karavali

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 15. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮತ್ಯೆ ಮಾಡಿಕೊಡ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದನು ಎನ್ನಲಾಗಿದೆ. ಬುಧವಾರ ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದು, ಮರಳಿ ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು […]

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 15. ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುರ ಎಂಬಲ್ಲಿ ನಡೆದಿದೆ. ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದ್ದು, ಕೂಡಲೇ ರೈಲನ್ನು ನಿಲ್ಲಿಸಿದ ಲೋಕೋ ಪೈಲಟ್‌ ಗಾಯಾಳುವನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ಕರೆ ತಂದು ಆಸ್ಪತ್ರೆಗೆ ಸಾಗಿಸುವ ವೇಳೆ ಗಾಯಾಳು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ತುಮಕೂರಿನ  ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತುಮಕೂರು ಜಿಲ್ಲೆಯ ನಯನ ಎಂ.ಜಿ. ಎಂದು ಆಕೆಯ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯಂತೆ ರೈಲ್ವೇ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 15. ಸಂವಿಧಾನ ಪೀಠಿಕೆಯ ಆಶಯ ಮತ್ತು ಮೌಲ್ಯಗಳನ್ನು ಸ್ತಬ್ದ ಚಿತ್ರದ ಮೂಲಕ ಜನರಿಗೆ ತಿಳಿಸಲು ಸಂವಿಧಾನ ಜಾಥಾವು ಫೆ. 17 ರಂದು ಅಪರಾಹ್ನ 3 ಗಂಟೆಗೆ ಆಗಮಿಸುವ ಸಂದರ್ಭದಲ್ಲಿ ಜಾಥಾವನ್ನು ಅದ್ಧೂರಿಯಾಗಿ ಸ್ವಾಗತಿಸುವ ಸಲುವಾಗಿ ರೂಪು ರೇಶೆಗಳ ಬಗ್ಗೆ ಚರ್ಚಿಸಲು ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಪೂರ್ವಭಾವಿ ಸಭೆಯು ಬುಧವಾರದಂದು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆ Read More »

ಕರಾವಳಿ

ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ ಸಮಸ್ಯೆ ಶೀಘ್ರವೇ ಬಗೆಹರಿಸಿ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ಕಾರ್ಡ್‍ಗಳಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದರು. ಅವರು ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಗವಿಕಲರ ಕುಂದು ಕೊರತೆಗಳ ನಿವಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ಕಾರ್ಡ್‍ಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಗೆ ಕಾರಣಗಳನ್ನು ಹುಡುಕಿ ಆದಷ್ಟು ಬೇಗ ವಿಕಲಚೇತನರ ವಿಶಿಷ್ಟ ಗುರುತಿನ ಕಾರ್ಡ್

ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ ಸಮಸ್ಯೆ ಶೀಘ್ರವೇ ಬಗೆಹರಿಸಿ- ಜಿಲ್ಲಾಧಿಕಾರಿ Read More »

ಕರಾವಳಿ

ಬಂಟ್ವಾಳ: ಅಕ್ರಮ ಮರಳು ಸಾಗಾಟ – ಆರೋಪಿಗಳ ಸಹಿತ 2 ಟಿಪ್ಪರ್ ಮತ್ತು ಮರಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 13. ಲೈಸೆನ್ಸ್ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಡಿಯಲ್ಲಿ ಎಂಟು ಮಂದಿಯನ್ನು ವಶಕ್ಕೆ ಪಡೆದಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಎರಡು ಟಿಪ್ಪರ್ ಲಾರಿ ಮತ್ತು ಮರಳನ್ನು ಜಪ್ತಿ ಮಾಡಿರುವ ಕುರಿತು ವರದಿಯಾಗಿದೆ. ವಾಹನ ತಪಾಸಣಾ ನಿರತ ಪೊಲೀಸರು ಸೋಮವಾರದಂದು ರಾತ್ರಿ ತಲಪಾಡಿ ಕಡೆಯಿಂದ ಬರುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ತಡೆದು ನಿಲ್ಲಿಸಿ ಚಾಲಕರನ್ನು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೇ ವಳಚ್ಚಿಲ್ ಎಂಬಲ್ಲಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ

ಬಂಟ್ವಾಳ: ಅಕ್ರಮ ಮರಳು ಸಾಗಾಟ – ಆರೋಪಿಗಳ ಸಹಿತ 2 ಟಿಪ್ಪರ್ ಮತ್ತು ಮರಳು ವಶಕ್ಕೆ Read More »

