karavali

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 20.  ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ವ್ಯಾಪ್ತಿಯ ಕಾನಕಟ್ಲ ಬಳಿ ಇಂದು ಸಂಭವಿಸಿದೆ. ಅಂಗನವಾಡಿ ಹಾಗೂ ಇತರೆ ಕಟ್ಟಡಗಳ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಕಾರ್ಯಾಚರಣೆಯ ಹೊರತಾಗಿಯೂ ಇಡೀ ಕಾರು ಸುಟ್ಟು ಭಸ್ಮವಾಗಿದೆ. ಇನ್ನು ಸಮೀಪದ […]

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ Read More »

ಕರಾವಳಿ

ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು?

(ನ್ಯೂಸ್ ಕಡಬ) newskadaba.com ಸುಳ್ಯ, ನ. 20. ಸುಳ್ಯ- ಸುಬ್ರಹ್ಮಣ್ಯದ ಕಾಡಂಚಿನ ಪ್ರದೇಶಗಳಲ್ಲಿ ರಾತ್ರಿ ಸಾಮಾನ್ಯವಾಗಿ ಕಾಡಾನೆಗಳು ಓಡಾಟ ಮಾಡುವುದು ಸಾಮಾನ್ಯವಾಗಿದೆ. ಇದೀಗ ಸುಳ್ಯದ ಮರ್ಕಂಜದಲ್ಲಿ ತಡ ರಾತ್ರಿ ಮುಖ್ಯ ರಸ್ತೆಯಲ್ಲಿಯೇ ಕಾಡಾನೆ ಸಂಚರಿಸಿದೆ. ಮೈಸೂರಿನಂತ ಬಾಡಿಗೆಗೆ ತೆರಳಿ ವಾಪಾಸು ಬರುತ್ತಿದ್ದ ವಾಹನವೊಂದಕ್ಕೆ ಹೈದಂಗೂರು ರಸ್ತೆಯ ಮಧ್ಯೆ 2 ಕಾಡಾನೆಗಳು ಎದುರಾದ ಘಟನೆ ನ. 17ರಂದು ನಡೆದಿದ್ದು ಚಾಲಕ ಜಾಣತನದಿಂದ ಆನೆಗಳು ಹೋದ ಬಳಿಕ ವಾಹನವನ್ನು ಚಲಾಯಿಸಿಕೊಂಡು ಮುಂದೆ ಸಾಗಿದ್ದಾರೆ. ಯಶಸ್ವಿ ಹೆಸರಿನ ವ್ಯಾನ್ ಪ್ರಯಾಣಿಕರನ್ನು ಬಿಟ್ಟು

ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು? Read More »

ಕರಾವಳಿ

ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಒಪ್ಪಂದ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 20. ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಹಾಗೂ ಸ್ಟಾರ್ಟ್ ಅಪ್ ಇಕೋಸಿಸ್ಟಮ್ ವೃದ್ಧಿಗಾಗಿ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಕೆನರಾ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಜನ್ಮದಿನಾಚರಣೆಯ ಸುದಿನ ಅವರ ಉದ್ಯಮಶೀಲತೆಯ ಪರಂಪರೆಯನ್ನು ಮುಂದಿನ ಯುವ ಪೀಳಿಗೆಗಾಗಿ ಮುನ್ನಡೆಸುವ ಸಂಕಲ್ಪದೊಂದಿಗೆ ನ.19ರಂದು ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೆನರಾ ಸಿಬಿಎಸ್ಸಿ ಆಡಳಿತ ಮಂಡಳಿಯ ಸಭಾಂಗಣದಲ್ಲಿ ಜರುಗಿದ ಈ ಸಮಾರಂಭದಲ್ಲಿ

ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಒಪ್ಪಂದ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 14. ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ Read More »

ಕರಾವಳಿ

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 19. ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯಲ್ಲಿ 2024ರ ನ.17ರಂದು ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ನಡೆದಿದ್ದು, ಪಾದಚಾರಿಗಳಿಗೆ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಗ್ರಾಮದ ಆಶೀರ್ವಾದದ ಬಳಿ ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ಸನ್ನು ಚಾಲಕ ಅಜಾಗರೂಕತೆಯಿಂದ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ ರಸ್ತೆ ಬದಿ ನಿಂತಿದ್ದ ಬಾಗಲಕೋಟೆ ಜಿಲ್ಲೆಯ ಜೈನಬಿ ನದಾಫ್ (27) ಎಂಬ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ. ಜೈನಬಿಯ ಎಡಗೈ ಮತ್ತು ಕೆನ್ನೆಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಉಡುಪಿಯ ಆದರ್ಶ

ರಸ್ತೆ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಬ್ರಿ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ನಕ್ಸಲ್ ಓಡಾಟ ವರದಿಯಾಗಿದ್ದು, ಎಎನ್ ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಸೋಮವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ

ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 18. ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಬಾಲಕನನ್ನು ಮೂಲತಃ ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಎಂದು ಗುರುತಿಸಲಾಗಿದೆ. ದುಬೈ ನ್ಯೂ ಇಂಡಿಯನ್ ಮಾಡೆಲ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಶುಕ್ರವಾರ ಮಮ್ಝಾರ್ ಬೀಚ್ ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.    

ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 18. ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಎಂದು ಗುರುತಿಸಲಾಗಿದೆ. ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ರವಿವಾರ ತಡರಾತ್ರಿ

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಡಿಲು ಬಡಿದು ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಇಲ್ಲಿನ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್(14) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 5.30ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ. ತಕ್ಷಣ ಮನೆಮಂದಿ ಮಾಣಿಯ ಕ್ಲಿನಿಕ್ ವೊಂದಕ್ಕೆ ಕರೆತಂದಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅದರಂತೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,

ಸಿಡಿಲು ಬಡಿದು ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top