿದ‌ ಪ್ರತಿಭಟನಾಕಾರರು ಅಬಕಾರಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಕಲ್ಲುಗುಡ್ಡೆ: ಮದ್ಯದಂಗಡಿ ವಿರೋಧಿಸಿ ಜಮಾಯಿಸಿದ ಗ್ರಾಮಸ್ಥರು ► ನಾಳೆ‌ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಜಮಾಯಿಸಿದ್ದು, ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರಿಂದ ಪರಿಸ್ಥಿತಿ ಶಾಂತವಾದ ಘಟನೆ ಭಾನುವಾರ ಸಂಜೆ ಕಲ್ಲುಗುಡ್ಡೆಯಲ್ಲಿ ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದು, ಅದರಂತೆ ಶನಿವಾರ ತಡರಾತ್ರಿ ಮದ್ಯವನ್ನು ದಾಸ್ತಾನು ಮಾಡಲಾಗಿದೆ‌ ಎಂದು ಸ್ಥಳೀಯರು ಆರೋಪಿಸಿ ಭಾನುವಾರ ಸಂಜೆ ವೇಳೆ

ಕಲ್ಲುಗುಡ್ಡೆ: ಮದ್ಯದಂಗಡಿ ವಿರೋಧಿಸಿ ಜಮಾಯಿಸಿದ ಗ್ರಾಮಸ್ಥರು ► ನಾಳೆ‌ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ .19, ಇಲ್ಲಿನ ಕಲ್ಲುಗುಡ್ಡೆ ಸಮೀಪದ ನೂಜಿ ರೆಂಜಿಲಾಡಿ ಮಾರಪ್ಪೆ ನಿವಾಸಿ ಕುಂಞಣ್ಣ ಗೌಡ ಎಂಬವರ ಪುತ್ರ ಜಿನ್ನಪ್ಪ ಗೌಡ(47) ತನ್ನ ತೋಟದಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ಶನಿವಾರಂದು ಕಂಡುಬಂದಿದೆ. ಪಕ್ಷವಾತ ಖಾಯಿಲೆಗೆ ತುತ್ತಾಗಿದ್ದ ಜಿನ್ನಪ್ಪ ಗೌಡರು ಗುಣಮುಖಗೊಂಡಿದ್ದು, ಶುಕ್ರವಾರದಂದು ಕಡಬ ಪೇಟೆಗೆ ಬಂದಿದ್ದರೆನ್ನಲಾಗಿದೆ. ಶುಕ್ರವಾರ ರಾತ್ರಿ ಮನೆಯಿಂದ ಹೊರಹೋಗಿದ್ದ ಅವರು ತನ್ನ ತೋಟದ ಕೆರೆಯ ಸಮೀಪ ಕುಸಿದುಬಿದ್ದಿದ್ದು, ರಾತ್ರಿಯಿಂದ ಮನೆಯವರೆಲ್ಲ ಹುಡುಕಾಡಿದ್ದಾರೆನ್ನಲಾಗಿದೆ. ಆದರೆ ಶನಿವಾರದಂದು ಮಧ್ಯಾಹ್ನ ತೋಟದಲ್ಲಿ ಕೆರೆಯ ಸಮೀಪ

ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ವಾಮಾಚಾರ ಪ್ರಕರಣಕ್ಕೆ ತಿರುವು ► ಕಿರುಕುಳ ಆರೋಪದಲ್ಲಿ ಠಾಣೆಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ.07. ಮನೆಯ ಮುಂದೆ ಸ್ಥಳೀಯರೊಬ್ಬರು ವಾಮಾಚಾರ ಮಾಡಿರುವುದಲ್ಲದೆ, ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರಕರ್ತ ಕಲ್ಲುಗುಡ್ಡೆ ಖಾದರ್ ಸಾಹೇಬ್ ಅವರು ಪತ್ನಿ ಅಮೀನ ಅವರು ಭಾನುವಾರ ಕಡಬ ಠಾಣೆಗೆ ದೂರು ನೀಡಿದ ಬೆನ್ನಲ್ಲೇ ಕಡಬ ಅಡ್ಡಗದ್ದೆ ನಿವಾಸಿ ಸ್ಯಾಮುವೆಲ್ ಜೋಸ್ ಎಂಬವರ ಪತ್ನಿ ಸಿನಿ ಜೋಸ್ ಎಂಬವರು ಸೋಮವಾರ ಕಡಬ ಠಾಣೆಗೆ ದೂರು ನೀಡಿ ತನ್ನ ಗಂಡನಿಗೆ ನಿರಂತರ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಖಾದರ್ ಸಾಹೇಬ್ ದಂಪತಿಯ ವಿರುದ್ಧ

