karavali

ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ’ವನಜ ರಂಗಮನೆ ಪ್ರಶಸ್ತಿ- 2024’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 11.  ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ರಾವಣ, ಕುಂಭಕರ್ಣ, ಮಹಿರಾವಣ, ಮಹಿಷಾಸುರ, ಕಾಕಾಸುರ, ವರಾಹ, ಸಿಂಹ, ಗಜೇಂದ್ರ ಮುಂತಾದ ಬಣ್ಣದ ವೇಷಗಳು ಅಲ್ಲದೆ ಅಜಮುಖಿ, ಶೂರ್ಪನಖಿ, ಪೂತನಿ, […]

ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ’ವನಜ ರಂಗಮನೆ ಪ್ರಶಸ್ತಿ- 2024’ಗೆ ಆಯ್ಕೆ Read More »

ಕರಾವಳಿ

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು    

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 11.  ಖಾಸಗಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು     Read More »

ಕರಾವಳಿ

ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳ ವಿತರಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 11.  ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ರವರು ಮಾನಸ ಶಾಲೆಯ ಅಧ್ಯಕ್ಷರಿಗೆ ದಿನಸಿ ವಸ್ತುಗಳನ್ನು ಹಸ್ತಾಂತರಿಸಿ, ಇಂತಹ ಸಾಮಾಜಿಕ ಕಾರ್ಯಕ್ರಮ ಹಮ್ಮಿ ಕೊಳ್ಳಲು ಮೂಲ ಪ್ರೇರಣೆ ಮತ್ತು ಮುಖ್ಯ ಉದ್ದೇಶ ದಿ.

ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳ ವಿತರಣೆ Read More »

ಕರಾವಳಿ

ಉಳ್ಳಾಲ: ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ, ಗೌರವ ಸನ್ಮಾನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 11.  ಶಿಕ್ಷಕರಾಗಿದ್ದವರು ಮಕ್ಕಳನ್ನು ಗೌರವಿಸುವ ಮನೋಭಾವ, ಪರಿಸರ ಪ್ರಜ್ಞೆ ಮೂಡಿಸುವ ಜವಾಬ್ದಾರಿ ಹೆಚ್ಚಾಗ ಬೇಕಿದೆ. ಭಾಷೆಯ ಸ್ಪರ್ಶ, ಮಾನವೀಯತೆ ಸ್ಪರ್ಶ ಎಂದಿಗೂ ಮಕ್ಕಳಲ್ಲಿ ಜಾಗೃತಿಯಾದಾಗ ಮಕ್ಕಳು ಜೀವನದಲ್ಲಿ ಬೆಳೆಯಲು ಸಾಧ್ಯ. ನಾವು ಯಾವ ದಾರಿಯಲ್ಲಿ ಹೋಗುತ್ತೇವೆಯೋ ಅದೇ ದಾರಿಯಲ್ಲಿ ಮಕ್ಕಳು ಹೋಗುತ್ತಾರೆ ಎಂದು ನಿಟ್ಟೆ ವಿವಿ ಮಾನವಿಕ ವಿಭಾಗದ ಮುಖ್ಯಸ್ಥ ಡಾ. ಸಾಯಿಗೀತ ಹೇಳಿದರು. ಉಳ್ಳಾಲ ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಕುತ್ತಾರ್ ನಲ್ಲಿ ನಡೆದ

ಉಳ್ಳಾಲ: ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ, ಗೌರವ ಸನ್ಮಾನ Read More »

ಕರಾವಳಿ

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ಮಾರ್ಬಲ್ ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುಹಮ್ಮದ್ ಶರೀಫ್ ಎಂಬಾತ ತಾನು ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಅದರಲ್ಲಿ ಹೂಡಿಕೆ ಮಾಡಿದರೆ ಲಾಭ ಕೊಡುತ್ತೇನೆ ಎಂದು ನಂಬಿಸಿದ್ದ. ಅಲ್ಲದೆ ತನ್ನಿಂದ ಹಂತ ಹಂತವಾಗಿ 2.50 ಕೋ.ರೂ.ಗಳನ್ನು ನಗದಾಗಿ ಪಡೆದುಕೊಂಡಿದ್ದ. ಹಣ ಪಡೆದುಕೊಂಡ ಬಗ್ಗೆ ದಾಖಲಾತಿ ಕೇಳಿದಾಗ ತಾವಿಬ್ಬರು

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ

ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ Read More »

