karavali

crime, arrest, suspected

ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.18. ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ, ೧೫ ಸಾವಿರ ಮೌಲ್ಯದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಕಲಂ 8 20(ಬಿ) (6), ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ನ್ಯಾನೋ ಕಾರು ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.  

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರು ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಅ.18. ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯದ ತೂಗು ಸೇತುವೆಯ ಮೇಲೆ ಮೂವರು ಹೋಗುತ್ತಿದ್ದ ವೇಳೆ ರೋಪ್ ತುಂಡಾಗಿದೆ. ಮೂವರನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.  

ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರು ಗಾಯ Read More »

ಕರಾವಳಿ

ಮೂಡುಬಿದಿರೆ: ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ.18. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಎನರ್ಜಿ ಆ್ಯಂಡ್ ವೆಟ್‌ಲ್ಯಾಂಡ್ಸ್ ರಿಸರ್ಚ್ ಗ್ರೂಪ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ 14ನೇ ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಗುರುವಾರ ಚಾಲನೆ ದೊರೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸಮ್ಮೇಳನವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ

ಮೂಡುಬಿದಿರೆ: ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಚಾಲನೆ Read More »

ಕರಾವಳಿ

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 17. ರೆಂಜಾಳ ನಾಯಕ ಮನೆತನದ ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್(76) ಅವರು ಅಕ್ಟೋಬರ್ 16 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಆಸ್ಪತ್ರೆಯ ಕೊರತೆಯಿದ್ದ ಸಮಯದಲ್ಲಿ, ಅವರು ಹಿಂದುಳಿದವರಿಗೆ, ವಿಶೇಷವಾಗಿ ಕಾಮಾಲೆ ಮತ್ತು ಹಾವು ಕಡಿತದಂತಹ ಕಾಯಿಲೆಗಳಿಗೆ ಉಚಿತ ಗಿಡಮೂಲಿಕೆ ಪರಿಹಾರಗಳನ್ನು ಒದಗಿಸಿದರು. ತಮ್ಮ ನೆರೆಹೊರೆಯವರ ಕಲ್ಯಾಣಕ್ಕಾಗಿ ಅವರು ಶ್ರಮಿಸಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಶೈಕ್ಷಣಿಕ ಸೌಲಭ್ಯಗಳ ಕೊರತೆಯನ್ನು ಅರಿತು ಸರ್ಕಾರಿ ಅಂಗನವಾಡಿ ನಿರ್ಮಿಸಲು

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಅ. 17. ಎರಡು ವಾರಗಳ ಹಿಂದೆಯಷ್ಟೇ ಕೊಲ್ಲಿ ರಾಷ್ಟ್ರದಿಂದ ಊರಿಗೆ ಮರಳಿದ್ದ ಯುವಕನೊಬ್ಬನ ಮೃತದೇಹ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಯುವಕನನ್ನು ತೂಮಿನಾಡು ಕುಚ್ಚಿಕ್ಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಕೆ.ಎಚ್. ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಅನ್ಸಾರ್ (32) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 11 ರ ಸುಮಾರಿಗೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮುಹಮ್ಮದ್ ಅನ್ಸಾರ್ ಪತ್ತೆಯಾಗಿದ್ದರೆನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವವನ್ನು ರಕ್ಷಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..! Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ತಡೆದು 1.64 ಲಕ್ಷ ರೂ. ದರೋಡೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಅ. 16. ಲಾರಿ ತಡೆದು ಚಾಲಕನಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ 1.64 ಲಕ್ಷ ರೂ. ದರೋಡೆ ಗೈದ ಘಟನೆ ಇಂದು ಮುಂಜಾನೆ ಪೈವಳಿಕೆ ಸಮೀಪದ ಅಟ್ಟೆಗೋಳಿಯಲ್ಲಿ ನಡೆದಿದೆ. ಮೀನು ತರಲು ತೆರಳುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ಲಾರಿ ಚಾಲಕ ಯೂಸಫ್ ನನ್ನು ತಡೆದು ಚಾಕು ತೋರಿಸಿ ಹಣವನ್ನು ದರೋಡೆ ಮಾಡಿರುವುದಾಗಿ ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೋಲಿಸರು ತನಿಖೆ ಆರಂಭಿಸಿದ್ದು, ಸಿ ಸಿ ಟಿ ವಿ ಕ್ಯಾಮರಾ ತಪಾಸಣೆ ನಡೆಸಿದ್ದಾರೆ.

ಲಾರಿ ತಡೆದು 1.64 ಲಕ್ಷ ರೂ. ದರೋಡೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಅ. 16. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ (ಅ.15) ಸೂಚಿಸಿದೆ. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು ಎಂದು ಜಿಲ್ಲಾಡಳಿತ

ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ Read More »

ಕರಾವಳಿ

ಬಸ್ ನಿರ್ವಹಕನ ಶವ ಪತ್ತೆ: ಕೊಲೆ ಶಂಕೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ಬಸ್ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ನೆಹರೂ ಮೈದಾನದ ಇಂದಿರಾ ಕ್ಯಾಂಟಿನ್ ಪರಿಸರದಲ್ಲಿ ಪತೆಯಾಗಿದೆ. ಮೃತ ವ್ಯಕ್ತಿಯನ್ನು ಮಂಗಳೂರು-ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್(30) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್ ರಾಜೇಶನ ಜರ್ಜರಿತವಾದ ಮೃತದೇಹ ಪತ್ತೆಯಾಗಿತ್ತು. ಸ್ಥಳಕ್ಕಾಗಮಿಸಿದ ಪಾಂಡೇಶ್ವರ ಠಾಣಾ ಪೊಲೀಸರು ಮೃತದೇಹವನ್ನು ವಾರೀಸುದಾರರು ಯಾರೂ ಬಂದಿಲ್ಲದ ಕಾರಣ ವೆನ್ಲಾಕ್ ಶವಾಗಾರದಲ್ಲಿ ಇರಿಸಿದ್ದಾರೆ.

ಬಸ್ ನಿರ್ವಹಕನ ಶವ ಪತ್ತೆ: ಕೊಲೆ ಶಂಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮಂಜನಾಡಿಯ ಬದ್ರಿಯಾ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಣಾಜೆ, ಉಳ್ಳಾಲ, ಕಡಬ, ಬರ್ಕೆ, ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಸುಮಾರು 24 ಪ್ರಕರಣಗಳು ದಾಖಲಾಗಿವೆ. ಆರೋಪಿಯ ಬಗ್ಗೆ ದೊರೆತ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top