karavali

ಅಕ್ರಮ ಮರಳು ಸಾಗಾಟ- ಇಬ್ಬರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ನಗರದ ಕೊಟ್ಟಾರ ಚೌಕಿಯಿಂದ ಕೋಡಿಕಲ್ ಕಡೆಗೆ ಮಿನಿ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.   ಬಂಧಿತರನ್ನು ಅಫ್ರಿದ್ ಮತ್ತು ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ಎಸ್.ಐ ಹರೀಶ್, ಇಬ್ಬರು ಸಿಬ್ಬಂದಿಯ ಜೊತೆ ಗಸ್ತು ನಿರತರಾಗಿದ್ದ ವೇಳೆ ಕೊಟ್ಟಾರ ಚೌಕಿಯಿಂದ ಕೋಡಿಕಲ್ ಕಡೆಗೆ ತೆರಳುತ್ತಿದ್ದ ಮಿನಿ ಟಿಪ್ಪರ್ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ […]

ಅಕ್ರಮ ಮರಳು ಸಾಗಾಟ- ಇಬ್ಬರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ- ಓರ್ವ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ. ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದಲ್ಲಿ ಬಂದಿಳಿದ ಆರೋಪಿಯನ್ನು ತಪಾಸಣೆ ನಡೆಸಿದಾಗ 61,42,500 ರೂ. ಮೌಲ್ಯದ 1,050 ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಸಾಗಿಸಲು ಯತ್ನಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಅಕ್ರಮ ಚಿನ್ನ ಸಾಗಾಟ- ಓರ್ವ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವು ಅಕ್ಟೋಬರ್ 31ರಿಂದ ಸಂಪೂರ್ಣವಾಗಿ ಅದಾನಿ ಸಮೂಹಕ್ಕೆ ಹಸ್ತಾಂತರಗೊಳ್ಳಲಿದೆ. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಸಹಿತ ಭಾರತದ 6 ವಿಮಾನ ನಿಲ್ದಾಣಗಳ ಆಡಳಿತ, ಅಭಿವೃದ್ಧಿ ಹಾಗೂ ನಿರ್ವಹಣೆಯ ಹಿನ್ನೆಲೆ ಏರ್ಪಡಿಸಲಾಗಿದ್ದ ಹರಾಜಿನಲ್ಲಿ ಮಂಗಳೂರು ಏರ್ಪೋರ್ಟ್ ಅದಾನಿ ಸಮೂಹಕ್ಕೆ ಒಳಗಾಗಿತ್ತು. ಬಳಿಕ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಜವಾಬ್ದಾರಿಯನ್ನು 2020ರ ಅಕ್ಟೋಬರ್ 30ರಂದು ಅದಾನಿ ಸಮೂಹ ಕೈಗೆತ್ತಿಕೊಂಡಿತ್ತು. ಒಪ್ಪಂದದ ಪ್ರಕಾರ ಮೂರು ವರ್ಷಗಳ

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…! Read More »

ಕರಾವಳಿ, ಕರ್ನಾಟಕ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.09. ಇನ್‍ವರ್ಟರ್‌ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ಶನಿವಾರದಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಬೊಮ್ಮಾರಿನ ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ (55) ಎಂದು ಗುರುತಿಸಲಾಗಿದೆ. ಲಲಿತಾರವರು ಪ್ರತಿ ದಿನ ರಾತ್ರಿ ಮಲಗುವ ಸಮಯದಲ್ಲಿ ಇನ್‍ವರ್ಟರ್‍ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್‍ನ್ನು ತೆಗೆದು ಮಲಗುತ್ತಿದ್ದರು. ಎಂದಿನಂತೆ ಶನಿವಾರ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತರನ್ನು ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್‌ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸೆಪ್ಟೆಂಬರ್ 28ರಂದು ಮಂಗಳೂರು-ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿ

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 05. 4 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಆರಂತೋಡು ಗ್ರಾಮದ ಪಂಚಾಯತ್ ಅದ್ಯಕ್ಷರಾದ ಶ್ರೀ ಕೇಶವ ಅಡ್ತಲೆ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಮಾಲಿನಿ ವಿನೋದ್ ಉಳುವಾರು ಇವರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅರಂತೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅದ್ಯಕ್ಷ ಶೇಷಗಿರಿ ಯು.ಎಂ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಪುರುಷೋತ್ತಮ್, ನಿರ್ದೇಶಕರಾದ ಕೆಸಿ ನಾರಾಯಣ

ಸುಳ್ಯ: 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಮಂಗಳೂರು ನಗರದ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಎಂದಿನಂತೆ ಈ ವರ್ಷ ವಾಡಿಕೆಯ ಮಳೆಯಾಗದೇ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗುವುದು ಖಂಡಿತ. ಇದನ್ನು ಸರಿಪಡಿಸಲು ಹೆಣಗಾಡುತ್ತಿರುವ ವೇಳೆ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾಗುವ ಕಾರ್ಯವಾಗುತ್ತಿದೆ. ಮಂಗಳೂರು ನಗರದ ನಂತೂರಿನಿಂದ ಕೆಪಿಟಿವರೆಗೆ ಉಂಟಾಗುವ ಟ್ರಾಫಿಕ್ ಜಾಮ್ ಕಡಿಮೆ ಮಾಡುವ ಉದ್ದೇಶದಿಂದ ಹೆದ್ದಾರಿ ಪ್ರಾಧಿಕಾರವು ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದಕ್ಕಾಗಿ ರಸ್ತೆಯ ಎರಡೂ ಬದಿಗಳಲ್ಲಿರುವ ಮರಗಳನ್ನು ತೆರವು ಮಾಡಲು ಗುರುತಿಸಲಾಗಿತ್ತು.

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ Read More »

ಕರಾವಳಿ

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 04. ಮಾರ್ಬಲ್‌ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮಾರ್ಬಲ್ ತುಂಬಿದ್ದ ಲಾರಿಯನ್ನು ಅನ್ ಲೋಡ್ ಗಾಗಿ ರಿವರ್ಸ್ ತೆಗೆಯುವ ಸಂದರ್ಭ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದಾಗಿ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅ. 06 ರಂದು ಮಾಹಿತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಮಂಗಳೂರು ವಿಶ್ವವಿದ್ಯಾನಿಲಯ, ಕಾಲೇಜು ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕರ್ನಾಟಕ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಕಾಲೇಜುಗಳ ಉಪನ್ಯಾಸಕ ಮತ್ತು ಉಪನ್ಯಾಸಕಿಯರಿಗೆ ಒಂದು ದಿನದ ರೋವರಿಂಗ್ ಮತ್ತು ರೇಂಜರಿಂಗ್ ಮಾಹಿತಿ ಶಿಬಿರವನ್ನು ಅ. 06 ರಂದು ಬೆಳಗ್ಗೆ 10 ಗಂಟೆಗೆ ನಗರದ ಲಾಲ್ ಬಾಗ್ ನಲ್ಲಿರುವ ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು

ಮಂಗಳೂರು: ಅ. 06 ರಂದು ಮಾಹಿತಿ ಶಿಬಿರ Read More »

ಕರಾವಳಿ

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 02. ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಮುಂಜಾನೆ 5 ಗಂಟೆಯ ವೇಳೆಗೆ ಪರ್ಲೊಟ್ಟು ಎಂಬಲ್ಲಿ ಕೆರೆಯೊಂದರ ಬಳಿ ಬೈಕ್, ಮೊಬೈಲ್ ಹಾಗೂ ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top