karavali

ಆ. 26ರಂದು ಗಡಿನಾಡ ಕನ್ನಡ ಉತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದೇ ಮಾಹೆಯ 26ರಂದು ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮ ತಲಪಾಡಿಯ ವಿಶ್ವಾಸ ಸಭಾಂಗಣದಲ್ಲಿ ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಇದೇ ವೇಳೆ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಹಲವು ಸಂಘಸಂಸ್ಥೆಗಳ ಪದಾಧಿಕಾರಿಗಳು, ಕವಿಗಳು ಸಾಹಿತ್ಯ […]

ಆ. 26ರಂದು ಗಡಿನಾಡ ಕನ್ನಡ ಉತ್ಸವ Read More »

ಕರಾವಳಿ

ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಗೆ ಚಾಲನೆ – ಅಗತ್ಯ ಲಸಿಕೆ ಕೊಡಿಸಲು ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಉತ್ತಮ ಆರೋಗ್ಯದಿಂದ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ, ಈ ದಿಸೆಯಲ್ಲಿ ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಇಲಾಖೆಯಿಂದ ನಿಯಮಿತವಾಗಿ ನೀಡಲಾಗುವ ಲಸಿಕೆಗಳನ್ನು ಪೋಷಕರು ತಮ್ಮ ಮಕ್ಕಳಿಗೆ ಕೊಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕರೆ ನೀಡಿದರು. ಅವರು ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸುರತ್ಕಲ್‍ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ

ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಗೆ ಚಾಲನೆ – ಅಗತ್ಯ ಲಸಿಕೆ ಕೊಡಿಸಲು ಜಿಲ್ಲಾಧಿಕಾರಿ ಕರೆ Read More »

ಕರಾವಳಿ

ನಿಷೇಧಿತ ಎಂಡಿಎಂಎ ಮಾರಾಟ- ರಿಕ್ಷಾ ಚಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ 07. ಪೊಲೀಸ್ ಠಾಣಾ ವ್ಯಾಪ್ತಿಯ ಇಲ್ಲಿನ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ  ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ ಘಟನೆ ನಡೆದಿದೆ.   ಬಂಧಿತ ಆರೋಪಿಯನ್ನು ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ 12 ಗ್ರಾಂ. ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ

ನಿಷೇಧಿತ ಎಂಡಿಎಂಎ ಮಾರಾಟ- ರಿಕ್ಷಾ ಚಾಲಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ ಝಕರಿಯ್ಯ ಜುಮಾ ಮಸೀದಿ ಆಡಳಿತ ಮಂಡಳಿಗೆ ಸೆ. 09ರಂದು ಚುನಾವಣೆ – ನಾಮಪತ್ರ ಸಲ್ಲಿಕೆಗೆ ಆ. 17ರಂದು ಲಾಸ್ಟ್ ಡೇಟ್..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 04. ಇಲ್ಲಿನ ಝಕರಿಯ್ಯ ಮಸೀದಿಯ ಆಡಳಿತ ಮಂಡಳಿಯಲ್ಲಿ ವಿವಾದವಿದ್ದ ಕಾರಣ ಸುಮಾರು 3 ವರ್ಷಗಳಿಂದ ಮಸೀದಿಗೆ ಆಡಳಿತಾಧಿಕಾರಿಯ ನೇಮಕ ಮಾಡಲಾಗಿತ್ತು. ಇದೀಗ ವಕ್ಫ್ ಮಂಡಳಿಯು ಮಸೀದಿಯ ಆಡಳಿತ ಮಂಡಳಿ ರಚನೆಗೆ ಚುನಾವಣೆಯನ್ನು ಘೋಷಿಸಿದ್ದು, ಸೆ. 09 ರಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸುವವರು ಆ. 08 ರಿಂದ ಆ.17 ರವರೆಗೆ ಸಾರ್ವತ್ರಿಕ ರಜೆ ಹೊರತುಪಡಿಸಿ ಉಳಿದ ದಿನದಲ್ಲಿ ದ.ಕ.ಜಿಲ್ಲಾ ವಕ್ಫ್ ಕಚೇರಿ ಮಂಗಳೂರು ಇಲ್ಲಿ ನಾಮಪತ್ರ ಸಲ್ಲಿಸಬಹುದು. ನಾಮಪತ್ರ

ಬೆಳ್ಳಾರೆ ಝಕರಿಯ್ಯ ಜುಮಾ ಮಸೀದಿ ಆಡಳಿತ ಮಂಡಳಿಗೆ ಸೆ. 09ರಂದು ಚುನಾವಣೆ – ನಾಮಪತ್ರ ಸಲ್ಲಿಕೆಗೆ ಆ. 17ರಂದು ಲಾಸ್ಟ್ ಡೇಟ್..! Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳಿಗೆ “ಕಾವ್ಯಶ್ರೀ ಪ್ರಶಸ್ತಿ”

