karavali

‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ   

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ರಾಜ್ಯವನ್ನು ಅರಾಜಕತೆಯತ್ತ ಕೊಂಡೊಯ್ಯುತ್ತಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಆದ್ಯತೆ ನೀಡಿ ಮುಖ್ಯಮಂತ್ರಿಗಳು ಕ್ಲೀನ್‌ಚಿಟ್ ನೀಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಿಡಿ ಕಾರಿದ್ದಾರೆ. ಮುಡಾ ಮತ್ತು ವಾಲ್ಮೀಕಿ ಹಗರಣಗಳ ಕುರಿತು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವನ್ ಡಿಸೋಜಾ ಹೇಳಿಕೆಗಳು ಅಸಂವಿಧಾನಿಕವಾಗಿದ್ದು, ಪೊಲೀಸರು ಸ್ವಯಂಪ್ರೇರಿತ […]

‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ    Read More »

ಕರಾವಳಿ

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಮಣ್ಣು ತೆರವು ಕಾರ್ಯ ಪೂರ್ಣ ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 20.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿರುವ ಮಣ್ಣು ತೆರವು ಕಾರ್ಯ ಸಂಪೂರ್ಣಗೊಂಡಿದ್ದು, ರೈಲು ಸಂಚಾರ ಮತ್ತೆ ಆರಂಭಗೊಂಡಿದೆ. ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.    

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಮಣ್ಣು ತೆರವು ಕಾರ್ಯ ಪೂರ್ಣ ರೈಲು ಸಂಚಾರ ಪುನರಾರಂಭ Read More »

ಕರಾವಳಿ

ವರ ನಾಪತ್ತೆ..!    ಮದುವೆ ರದ್ದು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 20.  ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು

ವರ ನಾಪತ್ತೆ..!    ಮದುವೆ ರದ್ದು..!       Read More »

ಕರಾವಳಿ

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 19.  ಗಾಂಜಾ ಅಮಲಿನಲ್ಲಿದ್ದ ಸುಮಾರು ಹತ್ತು ಮಂದಿ ದುಷ್ಕರ್ಮಿಗಳ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಆರು ಮಂದಿ ಗಾಯಗೊಂಡ ಘಟನೆ ಕುಂದಾಪುರದ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ. ಚಂದ್ರಶೇಖರ್ (27) ಹಾಗೂ ಅಶೋಕ್ ದೇವಾಡಿಗ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳನ್ನು ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್ ಹಾಗೂ ಇತರ ಎಂಟು ಜನರು ಎಂದು ಗುರುತಿಸಲಾಗಿದೆ. ಈ

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರೂಪೇಶ್ ಶೆಟ್ಟಿ ತುಳು ಚಲನ ಚಿತ್ರ “ಜೈ” ಟೈಟಲ್ ಬಿಡುಗಡೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 19.  ಬಿಗ್ ಬಾಸ್ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸ್ಪೀಕರ್ ಯು.ಟಿ.ಖಾದರ್ ಅವರು, “ಹಿಂದೆ ತುಳು ಭಾಷೆ ನಮ್ಮ ಜಿಲ್ಲೆಗೆ ಮಾತ್ರ ಸೀಮಿತ ಎಂಬ ಮಾತಿತ್ತು.

ರೂಪೇಶ್ ಶೆಟ್ಟಿ ತುಳು ಚಲನ ಚಿತ್ರ “ಜೈ” ಟೈಟಲ್ ಬಿಡುಗಡೆ Read More »

ಕರಾವಳಿ

ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅನಂತಾಡಿ ಗ್ರಾಮಕ್ಕೆ ಭೇಟಿ         ಪಕ್ಷದ ಪದಾಧಿಕಾರಿಗಳಿಂದ ಅದ್ಧೂರಿ ಸ್ವಾಗತ

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 19.  ಮಂಗಳೂರು ಸಂಸದರಾಗಿ ಚುನಾಯಿತರಾದ ಬಳಿಕ ಮೊದಲ ಬಾರಿಗೆ ಅನಂತಾಡಿ ಗ್ರಾಮಕ್ಕೆ ಆಗಮಿಸಿದ ಸಂಸದ ಕ್ಯಾ.ಬ್ರಿಜೇಶ್‌ ಚೌಟ ರವರ ಸ್ವಾಗತ ಕಾರ್ಯಕ್ರಮವು ಅನಂತಾಡಿ ಗ್ರಾಮದ ಗೋಳಿಕಟ್ಟೆ ಸರ್ಕಲ್‌ ನಲ್ಲಿ ನಡೆಯಿತು. ಪಕ್ಷದ ಪದಾಧಿಕಾರಿಗಳು ಪಕ್ಷದ ಶಾಲು ಹಾಗೂ ಹಾರ ಹಾಕುವ ಮೂಲಕ ಸ್ವಾಗತಿಸಿದರು, ಮಹಿಳೆಯರು ಆರತಿ ಬೆಳಗಿ ತಿಲಕವನ್ನಿಟ್ಟು ಬರಮಾಡಿಕೊಂಡರು.    

ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅನಂತಾಡಿ ಗ್ರಾಮಕ್ಕೆ ಭೇಟಿ         ಪಕ್ಷದ ಪದಾಧಿಕಾರಿಗಳಿಂದ ಅದ್ಧೂರಿ ಸ್ವಾಗತ Read More »

ಕರಾವಳಿ

ಮಾಜಿ ಮುಖ್ಯಮಂತ್ರಿ ‘ಆನೆಗುಡ್ಡೆ ಶ್ರೀ ವಿನಾಯಕ ದೇವಾಸ್ಥಾನ’ಕ್ಕೆ ಆಗಮನ

(ನ್ಯೂಸ್ ಕಡಬ) newskadaba.c0m ಕೋಟ, ಆ. 19.  ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಕುಟುಂಬ ಸಮೇತ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ದೇವರ ಪ್ರಸಾದ ನೀಡಿ ಅವರನ್ನು ಗೌರವಿಸಿ ಸನ್ಮಾನಿಸಿದರು. ವಿಶ್ರಾಂತ ಆಡಳಿತ ಧರ್ಮದರ್ಶಿಗಳಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿಗಳಾದ ಕೆ. ನಿರಂಜನ ಉಪಾಧ್ಯಾಯ, ಕೆ.ಪದ್ಮನಾಭ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ.ಕೃಷ್ಣಾನಂದ ಉಪಾಧ್ಯಾಯ ಮತ್ತು ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್, ಅರ್ಚಕ

ಮಾಜಿ ಮುಖ್ಯಮಂತ್ರಿ ‘ಆನೆಗುಡ್ಡೆ ಶ್ರೀ ವಿನಾಯಕ ದೇವಾಸ್ಥಾನ’ಕ್ಕೆ ಆಗಮನ Read More »

ಕರಾವಳಿ

*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ          

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 19.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತಗೊಂಡಿದ್ದು, ಬಿದ್ದಿರುವ ಮಣ್ಣು ತೆರವು ಕಾರ್ಯ ಭರದಿಂದ ಸಾಗಿದೆ. ಗುಡ್ಡ ಕುಸಿದಿದ್ದ ಜಾಗದಲ್ಲಿ ಮತ್ತೆ ಮಣ್ಣು ಕುಸಿದಿದ್ದು. ಇದೇ ಕಾರಣಕ್ಕೆ ರೈಲು ಸಂಚಾರವನ್ನು ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ನಾಲ್ಕು ಐದು ಹಿಟಾಚಿ ಯಂತ್ರಗಳನ್ನು ಕಾಮಗಾರಿಗೆ ಬಳಸಲಾಗಿದೆ. ಮತ್ತಷ್ಟು ಮಣ್ಣು ಕುಸಿಯದಂತೆ ತಡೆಯಲು ಬೆಟ್ಟದ ಮೇಲಿನಿಂದ ಕೂಡ ಮಣ್ಣು ತೆರವುಗೊಳಿಸಲಾಗುತ್ತಿದೆ.  

*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ           Read More »

ಕರಾವಳಿ

ಕುಂದಾಪುರ: ದೇವಾಸ್ಥಾನದಲ್ಲಿ ಕಳ್ಳತನ ಕೃತ್ಯ..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 17.  ಇತ್ತೀಚೆಗಷ್ಟೇ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದ್ದ, ಕುಂದಾಪುರ ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ. ಕೆಲ ತಿಂಗಳ ಹಿಂದಷ್ಟೇ ದೇವಸ್ಥಾನದ ಜೀರ್ಣೋದ್ಧಾರ ಮಾಡಲಾಗಿತ್ತು. ಅಂದಾಜು 40 ಸಾವಿರಕ್ಕೂ ಅಧಿಕ ನಗದನ್ನು ಕಳ್ಳ ಕಳವು ಮಾಡಿದ್ದು, ಈ ಹಣವನ್ನು ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳ ಪರಾರಿಯಾಗಿದ್ದು, ಈತನ ಕಳ್ಳತನದ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಕುಂದಾಪುರ: ದೇವಾಸ್ಥಾನದಲ್ಲಿ ಕಳ್ಳತನ ಕೃತ್ಯ..! Read More »

ಕರಾವಳಿ
Scroll to Top