ಕರಾವಳಿ, ಕರ್ನಾಟಕ

ಕಡಬ: ಹೊಯಿಗೆಕೆರೆಯಲ್ಲಿ ಮೊಸಳೆ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಫೆ. 13. ಇಲ್ಲಿನ ಸಮೀಪದ ಅಡ್ಡಗದ್ದೆ ಎಂಬಲ್ಲಿನ ಹೊಯಿಗೆಕೆರೆಯಲ್ಲಿ ಮೊಸಳೆ ಇರುವುದು ಕಂಡುಬಂದಿದೆ. ಫೆ. 12ರಂದು ಸ್ಥಳೀಯ ಯುವತಿಯೋರ್ವಳು ಕೆರೆಯ ಬದಿಯಿಂದ ನಡೆದುಕೊಂಡು ಹೋಗುತ್ತಿದ್ದ ವೇಳೆ ಮೊಸಳೆ ಕಂಡುಬಂದಿದೆ ಎನ್ನಲಾಗಿದೆ. ಬೇಸಿಗೆಯಲ್ಲಿ ಕೆರೆಯಲ್ಲಿ ನೀರು ಕಡಿಮೆಯಾಗುತ್ತಿರುವ ಸಮಯದಲ್ಲಿ ಮೊಸಳೆಗಳು ಕಾಣಸಿಗುತ್ತಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕಡಬ: ಹೊಯಿಗೆಕೆರೆಯಲ್ಲಿ ಮೊಸಳೆ ಪತ್ತೆ..! Read More »

ಕರಾವಳಿ

ರೋಲರ್ ಸಾಗಾಟದ ಲಾರಿ ಓವರ್ ಬ್ರಿಡ್ಜ್ ಗೆ ಢಿಕ್ಕಿ – ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com, ಪುತ್ತೂರು, ಫೆ. 13. ರೋಡ್ ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೇ ಓವರ್ ಬ್ರಿಡ್ಜ್ ನ ಅಡಿಯಲ್ಲಿ ಸಿಲುಕಿಕೊಂಡ ಪರಿಣಾಮ ಕೆಲಕಾಲ ಸಂಚಾರಕ್ಕೆ ಅಡಚಣೆಯಾದ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ. ಖಾಸಗಿ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ ಇದಾಗಿದ್ದು, ಬೆಂಜನಪದವು ಸೈಟ್ ನಿಂದ ಸವಣೂರಿನಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ನ್ನು ಲಾರಿಯಲ್ಲಿ ತುಂಬಿಸಿಕೊಂಡು ಹೋಗಲಾಗಿತ್ತು. ಈ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೇ ಸೇತುವೆಯ ಅಡಿಭಾಗದಲ್ಲಿ ಕ್ರಾಸ್ ಮಾಡಲು

ರೋಲರ್ ಸಾಗಾಟದ ಲಾರಿ ಓವರ್ ಬ್ರಿಡ್ಜ್ ಗೆ ಢಿಕ್ಕಿ – ಕೆಲಕಾಲ ಸಂಚಾರ ವ್ಯತ್ಯಯ Read More »

ಕರಾವಳಿ

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 12. ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ಮೃತದೇಹವೊಂದು ಇಂದು ಮಧ್ಯಾಹ್ನದ ವೇಳೆ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರು ಬಿಳಿ ಅಂಗಿ ಕಪ್ಪು ಪ್ಯಾಂಟ್ ಧರಿಸಿದ್ದು, ಇಂದು ಬೆಳಗ್ಗೆ ಸಮುದ್ರ ತೀರದ ರುದ್ರಪಾದೆಯಿಂದ ವ್ಯಕ್ತಿಯೋರ್ವರು ಸಮುದ್ರಕ್ಕೆ ಹಾರಿರುವುದನ್ನು ದೇವಸ್ಥಾನದ ಅರ್ಚಕರೊಬ್ಬರು ಕಂಡಿದ್ದರು ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ವ್ಯಕ್ತಿಯ ಗುರುತು ಪತ್ತೆ ಹಚ್ಚುವಿಕೆಗೆ ಕ್ರಮಕೈಗೊಂಡಿದ್ದಾರೆ.

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ತಿಂಗಳಾಡಿ ಮೂಲದ ವಸಂತ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಸಂತರವರು ಪಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top