karavali

‘ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನ ಪರಿಹರಿಸಿ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ’      ಎ.ಕಿರಣ್ ಕುಮಾರ್ ಕೊಡ್ಗಿ 

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 21.  ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನು ಅರಣ್ಯ ಇಲಾಖೆ, ಕಂದಾಯ ಇಲಾಖೆ ಸಮನ್ವಯತೆಯಿಂದ ವಿಶೇಷ ಆಧ್ಯತೆಯನ್ನಾಗಿ ತುರ್ತು ಪರಿಹರಿಸಿ, ಹೊಸ ಡೀಮ್ಡ್ ಪಟ್ಟಿಯನ್ನು ಪರಾಮರ್ಶಿಸಿ, ಭಾಗಶಃ ಡೀಮ್ಡ್ ಇರುವಲ್ಲಿ ಹಕ್ಕುಪತ್ರವನ್ನು ನೀಡಲು ಅವಕಾಶ ಇರುವಲ್ಲಿ ಕೂಡಲೇ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧಿಕಾರಿಗಳಿಗೆ ಸೂಚಿಸಿದರು. ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೊರಗ ಸಮುದಾಯ […]

‘ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನ ಪರಿಹರಿಸಿ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ’      ಎ.ಕಿರಣ್ ಕುಮಾರ್ ಕೊಡ್ಗಿ  Read More »

ಕರಾವಳಿ

ವಿದ್ಯಾರ್ಥಿಗಳ ಬ್ಯಾಡ್ಮಿಂಟನ್‌ ತಂಡಕ್ಕೆ ರಾಕೆಟ್ ಬಾಲ್ ವಿತರಣೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 21.  ಸರಕಾರಿ ಪ್ರೌಢಶಾಲೆ, ನಾಲ್ಯ ಪದವು ವಿದ್ಯಾರ್ಥಿಗಳ ಬಾಲ್‌ ಬ್ಯಾಡ್ಮಿಂಟನ್‌ ತಂಡಕ್ಕೆ ಸ್ಥಳೀಯ ದಾನಿಗಳ ನೆರವಿನಿಂದ ರ್‍ಯಾಕೆಟ್‌ ಮತ್ತು ಬಾಲ್‌ಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು. ಸುಮಾರು 30ಸಾವಿರ ಮೌಲ್ಯದ ಬ್ಯಾಡ್ಮಿಂಟನ್‌ ರ್‍ಯಾಕೆಟ್‌ಗಳು ಹಾಗೂ ಬಾಲ್‌ಗಳನ್ನು ಶಿಕ್ಷಣಾಸ್ತಕರು ಹಾಗೂ ದಾನಿಗಳಾದ  ವಿದ್ಯಾದೀವಿಗೆ ಚಾರಿಟೇಬಲ್‌ ಟ್ರಸ್ಟ್‌  ಅಧ್ಯಕ್ಷಕರು ದೇವಾನಂದ, ಸಿವಿಲ್‌ ಕಂಟ್ರಾಕ್ಟರ್‌ ಅಸೋಸಿಯೇಶನ್‌ ಸದಸ್ಯರಾದ ನಾರಾಯಣ ದೇವಾಡಿಗ, ಭವಾನಿ ಶಂಕರ, ಲಕ್ಷ್ಮೀ ಪ್ರಸಾದ್‌ , ಕೇಶವ ಕೆ. ಹಾಗೂ ಚಂದನ್‌ ದಾಸ್‌ ಇವರ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ವಿದ್ಯಾರ್ಥಿಗಳ ಬ್ಯಾಡ್ಮಿಂಟನ್‌ ತಂಡಕ್ಕೆ ರಾಕೆಟ್ ಬಾಲ್ ವಿತರಣೆ Read More »

ಕರಾವಳಿ

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ    

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 21. ಗೃಹಿಣಿ ರೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಹಳೆ ಸೂರ್ಲುವಿನ ಬಟ್ಟಂಪಾರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು ೧೧. ೩೦ ರ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು, ಈ ನಡುವೆ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ     Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಮೌನ ಪ್ರತಿಭಟನೆಯನ್ನು ಹಿಂಪಡೆದ ಕೆನರಾ ಬಸ್ ಮಾಲಕರ ಸಂಘ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 21. ಹೆಜಮಾಡಿ ಮತ್ತು ಸಾಸ್ತಾನದ ಟೋಲ್‌ಗೇಟ್‌ಗಳಲ್ಲಿ ಸಂಚರಿಸುವ ಬಸ್‌ಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುವುದನ್ನು ವಿರೋಧಿಸಿ ಆ.23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು ಕೆನರಾ ಬಸ್‌ ಮಾಲಕರ ಸಂಘವು ಹಿಂಪಡೆದುಕೊಂಡಿದೆ ಎನ್ನಲಾಗಿದೆ. ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸದ್ಯಕ್ಕೆ ಹೆಚ್ಚುವರಿ ಶುಲ್ಕ ವಸೂಲಾತಿಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿರುವುದಾಗಿ ಮಾಹಿತಿ ನೀಡಿದೆ. ಒಂದು ವೇಳೆ ಮತ್ತೆ ಹೆಚ್ಚುವರಿ ಶುಲ್ಕ ವಿಧಿಸಿದರೆ ಪುನಃ ಪ್ರತಿಭಟನೆ ನಡೆಸುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್‌ ನಾಯಕ್‌

