karavali

ಟೊಮೆಟೊ, ಈರುಳ್ಳಿ ಸ್ಥಿರ ; ಬೀನ್ಸ್ ಏರಿಕೆ

(ನ್ಯೂಸ್ ಕಡಬ) newskadaba.com  ಉಡುಪಿ , ಡಿ 23 :  ಮಾರುಕಟ್ಟೆಯಲ್ಲಿ ಈ ವಾರ ಟೊಮೆಟೊ ಹಾಗೂ ಈರುಳ್ಳಿ ದರ ಸ್ಥಿರತೆ ಕಾಯ್ದಕೊಂಡಿದೆ. ಕಳೆದ ವಾರ ಟೊಮೆಟೊ ಕೆ.ಜಿಗೆ ರೂ.30 ದರ ಇತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರಸ್ತುತ ರೂ.25 ರಿಂದ ರೂ.30ಕ್ಕೆ ಮಾರಾಟವಾಗುತ್ತಿವೆ. ಸಗಟು ಮಾರುಕಟ್ಟೆಯಲ್ಲಿ ಕೆ.ಜಿಗೆ 20 ಇದೆ. ಕಳೆದವಾರ ಕೆ.ಜಿಗೆ 40 ಬೆಲೆ ಇದ್ದ ಈರುಳ್ಳಿ ಕೂಡ 30 ರಿಂದ 40 ಕ್ಕೆ ಲಭ್ಯವಾಗಲಿದೆ ಎಂದು ತಿಳಿದು ಬಂದಿದೆ. ಬೀನ್ಸ್ ದರ ಗಗನಮುಖಿ : […]

ಟೊಮೆಟೊ, ಈರುಳ್ಳಿ ಸ್ಥಿರ ; ಬೀನ್ಸ್ ಏರಿಕೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ : ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ , ಡಿ 23 :  ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯೊರ್ವಳರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ  ನಡೆಸಿ ಬಳಿಕ ಮನೆಯಲ್ಲಿದ್ದ ವಸ್ತುಗಳನ್ನು ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ಸಂಭವಿಸಿದೆ. ಹಲ್ಲೆಗೊಂಡವರನ್ನು ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂದು ಗುರುತಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬಂಟ್ವಾಳ : ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ , ಡಿ 23  : ಬಳ್ಳಾರಿಯಿಂದ  ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ  ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಕೂಡ್ಲಗಿ ತಾಲೂಕಿ ಚಿಕ್ಕಜೋಗೆ ಹಳ್ಳಿಯ ಶಶಿ, ಜಲಧರ ರಘು, ಬಸವರಾಜ್, ಲೋಕ ಎಂದು ಗುರುತಿಸಲಾಗಿದೆ. ವಾಹನ ನಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ : ಕಟೀಲು ಮೇಳದ ಕಲಾವಿದ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು  , ಡಿ 23  :  ಯಕ್ಷಗಾನ ಕಲಾವಿದರರೊಬ್ಬರು ಯಕ್ಷಯಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಗುರುವಪ್ಪ ಬಾಯಾರು (58) ಎಂದು ಗುರುತಿಸಲಾಗಿದೆ. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಅದರಲ್ಲಿ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ ಯಕ್ಷಗಾನ ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಾಯಾಘಾತವಾಗಿ ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ

ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ : ಕಟೀಲು ಮೇಳದ ಕಲಾವಿದ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 22. ಮನೆಯೊಂದರಲ್ಲಿ ನಡೆದ ಲಕ್ಷಾಂತರ ರೂ ಮೌಲ್ಯದ ನಗದನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ ಕಾರ್ಕಳ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಬಂಧಿತರನ್ನು ಬಂಟ್ವಾಳ ತಾಲೂಕು ಕಾಂತರಬೆಟ್ಟು, ಅರಂಬೋಡಿ ಗ್ರಾಮದ ನಿವಾಸಿ ಪ್ರಸಾದ್(34) ಹಾಗೂ ಕಾರ್ಕಳ ತಾಲೂಕಿನ ಕಲ್ಯಾ ಗಗ್ರಾಮದ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಇವರು ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಮುರಿದು ಮನೆಯ ಒಳಗೆ ನುಗ್ಗಿ ಗೋದ್ರೇಜಿನ