ಕರಾವಳಿ

‘ಇನ್ಸ್ಪೈರ್ ಅವಾರ್ಡ್ ಮಾನಕ್’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅಬ್ದುಲ್ ಬಾಸಿತ್  ತನ್ವೀರುಲ್ ಇಸ್ಲಾಂ ಮದ್ರಸದ ಎಸ್ ಕೆಎಸ್ ಬಿವಿ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 10.  ವಿಜ್ಞಾನ ಮಾದರಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅಬ್ದುಲ್ ಬಾಸಿತ್ ಅವರನ್ನು ಮಾಲಿಕುದ್ದೀನಾರ್ ಜುಮಾ ಮಸೀದಿ ಇದರ ಅಧೀನದಲ್ಲಿರುವ ತನ್ವೀರುಲ್ ಇಸ್ಲಾಂ ಮದ್ರಸದ ಎಸ್ ಕೆ ಎಸ್ ಬಿವಿ ವತಿಯಿಂದ ಸನ್ಮಾನಿಸಲಾಯಿತು. ಅಬ್ದುಲ್ ಬಾಸಿತ್ ರಚಿಸಿದ ‘ಸೀವಿಂಗ್ ಚೆಯರ್ ಫಾರ್ ಹ್ಯಾಂಡಿಕ್ಯಾಪ್ಸ್’ ಎಂಬ ವಿಜ್ಞಾನ ಮಾದರಿ ಕೇಂದ್ರ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಸಚಿವಾಲಯ ನಡೆಸುವ ‘ಇನ್ಸ್ಪೈರ್ ಅವಾರ್ಡ್ ಮಾನಕ್’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಸೆಪ್ಟೆಂಬರ್ 14 ರಿಂದ 20 ರವರೆಗೆ ದಿಲ್ಲಿಯ

‘ಇನ್ಸ್ಪೈರ್ ಅವಾರ್ಡ್ ಮಾನಕ್’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅಬ್ದುಲ್ ಬಾಸಿತ್  ತನ್ವೀರುಲ್ ಇಸ್ಲಾಂ ಮದ್ರಸದ ಎಸ್ ಕೆಎಸ್ ಬಿವಿ ವತಿಯಿಂದ ಸನ್ಮಾನ Read More »

ಕರಾವಳಿ

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 10.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಇವರ ಜಂಟಿ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟವು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದಿದ್ದು, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ Read More »

ಕರಾವಳಿ

ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಸ್ತೆ ದಾಟುವಾಗ ಡಿಕ್ಕಿ ಹೊಡೆದು ಆಟೋ ರಿಕ್ಷಾದ ಕೆಳಗೆ ಬಿದ್ದ ತಾಯಿಯನ್ನು ರಕ್ಷಿಸಲು ಧಾವಿಸಿದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ವೈಭವಿ ಅವರ ತಾಯಿ ಚೇತನಾ ಅವರು ವೈಭವಿ ಅವರ ಟ್ಯೂಷನ್ ಸೆಂಟರ್ ಬಳಿ ರಸ್ತೆ ದಾಟುತ್ತಿದ್ದಾಗ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ. ವೈಭವಿ ಕೇಂದ್ರದಿಂದ ಹೊರಬರುತ್ತಿದ್ದಂತೆ ಅವರ ಎದುರೇ ಅಪಘಾತ ಸಂಭವಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಓಡಿ ಆಟೋ ರಿಕ್ಷಾವನ್ನು ಎತ್ತಿ

ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ Read More »

ಕರಾವಳಿ

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ- ಕೃಷಿಗೆ ಹಾನಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 10.  ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ಜನರ ದೈನಂದಿನ ಬದುಕಿಗೆ ಅಡಚಣೆಯಾಗಿದೆ. ಅಲ್ಲದೆ ಕೃಷಿ ಫಸಲಿಗೆ ಅಪಾರ ಹಾನಿ ಸಂಭವಿಸುವ ಸಾಧ್ಯತೆಗಳಿದೆ ಎನ್ನಲಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಂಜು ಕವಿದ ವಾತಾವರಣದೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಮೈಕೊರೆಯುವ ಚಳಿ ಇದೆ. ರಸ್ತೆಗಳ ಮೇಲೆ ಹರಿಯುತ್ತಿರುವ ನೀರು ಜನ ಮತ್ತು ವಾಹನಗಳ ಸಂಚಾರಕ್ಕೆ ತೊಡಕನ್ನುಂಟು ಮಾಡುತ್ತಿದೆ. ಹೊಂಡ ಗುಂಡಿಗಳಾಗಿರುವ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ- ಕೃಷಿಗೆ ಹಾನಿ Read More »

ಕರಾವಳಿ
Scroll to Top