karavali

ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರೀಟೇಲರ್ಸ್‌ರಿಂದ ಪ್ರತಿಭಟನೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಆ್ಯಪಲ್ ಐಒಎಸ್ ಅಪ್ಡೇಟ್ ಬಳಿಕ ಮೊಬೈಲ್‌ಸ್ಕ್ರೀನ್‌ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲಾಂಕ್ ಆಗುವ ಸಮಸ್ಯೆಯಿಂದ ಗ್ರಾಹಕರು ತೊಂದರೆ ಅನುಭವಿಸುದ್ದು, ಅದನ್ನು ಬಗೆಹರಿಸುವಂತೆ ಒತ್ತಾಯಿಸಿ ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರೀಟೇಲರ್ಸ್‌ಗಳು ಇಂದು ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಸರ್ಕಲ್‌ನಿಂದ ಆ್ಯಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್‌ನ ಎದುರುಗಡೆಯಿಂದ ಕ್ಲಾಕ್‌ ಟವರ್ ವರಗೆ ಮೆರವಣಿಗೆಯಲ್ಲಿ ಸಾಗಿಬಂದ ಪ್ರತಿಭಟನಾಕಾರರು ಕ್ಲಾಕ್ ಟವರ್ ಬಳಿ ತಮ್ಮ ಬೇಡಿಕೆಗಳನ್ನು ಕೂಡಲೇ ಪೂರೈಸುವಂತೆ ಸಂಸ್ಥೆಯನ್ನು […]

ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರೀಟೇಲರ್ಸ್‌ರಿಂದ ಪ್ರತಿಭಟನೆ  Read More »

ಕರಾವಳಿ

ಧರ್ಮನಿಂದನೆ ಆರೋಪ: ಮೂವರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 17. ಧರ್ಮನಿಂದನೆ, ಕೋಮು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸೆ.16 ರಂದು ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಭಜರಂಗದಳ- ವಿಎಚ್.ಪಿ ಯವರ ಬಿಸಿರೋಡು ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ ಪಂಪ್ ವೆಲ್ ಹಾಗೂ ಭರತ್ ಕುಮ್ಡೇಲು ಅವರು ಮುಸ್ಲಿಂ ಸಮುದಾಯದ ಭಾವನೆಗೆ ಮತ್ತು ಧರ್ಮದ ಘನತೆಗೆ

ಧರ್ಮನಿಂದನೆ ಆರೋಪ: ಮೂವರ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಬಾರ್ಕೂರಿನ ರಿಶಾ ತಾನ್ಯಾ ಪಿಂಟೋರವರಿಗೆ “ಮಿಸ್ ಟೀನ್ ಕರಾವಳಿ 2024” ಕಿರೀಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17.  ಪ್ರತಿಭೆ ಮತ್ತು ಚೆಲುವಿನ ಅದ್ಭುತ ಪ್ರದರ್ಶನದಲ್ಲಿ ಬಾರ್ಕೂರಿನ ರಿಷಾ ತಾನ್ಯಾ ಪಿಂಟೋ ಅವರು “ಮಿಸ್ ಟೀನ್ ಕರಾವಳಿ 2024” ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದು ತಮ್ಮ ಸಮುದಾಯಕ್ಕೆ ಗೌರವ ತಂದಿದ್ದಾರೆ. ಯುಪಿಎಸ್ ಮಾಡೆಲ್ ಮ್ಯಾನೇಜ್‌ಮೆಂಟ್ ಆಯೋಜಿಸಿರುವ ಸರಣಿ ಕಾರ್ಯಕ್ರಮದ ಭಾಗವಾದ ಈ ಕಾರ್ಯಕ್ರಮವು ಸೆಪ್ಟೆಂಬರ್ 15 ರಂದು ಮಂಗಳೂರಿನ ಎಜೆ ಗ್ರ್ಯಾಂಡ್ ಹೋಟೆಲ್‌ನಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಮಿಸ್ ಟೀನ್ ಕರಾವಳಿ, ಮಿಸ್ ಕರಾವಳಿ, ಮಿಸೆಸ್ ಕರಾವಳಿ ಮತ್ತು ಮಿಸ್ಟರ್

ಉಡುಪಿ: ಬಾರ್ಕೂರಿನ ರಿಶಾ ತಾನ್ಯಾ ಪಿಂಟೋರವರಿಗೆ “ಮಿಸ್ ಟೀನ್ ಕರಾವಳಿ 2024” ಕಿರೀಟ Read More »

