karavali

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವವರೇ ಎಚ್ಚರ – ಸಾಲ ಮರುಪಾವತಿಸಿದರೂ ಯುವಕನ ಫೋಟೋ ಅಶ್ಲೀಲಗೊಳಿಸಿ ವೈರಲ್- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ಲೋನ್ ಆ್ಯಪ್ ಮೂಲಕ 4,200 ರೂ. ಸಾಲ ಪಡೆದ ವ್ಯಕ್ತಿಯ ಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾದರರ ಪ್ರಕಾರ, ತಾನು ಲೋನ್ ಆ್ಯಪ್ ಮೂಲಕ 3,500 ರೂ. ಸಾಲಕ್ಕೆ ಅರ್ಜಿ ಹಾಕಿದ ಬಳಿಕ ತನ್ನ ಬ್ಯಾಂಕ್ ಖಾತೆಗೆ 2,800 ರೂ. ಜಮೆಯಾಗಿದೆ. ಈ ಸಾಲವನ್ನು ಜು. 26ಕ್ಕೆ ಮುಂಚಿತವಾಗಿ ಮರುಪಾವತಿ ಮಾಡಬೇಕಾಗಿದುದ್ದರಿಂದ ಜು.19ರಂದು 1,400 ರೂ. ಮರುಪಾವತಿ ಮಾಡಲಾಗಿದೆ. […]

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವವರೇ ಎಚ್ಚರ – ಸಾಲ ಮರುಪಾವತಿಸಿದರೂ ಯುವಕನ ಫೋಟೋ ಅಶ್ಲೀಲಗೊಳಿಸಿ ವೈರಲ್- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ – ಎಬಿವಿಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com  ಉಡುಪಿ, ಜು. 27. ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು. ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಯಬೇಕು ಎನ್ನುವ ಆಗ್ರಹ ಪ್ರತಿಭಟನಕಾರರಿಂದ ಕೇಳಿಬಂದಿದೆ. ಸುರಿಯುತ್ತಿರುವ ಮಳೆಯಲ್ಲೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟುಹಿಡಿದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ – ಎಬಿವಿಪಿಯಿಂದ ಪ್ರತಿಭಟನೆ Read More »

ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಪ್ರಕರಣ- ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಕೋಮುಬಣ್ಣ ಬಳಿಯದಂತೆ ಖುಷ್ಬೂ ಸುಂದರ್‌

(ನ್ಯೂಸ್ ಕಡಬ) newskadaba.com  ಉಡುಪಿ, ಜು. 27. ಉಡುಪಿ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳು ಖಾಸಗಿ ವಿಡಿಯೋ ಸೆರೆ ಪ್ರಕರಣದಲ್ಲಿ ಈವರೆಗೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಪ್ರಕರಣಕ್ಕೆ ಕೋಮುಬಣ್ಣ ಬಳಿಯಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಖುಷ್ಬೂ ಸುಂದರ್‌ ತಿಳಿಸಿದರು. ಪ್ರಕರಣದ ತನಿಖೆಗೆ ರಾಷ್ಟ್ರೀಯ ಮಹಿಳಾ ಆಯೋಗ ಮುಂದಾಗಿದ್ದು, ಅದರ ಭಾಗವಾಗಿ ನಟಿ ಹಾಗೂ ಆಯೋಗದ ದಕ್ಷಿಣ ಭಾರತದ ಮಹಿಳಾ ಸದಸ್ಯೆ ಖುಷ್ಬೂ ಸುಂದರ್‌ ಉಡುಪಿಗೆ ಭೇಟಿ ನೀಡಿ ಅಲ್ಲಿನ ಪೊಲೀಸ್‌ ವರಿಷ್ಠಾಧಿಕಾರಿಗಳ ಜತೆ

ಶೌಚಾಲಯದಲ್ಲಿ ವಿಡಿಯೋ ಪ್ರಕರಣ- ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಕೋಮುಬಣ್ಣ ಬಳಿಯದಂತೆ ಖುಷ್ಬೂ ಸುಂದರ್‌ Read More »

