karavali

ಬಾವಿಗೆ ಬಿದ್ದು ಕಾಡುಕೋಣ ಮೃತ್ಯು – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಕಾಡುಕೋಣವೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನರಿಮೊಗರು ಐಟಿಐ ಮೈದಾನದ ಪಕ್ಕದಲ್ಲಿ ಶನಿವಾರದಂದು ನಡೆದಿದೆ. ಪ್ರಕಾಶ್ ಎಂಬವರ ಜಾಗದಲ್ಲಿರುವ ಬಾವಿಯಲ್ಲಿ ಬೆಳಗ್ಗಿನ ಹೊತ್ತು ಕಾಡುಕೋಣವೊಂದು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಕಂಡುಬಂದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯವರು ಕ್ರೇನ್ ಮುಖಾಂತರ ಕಾಡುಕೋಣವನ್ನು ಬಾವಿಯಿಂದ ಮೇಲಕೆತ್ತಿದ್ದಾರೆ. ಮೃತಪಟ್ಟಿರುವ ಕಾಡುಕೋಣಕ್ಕೆ ಅಂದಾಜು 4 ರಿಂದ 5 ವರ್ಷ ಪ್ರಾಯವಾಗಿರಬಹುದು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಎಸಿಎಫ್ ಸುಬ್ಬಯ್ಯ ನಾಯ್ಕ, […]

ಬಾವಿಗೆ ಬಿದ್ದು ಕಾಡುಕೋಣ ಮೃತ್ಯು – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರಳು ದಾಸ್ತಾನು ಪತ್ತೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 19. ಅಕ್ರಮ ಮರಳು ದಾಸ್ತಾನು ಮಾಡಿರುವ ಘಟನೆ ಇಲ್ಲಿನ ಫರಂಗಿಪೇಟೆ ಸಮೀಪದ ಅಮ್ಮೆಮಾರ್‌ ರೈಲ್ವೇ ಹಳಿಯ ಬಳಿ ಪತ್ತೆಯಾಗಿದೆ. ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಮರಳು ಯಾರಿಗೆ ಸೇರಿದ್ದು ಎಂಬುದು ತಿಳಿದು ಬಂದಿಲ್ಲ.

ಅಕ್ರಮ ಮರಳು ದಾಸ್ತಾನು ಪತ್ತೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಅಕ್ರಮ ಗೋಸಾಗಾಟ – ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 19. ಅಕ್ರಮ ಗೋಸಾಗಾಟ ಮಾಡುತ್ತಿದ್ದ ಸಂದರ್ಭ ತಪಾಸಣಾ ನಿರತ ಪೊಲೀಸರು ವಾಹನ ಹಾಗೂ ಗೋವುಗಳನ್ನು ವಶಕ್ಕೆ ಪಡೆದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುಬ್ರಹ್ಮಣ್ಯದ ಕುಲ್ಕುಂದ – ಬಿಸಿಲೆ ಘಾಟ್ ರಸ್ತೆಯಲ್ಲಿ ಗುರುವಾರದಂದು ಸಂಜೆ ಸುಬ್ರಹ್ಮಣ್ಯ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಸುಬ್ರಹ್ಮಣ್ಯ ಭಾಗದಿಂದ ಬಂದ ಗೂಡ್ಸ್‌ ವಾಹನವೊಂದನ್ನು ನಿಲ್ಲಿಸಲು ಸೂಚಿಸಿದ್ದು. ಈ ವೇಳೆ ವಾಹನದ ಚಾಲಕ ಹಾಗೂ ಇನ್ನೊರ್ವ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿದ್ದಾರೆ. ವಾಹನವನ್ನು

ಸುಬ್ರಹ್ಮಣ್ಯ: ಅಕ್ರಮ ಗೋಸಾಗಾಟ – ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ದೇವಸ್ಥಾನದಿಂದ‌ ಚಿನ್ನ, ಬೆಳ್ಳಿ ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಆ. 19. ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿನ ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದಿಂದ ಒಡವೆ ಹಾಗೂ ಸಿಸಿ ಕ್ಯಾಮೆರಾ ಕದ್ದೊಯ್ದ ಘಟನೆ ಶುಕ್ರವಾರದಂದು ಬೆಳಕಿಗೆ ಬಂದಿದೆ. ದೇವಸ್ಥಾನದ ಅರ್ಚಕ ರವಿಪ್ರಸಾದ್‌ ಭಟ್‌ ಅವರು ಶುಕ್ರವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆಯಲು ಮುಂದಾದಾಗ ದೇವಸ್ಥಾನದ ಮುಖ್ಯ ಬಾಗಿಲಿನ ಚಿಲಕವನ್ನು ಹಾನಿ ಮಾಡಿರುವುದು ಕಂಡು ಬಂದಿತ್ತು. ಬಾಗಿಲು ಸರಿಸಿ ಪರಿಶೀಲಿಸಿದಾಗ ದೇವರ ಮೂರ್ತಿಗೆ ಹಾಕಲಾಗಿದ್ದ 35,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣ

