kannada cinema

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..!

(ನ್ಯೂಸ್ ಕಡಬ) newskadaba.com ಅ. 20. ಅನಾರೋಗ್ಯದಿಂದ ಬಳಲುತ್ತಿದ್ದ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಇಂದು ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರ ನಿವಾಸದಲ್ಲಿ ಮೃತ ಸರೋಜಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..! Read More »

ಕ್ರೈಮ್ ನ್ಯೂಸ್, ಸಿನಿಮಾ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ಕಾಂತಾರ ಅಭಿನಯಕ್ಕಾಗಿ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 16. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಘೋಷಿಸಿದ್ದು ಸೂಪರ್‌ ಹಿಟ್‌ ಚಿತ್ರ ʼಕಾಂತಾರʼದಲ್ಲಿನ ನಟನೆಗಾಗಿ ರಿಷಬ್‌ ಶೆಟ್ಟಿ ಅವರನ್ನು ಅತ್ಯುತ್ತಮ ನಟ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಟ ಯಶ್‌ ಅಭಿನಯದ ʼಕೆಜಿಎಫ್‌ ಚಾಪ್ಟರ್‌ 2ʼ ಸಿನಿಮಾಗೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಸಿಕ್ಕಿದೆ. ಅಲ್ಲದೇ ಅದೇ ಚಿತ್ರವು ಅತ್ಯುತ್ತಮ ಸ್ಟಂಟ್ ಕೊರಿಯೋಗ್ರಫಿ ಪ್ರಶಸ್ತಿಯನ್ನೂ ಪಡೆದಿದೆ. ಅತ್ಯುತ್ತಮ ನಟಿ ಪ್ರಶಸ್ತಿ ನಿತ್ಯ ಮೆನನ್‌ ಹಾಗೂ ಮಾನಸಿ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ಕಾಂತಾರ ಅಭಿನಯಕ್ಕಾಗಿ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ Read More »

ರಾಷ್ಟ್ರೀಯ ನ್ಯೂಸ್

ಜು. 21ರಂದು ತೆರೆಗೆ ಬರಲಿದೆ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ”

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ, ನಟ ರಕ್ಷಿತ್ ಶೆಟ್ಟಿ ನಟಿಸಿರುವ  ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನೆಮಾ ಇದೇ ಜುಲೈ 21ಕ್ಕೆ ಬಿಡುಗಡೆಗೆ ಸಿದ್ದವಾಗಿದ್ದು, ಈ ಸಿನಿಮಾದ ವಿಶೇಷತೆ ಏನೆಂದರೆ ಹೊಸ ಕಲಾವಿದರ ಜೊತೆಗೆ ರಮ್ಯಾ, ದಿಗಂತ್‌ ಮಂಚಾಲೆ, ಪವನ್‌ ಕುಮಾರ್‌ ಹಾಗೂ ರಿಷಬ್‌ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ನಟ ರಕ್ಷಿತ್‌ ಶೆಟ್ಟಿ ಈ ಸಿನಿಮಾದ ಟ್ರೈಲರ್‌ ಮಂಗಳವಾರದಂದು ಬಿಡುಗಡೆ ಮಾಡಿದ್ದು ಪ್ರೇಕ್ಷಕರಲ್ಲಿ ಇನ್ನಷ್ಟು ನಿರೀಕ್ಷೆ ಹೆಚ್ಚಿಸುವಂತೆ ಮಾಡಿದೆ. ಹಾಗೆಯೇ ಇದೇ ತಿಂಗಳು

ಜು. 21ರಂದು ತೆರೆಗೆ ಬರಲಿದೆ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ” Read More »

ಸಿನಿಮಾ
Scroll to Top