karavali

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸೊಸೈಟಿ ಉದ್ಯೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ದ್ವಿಚಕ್ರ ವಾಹನಗಳ ನಡುವೆ ನಡೆ ಅಪಘಾತದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತರನ್ನು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉದ್ಯೋಗಿ ಭೋಜಪ್ಪ (50) ಎಂದು ಗುರುತಿಸಲಾಗಿದೆ. ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್ […]

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸೊಸೈಟಿ ಉದ್ಯೋಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ವೇಣೂರು, ಅ. 16. ಕಾಲೇಜು ವಿದ್ಯಾರ್ಥಿನಿಯರಿಗೆ ಚುಡಾಯಿಸಿ ಮೊಬೈಲ್ ನಂಬರಿಗೆ ಒತ್ತಾಯಿಸಿದ್ದ ಯುವಕನೊಬ್ಬನನ್ನು ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ನೆರವಿನಿಂದ ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರಿನ ಗೋಳಿಯಂಗಡಿಯಲ್ಲಿರುವ ಪ್ರತಿಷ್ಠಿತ ಧರ್ಮಸ್ಥಳ ಐ ಟಿ ಐ ಕಾಲೇಜಿಗೆ ಹೋಗುತ್ತಿರುವ ವಿದ್ಯಾರ್ಥಿನಿಯರನ್ನು ಅವ್ಯಾಚ್ಯ ಶಬ್ದಗಳಿಂದ ಮಾತನಾಡುತ್ತಾ, ನಿನ್ನ ಮೊಬೈಲ್ ನಂಬರ್ ಕೊಡು, ಪ್ರತಿದಿನ ಬೈಕಿನಲ್ಲಿ ಕಾಲೇಜಿಗೆ ಡ್ರಾಪ್ ಮಾಡುತ್ತೇನೆ ಎಂದು ಪೀಡಿಸುತ್ತಿದ್ದನು. ಇದರಿಂದ ಗಾಬರಿಗೊಂಡ ಯುವತಿಯು ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ ತಿಳಿಸಿದ್ದಾಳೆ ಎನ್ನಲಾಗಿದೆ.    

ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ತುಳಸಿ ಗಿಡದಲ್ಲಿ ದಾಸವಾಳ ಹೂವು ಅರಳುತ್ತಿವೆ ಎಂದರೆ ಅಚ್ಚರಿಯಾಗೋದು ಸಹಜ‌. ಆದರೆ ಇದು ನಿಜ ಎಂದು ಎಂದು ಅಜ್ಜಾವರದ ಶಾಂತಿಮಜಲಿನ ಈ ಮನೆಯವರು ಹೇಳುತ್ತಾರೆ‌. ಅಜ್ಜಾವರ ಗ್ರಾಮದ ಶಾಂತಿಮಜಲಿನ ಭವಾನಿ ಅವರ ಮನೆಯಂಗಳದ ತುಳಸಿ ಗಿಡದಲ್ಲಿ ಅರಳುತ್ತಿರುವುದು ದಾಸವಾಳ ಹೂವು. ಒಂದು ವಾರದಲ್ಲಿ 3ನೇ ಬಾರಿಗೆ ಈ ರೀತಿ ಹೂವು ಅರಳಿ ನಿಂತಿದೆ. ತುಳಸಿ ಗಿಡದಲ್ಲಿ ಇನ್ನೂ ಕೂಡ ಹೂವಿನ ಮೊಗ್ಗು ಇದ್ದು ಇನ್ನಷ್ಟು ದಾಸವಾಳ ಗಿಡಗಳು ಅರಳುವ

ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..! Read More »

ಕರಾವಳಿ

ಪೊಳಲಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ- ಸ್ಥಳೀಯರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15.  ಪೊಳಲಿಯ (ಅಡ್ಡೂರು) ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆಯಲ್ಲಿ ಘನವಾಹನ ಸಂಚಾರದ ಕುರಿತಂತೆ ಎರಡು ತಿಂಗಳು‌ ಕಳೆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದ ಮತ್ತು ಪರ್ಯಾಯ ರಸ್ತೆಯ ವ್ಯವಸ್ಥೆಗೆ ಮುಂದಾಗದೆ ನಿರ್ಲಕ್ಷ್ಯತನ ತೋರಿದ ಜಿಲ್ಲಾಡಳಿತದ ವಿರುದ್ದ ಜನಾಕ್ರೋಶ ವ್ಯಕ್ತವಾದ ಬೆನ್ನಲೇ ಎಚ್ಚೆತ್ತ ಜಿಲ್ಲಾಡಳಿತ ಬಂಟ್ವಾಳ ತಹಶೀಲ್ದಾರರ ನೇತೃತ್ವದ ಅಧಿಕಾರಿಗಳ ದಂಡು ಸೋಮವಾರ ಪೊಳಲಿಗೆ ರವಾನಿಸಿ ಗ್ರಾಮಸ್ಥರ ಮನವೊಲಿಸಿದ್ದು, ಕೊನೆಗೂ ಇಂದು ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ಹಿಂತೆಗೆಸುವಲ್ಲಿ ಯಶಸ್ವಿಯಾಗಿದೆ. ಬಂಟ್ವಾಳ

ಪೊಳಲಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ- ಸ್ಥಳೀಯರ ಪ್ರತಿಭಟನೆ Read More »