ವಾಮಾಚಾರ ಪ್ರಕರಣಕ್ಕೆ ತಿರುವು ► ಕಿರುಕುಳ ಆರೋಪದಲ್ಲಿ ಠಾಣೆಗೆ ದೂರು Read More »

ಕರಾವಳಿ

ಪತ್ರಕರ್ತನ ಮನೆಯ ಮುಂದೆ ಗುಂಡು ಸೂಜಿ ಚುಚ್ಚಿದ ಸೌತೆಕಾಯಿ ► ವಾಮಾಚಾರ ಮಾಡಿರುವ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಆ.07. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಪತ್ರಕರ್ತ ಖಾದರ್ ಸಾಹೇಬ್ ಅವರ ಮನೆಯ ಮುಂಭಾಗದಲ್ಲಿ ಭಾನುವಾರ ವಾಮಾಚಾರ ನಡೆಸಲಾಗಿದೆ ಎಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ಖಾದರ್ ಸಾಹೇಬ್ ಅವರ ಮನೆಯ ಅಂಗಳದಲ್ಲಿ ಸೌತೆ ಕಾಯಿ ಮೇಲೆ ಗುಂಡು ಸೂಜಿಗಳನ್ನು ಚುಚ್ಚಿ ಶಿಲುಬೆಯಾಕಾರ ಮಾಡಿರುವ ಚಿತ್ರಣ ಕಂಡು ಬಂದಿದ್ದು, ಇದರಿಂದ ಭಯಭೀತರಾದ ಮನೆಯವರು ಸ್ಥಳೀಯ ಮುಖಂಡರುಗಳು, ಜನಪ್ರತಿನಿಧಿಗಳು ಹಾಗೂ ಪೋಲೀಸರಿಗೆ ತಿಳಿಸಿದ್ದಾರೆ. ಕಡಬ ಠಾಣಾ ಸಿಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಊರಿನ

ಪತ್ರಕರ್ತನ ಮನೆಯ ಮುಂದೆ ಗುಂಡು ಸೂಜಿ ಚುಚ್ಚಿದ ಸೌತೆಕಾಯಿ ► ವಾಮಾಚಾರ ಮಾಡಿರುವ ಶಂಕೆ Read More »

ಕರಾವಳಿ

ಕಲ್ಲುಗುಡ್ಡೆಯಲ್ಲಿ ಯಾವುದೇ ಕಾರಣಕ್ಕೆ ಮದ್ಯದಂಗಡಿ ತೆರೆಯಲು ಬಿಡುವುದಿಲ್ಲ: ಗ್ರಾಮಸ್ಥರಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ಯಾವುದೇ ಕಾರಣಕ್ಕೆ ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮ ಪರಿಸರದಲ್ಲಿ ಮದ್ಯದಂಗಡಿ ತೆರೆಯಲು ಬಿಡುವುದಿಲ್ಲ. ನಮ್ಮ ನೆಮ್ಮದಿಯನ್ನು ಕಸಿದುಕೊಳ್ಳಲು ಯಾರೂ ಬರಬೇಡಿ. ಬಂದರೆ ಎಷ್ಟೇ ಶ್ರೀಮಂತನಾಗಿರಲಿ ಬಿಡುವುದಿಲ್ಲ. ಒಬ್ಬರ ಜೀವನಕ್ಕಾಗಿ ಇಡೀ ಊರಿನ ಸ್ವಾಸ್ಥ್ಯ ಕೆಡಿಸಲು ನಾವು ಬಿಡುವುದಿಲ್ಲ ಎಂದು ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪರಿಶಿಷ್ಟ ಕಾಲೋನಿ ಬಳಿಯಲ್ಲಿ ಮದ್ಯದಂಗಡಿ ತೆರೆಯಲಿದೆ ಎಂಬ ವ್ಯಾಪಕ ಪ್ರಚಾರದ ಹಿನ್ನೆಲೆಯಲ್ಲಿ ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮಸ್ಥರು ಸೇರಿ ಜು. 15 ರಂದು ಪ್ರತಿಭಟನೆ

ಕಲ್ಲುಗುಡ್ಡೆಯಲ್ಲಿ ಯಾವುದೇ ಕಾರಣಕ್ಕೆ ಮದ್ಯದಂಗಡಿ ತೆರೆಯಲು ಬಿಡುವುದಿಲ್ಲ: ಗ್ರಾಮಸ್ಥರಿಂದ ಎಚ್ಚರಿಕೆ Read More »

ಕರಾವಳಿ
Scroll to Top