ಕಡಬ: ದೇವಸ್ಥಾನದಿಂದ‌ ಚಿನ್ನ, ಬೆಳ್ಳಿ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ರಶರ್ ಯಂತ್ರದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು – ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 18. ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ರೂ. ಮೌಲ್ಯದ ಸ್ವತ್ತು ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರ ಸಹಿತ ಸ್ವತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ವಗ್ಗ ನಿವಾಸಿ ಸತೀಶ್ ಮತ್ತು ಬೆಳ್ತಂಗಡಿ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಿ.ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ವಿನಯ ಶೆಟ್ಟಿ ಎಂಬವರಿಗೆ ಸೇರಿದ ಕ್ರಶರ್ ನಿಂದ ಕ್ರಶರ್

ಕ್ರಶರ್ ಯಂತ್ರದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು – ಆರೋಪಿಗಳಿಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರು – ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ. 15. ಕಾರೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡು, ಕಾರು ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ಮಂಗಳವಾರದಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಸವಾರನನ್ನು ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಅವರು ಮನೆಯಿಂದ ಉಪ್ಪಿನಂಗಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಎಂಬಲ್ಲಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದರು.

ಕಡಬ: ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರು – ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.‌ 14. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಕುರಿತು ವರದಿಯಾಗಿದೆ. ಸ್ಥಳೀಯ ಯುವಕರು ಮೀನು ಹಿಡಿಯಲು ಹೋಗಿದ್ದ ಸಂದರ್ಭ ನದಿಯಲ್ಲಿ ಮೃತದೇಹ ಕಂಡು ಬಂದಿದ್ದು, ತಕ್ಷಣವೇ ಅವರು ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ರಿಡ್ಜ್ ಕಾಮಗಾರಿಗೆ ತಂದಿಡಲಾಗಿದ್ದ ರಾಡ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಬ್ರಿಡ್ಜ್ ಕೆಲಸಕ್ಕೆಂದು ತಂದಿಡಲಾಗಿದ್ದ ರಾಡ್, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳನ್ನು ಕಳವುಗೈದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬ್ರಿಡ್ಜ್ ಕೆಲಸಕ್ಕೆಂದು ತಂದಿಡಲಾಗಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳು ಸೋಮವಾರದಂದು ಕಾಣೆಯಾಗಿದ್ದವು. ಅವುಗಳನ್ನು ಹುಡುಕಾಡಿದಾಗ ಮಾಣಿ ಗ್ರಾಮದ ಪಟ್ಲಕೋಡಿ ಎಂಬಲ್ಲಿ ಈಚರ್ ವಾಹನದಲ್ಲಿ ವ್ಯಕ್ತಿಯೋರ್ವ ತುಂಬಿಸಿಕೊಂಡಿರುವುದು ಕಂಡು ಬಂದಿದೆ. ನಂದ ಕುಮಾರ್ ರನ್ನು ನೋಡಿದ ಆರೋಪಿ ವಾಹನವನ್ನು ಅಲ್ಲೇ ಬಿಟ್ಟು

ಬ್ರಿಡ್ಜ್ ಕಾಮಗಾರಿಗೆ ತಂದಿಡಲಾಗಿದ್ದ ರಾಡ್ ಕಳವು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿಗೆ ಚೂರಿಯಿರಿತ- ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 08. ತವರು ಮನೆಯಲ್ಲಿದ್ದ ಪತ್ನಿಗೆ ಆಕೆಯ ಪತಿ ಚೂರಿಯಿಂದ ಇರಿತಗೊಳಿಸಿರುವ ಘಟನೆ ಪುತ್ತೂರು ತಾಲೂಕಿನ ನೆಲ್ಲಿಕಟ್ಟೆ ಸಮೀಪದ ಬ್ರಹ್ಮನಗರ ಎಂಬಲ್ಲಿ ನಡೆದಿದೆ. ಇವರಿಗೆ 6 ವರ್ಷದ ಹಿಂದೆ ಮದುವೆಯಾಗಿತ್ತು. ಆದರೆ ಮದುವೆಯಾಗಿ 2-3 ವರ್ಷಗಳಿಂದ ಆಕೆಯ ಪತಿ ಪ್ರಶಾಂತ್ ಮಾನಸಿಕ ಕಿರುಕುಳ ನೀಡುತ್ತಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಸಲಾಗಿದ್ದರೂ ಪತಿ ತೊಂದರೆ ನೀಡುವುದನ್ನು ಮುಂದುವರಿಸಿದ್ದಾನೆ ಎನ್ನಲಾಗಿದೆ. ಇನ್ನು ಆ. 06 ರಂದು ರಾತ್ರಿ ಮಹಿಳೆ ತನ್ನ ತವರು ಮನೆಯಲ್ಲಿ

ಪತ್ನಿಗೆ ಚೂರಿಯಿರಿತ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ. 08. ಪಾದಚಾರಿಗೆ ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಉಳುವಾರು ನಿವಾಸಿ ತೀರ್ಥರಾಮ ಎಂದು ಗುರುತಿಸಲಾಗಿದೆ. ತೀರ್ಥರಾಮ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓಮ್ನಿ ಕಾರು ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟಿರುತ್ತಾರೆ

ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top