ಕರಾವಳಿ

ಕುತ್ತಾರಿನ ಕೊರಗಜ್ಜ ದೈವದ ದರ್ಶನ ಪಡೆದ ನಟ ಶಿವರಾಜ್‌ಕುಮಾರ್‌ ದಂಪತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 15. ತುಳುನಾಡಿನ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರ್‌ಗೆ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕರಾವಳಿಯಲ್ಲಿ ಹಲವಾರು ಪುಣ್ಯ ಕ್ಷೇತ್ರಗಳಿವೆ. ಆದರೆ ಇಲ್ಲಿಗೆ ಭೇಟಿ ನೀಡಿದಾಗ ಏನೋ ಒಂದು ನೆಮ್ಮದಿ ಸಿಗುತ್ತದೆ. ಕೊರಗಜ್ಜ ದೈವದ ಮೇಲೆ ನಂಬಿಕೆ ಇದೆ. ಜನರು ಕೂಡ ಈ ದೈವದ ಮೇಲೆ ಅಪಾರ ನಂಬಿಕೆ

ಕುತ್ತಾರಿನ ಕೊರಗಜ್ಜ ದೈವದ ದರ್ಶನ ಪಡೆದ ನಟ ಶಿವರಾಜ್‌ಕುಮಾರ್‌ ದಂಪತಿ Read More »

ಕರಾವಳಿ, ಸಿನಿಮಾ

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 15. ಮನೆ ಮಂದಿ ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ನಡೆಸಿದ ಪ್ರಕರಣವು ಕಡಬ ತಾಲೂಕಿನ ಸವಣೂರು ಎಂಬಲ್ಲಿ ನಡೆದಿದೆ. ಸವಣೂರು ನಿವಾಸಿ ಸಲೀಂ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸಲೀಂ ಅವರು ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಕಳೆದ ಶುಕ್ರವಾರ ಮನೆಗೆ ಬೀಗ ಹಾಕಿ ಪ್ರವಾಸ ಹೋಗಿದ್ದರು. ಪ್ರವಾಸ ಮುಗಿಸಿಕೊಂಡು ರವಿವಾರ ಮಧ್ಯರಾತ್ರಿ ವೇಳೆ ಮನೆಗೆ ವಾಪಾಸ್ಸು

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಹುಲಿ ವೇಷ ಹಾಕಲು ಹೋದ ವ್ಯಕ್ತಿ ನಾಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಅ. 15. ಹುಲಿ ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್‌ (55) ಎಂದು ಗುರುತಿಸಲಾಗಿದೆ. ಸುಂದರ ನಾಯ್ಕ್‌ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಅ.1 ರಂದು ಬೆಳಿಗ್ಗೆ ಮನೆಯಲ್ಲಿ ಇರುವಾಗ ನಾಳೆ ನಾನು ದಸರಾ ಹಬ್ಬದ ವೇಷ ಹಾಕಲು ಇದೆ ನಾನು ವಿಟ್ಲ

ಹುಲಿ ವೇಷ ಹಾಕಲು ಹೋದ ವ್ಯಕ್ತಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಪಲ್ಟಿ: ಮಹಿಳೆ ಮೃತ್ಯು ಚಾಲಕ ಗಂಭೀರ ಗಾಯ

(ನ್ಯೂಸ್ ಕಡಬ) news kadaba.com ಅ. 14. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಎಂದು ಗುರುತಿಸಲಾಗಿದೆ. ಚಾಲಕ ರೂಪೇಶ್ (40) ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ

ಕಾರು ಪಲ್ಟಿ: ಮಹಿಳೆ ಮೃತ್ಯು ಚಾಲಕ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12.  ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇದೀಗ ಮಂಗಳೂರು ವಿಮಾನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ಡಿ.ಕೆ.ಎಸ್.ಸಿ ಪಾಣೆಮಂಗಳೂರು: ನೂತನ ಶಾಖೆಯ ಶುಭಾರಂಭ

(ನ್ಯೂಸ್ ಕಡಬ) newskadaba.com ಅ. 12. ಡಿ.ಕೆ.ಎಸ್.ಸಿ ಜಿಲ್ಲಾ ಸಮಿತಿ ಮಂಗಳೂರು ಇದರ ಅಧೀನದಲ್ಲಿ ಪಾಣೆಮಂಗಳೂರು ಶಾಖೆಯು ಎಸ್.ಎಸ್.ಅಡಿಟೋರಿಯಂ ಆಲಡ್ಕ ಇದರ ಸಭಾಂಗಣದಲ್ಲಿ ಡಿ.ಕೆ.ಎಸ್.ಸಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಬಹು ಅಸ್ಸಯ್ಯಿದ್ ಅಹ್ಮದ್ ಮುಖ್ತಾರ್ ತಂಙಳ್ ಅಲ್ ಹೈದ್ರೋಸಿ, ಕುಂಬೋಳ್ ರವರ ಘನ ಅಧ್ಯಕ್ಷತೆಯಲ್ಲಿ ಶುಭಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಹಮ್ಮದ್ ಹಾಶಿಂ ಕಿರಾಅತ್ ಪಠಿಸಿದರು. ಅಲ್ ಇಹ್ಸಾನ್ ವುಮೆನ್ಸ್ ಶರೀಅತ್ ಕಾಲೇಜಿನ ಪ್ರಾಂಶುಪಾಲರಾದ ಮುಹಮ್ಮದ್ ಅಲ್ ಖಾಸಿಮಿ ಅಳಕೆಮಜಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬದ್ರಿಯಾ ಜುಮ್ಮಾ ಮಸೀದಿ ಆಲಡ್ಕ ಇದರ

ಡಿ.ಕೆ.ಎಸ್.ಸಿ ಪಾಣೆಮಂಗಳೂರು: ನೂತನ ಶಾಖೆಯ ಶುಭಾರಂಭ Read More »

ಕರಾವಳಿ
Scroll to Top