(ನ್ಯೂಸ್ ಕಡಬ) newskadaba.com ಕುಂತೂರು, ಆ. 04. “ಕರ್ನಾಟಕ ರಾಜ್ಯ ಭಾವೈಕ್ಯತ ಪರಿಷತ್” ವತಿಯಿಂದ ಮಂಗಳೂರಿನಲ್ಲಿ ನಡೆದ ರಾಜ್ಯದ ವಿವಿಧ ಭಾಗದ ಕವಿಗಳು ಭಾಗವಹಿಸುವ ರಾಜ್ಯಮಟ್ಟದ ಕವಿ ಗೋಷ್ಠಿಯಲ್ಲಿ ಭಾಗವಹಿಸಿ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ಶ್ರೀ ಮಂಜುನಾಥ್ ಹುಟ್ಟಗನ್ನ ಹಾಗೂ ಶ್ರೀ ಝುನೈಫ್ ಪಾಲ್ಗೊಂಡು ತಮ್ಮ ಸ್ವ-ರಚಿತ ಕವನ ವಾಚಿಸಿ “ಕಾವ್ಯಶ್ರೀ ಪ್ರಶಸ್ತಿ”ಯನ್ನು ಸ್ವೀಕರಿಸಿದರು.

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳಿಗೆ “ಕಾವ್ಯಶ್ರೀ ಪ್ರಶಸ್ತಿ” Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 04. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಶುಕ್ರವಾರದಂದು ಮುಂಜಾನೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆನ್ನಲಾಗಿದೆ. ಕಾರು ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಚೋದನಕಾರಿ ಹೇಳಿಕೆ – ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಇಲ್ಲಿನ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 28ರಂದು ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ  ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ಮಾತನಾಡಿದ ವೀಣಾ ಶೆಟ್ಟಿ, ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ

ಪ್ರಚೋದನಕಾರಿ ಹೇಳಿಕೆ – ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯ ವಿರುದ್ದ ದೂರು ದಾಖಲು Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಬಸ್‍ ಪಾಸ್ – ಆ.11ರಂದು ಕೊಯಿಲ ಪಂಚಾಯತ್ ಕಚೇರಿಯಲ್ಲಿ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಪುತ್ತೂರು ವಿಭಾಗ ವ್ಯಾಪ್ತಿಯ ಸುಳ್ಯ, ಪುತ್ತೂರು, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ತರಿಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಉಚಿತ ಬಸ್‍ಪಾಸ್ ಸೌಲಭ್ಯವನ್ನು ನೀಡಲಾಗುತ್ತಿದೆ. ನಿಗದಿಪಡಿಸಿರುವ ಸ್ಥಳಗಳು: ಆ.9ರಂದು ಬೆಳಿಗ್ಗೆ 10ರಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಡೋ ಸಂತ್ರಸ್ತರ ಪಾಲನಾ ಕೇಂದ್ರ, ಆ.10ರಂದು ಬೆಳಿಗ್ಗೆ 10ರಿಂದ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಆ.11ರಂದು ಬೆಳಿಗ್ಗೆ 10 ಗಂಟೆಯಿಂದ ಪುತ್ತೂರು ತಾಲೂಕಿನ ಕೊಯಿಲ ಪಂಚಾಯತ್ ಕಚೇರಿ, ಆ.12ರಂದು ಬೆಳಿಗ್ಗೆ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಬಸ್‍ ಪಾಸ್ – ಆ.11ರಂದು ಕೊಯಿಲ ಪಂಚಾಯತ್ ಕಚೇರಿಯಲ್ಲಿ ವಿತರಣೆ Read More »

ಕರಾವಳಿ

ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಸೂಚನೆ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರದಮದು ಹಮ್ಮಿಕೊಳ್ಳಲಾಗಿದ್ದ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್‍ ನ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜುಗಳಲ್ಲಿ ಈಗಾಗಲೇ ಡ್ರಗ್ಸ್ ನಿರ್ಮೂಲನಾ ಸಮಿತಿಯನ್ನು

ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಸೂಚನೆ Read More »

ಕರಾವಳಿ

ಮಹಿಳೆಯರೇ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ – ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್ವೆಲ್..!

(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 04. ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಶರಣ್ ಪಂಪ್ ವೆಲ್, ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು ಎಂದು ಕರೆ ನೀಡಿದ್ದರು. ಪ್ರಕರಣ ಸಂಬಂಧ ಉಡುಪಿ ಪೋಲಿಸರು ಶರಣ್ ಪಂಪ್​​​ವೆಲ್ ವಿರುದ್ದ ಸುಮೋಟ ಕೇಸ್‌ ದಾಖಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವಕೀಲರ ಮೂಲಕ

ಮಹಿಳೆಯರೇ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ – ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್ವೆಲ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top