karavali

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‌ನಲ್ಲಿ ಸ್ಕೈ ಡೈನಿಂಗ್ ಆರಂಭ

(ನ್ಯೂಸ್ ಕಡಬ) newskadaba.com ನ. 30. ವಿಶ್ವ ಪ್ರಸಿದ್ಧ ತ್ರಾಸಿ – ಮರವಂತೆ ಬೀಚ್‌ನಲ್ಲಿ ವಿನೂತನವಾದ ಸ್ಕೈ ಡೈನಿಂಗ್ ನವೆಂಬರ್ 29ರಿಂದ ಆರಂಭಗೊಂಡಿದೆ. ಮಂಗಳೂರಿನ ಪಣಂಬೂರು ಬಳಿಕ ಇದು ರಾಜ್ಯದ ಎರಡನೇ ಸ್ಕೈ ಡೈನಿಂಗ್ ತಾಣವಾಗಿದೆ. ಇದನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಗುರುರಾಜ ಗಂಟಿಹೊಳೆ ಅವರು, ಈ ಹೊಟೇಲ್ ಆರಂಭದಿಂದಾಗಿ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದರಲ್ಲಿ 90-100 ಮೀಟರ್ ಎತ್ತರದಲ್ಲಿ ಕುಳಿತು ಸೌಪರ್ಣಿಕಾ ನದಿ ಹಾಗೂ ಅರಬ್ಬೀ ಸಮುದ್ರವನ್ನು ನೋಡುತ್ತಾ ತಿನಿಸನ್ನು ಸವಿಯಬಹುದು. […]

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‌ನಲ್ಲಿ ಸ್ಕೈ ಡೈನಿಂಗ್ ಆರಂಭ Read More »

ಕರಾವಳಿ

ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನ. 30. ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ನ. 29 ರಂದು ರಾತ್ರಿ ಸುಮಾರು 7 ಗಂಟೆಗೆ ನಡೆದಿದೆ. ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದೆಯಾದರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಣೆಮಂಗಳೂರು ಸೇತುವೆಯ ಪಕ್ಕ ಹೊಸ ಸೇತುವೆ ಕಾಮಗಾರಿ ಪೂರ್ಣಗೊಂಡು ಇದೀಗ

ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು Read More »

ಕರಾವಳಿ

ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

(ನ್ಯೂಸ್ ಕಡಬ) newskadaba.com ಉಡುಪಿ, ನ. 30. ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಕಲಿ ಅಲ್ಲ. ಎನ್ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.   ನಕ್ಸಲೈಟನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ

ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ Read More »

ಕರಾವಳಿ

ಜಾನುವಾರುಗಳಿಗೆ ಮೇವು ತರಲೆಂದು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಣಿಪಾಲ, ನ. 30. ಜಾನುವಾರುಗಳಿಗೆ ಮೇವು ತರಲೆಂದು ಮನೆಯ ಪಕ್ಕದ ಗುಡ್ಡಕ್ಕೆ ತೆರಳಿದ್ದ ಮಹಿಳೆಯೊಬ್ಬರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ನ.29ರಂದು ಪತ್ತೆಯಾಗಿದೆ. ಮೃತ ದುರ್ದೈವಿಯನ್ನು ಸರಳೇಬೆಟ್ಟು ವಾರ್ಡ್ನ ನೆಹರೂ ನಗರದ ನಿವಾಸಿ ಪುಷ್ಪಾ ನಾಯ್ಕ್ (66) ಎಂದು ಗುರುತಿಸಲಾಗಿದೆ. ಪುಷ್ಪಾ ಅವರು ದನಕರುಗಳಿಗೆ ಹುಲ್ಲು ತರಲೆಂದು ಮನೆಯ ಪಕ್ಕದ ಗುಡ್ಡದ ಕಡೆಗೆ ನ. 28ರಂದು ಸುಮಾರು ಸಂಜೆ ೬ ಗಂಟೆ ವೇಳೆಗೆ ತೆರಳಿದವರು, ಬಳಿಕ ವಾಪಸ್ ಮನೆಗೆ ಹಿಂದಿರುಗಿರಲಿಲ್ಲ. ಆತಂಕಗೊಂಡ ಮನೆಯವರು ಅವರಿಗಾಗಿ

ಜಾನುವಾರುಗಳಿಗೆ ಮೇವು ತರಲೆಂದು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ..! Read More »

