karavali

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರದಂದು ಬೆಂಗಳೂರಿನಿಂದ ಬಂದು ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌ […]

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ

(ನ್ಯೂಸ್ ಕಡಬ)newskadaba.com ಸುರತ್ಕಲ್, ಅ. 11.  ಇಲ್ಲಿನ ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಸಹೋದರಿಗೆ ಮನೆಯಿಂದ ಊಟ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಾಳು ಯುವಕ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯಲ್ಲಿ

ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: “ಕುಡ್ಲದ ಪಿಲಿ ಪರ್ಬ- 2024” ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇತ್ತೀಚೆಗೆ ಸ್ಪರ್ಧಾಕೂಟದ ಸ್ಪರ್ಶ ಲಭಿಸಿದ್ದು, ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಹಲವು ಹುಲಿವೇಷ

ಮಂಗಳೂರು: “ಕುಡ್ಲದ ಪಿಲಿ ಪರ್ಬ- 2024” ಉದ್ಘಾಟನಾ ಸಮಾರಂಭ Read More »

ಕರಾವಳಿ

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ನಗರದ ಪ್ರತಿಷ್ಠಿತ ಬಿಲ್ಡರ್ ಹಾಗೂ ಬಿಜೆಪಿ ಮುಖಂಡರೊಬ್ಬರ ಮನೆಗೆ ಯುವಕರು ನುಗ್ಗಿ ದಾಂಧಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಿಲ್ಡರ್ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ಇಬ್ಬರು ಯುವಕರು ನುಗ್ಗಿ ದಾಂಧಲೆ ನಡೆಸಿದ್ದು ಅವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನುಶ್ ಶೆಟ್ಟಿ ಹಾಗೂ ಅಂಕಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಜಿತೇಂದ್ರ ಕೊಟ್ಟಾರಿ ಮೇಲೆ ಹಲ್ಲೆ ನಡೆಸಿ ತಡೆಯಲು ಬಂದ ಪತ್ನಿ ಮೇಲೂ ಹಲ್ಲೆ ಯತ್ನ

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ

(ನ್ಯೂಸ್ ಕಡಬ) newskadaba.com ಅ. 11. “ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಒಂದು ಅಧ್ಯಯನ” ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‍ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದಾರೆ.

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ Read More »

ಕರಾವಳಿ

ಬೈಕ್ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ. 11.  ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು

ಬೈಕ್ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ.ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ದ.ಕ. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭ (ನ.1) ನೀಡಲಾಗುವ ಜಿಲ್ಲಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದ.ಕ.ಜಿಲ್ಲಾಡಳಿತವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ಜಿಲ್ಲಾ ಪ್ರಶಸ್ತಿಯನ್ನು ನೀಡಲಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜಾನಪದ, ಪರಿಸರ ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ಕ್ಷೇತ್ರಗಳಲ್ಲಿ ಸಾಧನೆಗೈದವರು ಅರ್ಜಿಯನ್ನು ಸಂಕ್ಷಿಪ್ತ ದಾಖಲೆ/ ವಿವರಣೆಯೊಂದಿಗೆ ಅ.25ರೊಳಗೆ

ದ.ಕ.ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅಕ್ರಮ ಪಟಾಕಿ ದಾಸ್ತಾನು:4 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ

(ನ್ಯೂಸ್ ಕಡಬ)newskadaba.com, ಅ. 09ಕುಂದಾಪುರ: ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಪಟಾಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ. ಇಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿಯಾಗಿದ್ದಾನೆ. ಇವರ ಪಟಾಕಿ ದಾಸ್ತಾನು ಶೆಡ್ ಸಮೀಪವೇ ಕಾಂಕ್ರೀಟ್ ರಸ್ತೆ ಇದ್ದು, ಕೆಲವು ಸಮಯಗಳ ಹಿಂದೆ ರಸ್ತೆ ಮಧ್ಯೆಯೇ ಕೆಂಪು ಕಲ್ಲಿನ ಕಂಪೌಂಡ್ ನಿರ್ಮಿಸಿದ್ದರು. ಈ ಬಗ್ಗೆ ಸ್ಥಳೀಯರು ಹಾಗೂ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರೂ

ಅಕ್ರಮ ಪಟಾಕಿ ದಾಸ್ತಾನು:4 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ Read More »

ಕರಾವಳಿ

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ನಗರದಲ್ಲಿ ಖಾಸಗಿ ಬಸ್ಸೆಂದರ ಅತೀ ವೇಗ ಹಾಗೂ ಅಜಾಗರುಕತೆ ಚಾಲನೆ ನಡೆಸುತ್ತಿದ್ದ ಹಿನ್ನಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಚಾಲಕನ ಓವರ್ ಟೇಕ್ ಅಟ್ಟಹಾಸ! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ಸುರಕ್ಷತೆಯನ್ನು ಲೆಕ್ಕಿಸದೆ ನಿರ್ಲಕ್ಷ್ಯತನದಿಂದ ಎದೆ ಝಲ್ಲೆನಿಸುವಂತೆ ಮಾಡಿದ್ದ ಬಸ್ ನ ಓವರ್ ಸ್ಪೀಡ್ ವಿಡಿಯೋಗಳು ಇದೀಗ ವೈರಲ್ ಆಗಿದೆ. ಮಂಗಳೂರು -ಮೂಡಬಿದ್ರೆ ರೂಟ್ ನಲ್ಲಿ ಸಂಚಾರಿಸುತ್ತಿದ್ದ ಜೈನ್ ಟ್ರಾವೆಲ್ಸ್ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಅಪಾಯಕಾರಿ

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗಿನ್ನಿಸ್ ದಾಖಲೆಯ ವೀರ ಗೋಪಾಲ್ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 09. 25ನೇ ಸ್ಟೇಟ್ ಮಾಸ್ಟರ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಇವರು ಆಯೋಜಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ-ಕನ್ಯಾಣ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು 400ಮೀ ಫ್ರೀಸ್ಟೈಲ್ ಚಿನ್ನದ ಪದಕ, 50ಮೀ ಬಟರ್ ಫ್ಲೈ ಚಿನ್ನದ ಪದಕ, 200ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 100ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 4×50 ಫ್ರೀಸ್ಟೈಲ್ ರಿಲೇ ಬೆಳ್ಳಿ

ಗಿನ್ನಿಸ್ ದಾಖಲೆಯ ವೀರ ಗೋಪಾಲ್ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top