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ..! ➤ ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ಲಾರಿಯೊಂದು ತಿರುಗಿಸುವ ಸಂದರ್ಭದಲ್ಲಿ ರಸ್ತೆಯಲ್ಲಿ ಅಡ್ಡಲಾಗಿ ನಿಂತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಬಂಟ್ವಾಳದ ಬೈಪಾಸ್ ನ ತುಂಬೆ ಜಂಕ್ಷನ್ ಬಳಿ ಸಂಭವಿಸಿದೆ. ಬಂಟ್ವಾಳ – ಮೂಡುಬಿದಿರೆ ರಸ್ತೆಯ ತುಂಬೆ ಜಂಕ್ಷನ್ ಬಳಿ ಅಂಗಡಿಯೊಂದಕ್ಕೆ ಸರಕು ತಂದ 12 ಚಕ್ರಗಳ ಲಾರಿಯನ್ನು ತಿರುಗಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ರಸ್ತೆಯ ಎರಡೂ ಭಾಗದಲ್ಲಿ ವಾಹನಗಳು ಸರತಿಯಲ್ಲಿ ನಿಂತು ಸಂಚಾರ ವ್ಯತ್ಯಯ ಉಂಟಾಗಿತ್ತು ಎಂದು ತಿಳಿದು ಬಂದಿದೆ.

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ..! ➤ ಕೆಲಕಾಲ ಸಂಚಾರ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ಕಸದ ತೊಟ್ಟಿಯಲ್ಲಿ ಪೊಲೀಸ್ ಟೋಪಿಗಳು ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಡಿ 21 : ಪೊಲೀಸರು ಧರಿಸುವ ನಾಲ್ಕು ಟೋಪಿಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆ ಸುವರ್ಣ ಆರ್ಕೇಡ್ ಬಳಿ ನಡೆದಿದೆ. ಮೂರು ಖಾಕಿ ಟೋಪಿ ಹಾಗೂ ಒಂದು ಬಿಳಿ ಟೋಪಿ ಕಸದ ತೊಟ್ಟಿಯಲ್ಲಿ ಕಂಡು ಬಂದಿದೆ ಎನ್ನಲಾಗಿದೆ. ಪೊಲೀಸ್ ಸಮವಸ್ತ್ರ, ಬೆಲ್ಟ್, ಟೋಪಿಗೆ ಇದಕ್ಕೆಲ್ಲಾ ಅದರದ್ದೇ ಆದ ಕನೂನು ನಿಯಮಗಳಿವೆ. ಹಾಳಾದ ಟೋಪಿ ಅಥವಾ ಸಮವಸ್ತ್ರವನ್ನು ವಿಲೇವಾರಿ ಮಾಡುವಲ್ಲಿಯೂ ಅದರದ್ದೇ ಆದ ನಿಯಮವನ್ನು ಪಾಲಿಸಬೇಕು. ಈ ರೀತಿ

ಬೆಳ್ತಂಗಡಿ : ಕಸದ ತೊಟ್ಟಿಯಲ್ಲಿ ಪೊಲೀಸ್ ಟೋಪಿಗಳು ಪತ್ತೆ Read More »

ಕರಾವಳಿ

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆ ನಗರದ ಉರ್ವಸ್ಟೋರ್‍ ನ ತುಳು ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಇದೇ ಡಿ.26ರ ರೊಳಗೆ ಸಲ್ಲಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ಕರಾವಳಿ ಜಿಲ್ಲೆಗಳ

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ : ಓಮ್ನಿ-ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 21. ಓಮ್ನಿ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿ ನಡೆದಿದೆ. ಗಾಯಾಳುವನ್ನು ಕೊಯಿಲ ನಿವಾಸಿ ನಝೀರ್ ಎಂಬವರ ಪುತ್ರ ಉಬ್ಬಿ ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿಯಿಂದ ಕೆಮ್ಮಾರದ ಕಡೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಉಪ್ಪಿನಂಗಡಿ : ಓಮ್ನಿ-ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.09  ಬಂಗಾಲಕೊಳ್ಳಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಬೆಂಗಳೂರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ.12 ರವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ವರದಿ ತಿಳಿಸಿದೆ. ನೈಋತ್ಯ ಹಾಗೂ ಆಗ್ನೇಯ ಬಂಗಾಲಕೊಲ್ಲಿಯಲ್ಲಿ ಎದ್ದಿರುವ ಭಾರಿ ಚಂಡಮಾರುತದಿಂದ ನೆರೆಯ ರಾಜ್ಯಗಳಾದ ತಮಿಳುನಾಡು ,ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಬಾಗದಲ್ಲಿ ಭಾರಿ ಮಳೆಯಾಗುತ್ತಿದ್ದು,  ಇದರ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು

ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ
Scroll to Top