ಉಡುಪಿ: ಮೌನ ಪ್ರತಿಭಟನೆಯನ್ನು ಹಿಂಪಡೆದ ಕೆನರಾ ಬಸ್ ಮಾಲಕರ ಸಂಘ Read More »

ಕರಾವಳಿ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 21. ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತಕಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ ಎನ್ನಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಎಸ್.ಪಿ ಬಾಲಕೃಷ್ಣ ಭಟ್(73) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ದೇವರಾಜ್ ಅರಸ್ 109ನೇ ಜನ್ಮದಿನ ಆಚರಣೆ

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 20. ದೇವರಾಜ್ ಅರಸ್ 109 ನೇ ಜನ್ಮದಿನಾಚರಣೆಯನ್ನು ಬಂಟ್ವಾಳ ತಾಲೂಕು ಪಂಚಾಯತ್, ಬಂಟ್ವಾಳ ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಂಟ್ವಾಳ ಇವರ ಆಶ್ರಯದಲ್ಲಿ ಇಂದು ಬಿ.ಸಿ.ರೋಡಿನ ತಾ.ಪಂ. ಎಸ್ ಜೆ ಎಸ್ ಆರ್ ವೈ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಅವರು, ವಿದ್ಯಾರ್ಥಿಗಳು ದೇವರಾಜು ಅರಸು ಅವರ ದೂರದೃಷ್ಟಿಯ ಚಿಂತನೆಗಳ ಬಗ್ಗೆ ಅಧ್ಯಯನ ನಡೆಸಿ, ಅದನ್ನು ತಮ್ಮ

ಬಂಟ್ವಾಳ: ದೇವರಾಜ್ ಅರಸ್ 109ನೇ ಜನ್ಮದಿನ ಆಚರಣೆ Read More »

ಕರಾವಳಿ

ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣ ಕಳ್ಳತನ      ಸಮೀಪದ ಶಾಲೆಯಲ್ಲಿ ಪತ್ತೆ..!                           

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 20.  ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣವನ್ನು ಕದ್ದ ಕಳ್ಳ, ಅದನ್ನು ಸಮೀಪದ ಶಾಲೆಯೊಂದರಲ್ಲಿ ಬಿಟ್ಟು ಹೋಗಿರುವುದು ಪತ್ತೆಯಾಗಿದೆ. ದೇಗುಲದಲ್ಲಿ ಸತ್ಯನಾರಾಯಣ ಪೂಜೆ ನಡೆದಿದ್ದು, ಹಣ ಪತ್ತೆಯಾದ ಪವಾಡ ಎಂದು ಸ್ಥಳೀಯರು ತಿಳಿಸಿದ್ದಾರೆ. ದೇವಸ್ಥಾನದ ಅರ್ಚಕರ ಕಚೇರಿಯಿಂದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಜೊತೆಗೆ ಪಕ್ಕದ ಮೂರು ಮನೆಗಳಲ್ಲಿ ಅಲ್ಪಸ್ವಲ್ಪ ಹಣವನ್ನೂ ಕದ್ದಿದ್ದಾನೆ ಎನ್ನಲಾಗಿದೆ.  

ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣ ಕಳ್ಳತನ      ಸಮೀಪದ ಶಾಲೆಯಲ್ಲಿ ಪತ್ತೆ..!                            Read More »

ಕರಾವಳಿ

ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 20.  ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕೋಕಲದ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಎಂದು ಗುರುತಿಸಲಾಗಿದೆ. ಮುಂಜಾನೆ 5 ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು  ಎನ್ನಲಾಗಿದೆ.  

ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯಶವಂತ (21) ಎಂದು ಗುರುತಿಸಲಾಗಿದೆ. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದ ದಿದ್ದುದರಿಂದ ಸಹೋದರಿ ಟೆರೇಸ್ ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕಾಪು, ಆ. 20.  ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. 2012ರಲ್ಲಿ ಮೂಳೂರಿನಲ್ಲಿ ಸಂಬಂಧಿಕರ ನಡುವೆ ಆಸ್ತಿ ವಿವಾದ ಉಂಟಾಗಿತ್ತು. ಅನುರಾಧ ಅವರ ಸಹೋದರಿ ನೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅನುರಾಧಾ 2017 ರವರೆಗೆ ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು, ನಂತರ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top