karavali

ಭಾರೀ ಗಾಳಿಮಳೆಗೆ ಬಿದ್ದ ಬೃಹತ್ ಮರ- ಮನೆಗೆ ಭಾಗಶಃ ಹಾನಿ – ಮಕ್ಕಳಿಬ್ಬರು ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 22. ಭಾರೀ ಗಾಳಿಮಳೆಗೆ ಬೃಹತ್ ಗಾತ್ರದ ಮರವೊಂದು ಗಾಳಿಗೆ ಉರುಳಿ ಬಿದ್ದು ಎರಡು ಮನೆಗಳು ಧ್ವಂಸಗೊಂಡ ಘಟನೆ ಇಲ್ಲಿನ ಹಳೆಗೇಟು ಸಮೀಪದ ಕಜೆಕ್ಕಾರು ಅಂಬೇಡ್ಕರ್ ಕಾಲನಿಯಲ್ಲಿ ಶನಿವಾರದಂದು ಸಂಜೆ ನಡೆದಿದೆ. ಘಟನೆಯ ಸಂದರ್ಭ ಮನೆಯೊಳಗಿದ್ದ ಮಕ್ಕಳಿಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಭಾರೀ ಗಾಳಿ ಬೀಸಿದ್ದು, ಇದರಿಂದಾಗಿ ಭಾರೀ ಗಾತ್ರದ ಹಲಸಿನ ಮರ ಹಾಗೂ ತೆಂಗಿನ ಮರಗಳು ಅಕ್ಕಪಕ್ಕದಲ್ಲಿರುವ ಸುಂದರಿ ಮತ್ತು ಸೇಸಮ್ಮ ಅವರ ಮನೆಯ ಮೇಲೆ […]

ಭಾರೀ ಗಾಳಿಮಳೆಗೆ ಬಿದ್ದ ಬೃಹತ್ ಮರ- ಮನೆಗೆ ಭಾಗಶಃ ಹಾನಿ – ಮಕ್ಕಳಿಬ್ಬರು ಅದೃಷ್ಟವಶಾತ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಲ‌ ವಂಚನೆಯ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಕಮಿಷನರ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಾಲಕ್ಕೆ ಸಂಬಂಧಿಸಿದ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಎಚ್ಚರ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ. ಈ ಆ್ಯಪ್‌ಗಳು ಸುಳ್ಳು ಸಾಲದಿಂದ ಕೂಡಿವೆ. ಕೆಲವು ಮಂದಿ ತಮ್ಮ ಮೊಬೈಲ್‌ಗಳಲ್ಲಿ ಇಂತಹ ಆ್ಯಪ್‌ಗಳನ್ನು ಯಾವುದೇ ರೀತಿ ಪರಿಶೀಲನೆ ಮಾಡದೇ ಡೌನ್‌ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಈ ಆ್ಯಪ್‌ಗಳಲ್ಲಿ ಬಹಳಷ್ಟು ಕಡಿಮೆ ದರದಲ್ಲಿ ಮತ್ತು ಆಕರ್ಷಕ ರೀತಿಯ ಮರು ಪಾವತಿಯ ಆಸೆಯನ್ನು

ಸಾಲ‌ ವಂಚನೆಯ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಕಮಿಷನರ್ ಎಚ್ಚರಿಕೆ Read More »

ಕರಾವಳಿ

ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಜು. 22. ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಸಮೀಪದ ಒಂತಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಕೃಷ್ಣ ಪೂಜಾರಿ (57) ಎಂದು ಗುರುತಿಸಲಾಗಿದೆ. ಸ್ಕೂಟರ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ  ಕುರಿತು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಶನಿವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ನಂತರ ಬೆಳಿಗ್ಗೆ 11.15ಕ್ಕೆ ನಗರದ ಜೆಪ್ಪುವಿನ ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಆಡಿಟೋರಿಯಂನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ(ರಿ)ದ ಆಶ್ರಯದಲ್ಲಿ ಹಮ್ಮಿಕೊಂಡಿರುವ ಶೈಕ್ಷಣಿಕ ಸಮ್ಮೇಳನ

ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ

ಭಾರೀ ಮಳೆಗೆ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ- ವಾಹನ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 22. ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿದ್ದು, ಸಂಚಾರಕ್ಕೆ ತೊಡಕುಂಟಾದ ಘಟನೆ ನೇರಳಕಟ್ಟೆ ಎಂಬಲ್ಲಿ ಶನಿವಾರದಂದು ಬೆಳಗ್ಗೆ ನಡೆದಿದೆ. ಮರದ ಜೊತೆಗೆ ವಿದ್ಯುತ್ ಕಂಬಗಳು ಬಿದ್ದಿದ್ದು, ವಿದ್ಯುತ್ ತಂತಿಗಳು ನೆಲದ ಮೇಲೆ ಹರಿದಾಡಿತ್ತು. ಘಟನೆಯಿಂದಾಗಿ ಮಾಣಿ-ಮೈಸೂರು ಹೆದ್ದಾರಿ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು, ಸುಮಾರು ಒಂದು ತಾಸುಗಿಂತಲೂ ಹೆಚ್ಚು ಕಾಲ ವಾಹನ ಸವಾರರು ಪರದಾಡುವಂತಾಯಿತು. ಎರಡೂ ಬದಿಯ ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿವೆ. ಸ್ಥಳೀಯರು ಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಭಾರೀ ಮಳೆಗೆ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ- ವಾಹನ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಜು.‌ 22. ವೇಶ್ಯಾವಾಟಿಕೆ ನಡೆಸುತಿದ್ದ ಮನೆಗೆ ದಾಳಿ ನಡೆಸಿದ ಪೋಲಿಸರು ಇಬ್ಬರನ್ನು ಬಂಧಿಸಿದ್ದು ದಾಳಿಯ ವೇಳೆ ಮತ್ತೋರ್ವ ಪರಾರಿಯಾದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಬಂಧಿತರನ್ನು ಸಲಾಮತ್ ಮತ್ತು ಚಂದ್ರ ಎಂದು ಗುರುತಿಸಲಾಗಿದೆ. ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೋಲಿಸ್ ನಿರೀಕ್ಷಕರಾದ‌ ದೇವರಾಜ್ ಟಿವಿ ಮತ್ತು‌‌ ಸಿಬ್ಬಂದಿಗಳು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದೆ.‌ ಈ

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ

ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ – ವಿದ್ಯಾರ್ಥಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಮುಹಮ್ಮದ್ ಹಫೀಝ್ (20) ಎಂದು ಗುರುತಿಸಲಾಗಿದೆ. 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರ ಗುಂಪೊಂದು ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ತಂಡವೊಂದು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ 4 ಮಂದಿ ವಿದ್ಯಾರ್ಥಿನಿಯರು ತೆರಳಿದ್ದು, ಬೀಚ್ ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್

ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ – ವಿದ್ಯಾರ್ಥಿಗೆ ಹಲ್ಲೆ Read More »

ಕರಾವಳಿ

ಸುಳ್ಯ: ತಲವಾರು ಹಿಡಿದು ಹಲ್ಲೆಗೆ ಯತ್ನ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 22. ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ತಲವಾರು ಹಿಡಿದು ಹಲ್ಲೆಗೆ ಯತ್ನಿಸಿದ ಘಟನೆ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನಡೆದಿದೆ. ಐವರ್ನಾಡಿನ ಶ್ರೀ ಪಂಚಲಿಂಗೇಶ್ವರ ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರು ಇನ್ನೊರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಸ್ಥಳೀಯರು ತಡೆದಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಧರ್ಮಲಿಂಗಂ ಎಂಬವರು ಬೆಳ್ಳಾರೆ

ಸುಳ್ಯ: ತಲವಾರು ಹಿಡಿದು ಹಲ್ಲೆಗೆ ಯತ್ನ- ಪ್ರಕರಣ ದಾಖಲು Read More »

ಕರಾವಳಿ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜು. 21. ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಬಳಿಕ ಆರೋಪಿ ಪರಾರಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದೆ. ಆರೋಪಿಯನ್ನು ಅಬ್ದುಲ್‌ ಸಮೀರ್‌ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ಆರೋಪಿಯು ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದು, ಬಳಿಕ ಮದುವೆಯಾಗುವುದಾಗಿ ನಂಬಿಸಿ 2019ರಲ್ಲಿ ಕನ್ಯಾನ ಗ್ರಾಮದ ನಿರ್ಮಾಣ ಹಂತದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಮದುವೆಯಾಗದೇ ಮೋಸ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top