karavali

ರಾಜ್ಯದಲ್ಲಿ ಸೆ.3 ರವರೆಗೂ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com, ಆ.28: ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್  ನೀಡಿದ್ದು,  ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಮತ್ತೆ ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 30ವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 03ರವರೆಗೂ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ರಾಜ್ಯದಲ್ಲಿ ಸೆ.3 ರವರೆಗೂ ಮಳೆಯ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್  ಸೂಚಿಸಿದ್ದಾರೆ. ಅವರು ಮಂಗಳವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭೂಕುಸಿತ, ನೀರು ಮುಳುಗಡೆ, ಸೇರಿದಂತೆ ತೀವ್ರ ಮಳೆಯಿಂದಾಗಿ ದುರಂತ ಘಟನೆಗಳು ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಯಶಸ್ವಿಗೊಂಡ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಡಿ. 11. ಸಿರಿಧಾನ್ಯಗಳಿಂದ  ತಯಾರಿಸಿದ ಪಲಾವ್, ಉಪ್ಪಿಟ್ಟು, ಕಡುಬು, ದೋಸೆ, ಪತ್ರೊಡೆ, ಹೋಳಿಗೆ ಮತ್ತೊಂದೆಡೆ ಕರಾವಳಿಯ ಸಾಂಪ್ರದಾಯಿಕ ಪುರಾತನ ಖಾದ್ಯಗಳಾದ ಕಲ್ತಪ್ಪ, ಪಜೆ ಮಡಿಕೆ, ಚಿಲಿಬಿ (ಕೊಟ್ಟಿಗೆ) ಅಡ್ಯೆ, ರಾತ್ರಿ ಉಳಿದ ಅನ್ನದಿಂದ ತಯಾರಿಸಿದ ತಂಗಳನ್ನ ಗಂಜಿ. ಇವುಗಳು ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯಮೇಳ ಪ್ರಯುಕ್ತ ಮಂಗಳವಾರದಂದು ನಗರದ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕಂಡು ಬಂದ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯಗಳು ಹಾಗೂ ಮರೆತು ಹೋದ

ಯಶಸ್ವಿಗೊಂಡ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ Read More »

ಕರಾವಳಿ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 11.  ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ನಿವಾಸಿ ಕಾರು ಚಾಲಕ ಮಹಮ್ಮದ್ ಕುಂಞಿ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗನನ್ನು ಕಾಸರಗೋಡಿಗೆ ಬಿಟ್ಟು ಬರುತ್ತಿದ್ದಾಗ ಕುಂಟಾರು ಕಳೆದು- ಮೂರೂರು ಸಮೀಪ ತಲುಪುತ್ತಿದ್ದಂತೆ ಕುಂಟಾರಿನ ಲಾರಿಯೊಂದು ಢಿಕ್ಕಿ ಹೊಡೆದಿದೆ. ಅಪಘಾತದ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಡಿ.11ರಂದು ಸರಕಾರಿ ರಜೆ ಘೋಷಣೆ ಮಾಡಿರುವುದರಿಂದ ಅಂದು ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬದಲಾದ ಪರಿಷ್ಕೃತ ಪರೀಕ್ಷೆ ದಿನಾಂಕಗಳನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.                                                                

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ Read More »

ಕರಾವಳಿ

ರಸ್ತೆ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಕಾವೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿದೆ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದ್ದು ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ

ರಸ್ತೆ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನಕ್ಕೆ ದ. ಕ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ

(ನ್ಯೂಸ್ ಕಡಬ) newskadaba.com ಮಂಗಳೂರು, . 10. ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಎಸ್ಎಂ ಕೃಷ್ಣ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ ಸೂಚಿಸಿದ್ದಾರೆ. ಎಸ್‌.ಎಂ. ಕೃಷ್ಣ ಅವರು ರಾಜಕೀಯವಾಗಿ ನಡೆದು ಬಂದಿದ್ದ ಹಾದಿ, ಅವರ ಆಡಳಿತ ಕಾರ್ಯ ವೈಖರಿಗಳು, ರಾಜಕೀಯ ಅನುಭವ, ದೂರದೃಷ್ಟಿಯ ಚಿಂತನೆಗಳು, ಅವರ ವ್ಯಕ್ತಿತ್ವ-ವರ್ಚಸ್ಸು ನಿಜಕ್ಕೂ ಸ್ಪೂರ್ತಿದಾಯಕ ಹಾಗೂ ಅನುಕರಣೀಯ. ಆ ಮೂಲಕ, ಒಬ್ಬ ಅಪ್ಪಟ ರಾಜಕೀಯ ಮುತ್ಸದ್ದಿಯನ್ನು ಕರುನಾಡು ಹಾಗೂ ದೇಶ ಕಳೆದುಕೊಂಡಿರುವುದು

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನಕ್ಕೆ ದ. ಕ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ Read More »

ಕರಾವಳಿ

ಮಲ್ಪೆ ಬೀಚ್‌ನಲ್ಲಿ ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರ ಅನುಚಿತ ವರ್ತನೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಲ್ಪೆ, . 10. ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಪ್ರಕರಣ ದಾಖಲಾಗಿದೆ. ಮಲ್ಪೆ ಬೀಚ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯ ಉಡುಪಿಯ ಹೋಂ ಗಾರ್ಡ್ ಅಕ್ಷಯ್ ಕುಮಾರ್ ಅವರು ಕರ್ತವ್ಯದ ವೇಳೆ ಹಲ್ಲೆ ಮತ್ತು ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಅಕ್ಷಯ್ ಕುಮಾರ್ ಘಟನೆ ನಡೆದ ದಿನ ಬೆಳಗ್ಗೆ 10:00 ಗಂಟೆಯಿಂದ ಮಲ್ಪೆ ಬೀಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಮಾರು ಮಧ್ಯಾಹ್ನ 1:00 ಗಂಟೆಗೆ, 4-5

ಮಲ್ಪೆ ಬೀಚ್‌ನಲ್ಲಿ ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರ ಅನುಚಿತ ವರ್ತನೆ: ದೂರು ದಾಖಲು Read More »

ಕರಾವಳಿ

ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೇರವೇರಿಸಿದ ಸಂಸದ ಕೋಟ

(ನ್ಯೂಸ್ ಕಡಬ) newskadaba.com ಮಂಗಳೂರು, . 09. ಮಂಗಳೂರಿನಿಂದ ಕಾರವಾರ ಪ್ರಯಾಣಿಸುವ ರೈಲ್ವೆ ಹಳಿಗಳನ್ನು ದ್ವಿಪತಗೊಳಿಸುವುದು ಮತ್ತು ಭಾರತೀಯ ರೈಲ್ವೆ ಹಾಗೂ ಕೊಂಕಣ ರೈಲ್ವೆ ಯನ್ನು ವಿಲೀನಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಕುಂದಾಪುರದ ಮೂಡ್ಲುಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಲಯನ್ಸ್ ಕ್ಲಬ್ ವತಿಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮತ್ತು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೆರವೇರಿಸಿ ಅವರು

ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೇರವೇರಿಸಿದ ಸಂಸದ ಕೋಟ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, . 09. ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸೊಂದು ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಗ್ಗೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ. ಕನ್ಯಾಡಿಯ ಸೇವಾ ಭಾರತಿಗೆ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್ Read More »

ಕರಾವಳಿ
Scroll to Top