karanataka

ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ‘ಕನಕ ಶ್ರೀ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಸಂತ್ರಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಮಾಡುವ 2024ನೇ ಸಾಲಿನ ಪ್ರತಿಷ್ಠಿತ ಕನಕ ಶ್ರೀ ಪ್ರಶಸ್ತಿಯನ್ನು ಬಳ್ಳಾರಿಯ ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು. ಸೋಮವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಸಿದ್ದರಾಮಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಉದ್ಘಾಟಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು […]

ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ‘ಕನಕ ಶ್ರೀ ಪ್ರಶಸ್ತಿ’ ಪ್ರದಾನ Read More »

ಕರ್ನಾಟಕ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು

(ನ್ಯೂಸ್ ಕಡಬ) newskadaba.com ಅ. 11. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಟ ದರ್ಶನ್  ರವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ ಸಿಸಿಎಚ್ ನ್ಯಾಯಾಲಯವು ಮುಕ್ತಾಯಗೊಳಿಸಿದ್ದು, ಅ.14ಕ್ಕೆ ತೀರ್ಪು ಕಾಯ್ದಿರಿಸಿರುವುದಾಗಿ ತಿಳಿದುಬಂದಿದೆ. ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಆರೋಪಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಸರಕಾರದ ಎಸ್‍ಪಿಪಿ ಪ್ರಸನ್ನ ಕುಮಾರ್ ವಾದ- ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ. ಅ.14ಕ್ಕೆ ಪ್ರಕರಣದ ಎ-2 ಆರೋಪಿ ನಟ ದರ್ಶನ್‍ಗೆ ಜಾಮೀನು ಸಿಗುತ್ತದೆಯೋ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು Read More »

ಕರ್ನಾಟಕ

ರೇಣುಕಾಸ್ವಾಮಿ ಮರ್ಡರ್ ಕೇಸ್; ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 14. ರೇಣುಕಾಸ್ವಾಮಿ ಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರದಂದು ಮತ್ತೆ ವಿಸ್ತರಿಸಲಾಗಿದೆ. ವಿಚಾರಣೆಗೆ ಸಂಬಂಧಿಸಿ ಪರಪ್ಪನ ಅಗ್ರಹಾರದಿಂದ 13 ಮಂದಿ ಮತ್ತು ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದ

ರೇಣುಕಾಸ್ವಾಮಿ ಮರ್ಡರ್ ಕೇಸ್; ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ- 6 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ರಾಮನಗರ, ಆ. 28. ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸೋಮವಾರದಂದು ನಡೆದಿದೆ. ಅಪಘಾತದ ರಭಸಕ್ಕೆ ಕ್ವಾಲಿಸ್ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ- 6 ಮಂದಿ ದುರ್ಮರಣ Read More »

ಕರ್ನಾಟಕ

ಮಳೆಗಾಲದಲ್ಲಿ ಛತ್ರಿ ಬಳಸೋ ಮುನ್ನ ಮೊದಲು ಈ ವಿಚಾರಗಳನ್ನು ತಿಳಿದುಕೊಳ್ಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಇತ್ತೀಚಿನ ದಿನಗಳಲ್ಲಿ ಕೊಡೆಗಳ ಬೆಲೆ ಭಾರೀ ಏರಿಕೆ ಆಗಿದೆ. ಹೊಸ ಕೊಡೆ ಕೊಳ್ಳಬೇಕಂದರೆ ಕನಿಷ್ಠ 200 ರೂಪಾಯಿ ಬೇಕಾಗುತ್ತದೆ. ಅದರಲ್ಲಿಯೂ ಉತ್ತಮ ಗುಣಮಟ್ಟದ, ಬ್ರಾಂಡೆಡ್ ಛತ್ರಿ ಖರೀದಿಸಬೇಕೆಂದರೆ 500 ರೂಪಾಯಿಯಿಂದ ಹಿಡಿದು 1000 ರೂಪಾಯಿವರೆಗೂ ಹಣ ಬೇಕಾಗುತ್ತದೆ. ಇಷ್ಟೇ ಅಲ್ಲು ದುಬಾರಿ ಬೆಲೆಗೆ ಕೊಡೆ ಕೊಳ್ಳುವಾಗ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಸ್ವಯಂಚಾಲಿತ ಛತ್ರಿ ಬಳಸುತ್ತಿದ್ದರೆ, ಬಟನ್ ಒತ್ತಿದರೆ ಅದು ಆನ್ ಮತ್ತು ಆಫ್ ಆಗುತ್ತದೆ. ಗುಂಡಿಗಳನ್ನು ಬಳಸಬೇಡಿ.

ಮಳೆಗಾಲದಲ್ಲಿ ಛತ್ರಿ ಬಳಸೋ ಮುನ್ನ ಮೊದಲು ಈ ವಿಚಾರಗಳನ್ನು ತಿಳಿದುಕೊಳ್ಳಿ Read More »

ಕರ್ನಾಟಕ

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಮಂಗಳೂರಿನ ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಸಂಘಟನೆ ಮುತ್ತಿಗೆ ಹಾಕಿದ್ದು, ರಿಕ್ರಿಯೇಶನ್ ಕ್ಲಬ್‌ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಬೀಗ ಜಡಿದಿದ್ದಾರೆ. ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್‌ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯೂರಿಯಾ ಮಿಶ್ರಿತ ನೀರು ಕುಡಿದು ನಾಲ್ಕು ಹಸುಗಳು ಮೃತ್ಯು..!!

