karavali

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಾರ್ಚ್ 3ರಂದು ಪಲ್ಸ್ ಪೋಲಿಯೋ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಾರ್ಚ್ 3ರಂದು ಪಲ್ಸ್ ಪೊಲಿಯೋ ದಿನಾಚರಣೆಯನ್ನು ಆಚರಿಸುತ್ತಿದ್ದು,  ಹೆಚ್ಚಾಗಿ ನಗರ ಪ್ರದೇಶದಲ್ಲಿ ಯಾವೆಲ್ಲ ಪ್ರದೇಶದಲ್ಲಿ ಪೋಲಿಯೋ ಲಸಿಕೆಯನ್ನು ತೆಗೆದುಕೊಳ್ಳದೇ ಇರುವವರು ಇದ್ದಾರೆ ಎಂಬ ಬಗ್ಗೆ ಸಮೀಕ್ಷೆಯನ್ನು ನಡೆಸಿ,  ಎಲ್ಲರಿಗೂ ಲಸಿಕೆಯನ್ನು ನೀಡುವಂತಾಗಬೇಕು. ಎಲ್ಲಾ […]

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಶಾಲಾ ಕಾಲೇಜುಗಳ ಆವರಣದ 100 ಮೀಟರ್ ಅಂತರದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ತಂಬಾಕುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾದ ಕ್ರಮ ತೆಗೆದುಕೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಸೂಚಿಸಿದ್ದಾರೆ. ಅವರು ಮಂಗಳವಾರದಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳ ಆವರಣದಿಂದ  100 ಮೀಟರ್ ಅಂತರದಲ್ಲಿ ತಂಬಾಕು ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತವರ ವಿರುದ್ಧ ಕ್ರಮವನ್ನು

ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ Read More »

ಕರಾವಳಿ, ಕರ್ನಾಟಕ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಇತ್ತೀಚೆಗೆ ಜಿಲ್ಲೆಯ ಕೆಲವೊಂದು ಖಾಸಗಿ ನರ್ಸಿಂಗ್ ಕಾಲೇಜುಗಳ ಹಾಸ್ಟೆಲ್‍ ಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡು ಬರುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಒದಗಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಈ ಬಗ್ಗೆ ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸಯನ್ಸ್, ಇಂಜನಿಯರಿಂಗ್ ಕಾಲೇಜುಗಳಿಗೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ Read More »

ಕರಾವಳಿ

ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ – ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಬೇಸಿಗೆ ಆರಂಭವಾಗುತ್ತಿದ್ದು, ಸಾರ್ವಜನಿಕರಿಗೆ,  ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯಾತ್ಮಕ ಏರಿಯಾಗಳು ಹಾಗೂ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸಿಡಬೇಕು. ಅಗತ್ಯ ಬಿದ್ದರೆ

ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ – ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ Read More »

ಕರಾವಳಿ

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 20. ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಡಾಕೆರೆ ಎಂಬಲ್ಲಿ ಸೋಮವಾರದಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಬಡಾಕೆರೆಯ ವಿಜಯ ಪೂಜಾರಿ(60) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ನಿರ್ಮಾಣ ಹಂತದಲ್ಲಿದ್ದ 35 ಅಡಿ ಆಳದ ನೀರಿಲ್ಲದ ಬಾವಿಗೆ ಅಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸಾಮಾಜಿಕ ಕಾರ್ಯಕರ್ತ ಸುರೇಶ್ ಖಾರ್ವಿ

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಫೆ. 20. ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲ ಹಾಗೂ ಸರಳೇಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯವರು ಬೋನು ಇಟ್ಟು ಕಾರ್ಯಾಚರಣೆ ನಡೆಸಿದ್ದಾರೆ. ಪರ್ಕಳದ ಸಣ್ಣಕ್ಕೀಬೆಟ್ಟುವಿನಲ್ಲಿ ಸೋಮವಾರ ಹಗಲು ಹೊತ್ತಿನಲ್ಲಿಯೇ ಚಿರತೆಯೊಂದು ನವಿಲನ್ನು ಹಿಡಿದು ತಿನ್ನುವ ದೃಶ್ಯ ಕಂಡುಬಂದಿದೆ ಎಂದು ಸಣ್ಣಕ್ಕಿಬೆಟ್ಟುವಿನ ಆಟೋ ಚಾಲಕರೋರ್ವರು ತಿಳಿಸಿದ್ದಾರೆ. ಮಣಿಪಾಲದ ಎಂಡ್ ಪಾಯಿಂಟ್ ಸಮೀಪದ ವಿಜಯನಗರ ಪರಿಸರದಲ್ಲಿ ಚಿರತೆಯ ಆರ್ಭಟ ಕೇಳಿಸುತ್ತಿದ್ದು, ಇಲ್ಲಿ ಬೋನು ತಂದು ಇಡುವಂತೆ ಸ್ಥಳೀಯರು

ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ Read More »

ಕರ್ನಾಟಕ

ಅಂಬೇಡ್ಕರ್ ಪುತ್ಥಳಿ ಸ್ತಬ್ದ ಚಿತ್ರದ ಸಂವಿಧಾನ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮಕ್ಕೆ ಸೋಮವಾರ ಬೆಳಿಗ್ಗೆ 9 ಗಂಟೆಗೆ ಆಗಮಿಸಿತು. ದಲಿತ ಸಂಘರ್ಷ ಸಮಿತಿ ಸದಸ್ಯರು, ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ ಜಾಥಾ ಚಂಡೆಯೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿವರ್ಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಉಪಾಧ್ಯಕ್ಷರು ಹಾಗೂ ಎಲ್ಲ ಸದಸ್ಯರು

ಅಂಬೇಡ್ಕರ್ ಪುತ್ಥಳಿ ಸ್ತಬ್ದ ಚಿತ್ರದ ಸಂವಿಧಾನ ಜಾಗೃತಿ ಜಾಥಾ Read More »

ಕರಾವಳಿ

ಮಂಗಳೂರು: ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸ್ ಇಲಾಖೆ ನೋಟಿಸ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. ಇಲ್ಲಿನ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ನಡೆಯಲಿರುವ ಡಿವೈಎಫ್‌ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಹರೇಕಳ ದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್ ನ್ನು ತೆರವುಗೊಳಿಸಬೇಕು ಎಂದು ಕೊಣಾಜೆ ಪೊಲೀಸ್ ಇನ್‌ಸ್ಟೆಕ್ಟರ್ ನೋಟಿಸ್ ನೀಡಿದ್ದಾರೆ. ಕಾರ್ಡ್‌ ಬೋರ್ಡ್‌ನಿಂದ ನಿರ್ಮಿಸಲಾದ 6 ಅಡಿ ಉದ್ದದ ಟಿಪ್ಪು ಸುಲ್ತಾನ್ ಕಟೌಟನ್ನು ಅನುಮತಿಯಿಲ್ಲದೇ ಅಳವಡಿಸಲಾಗಿದ್ದು, ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕಟೌಟ್ ತೆರವುಗೊಳಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮಂಗಳೂರು: ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸ್ ಇಲಾಖೆ ನೋಟಿಸ್ Read More »

ಕರಾವಳಿ, ಕರ್ನಾಟಕ

ಬೆಳ್ಳಾರೆ: 4 ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ. 19. ನಾಲ್ಕು ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಹಾಸನ ಜಿಲ್ಲೆಯ ಕೆರೆಕೋಡಿ ನಿವಾಸಿ ಸಾದಿಕ್‌ ಶರೀಫ್‌ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳಿಂದ ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದ ಪೊಲೀಸರು ಇದೀಗ ಆತನನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಾಚಗೇನಹಳ್ಳಿಯಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಬೆಳ್ಳಾರೆ

ಬೆಳ್ಳಾರೆ: 4 ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 19. ದ.ಕ. ಜಿಲ್ಲಾ ಗೃಹರಕ್ಷಕ ದಳದ ಪೊಲೀಸ್ ಅಧೀಕ್ಷಕರು ಮತ್ತು ಪೋಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಘಟಕಗಳಿಗೆ ಚುನಾವಣಾ ಪೂರ್ವಸಿದ್ಧತಾ ತಯಾರಿ ಸಲುವಾಗಿ 25 ಗೃಹರಕ್ಷಕರನ್ನು ಸಿ ಫಾರಂ ನೀಡಿ ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ  ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಮಾತನಾಡಿ,  ಶಿಸ್ತುಬದ್ಧವಾಗಿ  ಇಲಾಖಾ ನಿಯಮಾನುಸಾರ ಸಮವಸ್ತ್ರ ಧರಿಸಿ ಹಾಗೂ ಜವಾಬ್ದಾರಿಯುತವಾಗಿ  ಕಾನೂನು ಸುವ್ಯವಸ್ಥೆ ಕರ್ತವ್ಯ ಮಾಡುವಂತೆ ಸೂಚಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ Read More »

ಕರಾವಳಿ
Scroll to Top