ಕ್ರೈಮ್ ನ್ಯೂಸ್

ಮಂಗಳೂರು: AI- ಬಳಸಿ ಸ್ಪ್ಯಾಮ್‌ ಕರೆಗಳಿಗೆ ಕಡಿವಾಣ ಹಾಕಿದ ಏರ್‌ಟೆಲ್‌ ನೆಟ್‌ವರ್ಕ್‌

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ಭಾರ್ತಿ ಏರ್‌ಟೆಲ್‌ನ ಹೊಸ AI ಚಾಲಿತ ಸ್ಪ್ಯಾಮ್ ಪತ್ತೆ ಮಾಡುವ ವ್ಯವಸ್ಥೆಯು ಕರ್ನಾಟಕದ ಗ್ರಾಹಕರಿಗೆ ಹೆಚ್ಚು ಅಗತ್ಯವಿರುವ ಪರಿಹಾರವನ್ನು ಒದಗಿಸಿದೆ. ಪ್ರಾರಂಭವಾದ 63 ದಿನಗಳಲ್ಲಿ, ಈ ಪ್ರವರ್ತಕ ಟೆಲಿಕಾಂ ಪರಿಹಾರವು ಕರ್ನಾಟಕದಲ್ಲಿ 682 ಮಿಲಿಯನ್ ಸಂಭಾವ್ಯ ಸ್ಪ್ಯಾಮ್ ಕರೆಗಳು ಮತ್ತು 46 ಮಿಲಿಯನ್ ಸ್ಪ್ಯಾಮ್ SMS ಸಂದೇಶಗಳನ್ನು ಯಶಸ್ವಿಯಾಗಿ ಗುರುತಿಸಿದೆ. ಕರ್ನಾಟಕದಲ್ಲಿನ ಎಲ್ಲಾ ಏರ್‌ಟೆಲ್ ಮೊಬೈಲ್ ಗ್ರಾಹಕರು ಈಗ ಸೇವೆಯನ್ನು ವಿನಂತಿಸುವ ಅಥವಾ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳದೆಯೇ ಉಚಿತ

ಮಂಗಳೂರು: AI- ಬಳಸಿ ಸ್ಪ್ಯಾಮ್‌ ಕರೆಗಳಿಗೆ ಕಡಿವಾಣ ಹಾಕಿದ ಏರ್‌ಟೆಲ್‌ ನೆಟ್‌ವರ್ಕ್‌ Read More »

ಕರಾವಳಿ

ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ನ. 30. ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ನಡೆಯುವ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಇದೀಗ ಬೋಟ್ ಕಟ್ಟಿ ಹಾಕಿದವರ ವಿರುದ್ದ ಕೇಸು ದಾಖಲಿಸುವ ಬಗ್ಗೆ ಬಂದ ಸುದ್ದಿಯ ಹಿನ್ನೆಲೆ ಶುಕ್ರವಾರ ಸಂಜೆ ಕಡಬ ಠಾಣೆಗೆ ಗ್ರಾಮಸ್ಥರು ಆಗಮಿಸಿದ ಘಟನೆ ನಡೆದಿದೆ. ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಊರವರು ಸೇರಿ ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಲ್ಲದೆ, ನಿರ್ಣಯವನ್ನೂ ಮಾಡಿದ್ದರು. ಎರಡು ದಿನದ ಹಿಂದೆ ಚಾರ್ವಾಕ

ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ Read More »

ಕರಾವಳಿ

ಹಂದಿ ಫಾರಂನ ಮಾಲಿನ್ಯ ಹೊಂಡಕ್ಕೆ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 30. ಹಂದಿ ಫಾರಂನ ಮಾಲಿನ್ಯ ಹೊಂಡಕ್ಕೆ ಬಿದ್ದು ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ನಗರ ಹೊರ ವಲಯದ ಚೌಕಿ ಪಾಯಿಚ್ಚಾಲ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ನೇಪಾಳ ನಿವಾಸಿ ಮಹೇಶ್ (19) ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸರು ಮಹೇಶ್ ನನ್ನು ಮೇಲಕ್ಕೆತ್ತಿದರೂ ಜೀವ ಉಳಿಸಲಾಗಲಿಲ್ಲ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಮಹೇಶ್ ಶುಕ್ರವಾರವಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು

ಹಂದಿ ಫಾರಂನ ಮಾಲಿನ್ಯ ಹೊಂಡಕ್ಕೆ ಬಿದ್ದು ಕಾರ್ಮಿಕ ಮೃತ್ಯು..! Read More »

ಕ್ರೈಮ್ ನ್ಯೂಸ್

ವಾಯುಭಾರ ಕುಸಿತ: ಕರಾವಳಿಯಲ್ಲಿ ಚಳಿಯ ಹೆಚ್ಚಳ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಗ್ರಾಮೀಣ ಭಾಗದಲ್ಲಿ ಗುರುವಾರ ರಾತ್ರಿ ಹೆಚ್ಚು ಚಳಿಯ ಅನುಭವವಾಗಿದ್ದು, ಮುಂದಿನ ಒಂದು ವಾರಕ್ಕೂ ಅಧಿಕ ಕಾಲ ಚಳಿಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ

ವಾಯುಭಾರ ಕುಸಿತ: ಕರಾವಳಿಯಲ್ಲಿ ಚಳಿಯ ಹೆಚ್ಚಳ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 29. ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ರನ್ನು ವರ್ಗಾವಣೆಗೊಳಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಗುರುವಾರ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು. ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಕೈ ಬಿಡಬೇಕು

ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಹೆಜ್ಜೇನು ಕಡಿತ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬಜಪೆ, ನ. 29. ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊನೆಯುಸಿರೆಳೆದಿದ್ದಾರೆ. ಮೃತ ದುರ್ದೈವಿಯನ್ನು ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ.  ಪುಷ್ಪಾರಾಜ ಅವರು ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹೆಜ್ಜೇನಿನ ಹಿಂಡು ದಾಳಿ ನಡೆಸಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೆಜ್ಜೇನು ಕಡಿತ: ವ್ಯಕ್ತಿ ಮೃತ್ಯು..! Read More »

ಕ್ರೈಮ್ ನ್ಯೂಸ್
Scroll to Top