karavali

ಗುತ್ತಿಗೆ ಆಧಾರದಲ್ಲಿ ಕೆಎಸ್ಸಾರ್ಟಿಸಿ ಚಾಲಕರ ನೇರ ನೇಮಕಾತಿ – ದ.ಕ, ಉಡುಪಿ ಜಿಲ್ಲೆಯವರಿಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ 22ರ ಮಂಗಳವಾರದಂದು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಇಂದಿರಾಗಾಂಧಿ ಜನ್ಮಶತಾಬ್ದಿ ಭವನದ ಕೆಳ ಅಂತಸ್ಥಿನಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 1ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ. […]

ಗುತ್ತಿಗೆ ಆಧಾರದಲ್ಲಿ ಕೆಎಸ್ಸಾರ್ಟಿಸಿ ಚಾಲಕರ ನೇರ ನೇಮಕಾತಿ – ದ.ಕ, ಉಡುಪಿ ಜಿಲ್ಲೆಯವರಿಗೆ ಅವಕಾಶ Read More »

ಕರಾವಳಿ

ಓವರ್ ಟೇಕ್ ಭರದಲ್ಲಿ ಸರಣಿ ಅಪಘಾತ – ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಹೆಬ್ರಿ, ಆ. 20. ಓವರ್ ಟೆಕ್ ಮಾಡುವ ಭರದಲ್ಲಿ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡ ಘಟನೆ ನಾಡ್ಪಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಕ್ಕನಮಕ್ಕಿ ಬಳಿ ನಡೆದಿದೆ. ವರದಿಯ ಪ್ರಕಾರ, ಬೈಕ್ ನ್ನು ಕಾರೊಂದು ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ

ಓವರ್ ಟೇಕ್ ಭರದಲ್ಲಿ ಸರಣಿ ಅಪಘಾತ – ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಸನ್ ಸಾಧಿಕ್ ಯಾನೆ ಬ್ಲೇಡ್ ಸಾಧಿಕ್(35) ಎಂದು ಗುರುತಿಸಲಾಗಿದೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡ ಆರೋಪಿಯಾಗಿರುವ ಈತ, ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾರುತಿ 800 ಕಾರಿನಲ್ಲಿ ತಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು.

ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ದೇವರಾಜು ಅರಸುರವರ 108ನೇ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆಯನ್ನು ನಗರದ ಜಿಲ್ಲಾ ಪಂಚಾಯತ್‍ ನೇತ್ರಾವತಿ ಸಭಾಂಗಣದಲ್ಲಿ ಆ. 20ರ ಭಾನುವಾರ ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್

ಇಂದು ದೇವರಾಜು ಅರಸುರವರ 108ನೇ ಜನ್ಮ ದಿನಾಚರಣೆ Read More »

ಕರಾವಳಿ

ಮಟ್ಕಾ ದಂಧೆ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ನಗರದ ಚಿಲಿಂಬಿಯ ಗೋಕುಲದಾಸ ಶೆಣೈ ಮತ್ತು ಕೋಡಿಕಲ್ ನಿವಾಸಿ ದೀಪಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳ ಜೊತೆಗೆ ಮಟ್ಕಾ ದಂಧೆಗೆ ಬಳಸಿದ್ದ 4,24,490 ರೂ. ನಗದು, ಮೊಬೈಲ್ ಫೋನ್ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಟ್ಕಾ ದಂಧೆ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು – ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ಅಳಕೆ ನ್ಯೂಚಿತ್ರಾ ಸಮೀಪದ ಜನನಿಬಿಡ ವಸತಿ ಸಂಕೀರ್ಣದ ಬಳಿ ಅಕ್ರಮವಾಗಿ ಗ್ಯಾಸ್ ಸಿಲಿಂಡರನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶೇಖ್ ಅಶಫ್ ಉದ್ದೀನ್ (59) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಗ್ಯಾಸ್ ಲೈಟ್ ಆ್ಯಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಪರವಾನಿಗೆ ಇಲ್ಲದೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನಿರಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ

ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು – ಓರ್ವ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯ – ಕೆಮ್ಮಾರ ಸರಕಾರಿ ಶಾಲಾ ಬಾಲಕಿಯರ ತಂಡ ದ್ವಿತೀಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 19. 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟವು ಇಲ್ಲಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಟಗಾರ್ತಿಯರಾದ ಜಮೀಲತ್ ನೌಶೀನ, ಜೋಯ, ಝೈನಬ ವಫಿಯ್ಯ ತಂಡವನ್ನು ಪ್ರತಿನಿಧಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಹನಾಂಗಿ, ಶ್ರೀಮತಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯ – ಕೆಮ್ಮಾರ ಸರಕಾರಿ ಶಾಲಾ ಬಾಲಕಿಯರ ತಂಡ ದ್ವಿತೀಯ Read More »

ಕರಾವಳಿ, ಕ್ರೀಡಾ ನ್ಯೂಸ್

ಮಂಗಳೂರು: ಮೆಸ್ಕಾಂ ನಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಮೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 200 ಅಪ್ರೆಂಟೈಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ: ಗ್ರಾಜುಯೇಟ್ ಅಪ್ರೆಂಟಿಸ್- 70 ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್- 65 ಜನರಲ್ ಸ್ಟೀಮ್ ಗ್ರಾಜುಯೇಟ್

ಮಂಗಳೂರು: ಮೆಸ್ಕಾಂ ನಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರಾವಳಿ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆ ಅವರಿಂದ ಶಿಕ್ಷಕರಿಗೆ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 19. ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 19ರಂದು “ನಮ್ಮ ಜೀವನದಲ್ಲಿ ಶಿಕ್ಷಕರ ಮಹತ್ವ” ಎಂಬ ವಿಷಯದ ಕುರಿತಾಗಿ ಶಿಕ್ಷಕರಿಗೆ ಕಾರ್ಯಾಗಾರ ಆಯೋಜಿಸಲಾಯಿತು. ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಬೆಂಗಳೂರಿನ ಪ್ರತಿಷ್ಠಿತ ಕಂಪನಿ ಫಾರ್ಮೆಡ್ ಲಿಮಿಟೆಡ್ ನ ಮಾನವ ಸಂಪನ್ಮೂಲ ಹಿರಿಯ ಕಾರ್ಯ ನಿರ್ವಾಹಕ ಉಪಾಧ್ಯಕ್ಷರಾಗಿರುವ ಡಾ. ಉಮ್ಮರ್ ಬೀಜದಕಟ್ಟೆಯವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕವಾದಂತಹ ಜ್ಞಾನವನ್ನು ವೃಧ್ಧಿಸುವುದರ ಜೊತೆಗೆ ಶಿಕ್ಷಕರಾದವರು ಪ್ರತಿನಿತ್ಯ ಚಟುವಟಿಕೆಗಳ ಮೂಲಕ ಯೋಜನಾತ್ಮಕವಾಗಿ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆ ಅವರಿಂದ ಶಿಕ್ಷಕರಿಗೆ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ

ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 19. ಜಮೀನಿಗೆ ಸಂಬಂಧಿಸಿದಂತೆ ಕಡತ ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಸಂಪಾಜೆ- ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಅರಂತೋಡಿನ ವ್ಯಕ್ತಿಯೊಬ್ಬರು ಆಸ್ತಿ ಹಕ್ಕಿಗೆ ಸಂಬಂಧಿಸಿದ ಕಡತ ವಿಲೇವಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭ ಲೆಕ್ಕಾಧಿಕಾರಿ ಮಿಯಾಸಾಬ್‌ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಶನಿವಾರದಂದು ಬೆಳಗ್ಗೆ ದಾಳಿ ನಡೆಸಿದ ಲೋಕಾಯುಕ್ತ

ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top