ಕರಾವಳಿ

ಶಿಕ್ಷಕ ಹುದ್ದೆಗೆ ನೇರ ನೇಮಕಾತಿ- ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿ ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಖಾಲಿ ಇರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹಾಗೂ 1 ಬಿ.ಐ.ಇ.ಆರ್.ಟಿ. (ಮಾಧ್ಯಮಿಕ ಮತ್ತು ಪ್ರೌಢ) ಹುದ್ದೆಗೆ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹುದ್ದೆಗಳು:  ಬಂಟ್ವಾಳ -2, ಬೆಳ್ತಂಗಡಿ– 2, ಮಂಗಳೂರು ಉತ್ತರ-2, ಮಂಗಳೂರು ದಕ್ಷಿಣ-2, ಮೂಡಬಿದ್ರೆ – 2, ಪುತ್ತೂರು – 2 ಮತ್ತು ಸುಳ್ಯ

ಶಿಕ್ಷಕ ಹುದ್ದೆಗೆ ನೇರ ನೇಮಕಾತಿ- ಅರ್ಹರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ತೋಟಗಾರಿಕೆ ಬೆಳೆಯನ್ನು ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ಅದರ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ 2023-24ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50ಲಕ್ಷ ರೂ., ಪ್ರವರ್ಗ-2ಎ,

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು- ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಇಂದು ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸಿ, 24ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆಯನ್ನು ಇಲ್ಲಿನ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು.  1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ ಸೈನಿಕರ ಆತ್ಮಗಳಿಗೆ ಭಾವಪೂರ್ಣ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ||

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು- ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ Read More »

ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಜು. 26. ನಗರದ ಪ್ಯಾರಾಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್‌ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ ಕಾಲೇಜು ನಿರ್ದೇಶಕಿ, ಮೂವರು ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದು, ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿಯ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ; ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವೆ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 26. ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್‌ ನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾನೂನಿನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ; ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವೆ ಹೆಬ್ಬಾಳ್ಕರ್ Read More »

ಕರ್ನಾಟಕ

15 ವರ್ಷಗಳಿಂದ ಸಂಗ್ರಸಿಡಲಾದ ರಕ್ತ ಚಂದನಕ್ಕೆ ಕೊನೆಗೂ ಮುಕ್ತಿ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಜು. 26. ಕಳೆ 15 ವರ್ಷಗಳಿಂದ ನವಮಂಗಳೂರು ಬಂದರಿನ ಯಾರ್ಡ್‌ನಲ್ಲಿ ಪೇರಿಸಿಡಲಾದ ರಕ್ತಚಂದನ ದಿಮ್ಮಿಗಳ ವಿಲೇವಾರಿಗೆ ಅರಣ್ಯ ಇಲಾಖೆ ನಿರ್ಧರಿಸಿದೆ. 2008 ರಿಂದ  ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆ ಹಾಗೂ ಕಂದಾಯ ಗುಪ್ತಚರ ನಿರ್ದೇಶನಾಲಯ- ಡಿಆರ್‌ಐ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಅವುಗಳನ್ನು ಬಂದರಿನ ಯಾರ್ಡ್‌ನಲ್ಲಿ ಸಂಗ್ರಹಿಸಲಾಗಿದೆ. ಸಂಗ್ರಹಿಸಿಡಲಾದ ಮರದ ದಿಮ್ಮಿಗಳನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಗ್ಲೋಬಲ್‌ ಟೆಂಡರ್‌ ಮೂಲಕ ವಿಲೇವಾರಿ ಮಾಡಬಹುದು. ಪೂರ್ವಭಾವಿ ಅನುಮೋದನೆ ಹಾಗೂ ಪತ್ರ ವ್ಯವಹಾರಗಳನ್ನು ಈಗಾಗಲೇ

15 ವರ್ಷಗಳಿಂದ ಸಂಗ್ರಸಿಡಲಾದ ರಕ್ತ ಚಂದನಕ್ಕೆ ಕೊನೆಗೂ ಮುಕ್ತಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top