ಕರಾವಳಿ

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್ ನ ಅಗತ್ಯವಿದ್ದ ಹಿನ್ನೆಲೆ ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ತಪಾಸಣೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡಾ ಹೊಂದಾಣಿಕೆಯಾಗದೇ ಇದ್ದು, ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17.  ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ. 17. ಹೊಸಂಗಡಿಯ ಹೈಲ್ಯಾಂಡ್ಸ್ ಕಾಂಪ್ಲೆಕ್ಸ್ ನಲ್ಲಿರುವ ಸುರಕ್ಷಾ ದಂತ  ಚಿಕಿತ್ಸಾಲಯದಲ್ಲಿ ವಿಶೇಷವಾಗಿ ಓಣಂ ಹಬ್ಬ ಆಚರಿಸಲಾಯಿತು.  ಸಂಸ್ಥೆಯ ಮುಖ್ಯಸ್ಥ ಡಾ. ಮುರಲೀಮೋಹನ ಚೂಂತಾರು ಶುಭಹಾರೈಸಿದರು. ವೈದ್ಯೆ ಡಾ.ರಾಜಶ್ರೀ ಮೋಹನ್, ಪರಿಚಾರಕಿಯರಾದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು. ಸಂಸ್ಥೆಯು 28 ವರ್ಷಗಳಿಂದ ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಮನ್ನಣೆಗೆ ಪಾತ್ರವಾಗಿದೆ.

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ Read More »

ಕರಾವಳಿ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು, ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಸ್ವಚ್ಛಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದ ಅವರು, ” ಭಾರತೀಯ ಸಂಸ್ಕೃತಿಯಲ್ಲಿ ಸೇವೆ ಮತ್ತು ತ್ಯಾಗಕ್ಕೆ ತನ್ನದೇ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

ಸ್ಟೀಲ್ ನಟ್‌ ಬಳಸಿ ಶಿವನ ಮಾದರಿಯ ಲೋಹ ಶಿಲ್ಪ ನಿರ್ಮಾಣ ’ಇಂಟರ್‌ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ ಗೆ ದಾಖಲೆ

(ನ್ಯೂಸ್ ಕಡಬ) newskadaba.com ಕಟಪಾಡಿ, ಸೆ. 14.  ಇಲ್ಲಿನ ಕೋಟೆ ಗ್ರಾಮದ ಮಟ್ಟು ನಿವಾಸಿ ಅಮಿತ್ ಅಂಚನ್ ಅವರು ಸುಮಾರು 7,600 ಸ್ಟೀಲ್ ನಟ್‌ಗಳನ್ನು ಬಳಸಿ 3 ತಿಂಗಳಲ್ಲಿ ನಿರ್ಮಿಸಿದ ಶಿವನ ಮಾದರಿಯ ಲೋಹ ಶಿಲ್ಪ ಇಂಟರ್‌ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ದಾಖಲಾಗಿರುತ್ತದೆ. ಲೋಹದ ನಟ್ ಬಳಸಿ ಅಮಿತ್ ಅಂಚನ್ ನಿರ್ಮಿಸಿರುವ ಈ ಶಿಲ್ಪವು ‘ಯಂಗೆಸ್ಟ್ ಮೇಕ್ ಬಿಗ್ಗೆಸ್ಟ್ ಸ್ಕಲ್‌ಪ್ಚರ್ ಆಫ್ ಲಾರ್ಡ್ ಶಿವ’ ಎಂದು ವರ್ಲ್ಡ್ ರೆಕಾರ್ಡ್‌ನಲ್ಲಿ ಗುರುತಿಸಲ್ಪಟ್ಟಿದೆ. ಈ ಕಲಾಕೃತಿಯು 3.5 ಅಡಿ ಎತ್ತರ

ಸ್ಟೀಲ್ ನಟ್‌ ಬಳಸಿ ಶಿವನ ಮಾದರಿಯ ಲೋಹ ಶಿಲ್ಪ ನಿರ್ಮಾಣ ’ಇಂಟರ್‌ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ ಗೆ ದಾಖಲೆ Read More »

ಕರಾವಳಿ

ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ ಘಟನೆ ಪುದು ಗ್ರಾಮದ ಪೆರಿಯಾರ್ ನಲ್ಲಿ ನಡೆದಿರುವುದಾಗಿ ಸೆಪ್ಟೆಂಬರ್ 12ರಂದು ಬೆಳಕಿಗೆ ಬಂದಿದೆ. ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕ್ಯಾಟರಿಂಗ್ ಕೆಲಸ ಮಾಡುತ್ತಿರುವ ಅವರು ಸೆ. 8ರಂದು ಮನೆಗೆ ಬೀಗ ಹಾಕಿ ಪತ್ನಿಯೊಂದಿಗೆ ಬೆಂಗಳೂರಿನಲ್ಲಿರುವ ಸಂಬಂಧಿಕರ

ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಯಕ್ಷಗಾನ ಗುರು ಸಂಜೀವ ಸುವರ್ಣ ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 14.  ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ. ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ನವೆಂಬರ್ ತಿಂಗಳಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪದಾನ ಮಾಡಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂ ನಗದು, ಪ್ರಶಸ್ತಿ ಫಲಕಗಳನ್ನು ಹೊಂದಿರುತ್ತದೆ ಎಂದರು. ಇದರೊಂದಿಗೆ ಅಕಾಡಮಿಯ ನೂತನ ಅಧ್ಯಕ್ಷರು ಅಕಾಡಮಿಯ

ಉಡುಪಿ: ಯಕ್ಷಗಾನ ಗುರು ಸಂಜೀವ ಸುವರ್ಣ ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ
Scroll to Top