(ನ್ಯೂಸ್ ಕಡಬ) newskadaba.com ಹನೂರು, ಜ.08.  ಬೆಳೆಗಳಿಗೆ ಹಾಕುವ ಯೂರಿಯಾ ಗೊಬ್ಬರ ಮಿಶ್ರಣವಾಗಿರುವ ನೀರನ್ನು ಕುಡಿದು ನಾಟಿ ಹಸುಗಳು ಧಾರುಣವಾಗಿ ಮೃತಪಟ್ಟ ಘಟನೆ ಹನೂರಿನ ಮುತ್ತು ಶೆಟ್ಟಿಯೂರು ಗ್ರಾಮದಲ್ಲಿ ವರದಿಯಾಗಿದೆ. ತಾಲೂಕಿನ ರಾಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತು ಶೆಟ್ಟಿಯೂರು ನಿವಾಸಿಗಳಾದ ಮುದಲೈಮುತ್ತು ತೇರೆಸ್ಸಾಮೇರಿ ಎಂಬುವರಿಗೆ ಸೇರಿದ ನಾಲ್ಕು ಹಸುಗಳು ಮೃತಪಟ್ಟಿದೆ. ಮುದಲೈ ಮುತ್ತು ಅವರಿಗೆ ಸೇರಿದ ಹಸುಗಳು ಎಂದಿನಂತೆ ಕಾಡಿನಿಂದ ಮನೆಗಳಿಗೆ ಹಿಂತುರುಗಿ ಬರುವಾಗ ಸಂಜೆ ಸಮಯದಲ್ಲಿ ಪಕ್ಕದ ಜಮೀನಿನ ತೋಟದವರು ಬೆಳೆಗಳಿಗೆ ಹಾಕುವ ಯೂರಿಯಾವನ್ನು

ಯೂರಿಯಾ ಮಿಶ್ರಿತ ನೀರು ಕುಡಿದು ನಾಲ್ಕು ಹಸುಗಳು ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಹನವೊಂದು ಢಿಕ್ಕಿ ಹೊಡೆದು ಚಿರತೆ ಮೃತ್ಯು..!!

 (ನ್ಯೂಸ್ ಕಡಬ) newskadaba.com ಮೈಸೂರು, ಜ.08.  ಅಪರಿಚಿತ ವಾಹನ ಢಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟ ಘಟನೆ ಮೈಸೂರು ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಸುಮಾರು 6 ವರ್ಷ ಪ್ರಾಯದ ಗಂಡು ಚಿರತೆ ರಸ್ತೆ ದಾಟುವ ವೇಳೆ ವಾಹನವೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು. ಮಾಹಿತಿ ತಿಳಿದ ತಕ್ಷಣ ಅರಣ್ಯಾಧಿಕಾರಿಗಳು ಮತ್ತು ಪಶುವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಚಿರತೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಚಾಮುಂಡಿ ಬೆಟ್ಟದ ಭಾಗದಲ್ಲಿರುವ

ವಾಹನವೊಂದು ಢಿಕ್ಕಿ ಹೊಡೆದು ಚಿರತೆ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿಗೆ ಆಗಮಿಸಿದ ಎಂ.ಎಸ್ ಧೋನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಶನಿವಾರದಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.   ಇಂದು ಸಂಜೆ ಕಾಸರಗೋಡಿನಲ್ಲಿ ನಡೆಯಲಿರುವ ಧೋನಿ ಅವರ ಸ್ನೇಹಿತ ಡಾ.ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಯಾಗಲಿದ್ದಾರೆ ಎನ್ನಲಾಗಿದೆ.

ಮಂಗಳೂರಿಗೆ ಆಗಮಿಸಿದ ಎಂ.ಎಸ್ ಧೋನಿ Read More »

ಕರ್ನಾಟಕ

ಯುವಕನಿಗೆ ಚೂರಿಯಿರಿತ ➤ ಗಾಯಾಳು ಆಸ್ಪತ್ರೆಗೆ ದಾಖಲು        

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ,  ಜ. 05. ಯುವಕನಿಗೆ ಚೂರಿಯಿಂದ ಇರಿದಿರುವ ಕುರಿತು ಹುಬ್ಬಳ್ಳಿಯಲ್ಲಿ ವರದಿಯಾಗಿದೆ. ಚೂರಿಯಿಂದ ಇರಿತಕ್ಕೊಳಗಾದವರನ್ನು ತೌಸೀಫ್ ಸಗೀರ್ ಅಹ್ಮದ್ ಮುಲ್ಲಾ (32)  ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಆತನನ್ನು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ವಿಶಾಲ್  ಹಾಗೂ ಪ್ರಮೋದ್ ಎಂಬವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಕೃತ್ಯ ನಡೆದಿದೆ ಎಂದು ವರದಿಯಾಗಿದೆ.  

ಯುವಕನಿಗೆ ಚೂರಿಯಿರಿತ ➤ ಗಾಯಾಳು ಆಸ್ಪತ್ರೆಗೆ ದಾಖಲು         Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top